AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RRR: ಬೆಂಗಳೂರಲ್ಲಿ ತೆಲುಗು ನಟರನ್ನು ನೋಡಲು ಮುಗಿಬಿದ್ದ ಜನ; ಆರ್​ಆರ್​ಆರ್​ ಸುದ್ದಿಗೋಷ್ಠಿ ವೇಳೆ ನೂಕುನುಗ್ಗಲು

RRR Movie Press Meet: ‘ಆರ್​ಆರ್​ಆರ್​’ ಸಿನಿಮಾದ ಪ್ರಚಾರಕ್ಕಾಗಿ ಜ್ಯೂ. ಎನ್​ಟಿಆರ್​ ಮತ್ತು ರಾಮ್​ ಚರಣ್​ ಬೆಂಗಳೂರಿಗೆ ಬರುತ್ತಾರೆ ಎಂಬ ಸುಳಿವು ಸಿಗುತ್ತಿದ್ದಂತೆಯೇ ಅನೇಕ ಅಭಿಮಾನಿಗಳು ಮಾಲ್​ ಆವರಣಕ್ಕೆ ಬಂದು ಜಮಾಯಿಸಿದ್ದರು. ಜನರನ್ನು ನಿಯಂತ್ರಿಸುವುದೇ ಕಷ್ಟವಾಗಿತ್ತು.

RRR: ಬೆಂಗಳೂರಲ್ಲಿ ತೆಲುಗು ನಟರನ್ನು ನೋಡಲು ಮುಗಿಬಿದ್ದ ಜನ; ಆರ್​ಆರ್​ಆರ್​ ಸುದ್ದಿಗೋಷ್ಠಿ ವೇಳೆ ನೂಕುನುಗ್ಗಲು
ಜ್ಯೂ. ಎನ್​ಟಿಆರ್​, ರಾಮ್​ ಚರಣ್, ರಾಜಮೌಳಿ
TV9 Web
| Edited By: |

Updated on: Dec 10, 2021 | 12:56 PM

Share

ಪರಭಾಷೆ ಸಿನಿಮಾಗಳು ಕರ್ನಾಟಕದಲ್ಲಿ ಸಿಕ್ಕಾಪಟ್ಟೆ ಕಲೆಕ್ಷನ್​ ಮಾಡುತ್ತವೆ. ತೆಲುಗು, ತಮಿಳು ಚಿತ್ರಗಳನ್ನು ಬೆಂಗಳೂರಿನಲ್ಲಿ ದೊಡ್ಡಮಟ್ಟದಲ್ಲಿ ರಿಲೀಸ್​ ಮಾಡಲಾಗುತ್ತದೆ. ಪರಭಾಷೆ ನಟರನ್ನು ಆರಾಧಿಸುವ ಅಪಾರ ಸಂಖ್ಯೆಯ ಅಭಿಮಾನಿಗಳು ಕರುನಾಡಿನಲ್ಲಿ ಇದ್ದಾರೆ. ಅದರಲ್ಲೂ ಜ್ಯೂ. ಎನ್​ಟಿಆರ್​ (Jr NTR), ರಾಮ್​ ಚರಣ್​ (Ram Charan) ಅವರಿಗೆ ಕರ್ನಾಟದಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ಇವರಿಬ್ಬರು ನಟಿಸಿರುವ ‘ಆರ್​ಆರ್​ಆರ್​’ (RRR) ಸಿನಿಮಾ ಕನ್ನಡಕ್ಕೂ ಡಬ್​ ಆಗಿ ಬಿಡುಗಡೆ ಆಗುತ್ತಿದೆ. ಆದ್ದರಿಂದ ಕರ್ನಾಟಕದಲ್ಲೂ ಈ ಸಿನಿಮಾವನ್ನು ಪ್ರಚಾರ ಮಾಡಲಾಗುತ್ತಿದೆ. ನಿರ್ದೇಶಕ ರಾಜಮೌಳಿ (SS Rajamouli) ಅವರ ಜತೆ ಕಲಾವಿದರಾದ ಜ್ಯೂ. ಎನ್​ಟಿಆರ್​, ರಾಮ್​ ಚರಣ್​, ಆಲಿಯಾ ಭಟ್​ ಕೂಡ ಬೆಂಗಳೂರಿಗೆ ಬಂದು ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ನೂರಾರು ಅಭಿಮಾನಿಗಳು ತಮ್ಮ ನೆಚ್ಚಿನ ನಟರನ್ನು ನೋಡಲು ಮುಗಿಬಿದ್ದರು.

