AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RRR ಚಿತ್ರತಂಡದಿಂದ ಹೊಸ ಅಪ್​ಡೇಟ್​; ಆ ದಿನ ಕೊನೆಗೂ ಬಂತು

ಜನವರಿ 7ರಂದು ‘ಆರ್​ಆರ್​ಆರ್​’ ಸಿನಿಮಾ ತೆರೆಗೆ ಬರುತ್ತಿದೆ. ಈ ಚಿತ್ರದಲ್ಲಿ ದೊಡ್ಡ ತಾರಾ ಬಳಗವಿದೆ. ಈ ಕಾರಣಕ್ಕೆ ಸಿನಿಮಾ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಹಲವು ಹಾಡುಗಳನ್ನು ರಿಲೀಸ್​ ಮಾಡುವ ಮೂಲಕ ಚಿತ್ರದ ಮೇಲೆ ಭರವಸೆ ಹುಟ್ಟಿಸುವ ಕೆಲಸ ನಡೆದಿದೆ.

RRR ಚಿತ್ರತಂಡದಿಂದ ಹೊಸ ಅಪ್​ಡೇಟ್​; ಆ ದಿನ ಕೊನೆಗೂ ಬಂತು
ಆರ್​ಆರ್​ಆರ್​ ತಂಡ
TV9 Web
| Edited By: |

Updated on: Nov 29, 2021 | 5:56 PM

Share

ಎಸ್​​.ಎಸ್​. ರಾಜಮೌಳಿ ನಿರ್ದೇಶನದ ಸಿನಿಮಾ ಎಂದರೆ ಅದಕ್ಕೆ ಬೇರೆಯದೇ ಆದ ತೂಕ ಇರುತ್ತದೆ. ಅವರ ನಿರ್ದೇಶನದ ಸಿನಿಮಾಗಳು ಬಹುತೇಕರಿಗೆ ಇಷ್ಟವಾಗುತ್ತದೆ. ಅವರ ನಿರ್ದೇಶನದ ‘ಆರ್​ಆರ್​ಆರ್​’ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಈಗಾಗಲೇ ರಿಲೀಸ್​ ಆಗಿರುವ ಸಿನಿಮಾದ ಟೀಸರ್​ ಹಾಗೂ ಪೋಸ್ಟರ್​ಗಳು ದೊಡ್ಡ ಮಟ್ಟದಲ್ಲಿ ನಿರೀಕ್ಷೆ ಹುಟ್ಟು ಹಾಕಿದೆ. ಈಗ ಟ್ರೇಲರ್​ ರಿಲೀಸ್​ ದಿನಾಂಕದ ಬಗ್ಗೆ ಚಿತ್ರತಂಡ ಘೋಷಣೆ ಮಾಡಿದೆ. ಡಿಸೆಂಬರ್​ 3ಕ್ಕೆ ಸಿನಿಮಾದ ಟ್ರೇಲರ್ ರಿಲೀಸ್ ಆಗಲಿದೆ.

ಜನವರಿ 7ರಂದು ‘ಆರ್​ಆರ್​ಆರ್​’ ಸಿನಿಮಾ ತೆರೆಗೆ ಬರುತ್ತಿದೆ. ಈ ಚಿತ್ರದಲ್ಲಿ ದೊಡ್ಡ ತಾರಾ ಬಳಗವಿದೆ. ಈ ಕಾರಣಕ್ಕೆ ಸಿನಿಮಾ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಹಲವು ಹಾಡುಗಳನ್ನು ರಿಲೀಸ್​ ಮಾಡುವ ಮೂಲಕ ಚಿತ್ರದ ಮೇಲೆ ಭರವಸೆ ಹುಟ್ಟಿಸುವ ಕೆಲಸ ನಡೆದಿದೆ. ಈಗ ಡಿಸೆಂಬರ್​ 3ರಂದು ಸಿನಿಮಾದ ಟ್ರೇಲರ್​ ರಿಲೀಸ್​ ಆಗುತ್ತಿದ್ದು, ಸಿನಿಪ್ರಿಯರ ಕಾತುರ ಹೆಚ್ಚಿದೆ.

