AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RRR: ಬೆಂಗಳೂರಲ್ಲಿ ತೆಲುಗು ನಟರನ್ನು ನೋಡಲು ಮುಗಿಬಿದ್ದ ಜನ; ಆರ್​ಆರ್​ಆರ್​ ಸುದ್ದಿಗೋಷ್ಠಿ ವೇಳೆ ನೂಕುನುಗ್ಗಲು

RRR Movie Press Meet: ‘ಆರ್​ಆರ್​ಆರ್​’ ಸಿನಿಮಾದ ಪ್ರಚಾರಕ್ಕಾಗಿ ಜ್ಯೂ. ಎನ್​ಟಿಆರ್​ ಮತ್ತು ರಾಮ್​ ಚರಣ್​ ಬೆಂಗಳೂರಿಗೆ ಬರುತ್ತಾರೆ ಎಂಬ ಸುಳಿವು ಸಿಗುತ್ತಿದ್ದಂತೆಯೇ ಅನೇಕ ಅಭಿಮಾನಿಗಳು ಮಾಲ್​ ಆವರಣಕ್ಕೆ ಬಂದು ಜಮಾಯಿಸಿದ್ದರು. ಜನರನ್ನು ನಿಯಂತ್ರಿಸುವುದೇ ಕಷ್ಟವಾಗಿತ್ತು.

RRR: ಬೆಂಗಳೂರಲ್ಲಿ ತೆಲುಗು ನಟರನ್ನು ನೋಡಲು ಮುಗಿಬಿದ್ದ ಜನ; ಆರ್​ಆರ್​ಆರ್​ ಸುದ್ದಿಗೋಷ್ಠಿ ವೇಳೆ ನೂಕುನುಗ್ಗಲು
ಜ್ಯೂ. ಎನ್​ಟಿಆರ್​, ರಾಮ್​ ಚರಣ್, ರಾಜಮೌಳಿ
TV9 Web
| Edited By: |

Updated on: Dec 10, 2021 | 12:56 PM

Share

ಪರಭಾಷೆ ಸಿನಿಮಾಗಳು ಕರ್ನಾಟಕದಲ್ಲಿ ಸಿಕ್ಕಾಪಟ್ಟೆ ಕಲೆಕ್ಷನ್​ ಮಾಡುತ್ತವೆ. ತೆಲುಗು, ತಮಿಳು ಚಿತ್ರಗಳನ್ನು ಬೆಂಗಳೂರಿನಲ್ಲಿ ದೊಡ್ಡಮಟ್ಟದಲ್ಲಿ ರಿಲೀಸ್​ ಮಾಡಲಾಗುತ್ತದೆ. ಪರಭಾಷೆ ನಟರನ್ನು ಆರಾಧಿಸುವ ಅಪಾರ ಸಂಖ್ಯೆಯ ಅಭಿಮಾನಿಗಳು ಕರುನಾಡಿನಲ್ಲಿ ಇದ್ದಾರೆ. ಅದರಲ್ಲೂ ಜ್ಯೂ. ಎನ್​ಟಿಆರ್​ (Jr NTR), ರಾಮ್​ ಚರಣ್​ (Ram Charan) ಅವರಿಗೆ ಕರ್ನಾಟದಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ಇವರಿಬ್ಬರು ನಟಿಸಿರುವ ‘ಆರ್​ಆರ್​ಆರ್​’ (RRR) ಸಿನಿಮಾ ಕನ್ನಡಕ್ಕೂ ಡಬ್​ ಆಗಿ ಬಿಡುಗಡೆ ಆಗುತ್ತಿದೆ. ಆದ್ದರಿಂದ ಕರ್ನಾಟಕದಲ್ಲೂ ಈ ಸಿನಿಮಾವನ್ನು ಪ್ರಚಾರ ಮಾಡಲಾಗುತ್ತಿದೆ. ನಿರ್ದೇಶಕ ರಾಜಮೌಳಿ (SS Rajamouli) ಅವರ ಜತೆ ಕಲಾವಿದರಾದ ಜ್ಯೂ. ಎನ್​ಟಿಆರ್​, ರಾಮ್​ ಚರಣ್​, ಆಲಿಯಾ ಭಟ್​ ಕೂಡ ಬೆಂಗಳೂರಿಗೆ ಬಂದು ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ನೂರಾರು ಅಭಿಮಾನಿಗಳು ತಮ್ಮ ನೆಚ್ಚಿನ ನಟರನ್ನು ನೋಡಲು ಮುಗಿಬಿದ್ದರು.

