AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳು ಸ್ಟಾರ್ ನಟನ 50ನೇ ಸಿನಿಮಾಕ್ಕೆ ರುಕ್ಮಿಣಿ ವಸಂತ್ ನಾಯಕಿ

Rukmini Vasanth movie: ರಶ್ಮಿಕಾ ಮಂದಣ್ಣ ಈಗಾಗಲೇ ಸ್ಟಾರ್ ಪ್ಯಾನ್ ಇಂಡಿಯಾ ನಟಿ ಆಗಿದ್ದಾರೆ. ಕನ್ನಡತಿ ಶ್ರೀಲೀಲಾ ಸಹ ಪ್ಯಾನ್ ಇಂಡಿಯಾ ಸ್ಟಾರ್ ಆಗುವತ್ತ ದಾಪುಗಾಲಿಟ್ಟಿದ್ದಾರೆ. ಶ್ರದ್ಧಾ ಶ್ರೀನಾಥ್, ಶ್ರೀನಿಧಿ ಶೆಟ್ಟಿ ಇನ್ನೂ ಕೆಲವರು ಸಹ ಪರಭಾಷೆಗಳಲ್ಲಿ ಬಹಳ ಒಳ್ಳೆಯ ಸಿನಿಮಾಗಳನ್ನು ಮಾಡುತ್ತಿದ್ದು, ಗಮನ ಸೆಳೆಯುತ್ತಿದ್ದಾರೆ. ‘ಸಪ್ತ ಸಾಗರದಾಚೆ ಎಲ್ಲೊ’ ಸಿನಿಮಾ ಮೂಲಕ ತಮ್ಮ ಪ್ರತಿಭೆಯ ಅನಾವರಣ ಮಾಡಿದ ರುಕ್ಮಿಣಿ ವಸಂತ್ ಸಹ ಇದೀಗ ಪ್ಯಾನ್ ಇಂಡಿಯಾ ನಟಿಯಾಗುವ ಹಂತದಲ್ಲಿದ್ದಾರೆ.

ತಮಿಳು ಸ್ಟಾರ್ ನಟನ 50ನೇ ಸಿನಿಮಾಕ್ಕೆ ರುಕ್ಮಿಣಿ ವಸಂತ್ ನಾಯಕಿ
Rukmini Vasanth
ಮಂಜುನಾಥ ಸಿ.
|

Updated on: May 29, 2026 | 12:49 PM

Share

ಕನ್ನಡದ ನಟಿಯರು ತಮ್ಮ ಪ್ರತಿಭೆ, ಸೌಂದರ್ಯದಿಂದಾಗಿ ಪರಭಾಷೆಗಳಲ್ಲಿ ಸಖತ್ ಆಗಿ ಮಿಂಚುತ್ತಿದ್ದಾರೆ. ರಶ್ಮಿಕಾ ಮಂದಣ್ಣ (Rashmika Mandanna) ಈಗಾಗಲೇ ಸ್ಟಾರ್ ಪ್ಯಾನ್ ಇಂಡಿಯಾ ನಟಿ ಆಗಿದ್ದಾರೆ. ಕನ್ನಡತಿ ಶ್ರೀಲೀಲಾ ಸಹ ಪ್ಯಾನ್ ಇಂಡಿಯಾ ಸ್ಟಾರ್ ಆಗುವತ್ತ ದಾಪುಗಾಲಿಟ್ಟಿದ್ದಾರೆ. ಶ್ರದ್ಧಾ ಶ್ರೀನಾಥ್, ಶ್ರೀನಿಧಿ ಶೆಟ್ಟಿ ಇನ್ನೂ ಕೆಲವರು ಸಹ ಪರಭಾಷೆಗಳಲ್ಲಿ ಬಹಳ ಒಳ್ಳೆಯ ಸಿನಿಮಾಗಳನ್ನು ಮಾಡುತ್ತಿದ್ದು, ಗಮನ ಸೆಳೆಯುತ್ತಿದ್ದಾರೆ. ‘ಸಪ್ತ ಸಾಗರದಾಚೆ ಎಲ್ಲೊ’ ಸಿನಿಮಾ ಮೂಲಕ ತಮ್ಮ ಪ್ರತಿಭೆಯ ಅನಾವರಣ ಮಾಡಿದ ರುಕ್ಮಿಣಿ ವಸಂತ್ ಸಹ ಇದೀಗ ಪ್ಯಾನ್ ಇಂಡಿಯಾ ನಟಿಯಾಗುವ ಹಂತದಲ್ಲಿದ್ದಾರೆ.

