AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RRR: ಬೆಂಗಳೂರಲ್ಲಿ ತೆಲುಗು ನಟರನ್ನು ನೋಡಲು ಮುಗಿಬಿದ್ದ ಜನ; ಆರ್​ಆರ್​ಆರ್​ ಸುದ್ದಿಗೋಷ್ಠಿ ವೇಳೆ ನೂಕುನುಗ್ಗಲು

RRR Movie Press Meet: ‘ಆರ್​ಆರ್​ಆರ್​’ ಸಿನಿಮಾದ ಪ್ರಚಾರಕ್ಕಾಗಿ ಜ್ಯೂ. ಎನ್​ಟಿಆರ್​ ಮತ್ತು ರಾಮ್​ ಚರಣ್​ ಬೆಂಗಳೂರಿಗೆ ಬರುತ್ತಾರೆ ಎಂಬ ಸುಳಿವು ಸಿಗುತ್ತಿದ್ದಂತೆಯೇ ಅನೇಕ ಅಭಿಮಾನಿಗಳು ಮಾಲ್​ ಆವರಣಕ್ಕೆ ಬಂದು ಜಮಾಯಿಸಿದ್ದರು. ಜನರನ್ನು ನಿಯಂತ್ರಿಸುವುದೇ ಕಷ್ಟವಾಗಿತ್ತು.

RRR: ಬೆಂಗಳೂರಲ್ಲಿ ತೆಲುಗು ನಟರನ್ನು ನೋಡಲು ಮುಗಿಬಿದ್ದ ಜನ; ಆರ್​ಆರ್​ಆರ್​ ಸುದ್ದಿಗೋಷ್ಠಿ ವೇಳೆ ನೂಕುನುಗ್ಗಲು
ಜ್ಯೂ. ಎನ್​ಟಿಆರ್​, ರಾಮ್​ ಚರಣ್, ರಾಜಮೌಳಿ
TV9 Web
| Edited By: |

Updated on: Dec 10, 2021 | 12:56 PM

Share

ಪರಭಾಷೆ ಸಿನಿಮಾಗಳು ಕರ್ನಾಟಕದಲ್ಲಿ ಸಿಕ್ಕಾಪಟ್ಟೆ ಕಲೆಕ್ಷನ್​ ಮಾಡುತ್ತವೆ. ತೆಲುಗು, ತಮಿಳು ಚಿತ್ರಗಳನ್ನು ಬೆಂಗಳೂರಿನಲ್ಲಿ ದೊಡ್ಡಮಟ್ಟದಲ್ಲಿ ರಿಲೀಸ್​ ಮಾಡಲಾಗುತ್ತದೆ. ಪರಭಾಷೆ ನಟರನ್ನು ಆರಾಧಿಸುವ ಅಪಾರ ಸಂಖ್ಯೆಯ ಅಭಿಮಾನಿಗಳು ಕರುನಾಡಿನಲ್ಲಿ ಇದ್ದಾರೆ. ಅದರಲ್ಲೂ ಜ್ಯೂ. ಎನ್​ಟಿಆರ್​ (Jr NTR), ರಾಮ್​ ಚರಣ್​ (Ram Charan) ಅವರಿಗೆ ಕರ್ನಾಟದಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ಇವರಿಬ್ಬರು ನಟಿಸಿರುವ ‘ಆರ್​ಆರ್​ಆರ್​’ (RRR) ಸಿನಿಮಾ ಕನ್ನಡಕ್ಕೂ ಡಬ್​ ಆಗಿ ಬಿಡುಗಡೆ ಆಗುತ್ತಿದೆ. ಆದ್ದರಿಂದ ಕರ್ನಾಟಕದಲ್ಲೂ ಈ ಸಿನಿಮಾವನ್ನು ಪ್ರಚಾರ ಮಾಡಲಾಗುತ್ತಿದೆ. ನಿರ್ದೇಶಕ ರಾಜಮೌಳಿ (SS Rajamouli) ಅವರ ಜತೆ ಕಲಾವಿದರಾದ ಜ್ಯೂ. ಎನ್​ಟಿಆರ್​, ರಾಮ್​ ಚರಣ್​, ಆಲಿಯಾ ಭಟ್​ ಕೂಡ ಬೆಂಗಳೂರಿಗೆ ಬಂದು ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ನೂರಾರು ಅಭಿಮಾನಿಗಳು ತಮ್ಮ ನೆಚ್ಚಿನ ನಟರನ್ನು ನೋಡಲು ಮುಗಿಬಿದ್ದರು.

2022ರ ಜ.7ರಂದು ವಿಶ್ವಾದ್ಯಂತ ಈ ಚಿತ್ರ ತೆರೆಕಾಣಲಿದೆ. ಡಿ.9ರಂದು ಟ್ರೇಲರ್​ ಬಿಡುಗಡೆಯಾಗಿ ಧೂಳೆಬ್ಬಿಸಿದೆ. ಅದರ ಬೆನ್ನಲ್ಲೇ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಆಯೋಜನೆಗೊಂಡಿದೆ. ಯಶವಂತಪುರದಲ್ಲಿ ಇರುವ ಓರಾಯನ್​ ಮಾಲ್​ಗೆ ಇಡೀ ಆರ್​ಆರ್​ಆರ್​ ತಂಡ ಆಗಮಿಸಿತ್ತು. ಜ್ಯೂ. ಎನ್​ಟಿಆರ್​, ರಾಮ್​ ಚರಣ್​ ಬರುತ್ತಾರೆ ಎಂಬ ಸುಳಿವು ಸಿಗುತ್ತಿದ್ದಂತೆಯೇ ಅನೇಕ ಅಭಿಮಾನಿಗಳು ಮಾಲ್​ ಆವರಣಕ್ಕೆ ಬಂದು ಜಮಾಯಿಸಿದ್ದರು.

‘ಬಾಹುಬಲಿ’ ಯಶಸ್ಸಿನ ಬಳಿಕ ರಾಜಮೌಳಿ ನಿರ್ದೇಶಿಸಿರುವ ಸಿನಿಮಾ ಇದಾಗಿರುವುದರಿಂದ ಭಾರಿ ನಿರೀಕ್ಷೆ ಸೃಷ್ಟಿ ಆಗಿದೆ. ಅಜಯ್​ ದೇವಗನ್​ ಕೂಡ ಈ ಸಿನಿಮಾದಲ್ಲಿ ಪ್ರಮುಖ ಪಾತ್ರವೊಂದನ್ನು ನಿಭಾಯಿಸಿದ್ದಾರೆ. ಎಂ.ಎಂ. ಕೀರವಾಣಿ ಅವರು ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದು, ಹಾಡುಗಳು ಸೂಪರ್ ಹಿಟ್​ ಆಗಿವೆ. ‘ಆರ್​ಆರ್​ಆರ್​’ ಬಿಡುಗಡೆಗೂ ಮುನ್ನವೇ ಕೋಟ್ಯಂತರ ರೂಪಾಯಿ ಬ್ಯುಸಿನೆಸ್​ ಮಾಡಿದೆ. ಬಾಕ್ಸ್​ ಆಫೀಸ್​ನಲ್ಲೂ ಈ ಸಿನಿಮಾ ಹೊಸ ದಾಖಲೆ ಬರೆಯುವ ನಿರೀಕ್ಷೆ ಇದೆ.

ಇದನ್ನೂ ಓದಿ:

RRR Press Meet: ಬೆಂಗಳೂರಿನಲ್ಲಿ ‘ಆರ್​ಆರ್​ಆರ್​’ ತಂಡ; ರಾಜಮೌಳಿ ಸಿನಿಮಾದ ಸುದ್ದಿಗೋಷ್ಠಿ ನೋಡಲು ಇಲ್ಲಿ ಕ್ಲಿಕ್​ ಮಾಡಿ

ಪುಷ್ಪ, ಆರ್​ಆರ್​ಆರ್​ ಮೀರಿಸಿ ಟ್ರೆಂಡ್​ ಆದ ‘ಗಂಧದ ಗುಡಿ’; ಪುನೀತ್​ ಡಾಕ್ಯುಮೆಂಟರಿಗೆ ಬಹುಪರಾಕ್​

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು