AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Saami Saami: ಅಲ್ಲು ಅರ್ಜುನ್​ ಪಂಚೆ ಹಿಡಿದು ರಶ್ಮಿಕಾ ಬಿಂದಾಸ್​ ಡ್ಯಾನ್ಸ್​; ಹೇಗಿದೆ ‘ಸಾಮಿ ಸಾಮಿ..’ ಹಾಡು?

Allu Arjun | Rashmika Mandanna: ‘ಸಾಮಿ ಸಾಮಿ’ ಹಾಡನ್ನು ವರದರಾಜ್​ ಚಿಕ್ಕಬಳ್ಳಾಪುರ ಅವರು ಬರೆದಿದ್ದಾರೆ. ಸಾಹಿತ್ಯಕ್ಕೆ ಹೊಂದುವಂತೆ ಡಿಫರೆಂಟ್ ಸ್ಟೆಪ್​ಗಳನ್ನು ನೃತ್ಯ ನಿರ್ದೇಶಕ ಶೇಖರ್​ ವಿ.ಜೆ. ಹೇಳಿಕೊಟ್ಟಿದ್ದಾರೆ. ಅಲ್ಲು ಅರ್ಜುನ್​, ರಶ್ಮಿಕಾ ಮಂದಣ್ಣ ಬಿಂದಾಸ್​ ಆಗಿ ಡ್ಯಾನ್ಸ್​ ಮಾಡಿದ್ದಾರೆ.

Saami Saami: ಅಲ್ಲು ಅರ್ಜುನ್​ ಪಂಚೆ ಹಿಡಿದು ರಶ್ಮಿಕಾ ಬಿಂದಾಸ್​ ಡ್ಯಾನ್ಸ್​; ಹೇಗಿದೆ ‘ಸಾಮಿ ಸಾಮಿ..’ ಹಾಡು?
ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ
TV9 Web
| Edited By: |

Updated on: Oct 28, 2021 | 1:58 PM

Share

ಈಗಂತೂ ರಶ್ಮಿಕಾ ಮಂದಣ್ಣ ಏನೇ ಮಾಡಿದರೂ ದೊಡ್ಡ ಮಟ್ಟದಲ್ಲಿ ಸುದ್ದಿ ಆಗುತ್ತದೆ. ಅಷ್ಟರಮಟ್ಟಿಗೆ ಅವರ ಜನಪ್ರಿಯತೆ ಹೆಚ್ಚಿದೆ. ಅಲ್ಲು ಅರ್ಜುನ್​ ಜೊತೆ ರಶ್ಮಿಕಾ ನಟಿಸಿರುವ ‘ಪುಷ್ಪ’ ಸಿನಿಮಾ ಬಿಡುಗಡೆಗೆ ಹತ್ತಿರವಾಗುತ್ತಿದೆ. ಈಗಾಗಲೇ ಈ ಸಿನಿಮಾದ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಒಂದೊಂದೇ ಹಾಡು ಬಿಡುಗಡೆ ಮಾಡುತ್ತ ಚಿತ್ರದ ಮೇಲಿನ ಕ್ರೇಜ್​ ಹೆಚ್ಚಿಸಲಾಗುತ್ತಿದೆ. ಈಗ ‘ಸಾಮಿ ಸಾಮಿ..’ ಸಾಂಗ್​ ರಿಲೀಸ್​ ಆಗಿದ್ದು, ಅಭಿಮಾನಿಗಳನ್ನು ಸೆಳೆದುಕೊಳ್ಳುತ್ತಿದೆ. ಈ ಹಾಡಿನಲ್ಲಿ ರಶ್ಮಿಕಾ ಮತ್ತು ಅಲ್ಲು ಅರ್ಜುನ್​ ಬಿಂದಾಸ್​ ಆಗಿ ಡ್ಯಾನ್ಸ್​ ಮಾಡಿದ್ದಾರೆ.

‘ಪುಷ್ಪ’ ಚಿತ್ರದಲ್ಲಿ ಅಲ್ಲು ಅರ್ಜುನ್​ ಗೆಟಪ್​ ಸಂಪೂರ್ಣ ಡಿಫರೆಂಟ್​ ಆಗಿದೆ. ರಶ್ಮಿಕಾ ಕೂಡ ಹಳ್ಳಿ ಹುಡುಗಿ ರೀತಿ ಕಾಣಿಸಿಕೊಂಡಿದ್ದಾರೆ. ಆದರೂ ಗ್ಲಾಮರ್​ ಏನೂ ಕಮ್ಮಿ ಇಲ್ಲ. ಈಗ ಬಿಡುಗಡೆ ಆಗಿರುವ ‘ಸಾಮಿ ಸಾಮಿ..’ ಹಾಡಿನಲ್ಲಿ ಅವರು ಕಲರ್​ಫುಲ್ ಆಗಿ ಮಿಂಚಿದ್ದಾರೆ. ಕಥಾನಾಯಕಿಗೆ ಕಥಾನಾಯಕನ ಮೇಲಿರುವ ಪ್ರೀತಿ ಎಂಥದ್ದು ಎಂಬುದನ್ನು ಈ ಹಾಡಿನ ಸಾಹಿತ್ಯ ವಿವರಿಸುತ್ತಿದೆ. ಅದಕ್ಕೆ ತಕ್ಕಂತೆಯೇ ಇಬ್ಬರೂ ಭರ್ಜರಿಯಾರಿ ಡ್ಯಾನ್ಸ್​ ಮಾಡಿದ್ದಾರೆ.

