AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ್​ ಚರಣ್​ Vs ಜ್ಯೂ. ಎನ್​ಟಿಆರ್​; ಫ್ಯಾನ್ಸ್ ತಕರಾರು ಬಗೆಹರಿಸಲು ರಾಜಮೌಳಿ ಮಾಡಿದ ಪ್ಲ್ಯಾನ್​ ಏನು?

Jr NTR Ram Charan: ಮಲ್ಟಿಸ್ಟಾರರ್​ ಸಿನಿಮಾ ಮಾಡಿದಾಗ ಯಾವ ಹೀರೋಗೆ ಎಷ್ಟು ಸ್ಕ್ರೀನ್​ ಸ್ಪೇಸ್​ ಸಿಕ್ಕಿದೆ ಎಂಬ ಲೆಕ್ಕಾಚಾರ ಶುರುವಾಗುತ್ತದೆ. ಆರ್​ಆರ್​ಆರ್​ ವಿಚಾರದಲ್ಲೂ ಹಾಗೆಯೇ ಆಗುತ್ತಿದೆ. ರಾಮ್​ ಚರಣ್​ ಮತ್ತು ಜ್ಯೂ. ಎನ್​ಟಿಆರ್​ ಅಭಿಮಾನಿಗಳು ಇದೇ ವಿಚಾರವಾಗಿ ಜಿದ್ದಿಗೆ ಬಿದ್ದಿದ್ದಾರೆ.

ರಾಮ್​ ಚರಣ್​ Vs ಜ್ಯೂ. ಎನ್​ಟಿಆರ್​; ಫ್ಯಾನ್ಸ್ ತಕರಾರು ಬಗೆಹರಿಸಲು ರಾಜಮೌಳಿ ಮಾಡಿದ ಪ್ಲ್ಯಾನ್​ ಏನು?
ರಾಮ್​ ಚರಣ್​ Vs ಜ್ಯೂ. ಎನ್​ಟಿಆರ್​; ಫ್ಯಾನ್ಸ್ ತಕರಾರು ಬಗೆಹರಿಸಲು ರಾಜಮೌಳಿ ಮಾಡಿದ ಪ್ಲ್ಯಾನ್​ ಏನು?
TV9 Web
| Updated By: ಮದನ್​ ಕುಮಾರ್​|

Updated on: Jul 14, 2021 | 5:39 PM

Share

ಬಹುನಿರೀಕ್ಷಿತ ಆರ್​ಆರ್​ಆರ್​ (RRR) ಸಿನಿಮಾ ಹಲವು ಕಾರಣಗಳಿಗಾಗಿ ಸದ್ದು ಮಾಡುತ್ತಿದೆ. ರಾಜಮೌಳಿ (Rajamouli) ನಿರ್ದೇಶನದ ಈ ಚಿತ್ರದ ಕೆಲಸಗಳು ಬಿರುಸಿನಿಂದ ಸಾಗುತ್ತಿವೆ. ಅದ್ದೂರಿ ಬಜೆಟ್​ನಲ್ಲಿ ಸಿನಿಮಾ ಮೂಡಿಬರುತ್ತಿದೆ. ನಾಯಕರಾದ ರಾಮ್​ ಚರಣ್​ (Ram Charan) ಮತ್ತು ಜ್ಯೂ. ಎನ್​ಟಿಆರ್​ (Jr NTR) ಅಭಿಮಾನಿಗಳು ಈ ಸಿನಿಮಾ ನೋಡಲು ಕಾಯುತ್ತಿದ್ದಾರೆ. ಅದರ ಜೊತೆಗೆ ನಿರ್ದೇಶಕ ರಾಜಮೌಳಿ ಅವರಿಗೆ ಒಂದು ತಲೆನೋವು ಕೂಡ ಶುರುವಾಗಿದೆ. ಅದು ಅಭಿಮಾನಿಗಳಿಂದ ಶುರುವಾಗಿರುವ ತಲೆನೋವು. ಅದನ್ನು ಪರಿಹರಿಸಿಕೊಳ್ಳುವತ್ತ ರಾಜಮೌಳಿ ಗಮನ ಹರಿಸಿದ್ದಾರೆ ಎನ್ನಲಾಗುತ್ತಿದೆ.

