AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RRR New Poster: ರಾಮ್​ ಚರಣ್ ಜನ್ಮದಿನಕ್ಕೂ ಮೊದಲೇ ಸರ್ಪ್ರೈಸ್​ ಗಿಫ್ಟ್​

ರಾಮ್​ ಚರಣ್​ ಹಿಂದೆಂದೂ ಕಾಣಿಸಿಕೊಳ್ಳದ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಬಿಲ್ಲು-ಬಾಣ ಹಿಡಿದು ಆಗಸದತ್ತ ರಾಮ್​ ಚರಣ್​ ಮುಖ ಮಾಡಿದ್ದಾರೆ. ಅವರ ಡಿಫರೆಂಟ್​ ಲುಕ್​ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ.

RRR New Poster: ರಾಮ್​ ಚರಣ್ ಜನ್ಮದಿನಕ್ಕೂ ಮೊದಲೇ ಸರ್ಪ್ರೈಸ್​ ಗಿಫ್ಟ್​
ರಾಮ್​ ಚರಣ್​
ರಾಜೇಶ್ ದುಗ್ಗುಮನೆ
|

Updated on:Mar 26, 2021 | 9:19 PM

Share

ಟಾಲಿವುಡ್​ ನಟ ರಾಮ್​ ಚರಣ್​ ಶನಿವಾರ (ಮಾರ್ಚ್ 27) 36ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ. ಜನ್ಮದಿನಕ್ಕೂ ಮೊದಲೇ ಅಭಿಮಾನಿಗಳು ಸಂಭ್ರಮಾಚರಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ವಿಶೇಷ ಎಂದರೆ ಹುಟ್ಟುಹಬ್ಬಕ್ಕೂ ಮೊದಲೇ ರಾಮ್​ ಚರಣ್​ಗೆ ಸರ್​ಪ್ರೈಸ್​ ಗಿಫ್ಟ್​ ಒಂದು ಸಿಕ್ಕಿದೆ. ಆರ್​ಆರ್​ಆರ್​ ಚಿತ್ರದಲ್ಲಿ ರಾಮ್​ ಚರಣ್​ ಪಾತ್ರ ಹೇಗಿರಲಿದೆ ಎಂಬುದನ್ನು ಚಿತ್ರತಂಡ ಅನಾವರಣ ಮಾಡಿದೆ. ರಾಮ್​ ಚರಣ್​ ಆರ್​ಆರ್​ಆರ್​ ಸಿನಿಮಾದಲ್ಲಿ ಅಲ್ಲುರಿ ಸೀತಾ ರಾಮರಾಜು ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾದಲ್ಲಿ ಅವರ ಪಾತ್ರ ಹೇಗಿರಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿತ್ತು. ಹೀಗಾಗಿ ರಾಮ್​ ಚರಣ್​ ಜನ್ಮದಿನಕ್ಕೆ ಆರ್​ಆರ್​ಆರ್​ ಚಿತ್ರದ ನಿರ್ದೇಶಕ ಎಸ್​.ಎಸ್​. ರಾಜಮೌಳಿ ಫಸ್ಟ್​ ಲುಕ್​ ಗಿಫ್ಟ್​ ಆಗಿ ನೀಡಿದ್ದಾರೆ. ಇದು ರಾಮ್​ ಚರಣ್​ ಅಭಿಮಾನಿಗಳ ಖುಷಿಯನ್ನು ಹೆಚ್ಚಿಸಿದೆ.

ರಾಮ್​ ಚರಣ್​ ಹಿಂದೆಂದೂ ಕಾಣಿಸಿಕೊಳ್ಳದ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಬಿಲ್ಲು-ಬಾಣ ಹಿಡಿದು ಆಗಸದತ್ತ ರಾಮ್​ ಚರಣ್​ ಮುಖ ಮಾಡಿದ್ದಾರೆ. ಅವರ ಡಿಫರೆಂಟ್​ ಲುಕ್​ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ. ಈ ಪೋಸ್ಟರ್​ ಅನ್ನು ನಟಿ ಆಲಿಯಾ ಭಟ್, ಎಸ್​.ಎಸ್.​ ರಾಜಮೌಳಿ​ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ರಾಜಮೌಳಿ ನಿರ್ದೇಶನದ ಆರ್​ಆರ್​ಆರ್​ ಚಿತ್ರದಲ್ಲಿ ರಾಮ್​​ ಚರಣ್​ ಹಾಗೂ ಜೂ.ಎನ್​ಟಿಆರ್​ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ರಾಜಮೌಳಿ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದು, ಆಲಿಯಾ ಭಟ್​, ಅಜಯ್​ ದೇವಗನ್​ ಕೂಡ ಸಿನಿಮಾದಲ್ಲಿ ಬಣ್ಣ ಹಚ್ಚುತ್ತಿದ್ದಾರೆ.

View this post on Instagram

A post shared by SS Rajamouli (@ssrajamouli)

ಈ ಮೊದಲು ಜೂ.ಎನ್​ಟಿಆರ್​ ಲುಕ್​ ರಿಲೀಸ್​ ಆಗಿತ್ತು. ಕೋಮರಾಮ್​ ಭೀಮ್​ ಆಗಿ ಜೂ.ಎನ್​ಟಿಆರ್​ ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಆಲಿಯಾ ಜನ್ಮದಿನದ ಅಂಗವಾಗಿ ಸೀತಾ ಪಾತ್ರವನ್ನು ರಾಜಮೌಳಿ ಅನಾವರಣ ಮಾಡಿದ್ದರು.

ಇದನ್ನೂ ಓದಿ: ಆಲಿಯಾ ಭಟ್​ ಜನ್ಮದಿನಕ್ಕೆ RRR ನಿರ್ದೇಶಕ ರಾಜಮೌಳಿ ಕಡೆಯಿಂದ ಭರ್ಜರಿ ಗಿಫ್ಟ್​! ಫ್ಯಾನ್ಸ್​ ಫಿದಾ

ಸೂಪರ್​ ಸ್ಟಾರ್​ ಪಟ್ಟಕ್ಕೇರಲು ರಶ್ಮಿಕಾ ಹರಸಾಹಸ, ರಾಮ್‌ ಚರಣ್ ಜೊತೆ ನಟಿಸಲು ಕಷ್ಟಪಟ್ಟು ಡೇಟ್‌ ಹೊಂದಿಸಿಕೊಳ್ತಿದ್ದಾರಂತೆ..

Published On - 9:17 pm, Fri, 26 March 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?