Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಘಾತದಿಂದ ಚೇತರಿಸಿಕೊಂಡ ಬೆನ್ನಲ್ಲೇ ಸಾಯಿ ಧರಮ್​ ತೇಜ್​ ಕಡೆಯಿಂದ ಗುಡ್​ ನ್ಯೂಸ್​; ಮಾವನ ​ ಜತೆ ಸಿನಿಮಾ?

‘ವಿನೋಧ್ಯ ಸೀತಂ​’ ಚಿತ್ರವನ್ನು ನೋಡಿ ಪವನ್​ ಕಲ್ಯಾಣ್​ ಇಷ್ಟಪಟ್ಟಿದ್ದಾರೆ. ಅವರು ಈ ಚಿತ್ರವನ್ನು ರಿಮೇಕ್​ ಮಾಡೋಕೆ ಹೆಚ್ಚು ಆಸಕ್ತಿ ತೋರಿಸಿದ್ದಾರೆ. ಲೀಡ್​ ರೋಲ್​ನಲ್ಲಿ ಪವನ್​ ಕಲ್ಯಾಣ್​ ಕಾಣಿಸಿಕೊಂಡರೆ, ಎರಡನೇ ಮುಖ್ಯ ಪಾತ್ರದಲ್ಲಿ ಅವರ ಸೋದರ ಅಳಿಯ ಸಾಯಿ ಧರಮ್​ ತೇಜ್​ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.

ಅಪಘಾತದಿಂದ ಚೇತರಿಸಿಕೊಂಡ ಬೆನ್ನಲ್ಲೇ ಸಾಯಿ ಧರಮ್​ ತೇಜ್​ ಕಡೆಯಿಂದ ಗುಡ್​ ನ್ಯೂಸ್​; ಮಾವನ ​ ಜತೆ ಸಿನಿಮಾ?
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Feb 05, 2022 | 6:30 PM

ಕಳೆದ ವರ್ಷ ಸೆಪ್ಟೆಂಬರ್​ 10ರಂದು ನಡೆದ ಬೈಕ್​ ಅಪಘಾತದಲ್ಲಿ ನಟ ಸಾಯಿ ಧರಮ್​ ತೇಜ್​ (Sai Dharam Tej) ಅವರು ತೀವ್ರವಾಗಿ ಗಾಯಗೊಂಡಿದ್ದರು. ಒಂದು ತಿಂಗಳಿಗೂ ಅಧಿಕ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಅವರು ಮರಳಿದ್ದರು. ಈಗ ಅವರು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ. ಹೊಸಹೊಸ ಸಿನಿಮಾ ಪ್ರಾಜೆಕ್ಟ್​ಗಳಲ್ಲಿ ಬ್ಯುಸಿ ಆಗಿದ್ದಾರೆ. ಈಗ ಅವರ ಕಡೆಯಿಂದ ಗುಡ್​ನ್ಯೂಸ್​ ಒಂದು ಸಿಕ್ಕಿದೆ. ಸೋದರ ಮಾವ ಪವನ್​ ಕಲ್ಯಾಣ್ (Pawan Kalyan)​ ಜತೆಗೆ ಸಾಯಿ ಧರಮ್​ ತೇಜ್​ ತೆರೆ ಹಂಚಿಕೊಳ್ಳಲಿದ್ದಾರೆ ಎನ್ನುವ ಸುದ್ದಿ ಜೋರಾಗಿದೆ. ಈ ವಿಚಾರ ಕೇಳಿ ಸಾಯಿ ಧರಮ್​ ತೇಜ್​ ಫ್ಯಾನ್ಸ್​ ಹಾಗೂ ಪವನ್​ ಕಲ್ಯಾಣ್​ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಕಳೆದ ವರ್ಷ ತೆರೆಗೆ ಬಂದ ತಮಿಳು ಸಿನಿಮಾ ‘ವಿನೋಧ್ಯ ಸೀತಂ​’ ಚಿತ್ರ ಈಗ ತೆಲುಗಿಗೆ ರಿಮೇಕ್​ ಆಗುತ್ತಿದೆ. ಮೂಲ ಚಿತ್ರದಲ್ಲಿ ತಂಬಿ ರಾಮಯ್ಯ ಹಾಗೂ ಸಮುದ್ರಖಣಿ ನಟಿಸಿದ್ದರು. ಇದರ ರಿಮೇಕ್​ನಲ್ಲಿ ಪವನ್​ ಕಲ್ಯಾಣ್​ ಹಾಗೂ ಸಾಯಿ ಧರಮ್​ ತೇಜ್​ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಈ ವಿಚಾರ ಕೇಳಿ ಅಭಿಮಾನಿಗಳು ಸಾಕಷ್ಟು ಖುಷಿಪಟ್ಟಿದ್ದಾರೆ.