‘ಮೊಣಕಾಲ್​ ಮೇಲ್​ ಗಂಟಾ, ಪಂಚೆ ನೀ ಕಟ್ಟಿ ನಿಂತ್ರೆ, ಈ ಪಂಚಪ್ರಾಣವೇ ಹೋಗದೆ ಸಾಮಿ..’ ಎಂಬ ಡಿಫರೆಂಟ್​ ಸಾಲುಗಳನ್ನು ಹೊಂದಿರುವ ಈ ಗೀತೆಯನ್ನು ವರದರಾಜ್​ ಚಿಕ್ಕಬಳ್ಳಾಪುರ ಅವರು ಬರೆದಿದ್ದಾರೆ. ಇಂಥ ಸಾಹಿತ್ಯಕ್ಕೆ ಹೊಂದುವಂತೆ ಡಿಫರೆಂಟ್ ಸ್ಟೆಪ್​ಗಳನ್ನು ನೃತ್ಯ ನಿರ್ದೇಶಕ ಶೇಖರ್​ ವಿ.ಜೆ. ಹೇಳಿಕೊಟ್ಟಿದ್ದಾರೆ. ಅಲ್ಲು ಅರ್ಜುನ್​ ಪಂಚೆ ಹಿಡಿದು ರಶ್ಮಿಕಾ ಬಿಂದಾಸ್​ ಆಗಿ ಡ್ಯಾನ್ಸ್​ ಮಾಡಿರುವುದು ಗಮನ ಸೆಳೆಯುತ್ತಿವೆ. ಈವರೆಗಿನ ಎಲ್ಲ ಸಿನಿಮಾಗಳಿಗಿಂತಲೂ ‘ಪುಷ್ಪ’ದಲ್ಲಿ ಅವರ ಹಾವ-ಭಾವ ಭಿನ್ನವಾಗಿದೆ.

ತೆಲುಗಿನ ಜೊತೆಗೆ ಕನ್ನಡ, ಮಲಯಾಳಂ, ತಮಿಳಿನಲ್ಲೂ ಈ ಹಾಡು ಬಿಡುಗಡೆ ಆಗಿದೆ. ಕನ್ನಡ ವರ್ಷನ್​ಗೆ ಅನನ್ಯಾ ಭಟ್​ ಧ್ವನಿ ನೀಡಿದ್ದಾರೆ. ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ತೆಲುಗು ವರ್ಷನ್​ ಗೀತೆ 10 ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆ ಕಂಡಿದೆ. ಹಾಡಿಗೆ ದೇವಿ ಶ್ರೀ ಪ್ರಸಾಸ್​ ಸಂಗೀತ ನೀಡಿದ್ದು, ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

(ಸಾಮಿ ಸಾಮಿ ಕನ್ನಡ ವರ್ಷನ್​ ಹಾಡು)

‘ಪುಷ್ಪ’ ಸಿನಿಮಾದಲ್ಲಿ ಡಾಲಿ ಧನಂಜಯ, ಫಹಾದ್ ಫಾಸಿಲ್​, ಜಗಪತಿ ಬಾಬು, ಪ್ರಕಾಶ್​ ರಾಜ್​ ಮುಂತಾದವರು ನಟಿಸಿದ್ದಾರೆ. ಡಿ.17ರಂದು ಅದ್ದೂರಿಯಾಗಿ ಬಿಡುಗಡೆ ಆಗಲಿರುವ ಈ ಚಿತ್ರಕ್ಕೆ ಸುಕುಮಾರ್​ ನಿರ್ದೇಶನ ಮಾಡಿದ್ದಾರೆ.

ಇದನ್ನೂ ಓದಿ:

ತುಂಬಾ ಕಿರಿಕಿರಿ ಮಾಡಿದ್ರೆ ರಶ್ಮಿಕಾ ಹೀಗೆ ಒದಿತಾರೆ; ವಿಡಿಯೋ ಸಮೇತ ವಿವರಿಸಿದ ನಟಿ

ಯಶ್​, ಪ್ರಭಾಸ್​, ಸಮಂತಾರನ್ನೂ ಹಿಂದಿಕ್ಕಿ ರಶ್ಮಿಕಾ ನಂ.1, ದೇವರಕೊಂಡ ನಂ.2: ಇಲ್ಲಿದೆ ಫೋರ್ಬ್ಸ್​ ಪಟ್ಟಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್