AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಟ್ಟೇರುವ ಮೊದಲೇ ಪ್ರಶಾಂತ್​ ನೀಲ್- ಜ್ಯೂ. ಎನ್​​ಟಿಆರ್​ ಸಿನಿಮಾದ ಕಥೆ ಲೀಕ್?

ಟಾಲಿವುಡ್​ ಸ್ಟಾರ್​ ನಟ ಜ್ಯೂ. ಎನ್​ಟಿಆರ್​ ಮೇ 26ರಂದು 38ನೇ ಜನ್ಮದಿನ ಆಚರಿಸಿಕೊಂಡಿದ್ದರು. ಈ ವಿಶೇಷ ದಿನದಂದು ಅವರ ಮುಂದಿನ ಚಿತ್ರದ ಬಗ್ಗೆ ಘೋಷಣೆ ಆಗಿತ್ತು.

ಸೆಟ್ಟೇರುವ ಮೊದಲೇ ಪ್ರಶಾಂತ್​ ನೀಲ್- ಜ್ಯೂ. ಎನ್​​ಟಿಆರ್​ ಸಿನಿಮಾದ ಕಥೆ ಲೀಕ್?
ಜ್ಯೂ. ಎನ್​ಟಿಆರ್​-ಪ್ರಶಾಂತ್​ ನೀಲ್
ರಾಜೇಶ್ ದುಗ್ಗುಮನೆ
|

Updated on: Jun 01, 2021 | 8:25 PM

Share

‘ಕೆಜಿಎಫ್​’ ಸರಣಿ ಮೂಲಕ ಖ್ಯಾತಿ ಹೆಚ್ಚಿಸಿಕೊಂಡಿರುವ ಪ್ರಶಾಂತ್​ ನೀಲ್​ಗೆ ಬೇಡಿಕೆ ಹೆಚ್ಚಿದೆ.  ಪರಭಾಷೆಯ ಸ್ಟಾರ್​ ಹೀರೋಗಳು ಹಾಗೂ ನಿರ್ಮಾಪಕರು ಪ್ರಶಾಂತ್​ ಜತೆ ಕೆಲಸ ಮಾಡೋಕೆ ಕಾದು ಕೂತಿದ್ದಾರೆ. ಈಗಾಗಲೇ ಅವರು ಟಾಲಿವುಡ್​ ಸ್ಟಾರ್​ ನಟ ಪ್ರಭಾಸ್​ಗೆ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ. ಅವರು ನಿರ್ದೇಶನ ಮಾಡುತ್ತಿರುವ ‘ಸಲಾರ್’​ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಹೀಗಿರುವಾಗಲೇ ಅವರು ಜ್ಯೂ.ಎನ್​ಟಿಆರ್​ ಜತೆ ಕೈ ಜೋಡಿಸಿದ್ದಾರೆ. ಅಚ್ಚರಿ ಎಂದರೆ ಸಿನಿಮಾದ ಒಂದೆಳೆ ಈಗ ಲೀಕ್​ ಆಗಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಗಳು ಹರಿದಾಡುತ್ತಿವೆ.

ಟಾಲಿವುಡ್​ ಸ್ಟಾರ್​ ನಟ ಜ್ಯೂ. ಎನ್​ಟಿಆರ್​ ಮೇ 26ರಂದು 38ನೇ ಜನ್ಮದಿನ ಆಚರಿಸಿಕೊಂಡಿದ್ದರು. ಈ ವಿಶೇಷ ದಿನದಂದು ಅವರ ಮುಂದಿನ ಚಿತ್ರದ ಬಗ್ಗೆ ಘೋಷಣೆ ಆಗಿತ್ತು. ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆ ಮೈತ್ರಿ ಮೂವೀ ಮೇಕರ್ಸ್ ಈ ಬಗ್ಗೆ ಟ್ವೀಟ್​ ಮಾಡಿ ಪ್ರಶಾಂತ್​ ನೀಲ್​-ಜ್ಯೂ. ಎನ್​ಟಿಆರ್ ಒಟ್ಟಿಗೆ ಕೆಲಸ ಮಾಡುವ ವಿಚಾರವನ್ನು ಅಧಿಕೃತ ಮಾಡಿತ್ತು.

ಈಗ ಕೇಳಿ ಬರುತ್ತಿರುವ ಹೊಸ ಮಾಹಿತಿ ಪ್ರಕಾರ, ಜ್ಯೂ. ಎನ್​ಟಿಆರ್​ ಸೇನಾಧಿಕಾರಿಯಾಗಿ ಕಾಣಿಸಿಕೊಳ್ಳಲಿದ್ದಾರಂತೆ. ಸಿನಿಮಾದ ಕಥೆ ಭಾರತ-ಪಾಕ್​ ಗಡಿ​ ಹಿನ್ನೆಲೆಯಲ್ಲಿ ಸಾಗಲಿದೆಯಂತೆ. ಈ ವಿಚಾರ ಕೇಳಿ ಅಭಿಮಾನಿಗಳು ಸಖತ್​ ಥ್ರಿಲ್​ ಆಗಿದ್ದಾರೆ. ಅಷ್ಟೇ ಅಲ್ಲ, ಸಿನಿಮಾ ಶೂಟಿಂಗ್​ಗೆ ಚಿತ್ರತಂಡ ಗಡಿ ಭಾಗಕ್ಕೆ ತೆರಳಲಿದೆಯೇ ಎನ್ನುವ ಕುತೂಹಲ ಮೂಡಿದೆ.

ಈ ರೀತಿಯ ಕಥೆಯಲ್ಲಿ ಜ್ಯೂ.ಎನ್​ಟಿಆರ್​ ಈ ಮೊದಲು ಕಾಣಿಸಿಕೊಂಡಿರಲಿಲ್ಲ. ಹೀಗಾಗಿ, ಅವರ ಹೊಸ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಅಂದಹಾಗೆ, ಸಿನಿಮಾ ಕೆಲಸಗಳು ಯಾವಾಗ ಆರಂಭವಾಗಲಿದೆ ಎನ್ನುವ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಸಿಕ್ಕಿಲ್ಲ.

ಜ್ಯೂ. ಎನ್​ಟಿಆರ್​ ಸದ್ಯ, ಆರ್​ಆರ್​ಆರ್​ ಸಿನಿಮಾದಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರವನ್ನು ಎಸ್​.ಎಸ್​. ರಾಜಮೌಳಿ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಇನ್ನು, ಪ್ರಶಾಂತ್​ ನೀಲ್​ ನಿರ್ದೇಶನದ ಕೆಜಿಎಫ್​-2 ರಿಲೀಸ್​ಗೆ ರೆಡಿ ಇದೆ. ಸಲಾರ್ ಸಿನಿಮಾದ ಶೂಟಿಂಗ್​ ನಡೆಯುತ್ತಿದೆ.

ಇದನ್ನೂ ಓದಿ: ಎನ್​ಟಿಆರ್​ಗೆ ಭಾರತ ರತ್ನ ಕೊಡಿ; ಲೆಜೆಂಡರಿ ನಟನ ಜನ್ಮದಿನದಂದು ಬೇಡಿಕೆಯಿಟ್ಟ ಮೆಗಾಸ್ಟಾರ್​ ಚಿರಂಜೀವಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More