ಈಗಾಗಲೇ ಕನ್ನಡದ ಹೊರತಾಗಿ ಕೆಲ ಪರಭಾಷೆ ಸಿನಿಮಾಗಳಲ್ಲಿಯೂ ನಟಿಸಿರುವ ರುಕ್ಮಿಣಿ ವಸಂತ್, ಇದೀಗ ತಮಿಳಿನ ಸ್ಟಾರ್ ನಟರೊಬ್ಬರ 50ನೇ ಸಿನಿಮಾಕ್ಕೆ ನಾಯಕಿಯಾಗಿ ಆಯ್ಕೆ ಆಗಿದ್ದಾರೆ. ಈಗಾಗಲೆ ತೆಲುಗಿನ ಜೂ ಎನ್​​ಟಿಆರ್ ಜೊತೆಗೆ ‘ಡ್ರ್ಯಾಗನ್’ ಸಿನಿಮಾನಲ್ಲಿ ನಟಿಸುತ್ತಿರುವ ರುಕ್ಮಿಣಿ ವಸಂತ್, ಇದೀಗ ತಮಿಳಿನ ಸ್ಟಾರ್ ನಟನ ಜೊತೆ ನಟಿಸುವ ಅವಕಾಶ ಬಾಚಿಕೊಂಡಿದ್ದಾರೆ.

ತಮಿಳಿನ ಸ್ಟಾರ್ ನಟ ಸೂರ್ಯ ನಟನೆಯ ‘ಕರುಪ್ಪು’ ಸಿನಿಮಾ ಇತ್ತೀಚೆಗಷ್ಟೆ ಬಿಡುಗಡೆ ಆಗಿ ಬ್ಲಾಕ್ ಬಸ್ಟರ್ ಆಗಿದೆ. ಇದೀಗ ಅವರು ತಮ್ಮ 50ನೇ ಸಿನಿಮಾದ ತಯಾರಿಯಲ್ಲಿದ್ದಾರೆ. ವೃತ್ತಿ ಜೀವನದ 50ನೇ ಸಿನಿಮಾ ಆಗಿರುವ ಕಾರಣಕ್ಕೆ ಸಿನಿಮಾ ವಿಶೇಷವಾಗಿರಬೇಕು ಎಂಬ ಕಾಳಜಿ ಸೂರ್ಯ ಅವರಿಗಿದ್ದು, ವಿಶೇಷ ಕತೆಯೊಂದನ್ನು ಸಿನಿಮಾಕ್ಕೆ ಆಯ್ಕೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಅಂದಹಾಗೆ ಈ ಸಿನಿಮಾಕ್ಕೆ ಬಂಡವಾಳ ಹೂಡುತ್ತಿರುವುದು ಕೆವಿಎನ್ ಪ್ರೊಡಕ್ಷನ್ಸ್​.

ಇದನ್ನೂ ಓದಿ:ಕೃತಿ ಸನೋನ್ ಜೊತೆಗೆ ಸೆಲ್ಫಿ ಕ್ಲಿಕ್ಕಿಸಿಕೊಂಡ ರಶ್ಮಿಕಾ ಮಂದಣ್ಣ

ಸೂರ್ಯ ಅವರ 50ನೇ ಸಿನಿಮಾಕ್ಕೆ ರುಕ್ಮಿಣಿ ವಸಂತ್ ನಾಯಕಿಯಾಗಿ ಆಯ್ಕೆ ಆಗಿದ್ದಾರೆ. ಸೂರ್ಯ ನಟಿಸಿದ್ದ ಬ್ಲಾಕ್ ಬಸ್ಟರ್ ಸಿನಿಮಾ ‘24’ ನಿರ್ದೇಶಿಸಿದ್ದ ವಿಕ್ರಂ ಅವರೇ ಸೂರ್ಯ ಅವರ 50ನೇ ಸಿನಿಮಾ ನಿರ್ದೇಶಿಸಲಿದ್ದು, ಈ ಸಿನಿಮಾನಲ್ಲಿ ವಿಲನ್ ಆಗಿ ಬಾಲಿವುಡ್ ನಟ ಅಕ್ಷಯ್ ಖನ್ನಾ ನಟಿಸಲಿದ್ದಾರೆ. ಸಿನಿಮಾಕ್ಕೆ ಎಆರ್ ರೆಹಮಾನ್ ಸಂಗೀತ ನೀಡಲಿದ್ದು, ಕೆವಿಎನ್ ಪ್ರೊಡಕ್ಷನ್ಸ್​​ನವರು ಭಾರಿ ಬಜೆಟ್​​ ಹಾಕಿ ಸಿನಿಮಾ ಮಾಡಲು ಸಜ್ಜಾಗಿದ್ದಾರೆ. ಶೀಘ್ರವೇ ಈ ಸಿನಿಮಾದ ಅಧಿಕೃತ ಘೋಷಣೆ ಹೊರಬೀಳಲಿದ್ದು, ಸಿನಿಮಾದ ಚಿತ್ರೀಕರಣವೂ ಶುರುವಾಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