AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್’ ವಿಲನ್ ಜೊತೆ ಮಲೇಷಿಯಾನಲ್ಲಿ ರುಕ್ಮಿಣಿ ವಸಂತ್, ಏನು ವಿಶೇಷತೆ?

Rukmini Vasanth: ನಟಿ ರುಕ್ಮಿಣಿ ವಸಂತ್ ಮಲೇಷಿಯಾನಲ್ಲಿದ್ದಾರೆ. ‘ಕೆಜಿಎಫ್’ ವಿಲನ್ ಆಂಡ್ರೂಸ್ ಖ್ಯಾತಿಯ ಅವಿನಾಶ್ ಜೊತೆ ಫೋಟೊಕ್ಕೆ ಫೋಸು ನೀಡಿದ್ದಾರೆ.

‘ಕೆಜಿಎಫ್’ ವಿಲನ್ ಜೊತೆ ಮಲೇಷಿಯಾನಲ್ಲಿ ರುಕ್ಮಿಣಿ ವಸಂತ್, ಏನು ವಿಶೇಷತೆ?
ರುಕ್ಮಿಣಿ ವಸಂತ್
ಮಂಜುನಾಥ ಸಿ.
|

Updated on: Nov 28, 2023 | 5:56 PM

Share

ಸಪ್ತ ಸಾಗರದಾಚೆ ಎಲ್ಲೋ’ (Sapta Sagaradache Ello) ಸಿನಿಮಾ ಹಿಟ್ ಎನಿಸಿಕೊಂಡಿದೆ. ಸಿನಿಮಾವನ್ನು ಸಹೃದಯಿ ಪ್ರೇಕ್ಷಕರು ಮೆಚ್ಚಿ ಎದೆಗಿಳಿಸಿಕೊಂಡಿದ್ದಾರೆ. ಸಿನಿಮಾದಲ್ಲಿ ತೋರಿಸಲಾಗಿರುವ ಸರಳ ಪ್ರೇಮಕತೆ, ಮಧುರವಾದ ಹಿನ್ನೆಲೆ ಸಂಗೀತ, ನಟರ ನಟನೆ ಬಹುವಾಗಿ ಗಮನ ಸೆಳೆದಿದೆ. ಸಿನಿಮಾ ನೋಡಿದವರೆಲ್ಲರೂ ನಾಯಕಿ ರುಕ್ಮಿಣಿ ವಸಂತ್​ರ ನಟನೆಯನ್ನು ಬಹುವಾಗಿ ಕೊಂಡಾಡುತ್ತಿದ್ದಾರೆ. ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದ ಬಳಿಕ ರುಕ್ಮಿಣಿಗೆ ಹಲವು ಆಫರ್​ಗಳು ಒಂದರ ಹಿಂದೊಂದು ಸಿಗುತ್ತಿವೆ. ಇದೀಗ ನಟಿ ರುಕ್ಮಿಣಿ ವಸಂತ್, ಮಲೇಷಿಯಾದಲ್ಲಿದ್ದಾರೆ, ಅದೂ ‘ಕೆಜಿಎಫ್’ ವಿಲನ್ ಜೊತೆ.

‘ಕೆಜಿಎಫ್’ ಸಿನಿಮಾನಲ್ಲಿ ಆಂಡ್ರೂಸ್ ಪಾತ್ರದಲ್ಲಿ ನಟಿಸಿದ್ದ ಖಡಕ್ ವಿಲನ್ ಬಿಎಸ್ ಅವಿನಾಶ್ ಜೊತೆ ಮಲೇಷಿಯಾದ ಕೌಲಾಲಂಪುರದಲ್ಲಿನ ಮುರುಗನ್ ವಿಗ್ರಹದ ಮುಂದೆ ನಿಂತು ಫೋಟೊಕ್ಕೆ ಫೋಸು ನೀಡಿದ್ದಾರೆ. ಅಂದಹಾಗೆ ರುಕ್ಮಿಣಿ ವಸಂತ್, ಮಲೇಷಿಯಾನಲ್ಲಿ ಏನು ಮಾಡುತ್ತಿದ್ದಾರೆ, ನಟಿಯ ಜೊತೆಗೆ ‘ಕೆಜಿಎಫ್’ ವಿಲನ್ ಏನು ಮಾಡುತ್ತಿದ್ದಾರೆ? ಇತ್ಯಾದಿ ಪ್ರಶ್ನೆಗಳಿಗೆ ಚಿತ್ರಗಳನ್ನು ಹಂಚಿಕೊಂಡಿರುವ ನಟ ಬಿಎಸ್ ಅವಿನಾಶ್ ಉತ್ತರ ನೀಡಿದ್ದಾರೆ.

ಇದನ್ನೂ ಓದಿ: ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ನೋಡಿ ರುಕ್ಮಿಣಿ ವಸಂತ್​ಗೆ ಯಾರ್ಯಾರು ಫೋನ್ ಮಾಡಿದ್ದರು?

