AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಟ್ಟೇರುವ ಮೊದಲೇ ಪ್ರಶಾಂತ್​ ನೀಲ್- ಜ್ಯೂ. ಎನ್​​ಟಿಆರ್​ ಸಿನಿಮಾದ ಕಥೆ ಲೀಕ್?

ಟಾಲಿವುಡ್​ ಸ್ಟಾರ್​ ನಟ ಜ್ಯೂ. ಎನ್​ಟಿಆರ್​ ಮೇ 26ರಂದು 38ನೇ ಜನ್ಮದಿನ ಆಚರಿಸಿಕೊಂಡಿದ್ದರು. ಈ ವಿಶೇಷ ದಿನದಂದು ಅವರ ಮುಂದಿನ ಚಿತ್ರದ ಬಗ್ಗೆ ಘೋಷಣೆ ಆಗಿತ್ತು.

ಸೆಟ್ಟೇರುವ ಮೊದಲೇ ಪ್ರಶಾಂತ್​ ನೀಲ್- ಜ್ಯೂ. ಎನ್​​ಟಿಆರ್​ ಸಿನಿಮಾದ ಕಥೆ ಲೀಕ್?
ಜ್ಯೂ. ಎನ್​ಟಿಆರ್​-ಪ್ರಶಾಂತ್​ ನೀಲ್
ರಾಜೇಶ್ ದುಗ್ಗುಮನೆ
|

Updated on: Jun 01, 2021 | 8:25 PM

Share

‘ಕೆಜಿಎಫ್​’ ಸರಣಿ ಮೂಲಕ ಖ್ಯಾತಿ ಹೆಚ್ಚಿಸಿಕೊಂಡಿರುವ ಪ್ರಶಾಂತ್​ ನೀಲ್​ಗೆ ಬೇಡಿಕೆ ಹೆಚ್ಚಿದೆ.  ಪರಭಾಷೆಯ ಸ್ಟಾರ್​ ಹೀರೋಗಳು ಹಾಗೂ ನಿರ್ಮಾಪಕರು ಪ್ರಶಾಂತ್​ ಜತೆ ಕೆಲಸ ಮಾಡೋಕೆ ಕಾದು ಕೂತಿದ್ದಾರೆ. ಈಗಾಗಲೇ ಅವರು ಟಾಲಿವುಡ್​ ಸ್ಟಾರ್​ ನಟ ಪ್ರಭಾಸ್​ಗೆ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ. ಅವರು ನಿರ್ದೇಶನ ಮಾಡುತ್ತಿರುವ ‘ಸಲಾರ್’​ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಹೀಗಿರುವಾಗಲೇ ಅವರು ಜ್ಯೂ.ಎನ್​ಟಿಆರ್​ ಜತೆ ಕೈ ಜೋಡಿಸಿದ್ದಾರೆ. ಅಚ್ಚರಿ ಎಂದರೆ ಸಿನಿಮಾದ ಒಂದೆಳೆ ಈಗ ಲೀಕ್​ ಆಗಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಗಳು ಹರಿದಾಡುತ್ತಿವೆ.

ಟಾಲಿವುಡ್​ ಸ್ಟಾರ್​ ನಟ ಜ್ಯೂ. ಎನ್​ಟಿಆರ್​ ಮೇ 26ರಂದು 38ನೇ ಜನ್ಮದಿನ ಆಚರಿಸಿಕೊಂಡಿದ್ದರು. ಈ ವಿಶೇಷ ದಿನದಂದು ಅವರ ಮುಂದಿನ ಚಿತ್ರದ ಬಗ್ಗೆ ಘೋಷಣೆ ಆಗಿತ್ತು. ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆ ಮೈತ್ರಿ ಮೂವೀ ಮೇಕರ್ಸ್ ಈ ಬಗ್ಗೆ ಟ್ವೀಟ್​ ಮಾಡಿ ಪ್ರಶಾಂತ್​ ನೀಲ್​-ಜ್ಯೂ. ಎನ್​ಟಿಆರ್ ಒಟ್ಟಿಗೆ ಕೆಲಸ ಮಾಡುವ ವಿಚಾರವನ್ನು ಅಧಿಕೃತ ಮಾಡಿತ್ತು.

