ಹರಾಜಾಗುತ್ತಿದೆ ಯಾರೂ ಕೇಳಿರದ ಪ್ರಭಾಸ್​ ಸಿನಿಮಾ ಹಾಡು; ಭಾರತಲ್ಲೇ ಇದು ಮೊದಲ ಪ್ರಯೋಗ

ಪ್ರಭಾಸ್​ ನಟನೆಯ ಸಾಹೋ ಸಿನಿಮಾಗೆ ಗಿಬ್ರಾನ್​ ಸೇರಿ ಹಲವು ಸಂಗೀತ ನಿರ್ದೇಶಕರು ಕೆಲಸ ಮಾಡಿದ್ದರು. ಆ ಚಿತ್ರಕ್ಕಾಗಿ ಒಂದು ಹೀರೋ ಥೀಮ್​ ಸಾಂಗ್​ ಕಂಪೋಸ್​ ಮಾಡಲಾಗಿತ್ತು.

ಹರಾಜಾಗುತ್ತಿದೆ ಯಾರೂ ಕೇಳಿರದ ಪ್ರಭಾಸ್​ ಸಿನಿಮಾ ಹಾಡು; ಭಾರತಲ್ಲೇ ಇದು ಮೊದಲ ಪ್ರಯೋಗ
ಪ್ರಭಾಸ್​
Follow us
| Updated By: ರಾಜೇಶ್ ದುಗ್ಗುಮನೆ

Updated on: Jun 06, 2021 | 4:29 PM

ಎಲ್ಲ ಕಡೆ ಕೊರೊನಾ ವೈರಸ್​ ಕಾಟ ಕೊಡುತ್ತಿದೆ. ದೇಶಾದ್ಯಂತ ಜನರು ಕಷ್ಟಪಡುತ್ತಿದ್ದಾರೆ. ಈ ಹೊತ್ತಿನಲ್ಲಿ ಅನೇಕ ಸೆಲೆಬ್ರಿಟಿಗಳು ತಮ್ಮ ಕೈಲಾದ ರೀತಿಯಲ್ಲಿ ಜನರ ಸಹಾಯಕ್ಕೆ ನಿಂತಿದ್ದಾರೆ. ಸ್ಟಾರ್​ ನಟರು ನೇರವಾಗಿ ಮತ್ತು ತಮ್ಮ ಅಭಿಮಾನಿ ಸಂಘಗಳ ಮೂಲಕ ಜನಪರ ಕಾರ್ಯ ಮಾಡುತ್ತಿದ್ದಾರೆ. ಅದೇ ರೀತಿ ಸಂಗೀತ ನಿರ್ದೇಶಕ ಗಿಬ್ರಾನ್​ ಕೂಡ ಸಮಾಜಮುಖಿ ಕೆಲಸ ಮಾಡಲು ಸಜ್ಜಾಗಿದ್ದಾರೆ. ಆದರೆ ಅವರ ಹಾದಿ ಹೊಸದಾಗಿದೆ. ತಾವೇ ಸಿದ್ಧಪಡಿಸಿರುವ ಒಂದು ಹಾಡನ್ನು ಹರಾಜು ಹಾಕಲು ಅವರು ಮುಂದಾಗಿದ್ದಾರೆ. ಅದರಿಂದ ಬಂದ ಹಣವನ್ನು ಕೊವಿಡ್​ ವಿರುದ್ಧದ ಹೋರಾಟಕ್ಕೆ ಬಳಸಲಿದ್ದಾರೆ.

ಅಷ್ಟಕ್ಕೂ ಗಿಬ್ರಾನ್​ ಹರಾಜು ಹಾಕಲಿರುವ ಹಾಡು ಯಾವುದು? ಪ್ರಭಾಸ್​ ನಟನೆಯ ಸಾಹೋ ಸಿನಿಮಾದ್ದು. ಹೌದು, ಪ್ರಭಾಸ್​ ನಟನೆಯ ಸಾಹೋ ಸಿನಿಮಾಗೆ ಗಿಬ್ರಾನ್​ ಸೇರಿ ಹಲವು ಸಂಗೀತ ನಿರ್ದೇಶಕರು ಕೆಲಸ ಮಾಡಿದ್ದರು. ಆ ಚಿತ್ರಕ್ಕಾಗಿ ಒಂದು ಹೀರೋ ಥೀಮ್​ ಸಾಂಗ್​ ಕಂಪೋಸ್​ ಮಾಡಲಾಗಿತ್ತು. ಆದರೆ ಕಾರಣಾಂತರಗಳಿಂದ ಆ ಹಾಡನ್ನು ಬಳಸಿಕೊಳ್ಳಲಿಲ್ಲ ಮತ್ತು ರಿಲೀಸ್​ ಕೂಡ ಮಾಡಲಿಲ್ಲ. ಅದೇ ಗೀತೆಯನ್ನು ಈಗ ಹರಾಜು ಹಾಕಲು ಗಿಬ್ರಾನ್​ ನಿರ್ಧರಿಸಿದ್ದಾರೆ.

