AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RRR: ಬೆಂಗಳೂರಲ್ಲಿ ತೆಲುಗು ನಟರನ್ನು ನೋಡಲು ಮುಗಿಬಿದ್ದ ಜನ; ಆರ್​ಆರ್​ಆರ್​ ಸುದ್ದಿಗೋಷ್ಠಿ ವೇಳೆ ನೂಕುನುಗ್ಗಲು

RRR Movie Press Meet: ‘ಆರ್​ಆರ್​ಆರ್​’ ಸಿನಿಮಾದ ಪ್ರಚಾರಕ್ಕಾಗಿ ಜ್ಯೂ. ಎನ್​ಟಿಆರ್​ ಮತ್ತು ರಾಮ್​ ಚರಣ್​ ಬೆಂಗಳೂರಿಗೆ ಬರುತ್ತಾರೆ ಎಂಬ ಸುಳಿವು ಸಿಗುತ್ತಿದ್ದಂತೆಯೇ ಅನೇಕ ಅಭಿಮಾನಿಗಳು ಮಾಲ್​ ಆವರಣಕ್ಕೆ ಬಂದು ಜಮಾಯಿಸಿದ್ದರು. ಜನರನ್ನು ನಿಯಂತ್ರಿಸುವುದೇ ಕಷ್ಟವಾಗಿತ್ತು.

RRR: ಬೆಂಗಳೂರಲ್ಲಿ ತೆಲುಗು ನಟರನ್ನು ನೋಡಲು ಮುಗಿಬಿದ್ದ ಜನ; ಆರ್​ಆರ್​ಆರ್​ ಸುದ್ದಿಗೋಷ್ಠಿ ವೇಳೆ ನೂಕುನುಗ್ಗಲು
ಜ್ಯೂ. ಎನ್​ಟಿಆರ್​, ರಾಮ್​ ಚರಣ್, ರಾಜಮೌಳಿ
TV9 Web
| Edited By: |

Updated on: Dec 10, 2021 | 12:56 PM

Share

ಪರಭಾಷೆ ಸಿನಿಮಾಗಳು ಕರ್ನಾಟಕದಲ್ಲಿ ಸಿಕ್ಕಾಪಟ್ಟೆ ಕಲೆಕ್ಷನ್​ ಮಾಡುತ್ತವೆ. ತೆಲುಗು, ತಮಿಳು ಚಿತ್ರಗಳನ್ನು ಬೆಂಗಳೂರಿನಲ್ಲಿ ದೊಡ್ಡಮಟ್ಟದಲ್ಲಿ ರಿಲೀಸ್​ ಮಾಡಲಾಗುತ್ತದೆ. ಪರಭಾಷೆ ನಟರನ್ನು ಆರಾಧಿಸುವ ಅಪಾರ ಸಂಖ್ಯೆಯ ಅಭಿಮಾನಿಗಳು ಕರುನಾಡಿನಲ್ಲಿ ಇದ್ದಾರೆ. ಅದರಲ್ಲೂ ಜ್ಯೂ. ಎನ್​ಟಿಆರ್​ (Jr NTR), ರಾಮ್​ ಚರಣ್​ (Ram Charan) ಅವರಿಗೆ ಕರ್ನಾಟದಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ಇವರಿಬ್ಬರು ನಟಿಸಿರುವ ‘ಆರ್​ಆರ್​ಆರ್​’ (RRR) ಸಿನಿಮಾ ಕನ್ನಡಕ್ಕೂ ಡಬ್​ ಆಗಿ ಬಿಡುಗಡೆ ಆಗುತ್ತಿದೆ. ಆದ್ದರಿಂದ ಕರ್ನಾಟಕದಲ್ಲೂ ಈ ಸಿನಿಮಾವನ್ನು ಪ್ರಚಾರ ಮಾಡಲಾಗುತ್ತಿದೆ. ನಿರ್ದೇಶಕ ರಾಜಮೌಳಿ (SS Rajamouli) ಅವರ ಜತೆ ಕಲಾವಿದರಾದ ಜ್ಯೂ. ಎನ್​ಟಿಆರ್​, ರಾಮ್​ ಚರಣ್​, ಆಲಿಯಾ ಭಟ್​ ಕೂಡ ಬೆಂಗಳೂರಿಗೆ ಬಂದು ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ನೂರಾರು ಅಭಿಮಾನಿಗಳು ತಮ್ಮ ನೆಚ್ಚಿನ ನಟರನ್ನು ನೋಡಲು ಮುಗಿಬಿದ್ದರು.

