AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಿನಿಮಾ ವಿಚಾರದಲ್ಲಿ ನಾನು ಲಕ್ಕಿ ಅನ್ನೋದನ್ನು ಒಪ್ಪಿಕೊಳ್ಳುತ್ತೇನೆ’; ರುಕ್ಮಿಣಿ ವಸಂತ್

ರುಕ್ಮಿಣಿ ವಸಂತ್ ಅವರು ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದ ಯಶಸ್ಸಿನ ಬಗ್ಗೆ ಮಾತನಾಡಿದ್ದಾರೆ. ಅವರು ತಮ್ಮ ಯಶಸ್ಸಿಗೆ ಅದೃಷ್ಟ ಮತ್ತು ಶ್ರಮ ಎರಡೂ ಕಾರಣ ಎಂದು ಹೇಳಿದ್ದಾರೆ. "ಸಪ್ತ ಸಾಗರದಾಚೆ ಎಲ್ಲೋ" ಚಿತ್ರದಲ್ಲಿ ಅವರು ನಟಿಸಲು ಅವಕಾಶ ದೊರೆತದ್ದು ಅದೃಷ್ಟದಿಂದ ಎಂದು ಅವರು ಒಪ್ಪಿಕೊಂಡಿದ್ದಾರೆ. ಆದರೆ, ಅವರು ತಮ್ಮ ಶ್ರಮವನ್ನೂ ಮರೆಯಲಿಲ್ಲ.

‘ಸಿನಿಮಾ ವಿಚಾರದಲ್ಲಿ ನಾನು ಲಕ್ಕಿ ಅನ್ನೋದನ್ನು ಒಪ್ಪಿಕೊಳ್ಳುತ್ತೇನೆ’; ರುಕ್ಮಿಣಿ ವಸಂತ್
ರುಕ್ಮಿಣಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: May 24, 2025 | 7:56 AM

Share

ನಟಿ ರುಕ್ಮಿಣಿ ವಸಂತ್ (Rukmini Vasanth) ಅವರು ದೊಡ್ಡ ಮಟ್ಟದಲ್ಲಿ ಖ್ಯಾತಿ ಪಡೆದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರ. ರಕ್ಷಿತ್ ಶೆಟ್ಟಿ ನಟನೆಯ ಈ ಚಿತ್ರದಿಂದಾಗಿ ಅವರಿಗೆ ಪರಭಾಷೆಗಳಿಂದ ಆಫರ್ ಬರುತ್ತಿದೆ. ಪ್ರಭಾಸ್, ಜೂನಿಯರ್ ಎನ್​ಟಿಆರ್​ ಅವರಂಥ ಸ್ಟಾರ್ ಹೀರೋಗೆ ಅವರು ನಾಯಕಿ ಆಗಿ ಆಯ್ಕೆ ಆಗುತ್ತಿದ್ದಾರೆ ಎಂದು ವರದಿಗಳು ಕೇಳಿ ಬಂದಿವೆ. ಹೀಗಿರುವಾಗಲೇ ರುಕ್ಮಿಣಿ ವಸಂತ್ ಅವರು ಅದೃಷ್ಟದ ಬಗ್ಗೆ ಮಾತನಾಡಿದ್ದಾರೆ. ತಾವು ಲಕ್ಕಿ ಎಂದು ಅವರು ಎಲ್ಲರ ಎದುರು ಒಪ್ಪಿಕೊಂಡಿದ್ದಾರೆ.

ರುಕ್ಮಿಣಿ ವಸಂತ್ ಅವರು ಈ ಮೊದಲು ಕೆಲ ಸಿನಿಮಾ ಮಾಡಿದ್ದರು. ಆದರೆ, ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರ ಅವರ ಅದೃಷ್ಟವನ್ನು ಬದಲಿಸಿತೂ ಎಂದರೂ ತಪ್ಪಾಗಲಿಕ್ಕಿಲ್ಲ. ಇದನ್ನು ಅವರು ಕೂಡ ಒಪ್ಪಿಕೊಳ್ಳುತ್ತಾರೆ. ತಮಗೆ ಅದೃಷ್ಟ ಇತ್ತು ಎಂದಿರೋ ಅವರು, ಶ್ರಮ ಕೂಡ ಸೇರಿದೆ ಎಂದು ಹೇಳಿಕೊಂಡಿದ್ದಾರೆ. ಅವರ ಮಾತನ್ನು ಅನೇಕರು ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ
Image
‘ಕಾಂತಾರ: ಚಾಪ್ಟರ್ 1’ ಅಡಚಣೆ; ಅಂದುಕೊಂಡ ದಿನಾಂಕದಲ್ಲೇ ಚಿತ್ರ ರಿಲೀಸ್
Image
ಮಹೇಶ್ ಬಾಬು ಕುಟುಂಬದಲ್ಲಿ ಕೊವಿಡ್; ಅಭಿಮಾನಿಗಳಲ್ಲಿ ಹೆಚ್ಚಿತು ಆತಂಕ
Image
‘ನಾನು ಯಶ್ ಅಭಿಮಾನಿ ಅಲ್ಲ, ಆದರೆ ಆ ಹೀರೋ ನಂಗೆ ಆದರ್ಶ’; ಯಶ್ ತಾಯಿ
Image
25ನೇ ವಯಸ್ಸಿಗೆ ಕಾಲಿಟ್ಟ ಸುಹಾನ; ಶಾರುಖ್ ಮಗಳ ಬಳಿ ಇದೆ ದುಬಾರಿ ವಸ್ತುಗಳು

‘ನೀವು ಲಕ್ಕಿ ಬಿಡಿ’ ಎಂದು ಕೆಲವು ನಟಿಯರಿಗೆ ಕೆಲವರು ಹೇಳಿದ್ದು ಇದೆ. ಆಗ ಅವರಿಗೆ ಸಿಟ್ಟೇ ಬಂದುಬಿಡುತ್ತದೆ. ‘ಅವರಿಗೆ ನಾನು ಹಾಕಿದ ಶ್ರಮ ಕಾಣುವುದಿಲ್ಲ’ ಎನ್ನುತ್ತಾರೆ. ಆದರೆ, ರುಕ್ಮಿಣಿ ವಸಂತ್ ಅವರು ಈ ರೀತಿ ಅಲ್ಲ. ಅವರು ಬೇರೆಯದೇ ಅಭಿಪ್ರಾಯ ಹೇಳುತ್ತಾರೆ.

‘ಅದೃಷ್ಟ ಮುಖ್ಯ. ಸಪ್ತ ಸಾಗರದಾಚೆ ಸಿನಿಮಾ ನನಗೆ ಬ್ರೇಕ್ ನೀಡಿತು. ನಾನು ಡೈರೆಕ್ಟರ್​ಗೆ ಮೆಸೇಜ್ ಮಾಡಿದೆ. ನಾನು ನ್ಯೂಸ್ ಪೇಪರ್​ನಲ್ಲಿ ನಾಯಕಿಗಾಗಿ ಹುಡುಕಾಟ ನಡೆಸುತ್ತಿದ್ದೀರಿ ಎಂಬುದನ್ನು ನೋಡಿದೆ. ಆಡಿಷನ್ ಮಾಡಬಹುದಾ ಎಂದು ಕೇಳಿದ್ದೆ. ನಾನು ನಟನೆ ಕಲಿತಿದ್ದೇನೆ ಎಂದು ಅವರಿಗೆ ಹೇಳಿದ್ದೆ. ಅವರು ಮೆಸೇಜ್ ನೋಡಿ ಓಕೆ ಎಂದರು. ಆಡಿಷನ್ ಕೊಟ್ಟು ಆಯ್ಕೆ ಆದೆ. ಅವರು ನನ್ನ ಮೆಸೇಜ್ ನೋಡದೇ ಇದ್ದಿದ್ದರೆ ಆ ಸಿನಿಮಾದಲ್ಲಿ ನಾನು ಇರ್ತಾ ಇರಲಿಲ್ಲ. ನಾವು ಕಷ್ಟಪಟ್ಟು ಕೆಲಸ ಮಾಡಿದ್ದೇವೆ. ಅದೇ ರೀತಿ ಅದೃಷ್ಟ ಕೂಡ ಮುಖ್ಯ. ನೀವು ಲಕ್ಕಿ ಎಂದರೆ ನನಗೆ ಕೋಪ ಬರಲ್ಲ. ಇದು ಅದೃಷ್ಟ ಹಾಗೂ ಶ್ರಮದ ಕಾಂಬಿನೇಷನ್’ ಎಂದಿದ್ದಾರೆ ಅವರು.

ಇದನ್ನೂ ಓದಿ: ರುಕ್ಮಿಣಿ ವಸಂತ್​ಗೆ​ ಖುಲಾಯಸಿದ ಅದೃಷ್ಟ, ತೆಲುಗಿನಲ್ಲಿ ಬಲು ಬ್ಯುಸಿ, ಕೈಲಿರುವ ಸಿನಿಮಾಗಳೆಷ್ಟು?

ರಶ್ಮಿಕಾ ಮಂದಣ್ಣ ವಿಚಾರದಲ್ಲೂ ಹಿಗೇಯೇ ಆತಿತು. ‘ಕಿರಿಕ್ ಪಾರ್ಟಿ’ ಚಿತ್ರಕ್ಕೆ ಅವರು ಆಡಿಷನ್ ನೀಡಿ ಆಯ್ಕೆ ಆದರು. ಆ ಬಳಿಕ ಕರ್ನಾಟಕ ಕ್ರಶ್ ಆದರು. ನಂತರ ನ್ಯಾಷನಲ್ ಕ್ರಶ್ ಆದರು. ಅವರಿಗೆ ಅದೃಷ್ಟ ಸಾಕಷ್ಟು ಸಹಾಯ ಮಾಡಿತ್ತು. ಆದರೆ, ರಶ್ಮಿಕಾ ಇದನ್ನು ಒಪ್ಪಿಕೊಳ್ಳುವುದಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