AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರಾಜಾಗುತ್ತಿದೆ ಯಾರೂ ಕೇಳಿರದ ಪ್ರಭಾಸ್​ ಸಿನಿಮಾ ಹಾಡು; ಭಾರತಲ್ಲೇ ಇದು ಮೊದಲ ಪ್ರಯೋಗ

ಪ್ರಭಾಸ್​ ನಟನೆಯ ಸಾಹೋ ಸಿನಿಮಾಗೆ ಗಿಬ್ರಾನ್​ ಸೇರಿ ಹಲವು ಸಂಗೀತ ನಿರ್ದೇಶಕರು ಕೆಲಸ ಮಾಡಿದ್ದರು. ಆ ಚಿತ್ರಕ್ಕಾಗಿ ಒಂದು ಹೀರೋ ಥೀಮ್​ ಸಾಂಗ್​ ಕಂಪೋಸ್​ ಮಾಡಲಾಗಿತ್ತು.

ಹರಾಜಾಗುತ್ತಿದೆ ಯಾರೂ ಕೇಳಿರದ ಪ್ರಭಾಸ್​ ಸಿನಿಮಾ ಹಾಡು; ಭಾರತಲ್ಲೇ ಇದು ಮೊದಲ ಪ್ರಯೋಗ
ಪ್ರಭಾಸ್​
ಮದನ್​ ಕುಮಾರ್​
| Updated By: ರಾಜೇಶ್ ದುಗ್ಗುಮನೆ|

Updated on: Jun 06, 2021 | 4:29 PM

Share

ಎಲ್ಲ ಕಡೆ ಕೊರೊನಾ ವೈರಸ್​ ಕಾಟ ಕೊಡುತ್ತಿದೆ. ದೇಶಾದ್ಯಂತ ಜನರು ಕಷ್ಟಪಡುತ್ತಿದ್ದಾರೆ. ಈ ಹೊತ್ತಿನಲ್ಲಿ ಅನೇಕ ಸೆಲೆಬ್ರಿಟಿಗಳು ತಮ್ಮ ಕೈಲಾದ ರೀತಿಯಲ್ಲಿ ಜನರ ಸಹಾಯಕ್ಕೆ ನಿಂತಿದ್ದಾರೆ. ಸ್ಟಾರ್​ ನಟರು ನೇರವಾಗಿ ಮತ್ತು ತಮ್ಮ ಅಭಿಮಾನಿ ಸಂಘಗಳ ಮೂಲಕ ಜನಪರ ಕಾರ್ಯ ಮಾಡುತ್ತಿದ್ದಾರೆ. ಅದೇ ರೀತಿ ಸಂಗೀತ ನಿರ್ದೇಶಕ ಗಿಬ್ರಾನ್​ ಕೂಡ ಸಮಾಜಮುಖಿ ಕೆಲಸ ಮಾಡಲು ಸಜ್ಜಾಗಿದ್ದಾರೆ. ಆದರೆ ಅವರ ಹಾದಿ ಹೊಸದಾಗಿದೆ. ತಾವೇ ಸಿದ್ಧಪಡಿಸಿರುವ ಒಂದು ಹಾಡನ್ನು ಹರಾಜು ಹಾಕಲು ಅವರು ಮುಂದಾಗಿದ್ದಾರೆ. ಅದರಿಂದ ಬಂದ ಹಣವನ್ನು ಕೊವಿಡ್​ ವಿರುದ್ಧದ ಹೋರಾಟಕ್ಕೆ ಬಳಸಲಿದ್ದಾರೆ.

ಅಷ್ಟಕ್ಕೂ ಗಿಬ್ರಾನ್​ ಹರಾಜು ಹಾಕಲಿರುವ ಹಾಡು ಯಾವುದು? ಪ್ರಭಾಸ್​ ನಟನೆಯ ಸಾಹೋ ಸಿನಿಮಾದ್ದು. ಹೌದು, ಪ್ರಭಾಸ್​ ನಟನೆಯ ಸಾಹೋ ಸಿನಿಮಾಗೆ ಗಿಬ್ರಾನ್​ ಸೇರಿ ಹಲವು ಸಂಗೀತ ನಿರ್ದೇಶಕರು ಕೆಲಸ ಮಾಡಿದ್ದರು. ಆ ಚಿತ್ರಕ್ಕಾಗಿ ಒಂದು ಹೀರೋ ಥೀಮ್​ ಸಾಂಗ್​ ಕಂಪೋಸ್​ ಮಾಡಲಾಗಿತ್ತು. ಆದರೆ ಕಾರಣಾಂತರಗಳಿಂದ ಆ ಹಾಡನ್ನು ಬಳಸಿಕೊಳ್ಳಲಿಲ್ಲ ಮತ್ತು ರಿಲೀಸ್​ ಕೂಡ ಮಾಡಲಿಲ್ಲ. ಅದೇ ಗೀತೆಯನ್ನು ಈಗ ಹರಾಜು ಹಾಕಲು ಗಿಬ್ರಾನ್​ ನಿರ್ಧರಿಸಿದ್ದಾರೆ.

‘ಹರಾಜಿನಿಂದ ಬರುವ ಹಣದಲ್ಲಿ ಶೇ.50ರಷ್ಟನ್ನು ತಮಿಳುನಾಡು ಸಿಎಂ ರಿಲೀಫ್​ ಫಂಡ್​ಗೆ ದೇಣಿಗೆಯಾಗಿ ನೀಡುತ್ತೇನೆ. ಕೊರೊನಾ ವೈರಸ್​ ಮತ್ತು ಲಾಕ್​ಡೌನ್​ನಿಂದ ಕೆಲಸ ಇಲ್ಲದೆ ಕಷ್ಟಪಡುತ್ತಿರುವ ಸಂಗೀತಗಾರರಿಗೂ ಸಹಾಯ ಮಾಡುತ್ತೇನೆ. ಎನ್​ಎಫ್​ಟಿ (non-fungible token) ವೆಬ್​ಸೈಟ್​ ಮೂಲಕ ಈ ರೀತಿ ಹಾಡು ಹರಾಜು ಆಗುತ್ತಿರುವುದು ಭಾರತದಲ್ಲಿ ಇದೇ ಮೊದಲು’ ಎಂದು ಗಿಬ್ರಾನ್​ ಹೇಳಿದ್ದಾರೆ.

‘ಈವರೆಗೂ ನಾನು ಮತ್ತು ನಿರ್ದೇಶಕ ಸುಜೀತ್​ ಹೊರತುಪಡಿಸಿ ಆ ಹಾಡನ್ನು ಯಾರೂ ಕೇಳಿಲ್ಲ. ಹಾಡು ಮೂಡಿಬಂದಿರುವ ರೀತಿ ಬಗ್ಗೆ ನಮಗೆ ತುಂಬ ಸಂತಸ ಇದೆ’ ಎಂದಿದ್ದಾರೆ ಗಿಬ್ರಾನ್​. ಯಾರೂ ಕೇಳಿರದ ಈ ಹಾಡನ್ನು ಹರಾಜಿನಲ್ಲಿ ಯಾರು ಕೊಂಡುಕೊಳ್ಳಲಿದ್ದಾರೆ? ಎಷ್ಟು ಹಣ ಸಂಗ್ರಹ ಆಗಲಿದೆ ಎಂಬ ಕೌತುಕ ಎಲ್ಲರಲ್ಲೂ ಮೂಡಿದೆ.

ಕೊವಿಡ್​ ಸಂದರ್ಭದಲ್ಲಿ ಅಜಿತ್​ ಕುಮಾರ್​, ಸೂರ್ಯ, ಯಶ್​, ಉಪೇಂದ್ರ, ಅಮಿತಾಭ್​ ಬಚ್ಚನ್​, ಅಕ್ಷಯ್​ ಕುಮಾರ್​ ಸೇರಿದಂತೆ ಹಲವಾರು ನಟರು ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಹರ್ಷಿಕಾ ಪೂಣಚ್ಚ, ಭುವನ್​ ಪೊನ್ನಣ್ಣ, ಅರ್ಜುನ್​ ಗೌಡ ಮುಂತಾದವರು ಕೊರೊನಾ ಸೋಂಕಿತರ ಕುಟುಂಬದವರಿಗೆ ಹಲವು ರೀತಿಯಲ್ಲಿ ನೆರವಾಗುತ್ತಿದ್ದಾರೆ.

ಇದನ್ನೂ ಓದಿ:

ಪ್ರಭಾಸ್​ ಚಿತ್ರದಲ್ಲಿ 10 ಬಾಲಿವುಡ್​ ಸೆಲೆಬ್ರಿಟಿಗಳು; ಸಂಭಾವನೆ ಮೊತ್ತವೇ 200 ಕೋಟಿ! ಯಾವುದು ಈ ಸಿನಿಮಾ?​

ಪ್ರಭಾಸ್​ ಸಿನಿಮಾದಲ್ಲಿ ಬಿಗ್​ ಬಾಸ್​ ಸ್ಪರ್ಧಿಗೆ ಅವಕಾಶ? ಜೋರಾಗಿ ಹಬ್ಬಿದ್ದ ಗಾಸಿಪ್​ನ ಅಸಲಿಯತ್ತು ಇಲ್ಲಿದೆ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು