AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಕ್ಷಕರಿಗೆ 10 ಕೋಟಿ ರೂ. ವಾಪಸ್​ ನೀಡಬೇಕು ಆರ್​ಆರ್​ಆರ್​ ನಿರ್ಮಾಪಕರು; ಹೀಗಾದ್ರೆ ಚಿತ್ರದ ಭವಿಷ್ಯ ಏನು?

RRR Release Date: ‘ಆರ್​ಆರ್​ಆರ್’​ ಚಿತ್ರದ ಬಗ್ಗೆ ದೊಡ್ಡ ಕ್ರೇಜ್​ ಸೃಷ್ಟಿ ಆಗಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಜ.7ರಂದು ಈ ಸಿನಿಮಾ ವಿಶ್ವಾದ್ಯಂತ ಬಿಡುಗಡೆ ಆಗಬೇಕಿತ್ತು.

ಪ್ರೇಕ್ಷಕರಿಗೆ 10 ಕೋಟಿ ರೂ. ವಾಪಸ್​ ನೀಡಬೇಕು ಆರ್​ಆರ್​ಆರ್​ ನಿರ್ಮಾಪಕರು; ಹೀಗಾದ್ರೆ ಚಿತ್ರದ ಭವಿಷ್ಯ ಏನು?
ಜ್ಯೂ.ಎನ್​ಟಿಆರ್​-ರಾಮ್​ ಚರಣ್​
Follow us
TV9 Web
| Updated By: ಮದನ್​ ಕುಮಾರ್​

Updated on: Jan 03, 2022 | 8:18 AM

ಬಹುನಿರೀಕ್ಷಿತ ‘ಆರ್​ಆರ್​ಆರ್​’ (RRR Movie) ಸಿನಿಮಾದ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿದೆ. ಇದು ಸಿನಿಪ್ರಿಯರಿಗೆ ಬೇಸರ ಮೂಡಿಸಿದೆ. ಈ ಚಿತ್ರಕ್ಕಾಗಿ ರಾಮ್​ ಚರಣ್​ (Ram Charan) ಮತ್ತು ಜ್ಯೂ. ಎನ್​ಟಿಆರ್​ (Jr NTR) ಅಭಿಮಾನಿಗಳು ಕಾದು ಕುಳಿತಿದ್ದಾರೆ. ಆದರೆ ದೇಶದಲ್ಲಿ ಹೆಚ್ಚುತ್ತಿರುವ ಒಮಿಕ್ರಾನ್​ ಪ್ರಕರಣಗಳ (Omicron Cases in India) ಕಾರಣದಿಂದ ‘ಆರ್​ಆರ್​ಆರ್​’ ರಿಲೀಸ್​ ಡೇಟ್​ (RRR Release Date) ಮುಂದೂಡುವುದು ಅನಿವಾರ್ಯ ಆಯಿತು. ರಾಜಮೌಳಿ (SS Rajamouli) ನಿರ್ದೇಶನದ ಈ ಚಿತ್ರಕ್ಕೆ ಡಿವಿವಿ ದಾನಯ್ಯ ಬಂಡವಾಳ ಹೂಡಿದ್ದಾರೆ. ಚಿತ್ರದ ಬಿಡುಗಡೆಗೂ ಮುನ್ನವೇ ನಿರ್ಮಾಪಕರು ಬರೋಬ್ಬರಿ 10 ಕೋಟಿ ರೂಪಾಯಿಯನ್ನು ಪ್ರೇಕ್ಷಕರಿಗೆ ವಾಪಸ್​ ನೀಡಬೇಕಾದ ಸಂದರ್ಭ ಬಂದಿದೆ! ಹಾಗಾದರೆ ಈ ಸಿನಿಮಾದ ಭವಿಷ್ಯ ಏನಾಗಬಹುದು ಎಂದು ಎಲ್ಲರೂ ಚರ್ಚೆ ಮಾಡುತ್ತಿದ್ದಾರೆ.

‘ಆರ್​ಆರ್​ಆರ್’​ ಚಿತ್ರದ ಬಗ್ಗೆ ದೊಡ್ಡ ಕ್ರೇಜ್​ ಸೃಷ್ಟಿ ಆಗಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಜ.7ರಂದು ಈ ಸಿನಿಮಾ ವಿಶ್ವಾದ್ಯಂತ ಬಿಡುಗಡೆ ಆಗಬೇಕಿತ್ತು. ಅದಕ್ಕಾಗಿ ಕೆಲವು ಕಡೆಗಳಲ್ಲಿ ಮುಂಡಗ ಟಿಕೆಟ್​ ಬುಕಿಂಗ್​ ಸಹ ಆರಂಭ ಆಗಿತ್ತು. ಪ್ರಪಂಚದೆಲ್ಲೆಡೆ ಅಂದಾಜು 10 ಕೋಟಿ ರೂ. ಮೊತ್ತದ ಟಿಕೆಟ್​ ಬುಕ್​ ಆಗಿತ್ತು ಎನ್ನಲಾಗಿದೆ. ಸಿನಿಮಾ ರಿಲೀಸ್​ ಪೋಸ್ಟ್​ಪೋನ್​ ಆಗಿರುವುದರಿಂದ ಆ ಹಣವನ್ನು ಪ್ರೇಕ್ಷಕರಿಗೆ ವಾಪಸ್​ ನೀಡಬೇಕಾಗಿದೆ.

ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ಯಾವ ಮಟ್ಟದ ನಿರೀಕ್ಷೆ ಇದೆ ಎಂಬುದಕ್ಕೆ ಮುಂಗಡ ಬುಕಿಂಗ್​ ಆಗಿರುವ ಟಿಕೆಟ್​ಗಳ ಸಂಖ್ಯೆಯೇ ಸಾಕ್ಷಿ ನೀಡುತ್ತಿದೆ. ಈಗ 10 ಕೋಟಿ ರೂಪಾಯಿ ವಾಪಸ್​ ನೀಡಬೇಕಾಗಿರುವುದು ನಿಜ. ಹಾಗಂತ ಇದರಿಂದ ಸಿನಿಮಾದ ಕಲೆಕ್ಷನ್​ಗೆ ತೊಂದರೆ ಆಗುವುದಿಲ್ಲ. ಸೂಕ್ತ ಸಮಯದಲ್ಲಿ ‘ಆರ್​ಆರ್​ಆರ್​’ ಬಿಡುಗಡೆ ಮಾಡಿದರೆ ದೊಡ್ಡ ಮಟ್ಟದಲ್ಲಿ ಕಲೆಕ್ಷನ್​ ಆಗುತ್ತದೆ ಎಂದು ಬಾಕ್ಸ್​ ಆಫೀಸ್​ ವ್ಯವಹಾರ ಬಲ್ಲವರು ಮಾತನಾಡುತ್ತಿದ್ದಾರೆ.

ನಟಿ ಆಲಿಯಾ ಭಟ್​ ಅವರು ಈ ಸಿನಿಮಾ ಮೂಲಕ ಇದೇ ಮೊದಲ ಬಾರಿಗೆ ದಕ್ಷಿಣ ಭಾರತಕ್ಕೆ ಕಾಲಿಟ್ಟಿದ್ದಾರೆ. ಅಜಯ್​ ದೇವಗನ್​ ಅವರು ಒಂದು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಇದು ಪ್ಯಾನ್​​ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗಬೇಕು. ಆದರೆ ಹಲವು ಕಡೆಗಳಲ್ಲಿ ಚಿತ್ರಮಂದಿಗರಳು ಕ್ಲೋಸ್​ ಆಗುತ್ತಿವೆ. ಇನ್ನೂ ಕೆಲವೆಡೆ ಶೇ.50ರಷ್ಟು ಆಸನ ಭರ್ತಿಗೆ ಮಾತ್ರ ಅವಕಾಶ ಇದೆ. ಇಂಥ ಸಂದರ್ಭದಲ್ಲಿ ಸಿನಿಮಾ ಬಿಡುಗಡೆ ಮಾಡುವುದು ಸೂಕ್ತ ಅಲ್ಲ ಎಂದು ‘ಆರ್​ಆರ್​ಆರ್​’ ತಂಡ ನಿರ್ಧರಿಸಿದೆ. ಹೊಸ ರಿಲೀಸ್​ ದಿನಾಂಕವನ್ನು ತಿಳಿದುಕೊಳ್ಳಲು ಸಿನಿಪ್ರಿಯರು ಕಾಯುತ್ತಿದ್ದಾರೆ.

ಇದನ್ನೂ ಓದಿ:

‘ಆರ್​ಆರ್​ಆರ್​’ ಚಿತ್ರದಲ್ಲಿ ಆಲಿಯಾ, ಅಜಯ್​ ದೇವಗನ್​ ಅತಿಥಿ ಪಾತ್ರ; ಸತ್ಯ ಬಾಯ್ಬಿಟ್ಟ ರಾಜಮೌಳಿ

RRR ಎದುರು ಫೈಟ್​ ನೀಡಲು ಸಜ್ಜಾಗಿದ್ದ ಕನ್ನಡದ ‘ಡಿಎನ್​ಎ’ ಚಿತ್ರಕ್ಕೀಗ ನಿರಾಳ; ಇದರ ಹೈಲೈಟ್ಸ್​​ ಏನು?

ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ
ಸೋಮನಹಳ್ಳಿ ಟೋಲ್ ವಿರುದ್ಧ ರೈತರು, ಸ್ಥಳೀಯರಿಂದ ಹೋರಾಟ
ಸೋಮನಹಳ್ಳಿ ಟೋಲ್ ವಿರುದ್ಧ ರೈತರು, ಸ್ಥಳೀಯರಿಂದ ಹೋರಾಟ
ತಮ್ಮ ಭಾಷಣದಲ್ಲಿ ಶಿವಕುಮಾರ್​ರನ್ನು ಡೈನಾಮಿಕ್ ಲೀಡರ್ ಎಂದ ಪವನ್ ಕಲ್ಯಾಣ್
ತಮ್ಮ ಭಾಷಣದಲ್ಲಿ ಶಿವಕುಮಾರ್​ರನ್ನು ಡೈನಾಮಿಕ್ ಲೀಡರ್ ಎಂದ ಪವನ್ ಕಲ್ಯಾಣ್