AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RRR Release Date: ಬಹುನಿರೀಕ್ಷಿತ ‘ಆರ್​ಆರ್​ಆರ್’ ಚಿತ್ರದ ಬಿಡುಗಡೆಯನ್ನು ಮುಂದೂಡಿದ ಚಿತ್ರತಂಡ; ಕಾರಣವೇನು?

ಜ್ಯೂ.ಎನ್​ಟಿಆರ್​ ಹಾಗೂ ರಾಮ್​ಚರಣ್ ನಟಿಸುತ್ತಿರುವ ಆರ್​ಆರ್​ಆರ್​ ಚಿತ್ರದ ಬಿಡುಗಡೆಯ ದಿನಾಂಕ ಮುಂದೂಡಲ್ಪಟ್ಟಿದೆ. ಈ ಕುರಿತು ಚಿತ್ರತಂಡ ಅಧಿಕೃತ ಮಾಹಿತಿ ನೀಡಿದೆ.

RRR Release Date: ಬಹುನಿರೀಕ್ಷಿತ ‘ಆರ್​ಆರ್​ಆರ್’ ಚಿತ್ರದ ಬಿಡುಗಡೆಯನ್ನು ಮುಂದೂಡಿದ ಚಿತ್ರತಂಡ; ಕಾರಣವೇನು?
RRR ಚಿತ್ರದ ಪೋಸ್ಟರ್
TV9 Web
| Updated By: shivaprasad.hs|

Updated on: Sep 11, 2021 | 1:51 PM

Share

ಎಸ್.ಎಸ್.ರಾಜಮೌಳಿ ನಿರ್ದೇಶನದ ಬಹು ನಿರೀಕ್ಷಿತ ‘ಆರ್​ಆರ್​ಆರ್’(RRR) ಚಿತ್ರದ ಬಿಡುಗಡೆಯ ದಿನಾಂಕ ಮತ್ತೆ ಮುಂದೆ ಹೋಗಿದೆ. ಈ ಕುರಿತು ಚಿತ್ರತಂಡ ಅಧಿಕೃತವಾಗಿ ಟ್ವಿಟರ್ ಮುಖಾಂತರ ಘೋಷಿಸಿದೆ. ಈ ಹಿಂದೆ ನಿರ್ಧಾರವಾಗಿದ್ದರ ಪ್ರಕಾರ, ಆರ್​ಆರ್​ಆರ್ ಚಿತ್ರವು ಇದೇ ವರ್ಷದ ಅಕ್ಟೋಬರ್ 13ರಂದು ಬಿಡುಗಡೆಯಾಗಬೇಕಿತ್ತು. ಆದರೆ ಇದನ್ನು ಚಿತ್ರತಂಡ ಮುಂದೂಡಿದ್ದು, ಮುಂದೆ ಯಾವಾಗ ಚಿತ್ರವನ್ನು ಬಿಡುಗಡೆ ಮಾಡಲಾಗುವುದು ಎಂಬ ಮಾಹಿತಿಯನ್ನು ತಿಳಿಸಿಲ್ಲ. ಈ ಕುರಿತು ಮಾಹಿತಿ ನೀಡಿರುವ ಚಿತ್ರತಂಡ ಬಿಡುಗಡೆಯ ದಿನಾಂಕವನ್ನು ಸದ್ಯಕ್ಕೆ ಘೋಷಿಸಸುವುದಿಲ್ಲ. ಚಿತ್ರಮಂದಿರಗಳ ಲಭ್ಯತೆ ನೋಡಿಕೊಂಡು ತಿಳಿಸುತ್ತೇವೆ ಎಂದು ಮಾಹಿತಿ ನೀಡಿದೆ.

ಆರ್​ಆರ್​ಆರ್​ ಚಿತ್ರತಂಡದ ಅಧಿಕೃತ ಟ್ವಿಟರ್ ಖಾತೆಯ ಮುಖಾಂತರ ಚಿತ್ರ ಮುಂದೂಡಲ್ಪಟ್ಟಿರುವ ಮಾಹಿತಿಯನ್ನು ನೀಡಲಾಗಿದೆ. ‘ಬಹುತೇಕರಿಗೆ ತಿಳಿದಿರುವಂತೆ ಆರ್​ಆರ್​ಆರ್​ ಚಿತ್ರದ ಬಿಡುಗಡೆಯನ್ನು ಮುಂದೂಡಲಾಗಿದೆ. ಚಿತ್ರಮಂದಿರಗಳ ಲಭ್ಯತೆ ಇದಕ್ಕೆ ಮುಖ್ಯ ಕಾರಣ. ಜಾಗತಿಕವಾಗಿ ಯಾವಾಗ ಚಿತ್ರಗಳಿಗೆ ಮುಕ್ತವಾಗಿ ಬಿಡುಗಡೆಯ ಅವಕಾಶ ಲಭ್ಯವಾಗುತ್ತದೋ ಆಗ ಚಿತ್ರವನ್ನು ಬಿಡುಗಡೆ ಮಾಡಲಾಗುವುದು. ಆದಷ್ಟು ಶೀಘ್ರವಾಗಿ ಚಿತ್ರವನ್ನು ಬಿಡುಗಡೆ ಮಾಡಲು ಪ್ರಯತ್ನಿಸಲಾಗುವುದು. ಪ್ರಸ್ತುತ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಬಹುತೇಕ ಮುಗಿದಿವೆ’ ಎಂದು ಚಿತ್ರತಂಡ ಘೋಷಿಸಿದೆ.

ಚಿತ್ರತಂಡ ಹಂಚಿಕೊಂಡಿರುವ ಮಾಹಿತಿ:

ಆರ್​ಆರ್​ಆರ್​ ಚಿತ್ರದಲ್ಲಿ ಜೂ.ಎನ್​ಟಿಆರ್ ಹಾಗೂ ರಾಮ್​ಚರಣ್ ಮುಖ್ಯಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಬಾಲಿವುಡ್​ನ ಖ್ಯಾತ ನಟಿ ಆಲಿಯಾ ಭಟ್ ಕೂಡ ಇದರಲ್ಲಿ ಬಣ್ಣ ಹಚ್ಚುತ್ತಿದ್ದಾರೆ. ಬಾಹುಬಲಿ ಚಿತ್ರದ ಯಶಸ್ಸಿನ ನಂತರ ನಿರ್ದೇಶಕ ರಾಜಮೌಳಿ ಕೈಗೆತ್ತಿಕೊಂಡ ಬಿಗ್ ಬಜೆಟ್ ಚಿತ್ರವಿದು.

ಇದನ್ನೂ ಓದಿ:

ಬಿಗ್​ ಬಾಸ್​ ಸ್ಪರ್ಧಿ ಸಪ್ನಾ ಸಾವಿನ ವದಂತಿ ಬಳಿಕ ವಿಡಿಯೋ ವೈರಲ್​; RIP ಎಂದವರೆಲ್ಲ ಈಗ ಗಪ್​ಚುಪ್​

Samantha: ಮನೆಗೆ ಹೊಸ ಸದಸ್ಯೆಯನ್ನು ಬರಮಾಡಿಕೊಂಡ ಸಮಂತಾ; ಫೋಟೋ ನೋಡಿ ಅಭಿಮಾನಿಗಳು ಫುಲ್ ಖುಷ್

(RRR release date is postponed and new date is yet to be announced)

ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