Yogi Babu: ಕಾಲಿವುಡ್​ ಸ್ಟಾರ್​ ಕಾಮಿಡಿಯನ್​ ಯೋಗಿ ಬಾಬು ಸಿನಿಮಾಗೆ ಸಾಧು ಕೋಕಿಲ ಪುತ್ರನ ನಿರ್ದೇಶನ

ಸುರಾಗ್​ ಮತ್ತು ಯೋಗಿ ಬಾಬು ಕಾಂಬಿನೇಷನ್​ನಲ್ಲಿ ಮೂಡಿಬರುತ್ತಿರುವ ಈ ಸಿನಿಮಾಗೆ ಈಗಾಗಲೇ ಶೂಟಿಂಗ್ ಆರಂಭ ಆಗಿದೆ. ಸಾಧು ಕೋಕಿಲ ಅವರು ಸಂಗೀತ ನೀಡುತ್ತಿದ್ದಾರೆ.

Yogi Babu: ಕಾಲಿವುಡ್​ ಸ್ಟಾರ್​ ಕಾಮಿಡಿಯನ್​ ಯೋಗಿ ಬಾಬು ಸಿನಿಮಾಗೆ ಸಾಧು ಕೋಕಿಲ ಪುತ್ರನ ನಿರ್ದೇಶನ
ಯೋಗಿ ಬಾಬು, ಸುರಾಗ್​, ಸಾಧು ಕೋಕಿಲ
Follow us
|

Updated on: Jun 28, 2023 | 4:41 PM

ಖ್ಯಾತ ನಟ ಸಾಧು ಕೋಕಿಲ (Sadhu Kokila) ಅವರದ್ದು ಕಲಾವಿದರ ಕುಟುಂಬ. ನಟನೆ, ನಿರ್ದೇಶನ ಮತ್ತು ಸಂಗೀತದಲ್ಲಿ ಅವರಿಗೆ ಹಿಡಿತ ಇದೆ. ಈಗ ಸಾಧು ಕೋಕಿಲ ಅವರ ಪುತ್ರ ಸುರಾಗ್​ (Suraag) ಕೂಡ ನಿರ್ದೇಶಕನಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ. ವಿಶೇಷ ಏನೆಂದರೆ, ತಮಿಳಿನ ಖ್ಯಾತ ನಟ ಯೋಗಿ ಬಾಬು (Yogi Babu) ಅವರ ಜೊತೆ ಸುರಾಗ್​ ಸಿನಿಮಾ ಮಾಡುತ್ತಿದ್ದಾರೆ. ಕಾಲಿವುಡ್​ವುಡ್​ನಲ್ಲಿ ಸ್ಟಾರ್​ ಕಾಮಿಡಿಯನ್​ ಆಗಿ ಗುರುತಿಸಿಕೊಂಡವರು ಯೋಗಿ ಬಾಬು. ಅಂಥ ಅನುಭವಿ ಕಲಾವಿದನಿಗೆ ನಿರ್ದೇಶನ ಮಾಡುವ ಅವಕಾಶ ಸುರಾಗ್​ಗೆ ಸಿಕ್ಕಿದೆ. ತಮಿಳಿನಲ್ಲಿ ಸಿದ್ಧವಾಗುತ್ತಿರುವ ಈ ಸಿನಿಮಾ ಬಗ್ಗೆ ‘ಸಿನಿಮಾ ಎಕ್ಸ್​ಪ್ರೆಸ್​’ ವರದಿ ಪ್ರಕಟ ಮಾಡಿದೆ.

