ರಾಮ್​ ಚರಣ್​ Vs ಜ್ಯೂ. ಎನ್​ಟಿಆರ್​; ಫ್ಯಾನ್ಸ್ ತಕರಾರು ಬಗೆಹರಿಸಲು ರಾಜಮೌಳಿ ಮಾಡಿದ ಪ್ಲ್ಯಾನ್​ ಏನು?

Jr NTR Ram Charan: ಮಲ್ಟಿಸ್ಟಾರರ್​ ಸಿನಿಮಾ ಮಾಡಿದಾಗ ಯಾವ ಹೀರೋಗೆ ಎಷ್ಟು ಸ್ಕ್ರೀನ್​ ಸ್ಪೇಸ್​ ಸಿಕ್ಕಿದೆ ಎಂಬ ಲೆಕ್ಕಾಚಾರ ಶುರುವಾಗುತ್ತದೆ. ಆರ್​ಆರ್​ಆರ್​ ವಿಚಾರದಲ್ಲೂ ಹಾಗೆಯೇ ಆಗುತ್ತಿದೆ. ರಾಮ್​ ಚರಣ್​ ಮತ್ತು ಜ್ಯೂ. ಎನ್​ಟಿಆರ್​ ಅಭಿಮಾನಿಗಳು ಇದೇ ವಿಚಾರವಾಗಿ ಜಿದ್ದಿಗೆ ಬಿದ್ದಿದ್ದಾರೆ.

ರಾಮ್​ ಚರಣ್​ Vs ಜ್ಯೂ. ಎನ್​ಟಿಆರ್​; ಫ್ಯಾನ್ಸ್ ತಕರಾರು ಬಗೆಹರಿಸಲು ರಾಜಮೌಳಿ ಮಾಡಿದ ಪ್ಲ್ಯಾನ್​ ಏನು?
ರಾಮ್​ ಚರಣ್​ Vs ಜ್ಯೂ. ಎನ್​ಟಿಆರ್​; ಫ್ಯಾನ್ಸ್ ತಕರಾರು ಬಗೆಹರಿಸಲು ರಾಜಮೌಳಿ ಮಾಡಿದ ಪ್ಲ್ಯಾನ್​ ಏನು?
Follow us
| Updated By: ಮದನ್​ ಕುಮಾರ್​

Updated on: Jul 14, 2021 | 5:39 PM

ಬಹುನಿರೀಕ್ಷಿತ ಆರ್​ಆರ್​ಆರ್​ (RRR) ಸಿನಿಮಾ ಹಲವು ಕಾರಣಗಳಿಗಾಗಿ ಸದ್ದು ಮಾಡುತ್ತಿದೆ. ರಾಜಮೌಳಿ (Rajamouli) ನಿರ್ದೇಶನದ ಈ ಚಿತ್ರದ ಕೆಲಸಗಳು ಬಿರುಸಿನಿಂದ ಸಾಗುತ್ತಿವೆ. ಅದ್ದೂರಿ ಬಜೆಟ್​ನಲ್ಲಿ ಸಿನಿಮಾ ಮೂಡಿಬರುತ್ತಿದೆ. ನಾಯಕರಾದ ರಾಮ್​ ಚರಣ್​ (Ram Charan) ಮತ್ತು ಜ್ಯೂ. ಎನ್​ಟಿಆರ್​ (Jr NTR) ಅಭಿಮಾನಿಗಳು ಈ ಸಿನಿಮಾ ನೋಡಲು ಕಾಯುತ್ತಿದ್ದಾರೆ. ಅದರ ಜೊತೆಗೆ ನಿರ್ದೇಶಕ ರಾಜಮೌಳಿ ಅವರಿಗೆ ಒಂದು ತಲೆನೋವು ಕೂಡ ಶುರುವಾಗಿದೆ. ಅದು ಅಭಿಮಾನಿಗಳಿಂದ ಶುರುವಾಗಿರುವ ತಲೆನೋವು. ಅದನ್ನು ಪರಿಹರಿಸಿಕೊಳ್ಳುವತ್ತ ರಾಜಮೌಳಿ ಗಮನ ಹರಿಸಿದ್ದಾರೆ ಎನ್ನಲಾಗುತ್ತಿದೆ.