ಮಲ್ಟಿಸ್ಟಾರರ್​ ಸಿನಿಮಾ ಮಾಡಿದಾಗ ಯಾವ ಹೀರೋಗೆ ಎಷ್ಟು ಸ್ಕ್ರೀನ್​ ಸ್ಪೇಸ್​ ಸಿಕ್ಕಿದೆ ಎಂಬ ಲೆಕ್ಕಾಚಾರ ಶುರುವಾಗುತ್ತದೆ. ಆರ್​ಆರ್​ಆರ್​ ವಿಚಾರದಲ್ಲೂ ಹಾಗೆಯೇ ಆಗುತ್ತಿದೆ. ರಾಮ್​ ಚರಣ್​ ಮತ್ತು ಜ್ಯೂ. ಎನ್​ಟಿಆರ್​ ಅಭಿಮಾನಿಗಳು ಇದೇ ವಿಚಾರವಾಗಿ ಜಿದ್ದಿಗೆ ಬಿದ್ದಿದ್ದಾರೆ. ಇಬ್ಬರು ಸ್ಟಾರ್​ ನಟರ ಪೈಕಿ ಯಾರೊಬ್ಬರಿಗೆ ಹೆಚ್ಚು ಸ್ಕ್ರೀನ್​ ಸ್ಪೇಸ್​ ಸಿಕ್ಕರೂ ಇನ್ನೊಬ್ಬ ಸ್ಟಾರ್​ ನಟನ ಅಭಿಮಾನಿಗಳು ಸಿಡಿದೇಳುವುದು ಸಹಜ. ಅದನ್ನು ತಪ್ಪಿಸಲು ರಾಜಮೌಳಿ ಅವರು ಈಗಲೇ ಎಚ್ಚರಿಕೆ ವಹಿಸುತ್ತಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ.

ರಾಮ್​ ಚರಣ್​ ಮತ್ತು ಜ್ಯೂ. ಎನ್​ಟಿಆರ್​ಗೆ ಆರ್​ಆರ್​ಆರ್​ ಸಿನಿಮಾದಲ್ಲಿ ಸರಿಸಮನಾಗಿ ಸ್ಕ್ರೀನ್​ ಸ್ಪೇಸ್​ ನೀಡಲು ರಾಜಮೌಳಿ ಪ್ರಯತ್ನಿಸುತ್ತಿದ್ದಾರೆ. ಅದಕ್ಕೆ ತಕ್ಕಂತೆಯೇ ಚಿತ್ರಕಥೆ ಹೆಣೆದಿದ್ದಾರೆ ಎನ್ನಲಾಗುತ್ತಿದೆ. ಈ ವಿಚಾರದಲ್ಲಿ ಅವರು ಎಷ್ಟರಮಟ್ಟಿಗೆ ಸಫಲರಾಗಿದ್ದಾರೆ ಎಂಬುದು ಚಿತ್ರ ಬಿಡುಗಡೆ ಆದ ನಂತರವೇ ಗೊತ್ತಾಗಬೇಕಿದೆ. ಈಗಾಗಲೇ ಇಬ್ಬರೂ ನಟರ ಪೋಸ್ಟರ್​ಗಳು ಬಿಡುಗಡೆಯಾಗಿ ಭಾರಿ ಕೌತುಕ ಮೂಡಿಸಿವೆ.

