AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಟ್ಟೇರುವ ಮೊದಲೇ ಪ್ರಶಾಂತ್​ ನೀಲ್- ಜ್ಯೂ. ಎನ್​​ಟಿಆರ್​ ಸಿನಿಮಾದ ಕಥೆ ಲೀಕ್?

ಟಾಲಿವುಡ್​ ಸ್ಟಾರ್​ ನಟ ಜ್ಯೂ. ಎನ್​ಟಿಆರ್​ ಮೇ 26ರಂದು 38ನೇ ಜನ್ಮದಿನ ಆಚರಿಸಿಕೊಂಡಿದ್ದರು. ಈ ವಿಶೇಷ ದಿನದಂದು ಅವರ ಮುಂದಿನ ಚಿತ್ರದ ಬಗ್ಗೆ ಘೋಷಣೆ ಆಗಿತ್ತು.

ಸೆಟ್ಟೇರುವ ಮೊದಲೇ ಪ್ರಶಾಂತ್​ ನೀಲ್- ಜ್ಯೂ. ಎನ್​​ಟಿಆರ್​ ಸಿನಿಮಾದ ಕಥೆ ಲೀಕ್?
ಜ್ಯೂ. ಎನ್​ಟಿಆರ್​-ಪ್ರಶಾಂತ್​ ನೀಲ್
Follow us
ರಾಜೇಶ್ ದುಗ್ಗುಮನೆ
|

Updated on: Jun 01, 2021 | 8:25 PM

‘ಕೆಜಿಎಫ್​’ ಸರಣಿ ಮೂಲಕ ಖ್ಯಾತಿ ಹೆಚ್ಚಿಸಿಕೊಂಡಿರುವ ಪ್ರಶಾಂತ್​ ನೀಲ್​ಗೆ ಬೇಡಿಕೆ ಹೆಚ್ಚಿದೆ.  ಪರಭಾಷೆಯ ಸ್ಟಾರ್​ ಹೀರೋಗಳು ಹಾಗೂ ನಿರ್ಮಾಪಕರು ಪ್ರಶಾಂತ್​ ಜತೆ ಕೆಲಸ ಮಾಡೋಕೆ ಕಾದು ಕೂತಿದ್ದಾರೆ. ಈಗಾಗಲೇ ಅವರು ಟಾಲಿವುಡ್​ ಸ್ಟಾರ್​ ನಟ ಪ್ರಭಾಸ್​ಗೆ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ. ಅವರು ನಿರ್ದೇಶನ ಮಾಡುತ್ತಿರುವ ‘ಸಲಾರ್’​ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಹೀಗಿರುವಾಗಲೇ ಅವರು ಜ್ಯೂ.ಎನ್​ಟಿಆರ್​ ಜತೆ ಕೈ ಜೋಡಿಸಿದ್ದಾರೆ. ಅಚ್ಚರಿ ಎಂದರೆ ಸಿನಿಮಾದ ಒಂದೆಳೆ ಈಗ ಲೀಕ್​ ಆಗಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಗಳು ಹರಿದಾಡುತ್ತಿವೆ.

ಟಾಲಿವುಡ್​ ಸ್ಟಾರ್​ ನಟ ಜ್ಯೂ. ಎನ್​ಟಿಆರ್​ ಮೇ 26ರಂದು 38ನೇ ಜನ್ಮದಿನ ಆಚರಿಸಿಕೊಂಡಿದ್ದರು. ಈ ವಿಶೇಷ ದಿನದಂದು ಅವರ ಮುಂದಿನ ಚಿತ್ರದ ಬಗ್ಗೆ ಘೋಷಣೆ ಆಗಿತ್ತು. ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆ ಮೈತ್ರಿ ಮೂವೀ ಮೇಕರ್ಸ್ ಈ ಬಗ್ಗೆ ಟ್ವೀಟ್​ ಮಾಡಿ ಪ್ರಶಾಂತ್​ ನೀಲ್​-ಜ್ಯೂ. ಎನ್​ಟಿಆರ್ ಒಟ್ಟಿಗೆ ಕೆಲಸ ಮಾಡುವ ವಿಚಾರವನ್ನು ಅಧಿಕೃತ ಮಾಡಿತ್ತು.

ಈಗ ಕೇಳಿ ಬರುತ್ತಿರುವ ಹೊಸ ಮಾಹಿತಿ ಪ್ರಕಾರ, ಜ್ಯೂ. ಎನ್​ಟಿಆರ್​ ಸೇನಾಧಿಕಾರಿಯಾಗಿ ಕಾಣಿಸಿಕೊಳ್ಳಲಿದ್ದಾರಂತೆ. ಸಿನಿಮಾದ ಕಥೆ ಭಾರತ-ಪಾಕ್​ ಗಡಿ​ ಹಿನ್ನೆಲೆಯಲ್ಲಿ ಸಾಗಲಿದೆಯಂತೆ. ಈ ವಿಚಾರ ಕೇಳಿ ಅಭಿಮಾನಿಗಳು ಸಖತ್​ ಥ್ರಿಲ್​ ಆಗಿದ್ದಾರೆ. ಅಷ್ಟೇ ಅಲ್ಲ, ಸಿನಿಮಾ ಶೂಟಿಂಗ್​ಗೆ ಚಿತ್ರತಂಡ ಗಡಿ ಭಾಗಕ್ಕೆ ತೆರಳಲಿದೆಯೇ ಎನ್ನುವ ಕುತೂಹಲ ಮೂಡಿದೆ.

ಈ ರೀತಿಯ ಕಥೆಯಲ್ಲಿ ಜ್ಯೂ.ಎನ್​ಟಿಆರ್​ ಈ ಮೊದಲು ಕಾಣಿಸಿಕೊಂಡಿರಲಿಲ್ಲ. ಹೀಗಾಗಿ, ಅವರ ಹೊಸ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಅಂದಹಾಗೆ, ಸಿನಿಮಾ ಕೆಲಸಗಳು ಯಾವಾಗ ಆರಂಭವಾಗಲಿದೆ ಎನ್ನುವ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಸಿಕ್ಕಿಲ್ಲ.

ಜ್ಯೂ. ಎನ್​ಟಿಆರ್​ ಸದ್ಯ, ಆರ್​ಆರ್​ಆರ್​ ಸಿನಿಮಾದಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರವನ್ನು ಎಸ್​.ಎಸ್​. ರಾಜಮೌಳಿ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಇನ್ನು, ಪ್ರಶಾಂತ್​ ನೀಲ್​ ನಿರ್ದೇಶನದ ಕೆಜಿಎಫ್​-2 ರಿಲೀಸ್​ಗೆ ರೆಡಿ ಇದೆ. ಸಲಾರ್ ಸಿನಿಮಾದ ಶೂಟಿಂಗ್​ ನಡೆಯುತ್ತಿದೆ.

ಇದನ್ನೂ ಓದಿ: ಎನ್​ಟಿಆರ್​ಗೆ ಭಾರತ ರತ್ನ ಕೊಡಿ; ಲೆಜೆಂಡರಿ ನಟನ ಜನ್ಮದಿನದಂದು ಬೇಡಿಕೆಯಿಟ್ಟ ಮೆಗಾಸ್ಟಾರ್​ ಚಿರಂಜೀವಿ

ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