2022ರ ಜ.7ರಂದು ವಿಶ್ವಾದ್ಯಂತ ಈ ಚಿತ್ರ ತೆರೆಕಾಣಲಿದೆ. ಡಿ.9ರಂದು ಟ್ರೇಲರ್​ ಬಿಡುಗಡೆಯಾಗಿ ಧೂಳೆಬ್ಬಿಸಿದೆ. ಅದರ ಬೆನ್ನಲ್ಲೇ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಆಯೋಜನೆಗೊಂಡಿದೆ. ಯಶವಂತಪುರದಲ್ಲಿ ಇರುವ ಓರಾಯನ್​ ಮಾಲ್​ಗೆ ಇಡೀ ಆರ್​ಆರ್​ಆರ್​ ತಂಡ ಆಗಮಿಸಿತ್ತು. ಜ್ಯೂ. ಎನ್​ಟಿಆರ್​, ರಾಮ್​ ಚರಣ್​ ಬರುತ್ತಾರೆ ಎಂಬ ಸುಳಿವು ಸಿಗುತ್ತಿದ್ದಂತೆಯೇ ಅನೇಕ ಅಭಿಮಾನಿಗಳು ಮಾಲ್​ ಆವರಣಕ್ಕೆ ಬಂದು ಜಮಾಯಿಸಿದ್ದರು.

‘ಬಾಹುಬಲಿ’ ಯಶಸ್ಸಿನ ಬಳಿಕ ರಾಜಮೌಳಿ ನಿರ್ದೇಶಿಸಿರುವ ಸಿನಿಮಾ ಇದಾಗಿರುವುದರಿಂದ ಭಾರಿ ನಿರೀಕ್ಷೆ ಸೃಷ್ಟಿ ಆಗಿದೆ. ಅಜಯ್​ ದೇವಗನ್​ ಕೂಡ ಈ ಸಿನಿಮಾದಲ್ಲಿ ಪ್ರಮುಖ ಪಾತ್ರವೊಂದನ್ನು ನಿಭಾಯಿಸಿದ್ದಾರೆ. ಎಂ.ಎಂ. ಕೀರವಾಣಿ ಅವರು ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದು, ಹಾಡುಗಳು ಸೂಪರ್ ಹಿಟ್​ ಆಗಿವೆ. ‘ಆರ್​ಆರ್​ಆರ್​’ ಬಿಡುಗಡೆಗೂ ಮುನ್ನವೇ ಕೋಟ್ಯಂತರ ರೂಪಾಯಿ ಬ್ಯುಸಿನೆಸ್​ ಮಾಡಿದೆ. ಬಾಕ್ಸ್​ ಆಫೀಸ್​ನಲ್ಲೂ ಈ ಸಿನಿಮಾ ಹೊಸ ದಾಖಲೆ ಬರೆಯುವ ನಿರೀಕ್ಷೆ ಇದೆ.

ಇದನ್ನೂ ಓದಿ:

RRR Press Meet: ಬೆಂಗಳೂರಿನಲ್ಲಿ ‘ಆರ್​ಆರ್​ಆರ್​’ ತಂಡ; ರಾಜಮೌಳಿ ಸಿನಿಮಾದ ಸುದ್ದಿಗೋಷ್ಠಿ ನೋಡಲು ಇಲ್ಲಿ ಕ್ಲಿಕ್​ ಮಾಡಿ

ಪುಷ್ಪ, ಆರ್​ಆರ್​ಆರ್​ ಮೀರಿಸಿ ಟ್ರೆಂಡ್​ ಆದ ‘ಗಂಧದ ಗುಡಿ’; ಪುನೀತ್​ ಡಾಕ್ಯುಮೆಂಟರಿಗೆ ಬಹುಪರಾಕ್​

Follow Us
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!