ಈಗ ಕೇಳಿ ಬರುತ್ತಿರುವ ಹೊಸ ಮಾಹಿತಿ ಪ್ರಕಾರ, ಜ್ಯೂ. ಎನ್​ಟಿಆರ್​ ಸೇನಾಧಿಕಾರಿಯಾಗಿ ಕಾಣಿಸಿಕೊಳ್ಳಲಿದ್ದಾರಂತೆ. ಸಿನಿಮಾದ ಕಥೆ ಭಾರತ-ಪಾಕ್​ ಗಡಿ​ ಹಿನ್ನೆಲೆಯಲ್ಲಿ ಸಾಗಲಿದೆಯಂತೆ. ಈ ವಿಚಾರ ಕೇಳಿ ಅಭಿಮಾನಿಗಳು ಸಖತ್​ ಥ್ರಿಲ್​ ಆಗಿದ್ದಾರೆ. ಅಷ್ಟೇ ಅಲ್ಲ, ಸಿನಿಮಾ ಶೂಟಿಂಗ್​ಗೆ ಚಿತ್ರತಂಡ ಗಡಿ ಭಾಗಕ್ಕೆ ತೆರಳಲಿದೆಯೇ ಎನ್ನುವ ಕುತೂಹಲ ಮೂಡಿದೆ.

ಈ ರೀತಿಯ ಕಥೆಯಲ್ಲಿ ಜ್ಯೂ.ಎನ್​ಟಿಆರ್​ ಈ ಮೊದಲು ಕಾಣಿಸಿಕೊಂಡಿರಲಿಲ್ಲ. ಹೀಗಾಗಿ, ಅವರ ಹೊಸ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಅಂದಹಾಗೆ, ಸಿನಿಮಾ ಕೆಲಸಗಳು ಯಾವಾಗ ಆರಂಭವಾಗಲಿದೆ ಎನ್ನುವ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಸಿಕ್ಕಿಲ್ಲ.

ಜ್ಯೂ. ಎನ್​ಟಿಆರ್​ ಸದ್ಯ, ಆರ್​ಆರ್​ಆರ್​ ಸಿನಿಮಾದಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರವನ್ನು ಎಸ್​.ಎಸ್​. ರಾಜಮೌಳಿ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಇನ್ನು, ಪ್ರಶಾಂತ್​ ನೀಲ್​ ನಿರ್ದೇಶನದ ಕೆಜಿಎಫ್​-2 ರಿಲೀಸ್​ಗೆ ರೆಡಿ ಇದೆ. ಸಲಾರ್ ಸಿನಿಮಾದ ಶೂಟಿಂಗ್​ ನಡೆಯುತ್ತಿದೆ.

ಇದನ್ನೂ ಓದಿ: ಎನ್​ಟಿಆರ್​ಗೆ ಭಾರತ ರತ್ನ ಕೊಡಿ; ಲೆಜೆಂಡರಿ ನಟನ ಜನ್ಮದಿನದಂದು ಬೇಡಿಕೆಯಿಟ್ಟ ಮೆಗಾಸ್ಟಾರ್​ ಚಿರಂಜೀವಿ

ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಇಲ್ಲಿದೆ ಲೈವ್​
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಇಲ್ಲಿದೆ ಲೈವ್​
ರೈಲ್ವೆ ಹಳಿ ಪಕ್ಕ ಮರಿಗೆ ಜನ್ಮ ನೀಡಿದ ಆನೆ, ಎರಡು ಗಂಟೆಗಳ ಕಾಲ ನಿಂತ ರೈಲು
ರೈಲ್ವೆ ಹಳಿ ಪಕ್ಕ ಮರಿಗೆ ಜನ್ಮ ನೀಡಿದ ಆನೆ, ಎರಡು ಗಂಟೆಗಳ ಕಾಲ ನಿಂತ ರೈಲು