AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ್​ ಚರಣ್​ Vs ಜ್ಯೂ. ಎನ್​ಟಿಆರ್​; ಫ್ಯಾನ್ಸ್ ತಕರಾರು ಬಗೆಹರಿಸಲು ರಾಜಮೌಳಿ ಮಾಡಿದ ಪ್ಲ್ಯಾನ್​ ಏನು?

Jr NTR Ram Charan: ಮಲ್ಟಿಸ್ಟಾರರ್​ ಸಿನಿಮಾ ಮಾಡಿದಾಗ ಯಾವ ಹೀರೋಗೆ ಎಷ್ಟು ಸ್ಕ್ರೀನ್​ ಸ್ಪೇಸ್​ ಸಿಕ್ಕಿದೆ ಎಂಬ ಲೆಕ್ಕಾಚಾರ ಶುರುವಾಗುತ್ತದೆ. ಆರ್​ಆರ್​ಆರ್​ ವಿಚಾರದಲ್ಲೂ ಹಾಗೆಯೇ ಆಗುತ್ತಿದೆ. ರಾಮ್​ ಚರಣ್​ ಮತ್ತು ಜ್ಯೂ. ಎನ್​ಟಿಆರ್​ ಅಭಿಮಾನಿಗಳು ಇದೇ ವಿಚಾರವಾಗಿ ಜಿದ್ದಿಗೆ ಬಿದ್ದಿದ್ದಾರೆ.

ರಾಮ್​ ಚರಣ್​ Vs ಜ್ಯೂ. ಎನ್​ಟಿಆರ್​; ಫ್ಯಾನ್ಸ್ ತಕರಾರು ಬಗೆಹರಿಸಲು ರಾಜಮೌಳಿ ಮಾಡಿದ ಪ್ಲ್ಯಾನ್​ ಏನು?
ರಾಮ್​ ಚರಣ್​ Vs ಜ್ಯೂ. ಎನ್​ಟಿಆರ್​; ಫ್ಯಾನ್ಸ್ ತಕರಾರು ಬಗೆಹರಿಸಲು ರಾಜಮೌಳಿ ಮಾಡಿದ ಪ್ಲ್ಯಾನ್​ ಏನು?
TV9 Web
| Updated By: ಮದನ್​ ಕುಮಾರ್​|

Updated on: Jul 14, 2021 | 5:39 PM

Share

ಬಹುನಿರೀಕ್ಷಿತ ಆರ್​ಆರ್​ಆರ್​ (RRR) ಸಿನಿಮಾ ಹಲವು ಕಾರಣಗಳಿಗಾಗಿ ಸದ್ದು ಮಾಡುತ್ತಿದೆ. ರಾಜಮೌಳಿ (Rajamouli) ನಿರ್ದೇಶನದ ಈ ಚಿತ್ರದ ಕೆಲಸಗಳು ಬಿರುಸಿನಿಂದ ಸಾಗುತ್ತಿವೆ. ಅದ್ದೂರಿ ಬಜೆಟ್​ನಲ್ಲಿ ಸಿನಿಮಾ ಮೂಡಿಬರುತ್ತಿದೆ. ನಾಯಕರಾದ ರಾಮ್​ ಚರಣ್​ (Ram Charan) ಮತ್ತು ಜ್ಯೂ. ಎನ್​ಟಿಆರ್​ (Jr NTR) ಅಭಿಮಾನಿಗಳು ಈ ಸಿನಿಮಾ ನೋಡಲು ಕಾಯುತ್ತಿದ್ದಾರೆ. ಅದರ ಜೊತೆಗೆ ನಿರ್ದೇಶಕ ರಾಜಮೌಳಿ ಅವರಿಗೆ ಒಂದು ತಲೆನೋವು ಕೂಡ ಶುರುವಾಗಿದೆ. ಅದು ಅಭಿಮಾನಿಗಳಿಂದ ಶುರುವಾಗಿರುವ ತಲೆನೋವು. ಅದನ್ನು ಪರಿಹರಿಸಿಕೊಳ್ಳುವತ್ತ ರಾಜಮೌಳಿ ಗಮನ ಹರಿಸಿದ್ದಾರೆ ಎನ್ನಲಾಗುತ್ತಿದೆ.

ಮಲ್ಟಿಸ್ಟಾರರ್​ ಸಿನಿಮಾ ಮಾಡಿದಾಗ ಯಾವ ಹೀರೋಗೆ ಎಷ್ಟು ಸ್ಕ್ರೀನ್​ ಸ್ಪೇಸ್​ ಸಿಕ್ಕಿದೆ ಎಂಬ ಲೆಕ್ಕಾಚಾರ ಶುರುವಾಗುತ್ತದೆ. ಆರ್​ಆರ್​ಆರ್​ ವಿಚಾರದಲ್ಲೂ ಹಾಗೆಯೇ ಆಗುತ್ತಿದೆ. ರಾಮ್​ ಚರಣ್​ ಮತ್ತು ಜ್ಯೂ. ಎನ್​ಟಿಆರ್​ ಅಭಿಮಾನಿಗಳು ಇದೇ ವಿಚಾರವಾಗಿ ಜಿದ್ದಿಗೆ ಬಿದ್ದಿದ್ದಾರೆ. ಇಬ್ಬರು ಸ್ಟಾರ್​ ನಟರ ಪೈಕಿ ಯಾರೊಬ್ಬರಿಗೆ ಹೆಚ್ಚು ಸ್ಕ್ರೀನ್​ ಸ್ಪೇಸ್​ ಸಿಕ್ಕರೂ ಇನ್ನೊಬ್ಬ ಸ್ಟಾರ್​ ನಟನ ಅಭಿಮಾನಿಗಳು ಸಿಡಿದೇಳುವುದು ಸಹಜ. ಅದನ್ನು ತಪ್ಪಿಸಲು ರಾಜಮೌಳಿ ಅವರು ಈಗಲೇ ಎಚ್ಚರಿಕೆ ವಹಿಸುತ್ತಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ.

ರಾಮ್​ ಚರಣ್​ ಮತ್ತು ಜ್ಯೂ. ಎನ್​ಟಿಆರ್​ಗೆ ಆರ್​ಆರ್​ಆರ್​ ಸಿನಿಮಾದಲ್ಲಿ ಸರಿಸಮನಾಗಿ ಸ್ಕ್ರೀನ್​ ಸ್ಪೇಸ್​ ನೀಡಲು ರಾಜಮೌಳಿ ಪ್ರಯತ್ನಿಸುತ್ತಿದ್ದಾರೆ. ಅದಕ್ಕೆ ತಕ್ಕಂತೆಯೇ ಚಿತ್ರಕಥೆ ಹೆಣೆದಿದ್ದಾರೆ ಎನ್ನಲಾಗುತ್ತಿದೆ. ಈ ವಿಚಾರದಲ್ಲಿ ಅವರು ಎಷ್ಟರಮಟ್ಟಿಗೆ ಸಫಲರಾಗಿದ್ದಾರೆ ಎಂಬುದು ಚಿತ್ರ ಬಿಡುಗಡೆ ಆದ ನಂತರವೇ ಗೊತ್ತಾಗಬೇಕಿದೆ. ಈಗಾಗಲೇ ಇಬ್ಬರೂ ನಟರ ಪೋಸ್ಟರ್​ಗಳು ಬಿಡುಗಡೆಯಾಗಿ ಭಾರಿ ಕೌತುಕ ಮೂಡಿಸಿವೆ.