ಆರ್​ಆರ್​ಆರ್​ ಬಳಗದಿಂದ ಗುರುವಾರ (ಜು.15) ಮೇಕಿಂಗ್​ ವಿಡಿಯೋ ಬಿಡುಗಡೆ ಆಗುತ್ತಿದೆ. ರಾಜಮೌಳಿ ನಿರ್ದೇಶನದ ಸಿನಿಮಾ ಎಂದರೆ ಅದ್ದೂರಿತನಕ್ಕೆ ಹೆಸರುವಾಸಿ ಆಗಿರುತ್ತವೆ. ಬೃಹತ್​ ಸೆಟ್​ಗಳು​, ದೊಡ್ಡ ತಾರಾಗಣ, ಬಹುಕೋಟಿ ರೂ. ಬಜೆಟ್​ನಲ್ಲಿ ಸಿನಿಮಾ ತಯಾರಾಗುತ್ತದೆ. ಹಾಗಾಗಿ ತೆರೆಹಿಂದಿನ ವಿಷಯಗಳನ್ನು ತಿಳಿದುಕೊಳ್ಳಲು ಸಿನಿಪ್ರಿಯರು ಸದಾ ಕುತೂಹಲಿಗಳಾಗಿರುತ್ತಾರೆ. ಅಂಥವರ ಮನತಣಿಸಲು ಮೇಕಿಂಗ್​ ವಿಡಿಯೋ ಬಿಡುಗಡೆ ಮಾಡಲಾಗುತ್ತಿದ್ದು, ಅದಕ್ಕೆ ‘ರೋರ್​ ಆಫ್​​ ಆರ್​ಆರ್​ಆರ್​’ ಎಂದು ಹೆಸರಿಡಲಾಗಿದೆ.

ಈ ಸಿನಿಮಾದಲ್ಲಿ ನಾಯಕಿಯಾಗಿ ಆಲಿಯಾ ಭಟ್​ ಅಭಿನಯಿಸುತ್ತಿದ್ದಾರೆ. ಮತ್ತೊಂದು ಮುಖ್ಯಭೂಮಿಕೆಯಲ್ಲಿ ಬಾಲಿವುಡ್​ ನಟ ಅಜಯ್​ ದೇವಗನ್​ ಕೂಡ ನಟಿಸುತ್ತಿದ್ದಾರೆ. ಈ ಎಲ್ಲ ಕಾರಣಗಳಿಂದಾಗಿ ಆರ್​ಆರ್​ಆರ್​ ಚಿತ್ರದ ಮೇಲೆ ಹೆಚ್ಚು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಆದಷ್ಟು ಬೇಗ ಚಿತ್ರವನ್ನು ತೆರೆಗೆ ತರಬೇಕು ಎಂಬ ಉದ್ದೇಶದೊಂದಿಗೆ ಇಡೀ ತಂಡ ಕಾರ್ಯನಿರತವಾಗಿದೆ. ಲಾಕ್​ಡೌನ್​ನಿಂದಾಗಿ ಚಿತ್ರದ ಕೆಲಸಗಳು ವಿಳಂಬ ಆಗಿದ್ದವು. ಈಗ ಮತ್ತೆ ಬಿರುಸಿನಿಂದ ಶೂಟಿಂಗ್​ ಮಾಡಲಾಗುತ್ತಿದೆ.

ಇದನ್ನೂ ಓದಿ:

ರಾಜಮೌಳಿ ಸಹವಾಸ ಮಾಡಿದವರಿಗೆ ಸೋಲು ಖಚಿತ; ಟಾಲಿವುಡ್​ನಲ್ಲಿದೆ ದೊಡ್ಡ ಮೂಢನಂಬಿಕೆ

ಚಿಕ್ಕ ಹುಡುಗನಿಂದ RRR​ ಚಿತ್ರದ ದೊಡ್ಡ ಸೀಕ್ರೆಟ್​ ಬಯಲು; ಅಜಯ್​ ದೇವಗನ್​ ಪಾತ್ರದ ಗುಟ್ಟು ರಟ್ಟು

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!