‘ವಿನೋಧ್ಯ ಸೀತಂ​’ ಚಿತ್ರವನ್ನು ನೋಡಿ ಪವನ್​ ಕಲ್ಯಾಣ್​ ಇಷ್ಟಪಟ್ಟಿದ್ದಾರೆ. ಅವರು ಈ ಚಿತ್ರವನ್ನು ರಿಮೇಕ್​ ಮಾಡೋಕೆ ಹೆಚ್ಚು ಆಸಕ್ತಿ ತೋರಿಸಿದ್ದಾರೆ. ಲೀಡ್​ ರೋಲ್​ನಲ್ಲಿ ಪವನ್​ ಕಲ್ಯಾಣ್​ ಕಾಣಿಸಿಕೊಂಡರೆ, ಎರಡನೇ ಮುಖ್ಯ ಪಾತ್ರದಲ್ಲಿ ಅವರ ಸೋದರ ಅಳಿಯ ಸಾಯಿ ಧರಮ್​ ತೇಜ್​ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಈ ಸಿನಿಮಾ ಸೆಟ್ಟೇರಿದ್ದೇ ಹೌದಾದಲ್ಲಿ ಪವನ್​ ಕಲ್ಯಾಣ್​ ಮತ್ತು ಸಾಯಿ ಧರಮ್​ ತೇಜ್​ ಒಟ್ಟಾಗಿ ನಟಿಸಲಿದ್ದಾರೆ.

ಸಮುದ್ರ ಖಣಿ ಅವರು ‘ವಿನೋಧ್ಯ ಸೀತಂ​’ ಚಿತ್ರವನ್ನು ನಿರ್ದೇಶನ​ ಮಾಡುವುದರ ಜತೆಗೆ ನಟಿಸಿದ್ದರು. ತೆಲುಗು ವರ್ಷನ್​ಗೆ ಈಗ ಅವರೇ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ. ತ್ರಿವಿಕ್ರಮ್​ ಶ್ರೀನಿವಾಸ್​ ಅವರು ಈ ಚಿತ್ರಕ್ಕೆ ಸ್ಕ್ರೀನ್​ಪ್ಲೇ ಹಾಗೂ ಸಂಭಾಷಣೆ ಬರೆಯುತ್ತಿದ್ದಾರೆ. ಅವರೇ ಈ ಚಿತ್ರವನ್ನು ತೆಲುಗಿನಲ್ಲಿ ನಿರ್ಮಾಣ ಮಾಡಲಿದ್ದಾರೆ. ಈ ಬಗ್ಗೆ ಶೀಘ್ರವೇ ಘೋಷಣೆ ಮಾಡುವ ಸಾಧ್ಯತೆ ಇದೆ.