ಮಲ್ಟಿಸ್ಟಾರರ್​ ಸಿನಿಮಾ ಮಾಡಿದಾಗ ಯಾವ ಹೀರೋಗೆ ಎಷ್ಟು ಸ್ಕ್ರೀನ್​ ಸ್ಪೇಸ್​ ಸಿಕ್ಕಿದೆ ಎಂಬ ಲೆಕ್ಕಾಚಾರ ಶುರುವಾಗುತ್ತದೆ. ಆರ್​ಆರ್​ಆರ್​ ವಿಚಾರದಲ್ಲೂ ಹಾಗೆಯೇ ಆಗುತ್ತಿದೆ. ರಾಮ್​ ಚರಣ್​ ಮತ್ತು ಜ್ಯೂ. ಎನ್​ಟಿಆರ್​ ಅಭಿಮಾನಿಗಳು ಇದೇ ವಿಚಾರವಾಗಿ ಜಿದ್ದಿಗೆ ಬಿದ್ದಿದ್ದಾರೆ. ಇಬ್ಬರು ಸ್ಟಾರ್​ ನಟರ ಪೈಕಿ ಯಾರೊಬ್ಬರಿಗೆ ಹೆಚ್ಚು ಸ್ಕ್ರೀನ್​ ಸ್ಪೇಸ್​ ಸಿಕ್ಕರೂ ಇನ್ನೊಬ್ಬ ಸ್ಟಾರ್​ ನಟನ ಅಭಿಮಾನಿಗಳು ಸಿಡಿದೇಳುವುದು ಸಹಜ. ಅದನ್ನು ತಪ್ಪಿಸಲು ರಾಜಮೌಳಿ ಅವರು ಈಗಲೇ ಎಚ್ಚರಿಕೆ ವಹಿಸುತ್ತಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ.

ರಾಮ್​ ಚರಣ್​ ಮತ್ತು ಜ್ಯೂ. ಎನ್​ಟಿಆರ್​ಗೆ ಆರ್​ಆರ್​ಆರ್​ ಸಿನಿಮಾದಲ್ಲಿ ಸರಿಸಮನಾಗಿ ಸ್ಕ್ರೀನ್​ ಸ್ಪೇಸ್​ ನೀಡಲು ರಾಜಮೌಳಿ ಪ್ರಯತ್ನಿಸುತ್ತಿದ್ದಾರೆ. ಅದಕ್ಕೆ ತಕ್ಕಂತೆಯೇ ಚಿತ್ರಕಥೆ ಹೆಣೆದಿದ್ದಾರೆ ಎನ್ನಲಾಗುತ್ತಿದೆ. ಈ ವಿಚಾರದಲ್ಲಿ ಅವರು ಎಷ್ಟರಮಟ್ಟಿಗೆ ಸಫಲರಾಗಿದ್ದಾರೆ ಎಂಬುದು ಚಿತ್ರ ಬಿಡುಗಡೆ ಆದ ನಂತರವೇ ಗೊತ್ತಾಗಬೇಕಿದೆ. ಈಗಾಗಲೇ ಇಬ್ಬರೂ ನಟರ ಪೋಸ್ಟರ್​ಗಳು ಬಿಡುಗಡೆಯಾಗಿ ಭಾರಿ ಕೌತುಕ ಮೂಡಿಸಿವೆ.

ಆರ್​ಆರ್​ಆರ್​ ಬಳಗದಿಂದ ಗುರುವಾರ (ಜು.15) ಮೇಕಿಂಗ್​ ವಿಡಿಯೋ ಬಿಡುಗಡೆ ಆಗುತ್ತಿದೆ. ರಾಜಮೌಳಿ ನಿರ್ದೇಶನದ ಸಿನಿಮಾ ಎಂದರೆ ಅದ್ದೂರಿತನಕ್ಕೆ ಹೆಸರುವಾಸಿ ಆಗಿರುತ್ತವೆ. ಬೃಹತ್​ ಸೆಟ್​ಗಳು​, ದೊಡ್ಡ ತಾರಾಗಣ, ಬಹುಕೋಟಿ ರೂ. ಬಜೆಟ್​ನಲ್ಲಿ ಸಿನಿಮಾ ತಯಾರಾಗುತ್ತದೆ. ಹಾಗಾಗಿ ತೆರೆಹಿಂದಿನ ವಿಷಯಗಳನ್ನು ತಿಳಿದುಕೊಳ್ಳಲು ಸಿನಿಪ್ರಿಯರು ಸದಾ ಕುತೂಹಲಿಗಳಾಗಿರುತ್ತಾರೆ. ಅಂಥವರ ಮನತಣಿಸಲು ಮೇಕಿಂಗ್​ ವಿಡಿಯೋ ಬಿಡುಗಡೆ ಮಾಡಲಾಗುತ್ತಿದ್ದು, ಅದಕ್ಕೆ ‘ರೋರ್​ ಆಫ್​​ ಆರ್​ಆರ್​ಆರ್​’ ಎಂದು ಹೆಸರಿಡಲಾಗಿದೆ.

ಈ ಸಿನಿಮಾದಲ್ಲಿ ನಾಯಕಿಯಾಗಿ ಆಲಿಯಾ ಭಟ್​ ಅಭಿನಯಿಸುತ್ತಿದ್ದಾರೆ. ಮತ್ತೊಂದು ಮುಖ್ಯಭೂಮಿಕೆಯಲ್ಲಿ ಬಾಲಿವುಡ್​ ನಟ ಅಜಯ್​ ದೇವಗನ್​ ಕೂಡ ನಟಿಸುತ್ತಿದ್ದಾರೆ. ಈ ಎಲ್ಲ ಕಾರಣಗಳಿಂದಾಗಿ ಆರ್​ಆರ್​ಆರ್​ ಚಿತ್ರದ ಮೇಲೆ ಹೆಚ್ಚು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಆದಷ್ಟು ಬೇಗ ಚಿತ್ರವನ್ನು ತೆರೆಗೆ ತರಬೇಕು ಎಂಬ ಉದ್ದೇಶದೊಂದಿಗೆ ಇಡೀ ತಂಡ ಕಾರ್ಯನಿರತವಾಗಿದೆ. ಲಾಕ್​ಡೌನ್​ನಿಂದಾಗಿ ಚಿತ್ರದ ಕೆಲಸಗಳು ವಿಳಂಬ ಆಗಿದ್ದವು. ಈಗ ಮತ್ತೆ ಬಿರುಸಿನಿಂದ ಶೂಟಿಂಗ್​ ಮಾಡಲಾಗುತ್ತಿದೆ.

ಇದನ್ನೂ ಓದಿ:

ರಾಜಮೌಳಿ ಸಹವಾಸ ಮಾಡಿದವರಿಗೆ ಸೋಲು ಖಚಿತ; ಟಾಲಿವುಡ್​ನಲ್ಲಿದೆ ದೊಡ್ಡ ಮೂಢನಂಬಿಕೆ

ಚಿಕ್ಕ ಹುಡುಗನಿಂದ RRR​ ಚಿತ್ರದ ದೊಡ್ಡ ಸೀಕ್ರೆಟ್​ ಬಯಲು; ಅಜಯ್​ ದೇವಗನ್​ ಪಾತ್ರದ ಗುಟ್ಟು ರಟ್ಟು

ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ
ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು
ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