AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂ ಎನ್​ಟಿಆರ್ ಮುಂದಿನ ಸಿನಿಮಾಕ್ಕೆ ಕನ್ನಡತಿ ನಾಯಕಿ

Jr NTR Movie: ಜೂ.ಎನ್​ಟಿಆರ್ ನಟನೆಯ‘ದೇವರ’ ಸಿನಿಮಾ ಹಿಟ್ ಎನಿಸಿಕೊಂಡಿದೆ. ಇದೀಗ ಜೂ ಎನ್​ಟಿಆರ್ ಹೊಸ ಸಿನಿಮಾದ ಮೇಲೆ ಗಮನ ನೆಟ್ಟಿದ್ದು, ಜೂ ಎನ್​ಟಿಆರ್ ನಟನೆಯ ಹೊಸ ಸಿನಿಮಾದಲ್ಲಿ ಕನ್ನಡತಿ ನಾಯಕಿ. ಯಾರಾಕೆ?

ಜೂ ಎನ್​ಟಿಆರ್ ಮುಂದಿನ ಸಿನಿಮಾಕ್ಕೆ ಕನ್ನಡತಿ ನಾಯಕಿ
ಮಂಜುನಾಥ ಸಿ.
|

Updated on: Oct 01, 2024 | 4:44 PM

Share

‘ಆರ್​ಆರ್​ಆರ್’ ಸಿನಿಮಾದ ಬಳಿಕ ಜೂ ಎನ್​ಟಿಆರ್ ಪ್ಯಾನ್ ವರ್ಲ್ಡ್ ನಟ ಆಗಿದ್ದಾರೆ. ಇತ್ತೀಚೆಗಷ್ಟೆ ಅವರ ‘ದೇವರ’ ಸಿನಿಮಾ ಬಿಡುಗಡೆ ಆಗಿದ್ದು, ಕತೆ ಸಾಧಾರಣವಾಗಿದ್ದರೂ ಸಹ ಜೂ ಎನ್​ಟಿಆರ್ ಹೆಸರಿನಿಂದಾಗಿ ಸಿನಿಮಾ 300 ಕೋಟಿಗೂ ಹೆಚ್ಚಿನ ಮೊತ್ತ ಕಲೆಕ್ಷನ್ ಮಾಡಿದೆ ಅದೂ ಕೇವಲ ಮೂರೇ ದಿನಗಳಲ್ಲಿ. ‘ದೇವರ’ ಸಿನಿಮಾ ಬಿಡುಗಡೆ ಆಗುತ್ತಿದ್ದಂತೆ ಜೂ ಎನ್​ಟಿಆರ್ ನಟನೆಯ ಮುಂದಿನ ಸಿನಿಮಾದ ಬಗ್ಗೆ ಚರ್ಚೆ ಶುರುವಾಗಿದೆ. ಅಂದಹಾಗೆ ಜೂ ಎನ್​ಟಿಆರ್ ನಟಿಸಲಿರುವ ಮುಂದಿನ ಸಿನಿಮಾಕ್ಕೆ ಕನ್ನಡತಿಯೊಬ್ಬಾಕೆ ಅವರ ಜೊತೆ ನಾಯಕಿಯಾಗಿ ನಟಿಸಲಿದ್ದಾರೆ.

ಜೂ ಎನ್​ಟಿಆರ್ ‘ದೇವರ’ ಸಿನಿಮಾ ಬಿಡುಗಡೆ ಆಗಿದ್ದು, ಇನ್ನು ಕೆಲವೇ ತಿಂಗಳಲ್ಲಿ ಜೂ ಎನ್​ಟಿಆರ್ ನಟನೆಯ ಮೊದಲ ಹಿಂದಿ ಸಿನಿಮಾ ‘ಫೈಟರ್’ ತೆರೆಗೆ ಬರಲಿದೆ. ‘ಫೈಟರ್’ ಸಿನಿಮಾದ ಚಿತ್ರೀಕರಣವನ್ನು ಬಹುತೇಕ ಮುಗಿಸಿದ್ದಾರೆ ಜೂ ಎನ್​ಟಿಆರ್. ಇದೀಗ ತಮ್ಮ ಹೊಸ ಸಿನಿಮಾದ ಚಿತ್ರೀಕರಣಕ್ಕೆ ರೆಡಿಯಾಗುತ್ತಿದ್ದಾರೆ. ಪ್ರಶಾಂತ್ ನೀಲ್ ನಿರ್ದೇಶಿಸಲಿರುವ ಹೊಸ ಸಿನಿಮಾದಲ್ಲಿ ಜೂ ಎನ್​ಟಿಆರ್ ನಟಿಸಲಿದ್ದಾರೆ. ಈ ಸಿನಿಮಾ ಮುಹೂರ್ತ ಕೆಲ ವಾರಗಳ ಹಿಂದಷ್ಟೆ ಮುಗಿದಿದ್ದು, ಚಿತ್ರೀಕರಣ ಶೀಘ್ರವೇ ಪ್ರಾರಂಭ ಆಗಲಿದೆ. ಈ ಸಿನಿಮಾದಲ್ಲಿ ಜೂ ಎನ್​ಟಿಆರ್ ಜೊತೆ ಕನ್ನಡತಿ ನಾಯಕಿಯಾಗಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ:‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ

‘ಸಪ್ತ ಸಾಗರದಾಚೆ ಎಲ್ಲೊ’ ಸಿನಿಮಾದ ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತನ್ನ ಪ್ರತಿಭೆಯನ್ನು ಸಾರಿರುವ ರುಕ್ಮಿಣಿ ವಸಂತ್​, ಜೂ ಎನ್​ಟಿಆರ್ ನಟನೆಯ ಮುಂದಿನ ಸಿನಿಮಾಕ್ಕೆ ನಾಯಕಿ. ಜೂ ಎನ್​ಟಿಆರ್ ಸಿನಿಮಾದಲ್ಲಿ ನಟಿಸಲು ಟಾಪ್ ಬಾಲಿವುಡ್ ನಟಿಯರೇ ಸಾಲುಗಟ್ಟಿ ನಿಂತಿರುವಾಗ, ನಿರ್ದೇಶಕ ಪ್ರಶಾಂತ್ ನೀಲ್, ಕನ್ನಡದ ನಟಿಗೆ ದೊಡ್ಡ ಅವಕಾಶವನ್ನು ನೀಡಿದ್ದಾರೆ. ರುಕ್ಮಿಣಿ ವಸಂತ್ ಸಹ ಪ್ರೀತಿಯಿಂದ ಈ ಅವಕಾಶವನ್ನು ಒಪ್ಪಿಕೊಂಡಿದ್ದಾರೆ. ಸಿನಿಮಾದಲ್ಲಿ ಅವರದ್ದು ಡೀ-ಗ್ಲಾಮರಸ್ ಪಾತ್ರ ಎನ್ನಲಾಗುತ್ತಿದೆ. ಮಾತ್ರವಲ್ಲದೆ ಜೂ ಎನ್​ಟಿಆರ್, ಸಿನಿಮಾದಲ್ಲಿ ಎರಡು ಶೇಡ್​ನಲ್ಲಿ ನಟಿಸಲಿದ್ದು, ರುಕ್ಮಿಣಿ ವಸಂತ್​ಗೆ ಸಹ ಎರಡು ಷೇಡ್​ನ ಪಾತ್ರವಿದೆ ಎನ್ನಲಾಗುತ್ತಿದೆ.

ರುಕ್ಮಿಣಿ ವಸಂತ್, ಪ್ರಸ್ತುತ ಕೆಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಅವರ ನಟನೆಯ ‘ಬಘೀರ’ ಸಿನಿಮಾ ಕೊನೆಗೂ ಬಿಡುಗಡೆ ಕಾಣುತ್ತಿದೆ. ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾಕ್ಕೂ ಮುಂಚೆಯೇ ಆ ಸಿನಿಮಾದಲ್ಲಿ ಅವರು ನಟಿಸಿದ್ದರು. ಶಿವರಾಜ್ ಕುಮಾರ್ ನಟನೆಯ ‘ಭೈರತಿ ರಣಗಲ್’ ಸಿನಿಮಾದಲ್ಲಿಯೂ ರುಕ್ಮಿಣಿ ನಟಿಸಿದ್ದು ಆ ಸಿನಿಮಾ ಸಹ ಶೀಘ್ರವೇ ತೆರೆಗೆ ಬರಲಿದೆ. ತಮಿಳಿನ ಸ್ಟಾರ್ ನಟ ವಿಜಯ್ ಸೇತುಪತಿ ಜೊತೆಗೆ ನಟಿಸಿರುವ ‘ಏಸ್’ ಸಿನಿಮಾದ ಚಿತ್ರೀಕರಣ ಮುಗಿಸಿದ್ದು ಸಿನಿಮಾ ಶೀಘ್ರವೇ ತೆರೆಗೆ ಬರಲಿದೆ. ಇತ್ತೀಚೆಗಷ್ಟೆ ತಮಿಳಿನ ಶಿವಕಾರ್ತಿಕೇಯನ್ ನಟನೆಯ ಹೊಸ ಸಿನಿಮಾವನ್ನು ರುಕ್ಮಿಣಿ ಒಪ್ಪಿಕೊಂಡಿದ್ದಾರೆ. ಈ ಸಿನಿಮಾವನ್ನು ಮುರುಗದಾಸ್ ನಿರ್ದೇಶನ ಮಾಡಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