ಸಾಯಿ ಧರಮ್​ ತೇಜ್​ ಅವರು ಸದ್ಯ ತಮ್ಮ 15ನೇ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರಕ್ಕೆ ಇನ್ನೂ ಶೀರ್ಷಿಕೆ ಫೈನಲ್​ ಆಗಿಲ್ಲ. ಪವನ್​ ಕಲ್ಯಾಣ್​ ಅವರು ಬಹುನಿರೀಕ್ಷಿತ ‘ಭೀಮ್ಲಾ ನಾಯಕ್​’ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ. ಮಲಯಾಳಂನ ‘ಅಯ್ಯಪ್ಪನುಮ್​ ಕೋಶಿಯುಮ್​’ ಸಿನಿಮಾದ ರಿಮೇಕ್​ ‘ಭೀಮ್ಲಾ ನಾಯಕ್’. ಪೊಲೀಸ್​ ಹಾಗೂ ಮಾಜಿ ಸೈನಿಕನ ನಡುವೆ ನಡೆಯುವ ಅಹಂನ ಕಥೆ ಇದಾಗಿದೆ. ಈ ಸಿನಿಮಾ ಮಲಯಾಳಂನಲ್ಲಿ ಮೆಚ್ಚುಗೆ ಪಡೆದುಕೊಂಡಿತ್ತು. ಪೃಥ್ವಿರಾಜ್ ಸುಕುಮಾರ್​ ಹಾಗೂ ಬಿಜು ಮೆನನ್​ ಈ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಪೃಥ್ವಿರಾಜ್​ ಪಾತ್ರವನ್ನು ರಾಣಾ ದಗ್ಗುಬಾಟಿ ಹಾಗೂ ಬಿಜು ಮಾಡಿದ್ದ ಪಾತ್ರವನ್ನು ಪವನ್​ ಕಲ್ಯಾಣ್​ ನಿರ್ವಹಿಸುತ್ತಿದ್ದಾರೆ. ಈ ಸಿನಿಮಾ ಫೆಬ್ರವರಿ 25 ಅಥವಾ ಏಪ್ರಿಲ್​ 1ರಂದು ತೆರೆಗೆ ಬರಲಿದೆ.

ಇದನ್ನೂ ಓದಿ: ಪವನ್​ ಕಲ್ಯಾಣ್​ ಅಭಿಮಾನಿಗಳಿಗೆ ‘ಭೀಮ್ಲಾ ನಾಯಕ್​’ ನಿರ್ಮಾಪಕರ ಕ್ಷಮೆ; ಖುಷಿಪಟ್ಟಿದ್ದು ರಾಜಮೌಳಿ

ಬಿಡುಗಡೆ ಆಗ್ತಿದೆ ಸಾಲುಸಾಲು ಸ್ಟಾರ್ ಚಿತ್ರಗಳು; ಇಲ್ಲಿದೆ ಪ್ರಮುಖ 9 ಸಿನಿಮಾಗಳ ರಿಲೀಸ್ ದಿನಾಂಕ

ಆಸ್ಪತ್ರೆಯಲ್ಲಿ ಅಗ್ನಿ ಅವಘಡ, ಓರ್ವ ರೋಗಿ ಸಾವು, ಹಲವರಿಗೆ ಗಾಯ
ಆಸ್ಪತ್ರೆಯಲ್ಲಿ ಅಗ್ನಿ ಅವಘಡ, ಓರ್ವ ರೋಗಿ ಸಾವು, ಹಲವರಿಗೆ ಗಾಯ
ಹೊಸ ದಾಖಲೆ... ಕೇವಲ 26 ರನ್ ಬಾರಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಧೋನಿ
ಹೊಸ ದಾಖಲೆ... ಕೇವಲ 26 ರನ್ ಬಾರಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಧೋನಿ
ಉತ್ಸವಗಳ ಸಂದರ್ಭ ಪಾನಕ ಹಾಗೂ ಮಜ್ಜಿಗೆ ನೀಡುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಉತ್ಸವಗಳ ಸಂದರ್ಭ ಪಾನಕ ಹಾಗೂ ಮಜ್ಜಿಗೆ ನೀಡುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚರಿಸುವ ಈ ದಿನದ ಭವಿಷ್ಯ ಇಲ್ಲಿ ತಿಳಿಯಿರಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚರಿಸುವ ಈ ದಿನದ ಭವಿಷ್ಯ ಇಲ್ಲಿ ತಿಳಿಯಿರಿ
ಬೆಂಗಳೂರು ಹೈವೇಯಲ್ಲಿ 3 ಬಾರಿ ಪಲ್ಟಿಯಾದ ನೀರಿನ ಟ್ಯಾಂಕರ್; ವಿಡಿಯೋ ವೈರಲ್
ಬೆಂಗಳೂರು ಹೈವೇಯಲ್ಲಿ 3 ಬಾರಿ ಪಲ್ಟಿಯಾದ ನೀರಿನ ಟ್ಯಾಂಕರ್; ವಿಡಿಯೋ ವೈರಲ್
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್