AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ್​ ಚರಣ್​ ಧರಿಸಿದ ಈ ಜಾಕೆಟ್​ ಬೆಲೆ ಊಹಿಸಬಲ್ಲಿರಾ? ಸಾವಿರ ಅಲ್ಲ, ಲಕ್ಷದಲ್ಲಿದೆ ಲೆಕ್ಕ

ಹೆಚ್ಚಿನ ಸಂದರ್ಭದಲ್ಲಿ ರಾಮ್​ ಚರಣ್​ ಅವರು ಫಾರ್ಮಲ್​ ರೀತಿಯ ಬಟ್ಟೆಗಳಲ್ಲಿ ಕಾಣಿಸಿಕೊಳ್ಳುತ್ತಾರೆ. ಜೊತೆಗೆ ಅವರು ಟ್ರೆಂಡಿ ಬಟ್ಟೆಗಳನ್ನೂ ಇಷ್ಟಪಡುತ್ತಾರೆ ಎಂಬುದಕ್ಕೆ ಈ ಜಾಕೆಟ್​ ಸಾಕ್ಷಿ.

ರಾಮ್​ ಚರಣ್​ ಧರಿಸಿದ ಈ ಜಾಕೆಟ್​ ಬೆಲೆ ಊಹಿಸಬಲ್ಲಿರಾ? ಸಾವಿರ ಅಲ್ಲ, ಲಕ್ಷದಲ್ಲಿದೆ ಲೆಕ್ಕ
ಬಿಗ್​ ಬಾಸ್​ ವೇದಿಕೆಯಲ್ಲಿ ನಾಗಾರ್ಜುನ ಜೊತೆ ರಾಮ್​ ಚರಣ್​
TV9 Web
| Edited By: |

Updated on: Sep 19, 2021 | 1:43 PM

Share

ಸಿನಿಮಾದಲ್ಲಿ ಲಕ್ಷಾಂತರ ರೂಪಾಯಿ ಬೆಲೆಯ ಕಾಸ್ಟ್ಯೂಮ್​ ಧರಿಸುವ ಸೆಲೆಬ್ರಿಟಿಗಳು ನಿಜಜೀವನದಲ್ಲಿಯೂ ಅದೇ ರೀತಿ ಬದುಕುತ್ತಾರೆ. ಕೆಲವರಿಗೆ ಸಿಂಪಲ್​ ಆಗಿರುವುದು ಇಷ್ಟ. ಆದರೆ ಕೆಲವರಿಗೆ ಐಷಾರಾಮಿ ಜೀವನವೇ ರೂಢಿ. ನಟ ರಾಮ್​ ಚರಣ್​ ಅವರು ಕೋಟ್ಯಂತರ ರೂಪಾಯಿ ಸಂಭಾವನೆ ಪಡೆಯುತ್ತಾರೆ. ಅದಕ್ಕೆ ತಕ್ಕಂತೆಯೇ ಅವರ ಜೀವನ ಶೈಲಿ ಇದೆ. ಈಗ ಅವರು ಧರಿಸಿರುವ ಒಂದು ಜಾಕೆಟ್​ ಬಗ್ಗೆ ಸಖತ್​ ಚರ್ಚೆ ಆಗುತ್ತಿದೆ. ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಜಾಕೆಟ್​ ಧರಿಸಿ ಅವರು ಬಿಗ್​ ಬಾಸ್​ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಆ ಪೋಟೋಗಳು ವೈರಲ್ ಆಗಿವೆ.

ಡಸ್ಟ್​ ಆಫ್​ ಗಾಡ್ಸ್​ ಫ್ಯಾಷನ್​ ಬ್ರ್ಯಾಂಡ್​ ವಿನ್ಯಾಸಗೊಳಿಸಿದ ದಿ ಜೋಕರ್​ ಡೆನಿಮ್​ ಜಾಕೆಟ್​ ಧರಿಸಿ ರಾಮ್​ ಚರಣ್​ ಬಿಗ್​ ಬಾಸ್​ ಕಾರ್ಯಕ್ರಮಕ್ಕೆ ಬಂದಿದ್ದಾರೆ. ಅದರ ಬೆಲೆ ಬರೋಬ್ಬರಿ 1.3 ಲಕ್ಷ ರೂಪಾಯಿ ಎಂಬುದು ಅಚ್ಚರಿ ವಿಚಾರ! ಹೆಚ್ಚಿನ ಸಂದರ್ಭದಲ್ಲಿ ರಾಮ್​ ಚರಣ್​ ಅವರು ಫಾರ್ಮಲ್​ ರೀತಿಯ ಬಟ್ಟೆಗಳಲ್ಲಿ ಕಾಣಿಸಿಕೊಳ್ಳುತ್ತಾರೆ. ಜೊತೆಗೆ ಅವರು ಟ್ರೆಂಡಿ ಬಟ್ಟೆಗಳನ್ನೂ ಇಷ್ಟಪಡುತ್ತಾರೆ ಎಂಬುದಕ್ಕೆ ಈ ಜಾಕೆಟ್​ ಸಾಕ್ಷಿ. ಅವರ ಫ್ಯಾಷನ್​ ಸೆನ್ಸ್​ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