ರಾಜಮೌಳಿ ಸಿನಿಮಾ ಬಜೆಟ್​ಗೆ ತಕ್ಕಂತೆ ಅದ್ದೂರಿಯಾಗಿ ಮೂಡಿ ಬರುತ್ತದೆ. ‘ಆರ್​ಆರ್​ಆರ್​’ ಸಿನಿಮಾ ಮೇಕಿಂಗ್​ ಕೂಡ ಉತ್ಕೃಷ್ಟ ಮಟ್ಟದಿಂದ ಕೂಡಿರಲಿದೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಟ್ರೇಲರ್​ ರಿಲೀಸ್​ ಆದ ನಂತರದಲ್ಲಿ ಚಿತ್ರತಂಡ ಪ್ರಚಾರಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡಲಿದೆ. ಟ್ರೇಲರ್ ರಿಲೀಸ್​ ಆದ ಒಂದು ತಿಂಗಳವರೆಗೆ ನಾನಾ ರಾಜ್ಯಗಳಿಗೆ ತೆರಳಿ ತಂಡ ಸಿನಿಮಾ ಪ್ರಚಾರ ಕಾರ್ಯ ನಡೆಸಿಲಿದೆ.

ಕರ್ನಾಟಕದಲ್ಲಿ ಗ್ರ್ಯಾಂಡ್​ ಆಗಿ ಪ್ರೀ-ರಿಲೀಸ್​ ಇವೆಂಟ್​ ನಡೆಸಲು ಚಿತ್ರತಂಡ ನಿರ್ಧರಿಸಿದೆ. ಈ ಬಗ್ಗೆ ರಾಜಮೌಳಿ ಇತ್ತೀಚೆಗೆ ಮಾಹಿತಿ ನೀಡಿದ್ದರು. ಈ ಕಾರ್ಯ ಯಾವಾಗ ನಡೆಯಲಿದೆ ಎನ್ನುವ ಕುತೂಹಲ ಕನ್ನಡಿಗರಲ್ಲಿ ಮೂಡಿದೆ. ತೆಲುಗು, ತಮಿಳು, ಹಿಂದಿ, ಕನ್ನಡ ಹಾಗೂ ಮಲಯಾಳಂನಲ್ಲಿ ಸಿನಿಮಾ ಮೂಡಿ ಬರುತ್ತಿದೆ.

‘ಆರ್​ಆರ್​ಆರ್​’ ಚಿತ್ರದಲ್ಲಿ ಜ್ಯೂ.ಎನ್​ಟಿಆರ್​ ಹಾಗೂ ರಾಮ್​ ಚರಣ್​ ಮುಖ್ಯ ಭೂಮಿಕೆಯಲ್ಲಿ ಇದ್ದಾರೆ. ‘ಆರ್​ಆರ್​ಆರ್’ ಚಿತ್ರದಲ್ಲಿ ನಾಯಕಿಯಾಗಿ ಆಲಿಯಾ ಭಟ್​ ಅಭಿನಯಿಸಿದ್ದಾರೆ. ಇನ್ನೊಂದು ಮುಖ್ಯ ಪಾತ್ರದಲ್ಲಿ ಬಾಲಿವುಡ್​ ನಟ ಅಜಯ್​ ದೇವಗನ್​ ಅವರು ಕಾಣಿಸಿಕೊಂಡಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಟೀಸರ್, ಪೋಸ್ಟರ್​ ಮತ್ತು ಹಾಡುಗಳು ಧೂಳೆಬ್ಬಿಸಿವೆ.

ಇದನ್ನೂ ಓದಿ: SS Rajamouli: ಕನ್ನಡಿಗರಲ್ಲಿ ಎರಡು ವಿಚಾರಕ್ಕೆ ಕ್ಷಮೆ ಕೇಳಿ ಮಾತು ಆರಂಭಿಸಿದ ಎಸ್​ಎಸ್​ ರಾಜಮೌಳಿ

 ‘ಆರ್​ಆರ್​ಆರ್’ ಸಿನಿಮಾದಲ್ಲಿ ಆಲಿಯಾ ಭಟ್​ ಕಾಣಿಸಿಕೊಳ್ಳೋದು ಕೇವಲ ಇಷ್ಟು ನಿಮಿಷನಾ?

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್