2022ರ ಜ.7ರಂದು ವಿಶ್ವಾದ್ಯಂತ ಈ ಚಿತ್ರ ತೆರೆಕಾಣಲಿದೆ. ಡಿ.9ರಂದು ಟ್ರೇಲರ್​ ಬಿಡುಗಡೆಯಾಗಿ ಧೂಳೆಬ್ಬಿಸಿದೆ. ಅದರ ಬೆನ್ನಲ್ಲೇ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಆಯೋಜನೆಗೊಂಡಿದೆ. ಯಶವಂತಪುರದಲ್ಲಿ ಇರುವ ಓರಾಯನ್​ ಮಾಲ್​ಗೆ ಇಡೀ ಆರ್​ಆರ್​ಆರ್​ ತಂಡ ಆಗಮಿಸಿತ್ತು. ಜ್ಯೂ. ಎನ್​ಟಿಆರ್​, ರಾಮ್​ ಚರಣ್​ ಬರುತ್ತಾರೆ ಎಂಬ ಸುಳಿವು ಸಿಗುತ್ತಿದ್ದಂತೆಯೇ ಅನೇಕ ಅಭಿಮಾನಿಗಳು ಮಾಲ್​ ಆವರಣಕ್ಕೆ ಬಂದು ಜಮಾಯಿಸಿದ್ದರು.

‘ಬಾಹುಬಲಿ’ ಯಶಸ್ಸಿನ ಬಳಿಕ ರಾಜಮೌಳಿ ನಿರ್ದೇಶಿಸಿರುವ ಸಿನಿಮಾ ಇದಾಗಿರುವುದರಿಂದ ಭಾರಿ ನಿರೀಕ್ಷೆ ಸೃಷ್ಟಿ ಆಗಿದೆ. ಅಜಯ್​ ದೇವಗನ್​ ಕೂಡ ಈ ಸಿನಿಮಾದಲ್ಲಿ ಪ್ರಮುಖ ಪಾತ್ರವೊಂದನ್ನು ನಿಭಾಯಿಸಿದ್ದಾರೆ. ಎಂ.ಎಂ. ಕೀರವಾಣಿ ಅವರು ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದು, ಹಾಡುಗಳು ಸೂಪರ್ ಹಿಟ್​ ಆಗಿವೆ. ‘ಆರ್​ಆರ್​ಆರ್​’ ಬಿಡುಗಡೆಗೂ ಮುನ್ನವೇ ಕೋಟ್ಯಂತರ ರೂಪಾಯಿ ಬ್ಯುಸಿನೆಸ್​ ಮಾಡಿದೆ. ಬಾಕ್ಸ್​ ಆಫೀಸ್​ನಲ್ಲೂ ಈ ಸಿನಿಮಾ ಹೊಸ ದಾಖಲೆ ಬರೆಯುವ ನಿರೀಕ್ಷೆ ಇದೆ.

ಇದನ್ನೂ ಓದಿ:

RRR Press Meet: ಬೆಂಗಳೂರಿನಲ್ಲಿ ‘ಆರ್​ಆರ್​ಆರ್​’ ತಂಡ; ರಾಜಮೌಳಿ ಸಿನಿಮಾದ ಸುದ್ದಿಗೋಷ್ಠಿ ನೋಡಲು ಇಲ್ಲಿ ಕ್ಲಿಕ್​ ಮಾಡಿ

ಪುಷ್ಪ, ಆರ್​ಆರ್​ಆರ್​ ಮೀರಿಸಿ ಟ್ರೆಂಡ್​ ಆದ ‘ಗಂಧದ ಗುಡಿ’; ಪುನೀತ್​ ಡಾಕ್ಯುಮೆಂಟರಿಗೆ ಬಹುಪರಾಕ್​

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