ಅಷ್ಟಕ್ಕೂ ಬಿಗ್​ ಬಾಸ್​ ವೇದಿಕೆಗೆ ರಾಮ್​ ಚರಣ್​ ಬಂದಿರುವುದು ಯಾಕೆ? ಉತ್ತರ ಸಿಂಪಲ್​; ಡಿಸ್ನಿ ಪ್ಲಸ್​ ಹಾಟ್​ ಸ್ಟಾರ್​ ಸಂಸ್ಥೆಯ ತೆಲುಗು ವಿಭಾಗಕ್ಕೆ ಅವರು ರಾಯಭಾರಿ ಆಗಿದ್ದಾರೆ. ಹಾಗಾಗಿ ಈ ಸಂಸ್ಥೆಯ ಪ್ರಚಾರಕ್ಕಾಗಿ ರಾಮ್​ ಚರಣ್​ ಬಿಗ್​ ಬಾಸ್​ ವೇದಿಕೆ ಏರಿದ್ದಾರೆ. ಇದೇ ವೇದಿಕೆಯಲ್ಲಿ ನಿತಿನ್​, ತಮನ್ನಾ ಭಾಟಿಯಾ, ನಭಾ ನಟೇಶ್​ ಅವರು ತಮ್ಮ ಹೊಸ ಸಿನಿಮಾದ ಪ್ರಮೋಷನ್​ ಕೂಡ ಮಾಡಿದ್ದಾರೆ. ಅವರಿಗೆ ರಾಮ್​ ಚರಣ್​ ಸಾಥ್​ ನೀಡಿದ್ದಾರೆ.

ಡಿಸ್ನಿ ಪ್ಲಸ್​ ಹಾಟ್​ ಸ್ಟಾರ್​ ಸಂಸ್ಥೆಯ ತೆಲುಗು ವಿಭಾಗಕ್ಕೆ ರಾಯಭಾರಿ ಆಗಲು ರಾಮ್​ ಚರಣ್​ ಎಷ್ಟು ಸಂಭಾವನೆ ಪಡೆದುಕೊಂಡಿದ್ದಾರೆ ಎಂಬುದು ಕೂಡ ಈಗ ಟಾಕ್​ ಆಫ್​ ದಿ ಟೌನ್​ ಆಗಿದೆ. ಅವರು ಈ ಕೆಲಸಕ್ಕೆ ವಾರ್ಷಿಕವಾಗಿ ಬರೋಬ್ಬರಿ 6 ಕೋಟಿ ರೂ. ಪಡೆಯಲಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ. ಓಟಿಟಿ ಪ್ಲಾಟ್​ಫಾರ್ಮ್​ಗಳ ವ್ಯಾಪ್ತಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಹಾಗಾಗಿ, ಸ್ಟಾರ್​ ನಟರನ್ನು ರಾಯಭಾರಿಗಳನ್ನಾಗಿ ನೇಮಕ ಮಾಡಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ:

ರಾಮ್​ ಚರಣ್​ ಒಪ್ಪದಿದ್ದರೂ ಲಿಪ್​ ಲಾಕ್ ಮಾಡಿದ್ದ ಸಮಂತಾ? ‘ರಂಗಸ್ಥಲಂ’ ತೆರೆಹಿಂದೆ ಮುತ್ತಿನ ಪ್ರಹಸನ

ರಾಮ್​ ಚರಣ್​ Vs ಜ್ಯೂ. ಎನ್​ಟಿಆರ್​; ಫ್ಯಾನ್ಸ್ ತಕರಾರು ಬಗೆಹರಿಸಲು ರಾಜಮೌಳಿ ಮಾಡಿದ ಪ್ಲ್ಯಾನ್​ ಏನು?

Follow Us
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