ಆರ್​ಆರ್​ಆರ್​ ಬಳಗದಿಂದ ಗುರುವಾರ (ಜು.15) ಮೇಕಿಂಗ್​ ವಿಡಿಯೋ ಬಿಡುಗಡೆ ಆಗುತ್ತಿದೆ. ರಾಜಮೌಳಿ ನಿರ್ದೇಶನದ ಸಿನಿಮಾ ಎಂದರೆ ಅದ್ದೂರಿತನಕ್ಕೆ ಹೆಸರುವಾಸಿ ಆಗಿರುತ್ತವೆ. ಬೃಹತ್​ ಸೆಟ್​ಗಳು​, ದೊಡ್ಡ ತಾರಾಗಣ, ಬಹುಕೋಟಿ ರೂ. ಬಜೆಟ್​ನಲ್ಲಿ ಸಿನಿಮಾ ತಯಾರಾಗುತ್ತದೆ. ಹಾಗಾಗಿ ತೆರೆಹಿಂದಿನ ವಿಷಯಗಳನ್ನು ತಿಳಿದುಕೊಳ್ಳಲು ಸಿನಿಪ್ರಿಯರು ಸದಾ ಕುತೂಹಲಿಗಳಾಗಿರುತ್ತಾರೆ. ಅಂಥವರ ಮನತಣಿಸಲು ಮೇಕಿಂಗ್​ ವಿಡಿಯೋ ಬಿಡುಗಡೆ ಮಾಡಲಾಗುತ್ತಿದ್ದು, ಅದಕ್ಕೆ ‘ರೋರ್​ ಆಫ್​​ ಆರ್​ಆರ್​ಆರ್​’ ಎಂದು ಹೆಸರಿಡಲಾಗಿದೆ.

ಈ ಸಿನಿಮಾದಲ್ಲಿ ನಾಯಕಿಯಾಗಿ ಆಲಿಯಾ ಭಟ್​ ಅಭಿನಯಿಸುತ್ತಿದ್ದಾರೆ. ಮತ್ತೊಂದು ಮುಖ್ಯಭೂಮಿಕೆಯಲ್ಲಿ ಬಾಲಿವುಡ್​ ನಟ ಅಜಯ್​ ದೇವಗನ್​ ಕೂಡ ನಟಿಸುತ್ತಿದ್ದಾರೆ. ಈ ಎಲ್ಲ ಕಾರಣಗಳಿಂದಾಗಿ ಆರ್​ಆರ್​ಆರ್​ ಚಿತ್ರದ ಮೇಲೆ ಹೆಚ್ಚು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಆದಷ್ಟು ಬೇಗ ಚಿತ್ರವನ್ನು ತೆರೆಗೆ ತರಬೇಕು ಎಂಬ ಉದ್ದೇಶದೊಂದಿಗೆ ಇಡೀ ತಂಡ ಕಾರ್ಯನಿರತವಾಗಿದೆ. ಲಾಕ್​ಡೌನ್​ನಿಂದಾಗಿ ಚಿತ್ರದ ಕೆಲಸಗಳು ವಿಳಂಬ ಆಗಿದ್ದವು. ಈಗ ಮತ್ತೆ ಬಿರುಸಿನಿಂದ ಶೂಟಿಂಗ್​ ಮಾಡಲಾಗುತ್ತಿದೆ.

ಇದನ್ನೂ ಓದಿ:

ರಾಜಮೌಳಿ ಸಹವಾಸ ಮಾಡಿದವರಿಗೆ ಸೋಲು ಖಚಿತ; ಟಾಲಿವುಡ್​ನಲ್ಲಿದೆ ದೊಡ್ಡ ಮೂಢನಂಬಿಕೆ

ಚಿಕ್ಕ ಹುಡುಗನಿಂದ RRR​ ಚಿತ್ರದ ದೊಡ್ಡ ಸೀಕ್ರೆಟ್​ ಬಯಲು; ಅಜಯ್​ ದೇವಗನ್​ ಪಾತ್ರದ ಗುಟ್ಟು ರಟ್ಟು

ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಇಲ್ಲಿದೆ ಲೈವ್​
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಇಲ್ಲಿದೆ ಲೈವ್​
ರೈಲ್ವೆ ಹಳಿ ಪಕ್ಕ ಮರಿಗೆ ಜನ್ಮ ನೀಡಿದ ಆನೆ, ಎರಡು ಗಂಟೆಗಳ ಕಾಲ ನಿಂತ ರೈಲು
ರೈಲ್ವೆ ಹಳಿ ಪಕ್ಕ ಮರಿಗೆ ಜನ್ಮ ನೀಡಿದ ಆನೆ, ಎರಡು ಗಂಟೆಗಳ ಕಾಲ ನಿಂತ ರೈಲು