AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂ ಎನ್​ಟಿಆರ್ ಮುಂದಿನ ಸಿನಿಮಾಕ್ಕೆ ಕನ್ನಡತಿ ನಾಯಕಿ

Jr NTR Movie: ಜೂ.ಎನ್​ಟಿಆರ್ ನಟನೆಯ‘ದೇವರ’ ಸಿನಿಮಾ ಹಿಟ್ ಎನಿಸಿಕೊಂಡಿದೆ. ಇದೀಗ ಜೂ ಎನ್​ಟಿಆರ್ ಹೊಸ ಸಿನಿಮಾದ ಮೇಲೆ ಗಮನ ನೆಟ್ಟಿದ್ದು, ಜೂ ಎನ್​ಟಿಆರ್ ನಟನೆಯ ಹೊಸ ಸಿನಿಮಾದಲ್ಲಿ ಕನ್ನಡತಿ ನಾಯಕಿ. ಯಾರಾಕೆ?

ಜೂ ಎನ್​ಟಿಆರ್ ಮುಂದಿನ ಸಿನಿಮಾಕ್ಕೆ ಕನ್ನಡತಿ ನಾಯಕಿ
ಮಂಜುನಾಥ ಸಿ.
|

Updated on: Oct 01, 2024 | 4:44 PM

Share

‘ಆರ್​ಆರ್​ಆರ್’ ಸಿನಿಮಾದ ಬಳಿಕ ಜೂ ಎನ್​ಟಿಆರ್ ಪ್ಯಾನ್ ವರ್ಲ್ಡ್ ನಟ ಆಗಿದ್ದಾರೆ. ಇತ್ತೀಚೆಗಷ್ಟೆ ಅವರ ‘ದೇವರ’ ಸಿನಿಮಾ ಬಿಡುಗಡೆ ಆಗಿದ್ದು, ಕತೆ ಸಾಧಾರಣವಾಗಿದ್ದರೂ ಸಹ ಜೂ ಎನ್​ಟಿಆರ್ ಹೆಸರಿನಿಂದಾಗಿ ಸಿನಿಮಾ 300 ಕೋಟಿಗೂ ಹೆಚ್ಚಿನ ಮೊತ್ತ ಕಲೆಕ್ಷನ್ ಮಾಡಿದೆ ಅದೂ ಕೇವಲ ಮೂರೇ ದಿನಗಳಲ್ಲಿ. ‘ದೇವರ’ ಸಿನಿಮಾ ಬಿಡುಗಡೆ ಆಗುತ್ತಿದ್ದಂತೆ ಜೂ ಎನ್​ಟಿಆರ್ ನಟನೆಯ ಮುಂದಿನ ಸಿನಿಮಾದ ಬಗ್ಗೆ ಚರ್ಚೆ ಶುರುವಾಗಿದೆ. ಅಂದಹಾಗೆ ಜೂ ಎನ್​ಟಿಆರ್ ನಟಿಸಲಿರುವ ಮುಂದಿನ ಸಿನಿಮಾಕ್ಕೆ ಕನ್ನಡತಿಯೊಬ್ಬಾಕೆ ಅವರ ಜೊತೆ ನಾಯಕಿಯಾಗಿ ನಟಿಸಲಿದ್ದಾರೆ.

ಜೂ ಎನ್​ಟಿಆರ್ ‘ದೇವರ’ ಸಿನಿಮಾ ಬಿಡುಗಡೆ ಆಗಿದ್ದು, ಇನ್ನು ಕೆಲವೇ ತಿಂಗಳಲ್ಲಿ ಜೂ ಎನ್​ಟಿಆರ್ ನಟನೆಯ ಮೊದಲ ಹಿಂದಿ ಸಿನಿಮಾ ‘ಫೈಟರ್’ ತೆರೆಗೆ ಬರಲಿದೆ. ‘ಫೈಟರ್’ ಸಿನಿಮಾದ ಚಿತ್ರೀಕರಣವನ್ನು ಬಹುತೇಕ ಮುಗಿಸಿದ್ದಾರೆ ಜೂ ಎನ್​ಟಿಆರ್. ಇದೀಗ ತಮ್ಮ ಹೊಸ ಸಿನಿಮಾದ ಚಿತ್ರೀಕರಣಕ್ಕೆ ರೆಡಿಯಾಗುತ್ತಿದ್ದಾರೆ. ಪ್ರಶಾಂತ್ ನೀಲ್ ನಿರ್ದೇಶಿಸಲಿರುವ ಹೊಸ ಸಿನಿಮಾದಲ್ಲಿ ಜೂ ಎನ್​ಟಿಆರ್ ನಟಿಸಲಿದ್ದಾರೆ. ಈ ಸಿನಿಮಾ ಮುಹೂರ್ತ ಕೆಲ ವಾರಗಳ ಹಿಂದಷ್ಟೆ ಮುಗಿದಿದ್ದು, ಚಿತ್ರೀಕರಣ ಶೀಘ್ರವೇ ಪ್ರಾರಂಭ ಆಗಲಿದೆ. ಈ ಸಿನಿಮಾದಲ್ಲಿ ಜೂ ಎನ್​ಟಿಆರ್ ಜೊತೆ ಕನ್ನಡತಿ ನಾಯಕಿಯಾಗಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ:‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ

‘ಸಪ್ತ ಸಾಗರದಾಚೆ ಎಲ್ಲೊ’ ಸಿನಿಮಾದ ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತನ್ನ ಪ್ರತಿಭೆಯನ್ನು ಸಾರಿರುವ ರುಕ್ಮಿಣಿ ವಸಂತ್​, ಜೂ ಎನ್​ಟಿಆರ್ ನಟನೆಯ ಮುಂದಿನ ಸಿನಿಮಾಕ್ಕೆ ನಾಯಕಿ. ಜೂ ಎನ್​ಟಿಆರ್ ಸಿನಿಮಾದಲ್ಲಿ ನಟಿಸಲು ಟಾಪ್ ಬಾಲಿವುಡ್ ನಟಿಯರೇ ಸಾಲುಗಟ್ಟಿ ನಿಂತಿರುವಾಗ, ನಿರ್ದೇಶಕ ಪ್ರಶಾಂತ್ ನೀಲ್, ಕನ್ನಡದ ನಟಿಗೆ ದೊಡ್ಡ ಅವಕಾಶವನ್ನು ನೀಡಿದ್ದಾರೆ. ರುಕ್ಮಿಣಿ ವಸಂತ್ ಸಹ ಪ್ರೀತಿಯಿಂದ ಈ ಅವಕಾಶವನ್ನು ಒಪ್ಪಿಕೊಂಡಿದ್ದಾರೆ. ಸಿನಿಮಾದಲ್ಲಿ ಅವರದ್ದು ಡೀ-ಗ್ಲಾಮರಸ್ ಪಾತ್ರ ಎನ್ನಲಾಗುತ್ತಿದೆ. ಮಾತ್ರವಲ್ಲದೆ ಜೂ ಎನ್​ಟಿಆರ್, ಸಿನಿಮಾದಲ್ಲಿ ಎರಡು ಶೇಡ್​ನಲ್ಲಿ ನಟಿಸಲಿದ್ದು, ರುಕ್ಮಿಣಿ ವಸಂತ್​ಗೆ ಸಹ ಎರಡು ಷೇಡ್​ನ ಪಾತ್ರವಿದೆ ಎನ್ನಲಾಗುತ್ತಿದೆ.

ರುಕ್ಮಿಣಿ ವಸಂತ್, ಪ್ರಸ್ತುತ ಕೆಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಅವರ ನಟನೆಯ ‘ಬಘೀರ’ ಸಿನಿಮಾ ಕೊನೆಗೂ ಬಿಡುಗಡೆ ಕಾಣುತ್ತಿದೆ. ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾಕ್ಕೂ ಮುಂಚೆಯೇ ಆ ಸಿನಿಮಾದಲ್ಲಿ ಅವರು ನಟಿಸಿದ್ದರು. ಶಿವರಾಜ್ ಕುಮಾರ್ ನಟನೆಯ ‘ಭೈರತಿ ರಣಗಲ್’ ಸಿನಿಮಾದಲ್ಲಿಯೂ ರುಕ್ಮಿಣಿ ನಟಿಸಿದ್ದು ಆ ಸಿನಿಮಾ ಸಹ ಶೀಘ್ರವೇ ತೆರೆಗೆ ಬರಲಿದೆ. ತಮಿಳಿನ ಸ್ಟಾರ್ ನಟ ವಿಜಯ್ ಸೇತುಪತಿ ಜೊತೆಗೆ ನಟಿಸಿರುವ ‘ಏಸ್’ ಸಿನಿಮಾದ ಚಿತ್ರೀಕರಣ ಮುಗಿಸಿದ್ದು ಸಿನಿಮಾ ಶೀಘ್ರವೇ ತೆರೆಗೆ ಬರಲಿದೆ. ಇತ್ತೀಚೆಗಷ್ಟೆ ತಮಿಳಿನ ಶಿವಕಾರ್ತಿಕೇಯನ್ ನಟನೆಯ ಹೊಸ ಸಿನಿಮಾವನ್ನು ರುಕ್ಮಿಣಿ ಒಪ್ಪಿಕೊಂಡಿದ್ದಾರೆ. ಈ ಸಿನಿಮಾವನ್ನು ಮುರುಗದಾಸ್ ನಿರ್ದೇಶನ ಮಾಡಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್