ಯೋಗಿ ಬಾಬು ಅವರಿಗೆ ಚಿತ್ರರಂಗದಲ್ಲಿ ಹಲವು ವರ್ಷಗಳ ಅನುಭವ ಇದೆ. ಅನೇಕ ಬಗೆಯ ಪಾತ್ರಗಳನ್ನು ಮಾಡಿ ಅವರು ಸೈ ಎನಿಸಿಕೊಂಡಿದ್ದಾರೆ. ಕಾಮಿಡಿ ಪಾತ್ರಗಳಲ್ಲಿ ಅವರನ್ನು ಪ್ರೇಕ್ಷಕರು ಹೆಚ್ಚು ಇಷ್ಟಪಡುತ್ತಾರೆ. ಸುರಾಗ್​ ಜೊತೆ ಯೋಗಿ ಬಾಬು ಕೈ ಜೋಡಿಸಿರುವುದು ವಿಶೇಷ. ಈ ಸಿನಿಮಾ ಮಾಡಬೇಕು ಎಂದು ಬಹಳ ಸಮಯದಿಂದ ಸುರಾಗ್​ ಪ್ರಯತ್ನಿಸುತ್ತಿದ್ದರು. ಅದಕ್ಕೆ ಈಗ ಕಾಲ ಕೂಡಿಬಂದಿದೆ. ಯೋಗಿ ಬಾಬು ಮಾತ್ರವಲ್ಲದೇ ದಕ್ಷಿಣ ಭಾರತದ ಇನ್ನೂ ಇಬ್ಬರು ಸ್ಟಾರ್​ ಕಲಾವಿದರು ಈ ಚಿತ್ರದಲ್ಲಿ ನಟಿಸಲಿದ್ದಾರೆ. ಆ ಬಗ್ಗೆ ಶೀಘ್ರದಲ್ಲೇ ಮಾಹಿತಿ ಹೊರಬೀಳಲಿದೆ.

ಇದನ್ನೂ ಓದಿ: ತಮಿಳು ಸ್ಟಾರ್ ನಟ ಯೋಗಿ ಬಾಬುಗೆ ಸರ್​ಪ್ರೈಸ್ ಗಿಫ್ಟ್ ನೀಡಿದ ಎಂಎಸ್ ಧೋನಿ: ಫೋಟೋ ವೈರಲ್​

ಸುರಾಗ್​ ಮತ್ತು ಯೋಗಿ ಬಾಬು ಅವರ ಕಾಂಬಿನೇಷನ್​ನಲ್ಲಿ ಮೂಡಿಬರುತ್ತಿರುವ ಈ ಸಿನಿಮಾದ ಶೂಟಿಂಗ್ ಈಗಾಗಲೇ ಆರಂಭ ಆಗಿದೆ. ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. 2ನೇ ಹಂತದ ಶೂಟಿಂಗ್​ ಶೀಘ್ರದಲ್ಲೇ ಆರಂಭ ಆಗಲಿದೆ. ಸಾಧು ಕೋಕಿಲ ಅವರ ‘ಲೂಪ್​ ಎಂಟರ್​ಟೇನ್ಮೆಂಟ್​’ ಬ್ಯಾನರ್​ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಸಾಧು ಕೋಕಿಲ ಅವರೇ ಈ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.

ಇದನ್ನೂ ಓದಿ: ಸಾಧು ಕೋಕಿಲ ನಗಿಸ್ತಾರೆ, ಆದ್ರೆ ಲಯ ಹೆದರಿಸ್ತಾರೆ; ‘ತಾಯ್ತ’ ಸಿನಿಮಾದ ಟೀಸರ್ ಇಲ್ಲಿದೆ ನೋಡಿ

ಕನ್ನಡ ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕನಾಗಿ ಸುರಾಗ್​ ಗುರುತಿಸಿಕೊಂಡಿದ್ದಾರೆ. ಅಲ್ಲದೇ ‘ಉಪ್ಪಿ 2’ ಸಿನಿಮಾಗೆ ಸಹ-ನಿರ್ದೇಶಕನಾಗಿ ಅವರು ಕೆಲಸ ಮಾಡಿ ಅನುಭವ ಹೊಂದಿದ್ದರು. ಈಗ ಯೋಗಿ ಬಾಬು ಚಿತ್ರಕ್ಕೆ ನಿರ್ದೇಶನ ಮಾಡುವ ಮೂಲಕ ಕೌತುಕ ಮೂಡಿಸಿದ್ದಾರೆ. ಇದು ಅವರ ಚೊಚ್ಚಲ ನಿರ್ದೇಶನದ ಸಿನಿಮಾ. ತಮಿಳಿನ ಜೊತೆಗೆ ಬೇರೆ ಭಾಷೆಗಳಿಗೂ ಈ ಚಿತ್ರ ಡಬ್​ ಆಗಲಿದೆ. ಕನ್ನಡದ ಕಲಾವಿದರಾದ ಉಮಾಶ್ರೀ, ಅವಿನಾಶ್​ ಕೂಡ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