2022ರ ಜ.7ರಂದು ವಿಶ್ವಾದ್ಯಂತ ಈ ಚಿತ್ರ ತೆರೆಕಾಣಲಿದೆ. ಡಿ.9ರಂದು ಟ್ರೇಲರ್​ ಬಿಡುಗಡೆಯಾಗಿ ಧೂಳೆಬ್ಬಿಸಿದೆ. ಅದರ ಬೆನ್ನಲ್ಲೇ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಆಯೋಜನೆಗೊಂಡಿದೆ. ಯಶವಂತಪುರದಲ್ಲಿ ಇರುವ ಓರಾಯನ್​ ಮಾಲ್​ಗೆ ಇಡೀ ಆರ್​ಆರ್​ಆರ್​ ತಂಡ ಆಗಮಿಸಿತ್ತು. ಜ್ಯೂ. ಎನ್​ಟಿಆರ್​, ರಾಮ್​ ಚರಣ್​ ಬರುತ್ತಾರೆ ಎಂಬ ಸುಳಿವು ಸಿಗುತ್ತಿದ್ದಂತೆಯೇ ಅನೇಕ ಅಭಿಮಾನಿಗಳು ಮಾಲ್​ ಆವರಣಕ್ಕೆ ಬಂದು ಜಮಾಯಿಸಿದ್ದರು.

‘ಬಾಹುಬಲಿ’ ಯಶಸ್ಸಿನ ಬಳಿಕ ರಾಜಮೌಳಿ ನಿರ್ದೇಶಿಸಿರುವ ಸಿನಿಮಾ ಇದಾಗಿರುವುದರಿಂದ ಭಾರಿ ನಿರೀಕ್ಷೆ ಸೃಷ್ಟಿ ಆಗಿದೆ. ಅಜಯ್​ ದೇವಗನ್​ ಕೂಡ ಈ ಸಿನಿಮಾದಲ್ಲಿ ಪ್ರಮುಖ ಪಾತ್ರವೊಂದನ್ನು ನಿಭಾಯಿಸಿದ್ದಾರೆ. ಎಂ.ಎಂ. ಕೀರವಾಣಿ ಅವರು ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದು, ಹಾಡುಗಳು ಸೂಪರ್ ಹಿಟ್​ ಆಗಿವೆ. ‘ಆರ್​ಆರ್​ಆರ್​’ ಬಿಡುಗಡೆಗೂ ಮುನ್ನವೇ ಕೋಟ್ಯಂತರ ರೂಪಾಯಿ ಬ್ಯುಸಿನೆಸ್​ ಮಾಡಿದೆ. ಬಾಕ್ಸ್​ ಆಫೀಸ್​ನಲ್ಲೂ ಈ ಸಿನಿಮಾ ಹೊಸ ದಾಖಲೆ ಬರೆಯುವ ನಿರೀಕ್ಷೆ ಇದೆ.

ಇದನ್ನೂ ಓದಿ:

RRR Press Meet: ಬೆಂಗಳೂರಿನಲ್ಲಿ ‘ಆರ್​ಆರ್​ಆರ್​’ ತಂಡ; ರಾಜಮೌಳಿ ಸಿನಿಮಾದ ಸುದ್ದಿಗೋಷ್ಠಿ ನೋಡಲು ಇಲ್ಲಿ ಕ್ಲಿಕ್​ ಮಾಡಿ

ಪುಷ್ಪ, ಆರ್​ಆರ್​ಆರ್​ ಮೀರಿಸಿ ಟ್ರೆಂಡ್​ ಆದ ‘ಗಂಧದ ಗುಡಿ’; ಪುನೀತ್​ ಡಾಕ್ಯುಮೆಂಟರಿಗೆ ಬಹುಪರಾಕ್​

Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್