ರುಕ್ಮಿಣಿ ವಸಂತ್, ಮಲೇಷಿಯಾಗೆ ಹೋಗಿರುವುದು ಸಿನಿಮಾ ಚಿತ್ರೀಕರಣಕ್ಕಾಗಿ. ರುಕ್ಮಿಣಿ, ತಮಿಳಿನ ಸಿನಿಮಾ ಒಂದರಲ್ಲಿ ನಟಿಸುತ್ತಿದ್ದಾರೆ. ಸಿನಿಮಾಕ್ಕೆ ನಾಯಕ ಜನಪ್ರಿಯ ನಟ ವಿಜಯ್ ಸೇತುಪತಿ. ರುಕ್ಮಿಣಿ ಅವರದ್ದು ಸಿನಿಮಾದಲ್ಲಿ ನಾಯಕಿ ಪಾತ್ರ. ಸಿನಿಮಾದಲ್ಲಿ ಖಡಕ್ ವಿಲನ್ ಬಿಎಸ್ ಅವಿನಾಶ್ ಸಹ ನಟಿಸುತ್ತಿದ್ದಾರೆ. ಹಾಗಾಗಿ ಚಿತ್ರೀಕರಣದ ವೇಳೆ ರುಕ್ಮಿಣಿ ವಸಂತ್ ಜೊತೆಗೆ ಬಿಎಸ್ ಅವಿನಾಶ್ ಚಿತ್ರಗಳನ್ನು ತೆಗೆಸಿಕೊಂಡು ಅವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ‘ಸಮುದ್ರದಷ್ಟು ಭಾವನೆಗಳನ್ನು ಕಣ್ಣಲ್ಲಿ ವ್ಯಕ್ತಪಡಿಸುವವರು’ ಎಂದು ಹೊಗಳಿಕೆಯ ಸಾಲುಗಳನ್ನು ಸಹ ಬರೆದಿದ್ದಾರೆ.

ವಿಜಯ್ ಸೇತುಪತಿ ಅವರ 51ನೇ ಸಿನಿಮಾದ ಚಿತ್ರೀಕರಣ ಪ್ರಸ್ತುತ ಮಲೇಷಿಯಾನಲ್ಲಿ ನಡೆಯುತ್ತಿದೆ. ಸಿನಿಮಾದಲ್ಲಿ ವಿಜಯ್ ಸೇತುಪತಿ ಪತ್ನಿಯ ಪಾತ್ರದಲ್ಲಿ ರುಕ್ಮಿಣಿ ವಸಂತ್ ನಟಿಸುತ್ತಿದ್ದಾರೆ ಎನ್ನಲಾಗಿದೆ. ಈಗ ಅವಿನಾಶ್ ಹಂಚಿಕೊಂಡಿರುವ ಚಿತ್ರಗಳಲ್ಲಿ ಸಹ ಸರಳವಾಗಿ ಸೀರೆ ಉಟ್ಟು ಲಕ್ಷಣವಾಗಿ ಕಾಣುತ್ತಿದ್ದಾರೆ ರುಕ್ಮಿಣಿ ವಸಂತ್. ಅಂದಹಾಗೆ ವಿಜಯ್ ಸೇತುಪತಿ ಜೊತೆ ನಟಿಸುತ್ತಿರುವ ಈ ಸಿನಿಮಾ ರುಕ್ಮಿಣಿ ಅವರಿಗೆ ಮೊದಲ ಪರಭಾಷೆ ಸಿನಿಮಾ. ಎಸ್​ಎಸ್​ಇ ಬಳಿಕ ಇನ್ನೂ ಹಲವು ಅವಕಾಶಗಳು ರುಕ್ಮಿಣಿ ಅವರನ್ನು ಅರಸಿ ಬರುವುದರಲ್ಲಿ ಅನುಮಾನವಿಲ್ಲ.

ವಿಜಯ್ ಸೇತುಪತಿ ಸಿನಿಮಾ ಹೊರತುಪಡಿಸಿ ಕನ್ನಡದ ಎರಡು ಸಿನಿಮಾಗಳಲ್ಲಿ ರುಕ್ಮಿಣಿ ವಸಂತ್ ನಟಿಸುತ್ತಿದ್ದಾರೆ. ಶಿವರಾಜ್ ಕುಮಾರ್ ನಟನೆಯ ‘ಭೈರತಿ ರಣಗಲ್’ ಹಾಗೂ ಶ್ರೀಮುರಳಿ ನಾಯಕರಾಗಿ ನಟಿಸಿ, ಹೊಂಬಾಳೆ ಫಿಲಮ್ಸ್ ನಿರ್ಮಾಣ ಮಾಡುತ್ತಿರುವ ‘ಬಘೀರ’ ಸಿನಿಮಾದಲ್ಲಿಯೂ ಸಹ ರುಕ್ಮಿಣಿಯೇ ನಾಯಕಿ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?