‘ಹರಾಜಿನಿಂದ ಬರುವ ಹಣದಲ್ಲಿ ಶೇ.50ರಷ್ಟನ್ನು ತಮಿಳುನಾಡು ಸಿಎಂ ರಿಲೀಫ್​ ಫಂಡ್​ಗೆ ದೇಣಿಗೆಯಾಗಿ ನೀಡುತ್ತೇನೆ. ಕೊರೊನಾ ವೈರಸ್​ ಮತ್ತು ಲಾಕ್​ಡೌನ್​ನಿಂದ ಕೆಲಸ ಇಲ್ಲದೆ ಕಷ್ಟಪಡುತ್ತಿರುವ ಸಂಗೀತಗಾರರಿಗೂ ಸಹಾಯ ಮಾಡುತ್ತೇನೆ. ಎನ್​ಎಫ್​ಟಿ (non-fungible token) ವೆಬ್​ಸೈಟ್​ ಮೂಲಕ ಈ ರೀತಿ ಹಾಡು ಹರಾಜು ಆಗುತ್ತಿರುವುದು ಭಾರತದಲ್ಲಿ ಇದೇ ಮೊದಲು’ ಎಂದು ಗಿಬ್ರಾನ್​ ಹೇಳಿದ್ದಾರೆ.

‘ಈವರೆಗೂ ನಾನು ಮತ್ತು ನಿರ್ದೇಶಕ ಸುಜೀತ್​ ಹೊರತುಪಡಿಸಿ ಆ ಹಾಡನ್ನು ಯಾರೂ ಕೇಳಿಲ್ಲ. ಹಾಡು ಮೂಡಿಬಂದಿರುವ ರೀತಿ ಬಗ್ಗೆ ನಮಗೆ ತುಂಬ ಸಂತಸ ಇದೆ’ ಎಂದಿದ್ದಾರೆ ಗಿಬ್ರಾನ್​. ಯಾರೂ ಕೇಳಿರದ ಈ ಹಾಡನ್ನು ಹರಾಜಿನಲ್ಲಿ ಯಾರು ಕೊಂಡುಕೊಳ್ಳಲಿದ್ದಾರೆ? ಎಷ್ಟು ಹಣ ಸಂಗ್ರಹ ಆಗಲಿದೆ ಎಂಬ ಕೌತುಕ ಎಲ್ಲರಲ್ಲೂ ಮೂಡಿದೆ.

ಕೊವಿಡ್​ ಸಂದರ್ಭದಲ್ಲಿ ಅಜಿತ್​ ಕುಮಾರ್​, ಸೂರ್ಯ, ಯಶ್​, ಉಪೇಂದ್ರ, ಅಮಿತಾಭ್​ ಬಚ್ಚನ್​, ಅಕ್ಷಯ್​ ಕುಮಾರ್​ ಸೇರಿದಂತೆ ಹಲವಾರು ನಟರು ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಹರ್ಷಿಕಾ ಪೂಣಚ್ಚ, ಭುವನ್​ ಪೊನ್ನಣ್ಣ, ಅರ್ಜುನ್​ ಗೌಡ ಮುಂತಾದವರು ಕೊರೊನಾ ಸೋಂಕಿತರ ಕುಟುಂಬದವರಿಗೆ ಹಲವು ರೀತಿಯಲ್ಲಿ ನೆರವಾಗುತ್ತಿದ್ದಾರೆ.

ಇದನ್ನೂ ಓದಿ:

ಪ್ರಭಾಸ್​ ಚಿತ್ರದಲ್ಲಿ 10 ಬಾಲಿವುಡ್​ ಸೆಲೆಬ್ರಿಟಿಗಳು; ಸಂಭಾವನೆ ಮೊತ್ತವೇ 200 ಕೋಟಿ! ಯಾವುದು ಈ ಸಿನಿಮಾ?​

ಪ್ರಭಾಸ್​ ಸಿನಿಮಾದಲ್ಲಿ ಬಿಗ್​ ಬಾಸ್​ ಸ್ಪರ್ಧಿಗೆ ಅವಕಾಶ? ಜೋರಾಗಿ ಹಬ್ಬಿದ್ದ ಗಾಸಿಪ್​ನ ಅಸಲಿಯತ್ತು ಇಲ್ಲಿದೆ

ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