AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಘಾತದಿಂದ ಚೇತರಿಸಿಕೊಂಡ ಬೆನ್ನಲ್ಲೇ ಸಾಯಿ ಧರಮ್​ ತೇಜ್​ ಕಡೆಯಿಂದ ಗುಡ್​ ನ್ಯೂಸ್​; ಮಾವನ ​ ಜತೆ ಸಿನಿಮಾ?

‘ವಿನೋಧ್ಯ ಸೀತಂ​’ ಚಿತ್ರವನ್ನು ನೋಡಿ ಪವನ್​ ಕಲ್ಯಾಣ್​ ಇಷ್ಟಪಟ್ಟಿದ್ದಾರೆ. ಅವರು ಈ ಚಿತ್ರವನ್ನು ರಿಮೇಕ್​ ಮಾಡೋಕೆ ಹೆಚ್ಚು ಆಸಕ್ತಿ ತೋರಿಸಿದ್ದಾರೆ. ಲೀಡ್​ ರೋಲ್​ನಲ್ಲಿ ಪವನ್​ ಕಲ್ಯಾಣ್​ ಕಾಣಿಸಿಕೊಂಡರೆ, ಎರಡನೇ ಮುಖ್ಯ ಪಾತ್ರದಲ್ಲಿ ಅವರ ಸೋದರ ಅಳಿಯ ಸಾಯಿ ಧರಮ್​ ತೇಜ್​ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.

ಅಪಘಾತದಿಂದ ಚೇತರಿಸಿಕೊಂಡ ಬೆನ್ನಲ್ಲೇ ಸಾಯಿ ಧರಮ್​ ತೇಜ್​ ಕಡೆಯಿಂದ ಗುಡ್​ ನ್ಯೂಸ್​; ಮಾವನ ​ ಜತೆ ಸಿನಿಮಾ?
TV9 Web
| Edited By: |

Updated on: Feb 05, 2022 | 6:30 PM

Share

ಕಳೆದ ವರ್ಷ ಸೆಪ್ಟೆಂಬರ್​ 10ರಂದು ನಡೆದ ಬೈಕ್​ ಅಪಘಾತದಲ್ಲಿ ನಟ ಸಾಯಿ ಧರಮ್​ ತೇಜ್​ (Sai Dharam Tej) ಅವರು ತೀವ್ರವಾಗಿ ಗಾಯಗೊಂಡಿದ್ದರು. ಒಂದು ತಿಂಗಳಿಗೂ ಅಧಿಕ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಅವರು ಮರಳಿದ್ದರು. ಈಗ ಅವರು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ. ಹೊಸಹೊಸ ಸಿನಿಮಾ ಪ್ರಾಜೆಕ್ಟ್​ಗಳಲ್ಲಿ ಬ್ಯುಸಿ ಆಗಿದ್ದಾರೆ. ಈಗ ಅವರ ಕಡೆಯಿಂದ ಗುಡ್​ನ್ಯೂಸ್​ ಒಂದು ಸಿಕ್ಕಿದೆ. ಸೋದರ ಮಾವ ಪವನ್​ ಕಲ್ಯಾಣ್ (Pawan Kalyan)​ ಜತೆಗೆ ಸಾಯಿ ಧರಮ್​ ತೇಜ್​ ತೆರೆ ಹಂಚಿಕೊಳ್ಳಲಿದ್ದಾರೆ ಎನ್ನುವ ಸುದ್ದಿ ಜೋರಾಗಿದೆ. ಈ ವಿಚಾರ ಕೇಳಿ ಸಾಯಿ ಧರಮ್​ ತೇಜ್​ ಫ್ಯಾನ್ಸ್​ ಹಾಗೂ ಪವನ್​ ಕಲ್ಯಾಣ್​ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಕಳೆದ ವರ್ಷ ತೆರೆಗೆ ಬಂದ ತಮಿಳು ಸಿನಿಮಾ ‘ವಿನೋಧ್ಯ ಸೀತಂ​’ ಚಿತ್ರ ಈಗ ತೆಲುಗಿಗೆ ರಿಮೇಕ್​ ಆಗುತ್ತಿದೆ. ಮೂಲ ಚಿತ್ರದಲ್ಲಿ ತಂಬಿ ರಾಮಯ್ಯ ಹಾಗೂ ಸಮುದ್ರಖಣಿ ನಟಿಸಿದ್ದರು. ಇದರ ರಿಮೇಕ್​ನಲ್ಲಿ ಪವನ್​ ಕಲ್ಯಾಣ್​ ಹಾಗೂ ಸಾಯಿ ಧರಮ್​ ತೇಜ್​ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಈ ವಿಚಾರ ಕೇಳಿ ಅಭಿಮಾನಿಗಳು ಸಾಕಷ್ಟು ಖುಷಿಪಟ್ಟಿದ್ದಾರೆ.

‘ವಿನೋಧ್ಯ ಸೀತಂ​’ ಚಿತ್ರವನ್ನು ನೋಡಿ ಪವನ್​ ಕಲ್ಯಾಣ್​ ಇಷ್ಟಪಟ್ಟಿದ್ದಾರೆ. ಅವರು ಈ ಚಿತ್ರವನ್ನು ರಿಮೇಕ್​ ಮಾಡೋಕೆ ಹೆಚ್ಚು ಆಸಕ್ತಿ ತೋರಿಸಿದ್ದಾರೆ. ಲೀಡ್​ ರೋಲ್​ನಲ್ಲಿ ಪವನ್​ ಕಲ್ಯಾಣ್​ ಕಾಣಿಸಿಕೊಂಡರೆ, ಎರಡನೇ ಮುಖ್ಯ ಪಾತ್ರದಲ್ಲಿ ಅವರ ಸೋದರ ಅಳಿಯ ಸಾಯಿ ಧರಮ್​ ತೇಜ್​ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಈ ಸಿನಿಮಾ ಸೆಟ್ಟೇರಿದ್ದೇ ಹೌದಾದಲ್ಲಿ ಪವನ್​ ಕಲ್ಯಾಣ್​ ಮತ್ತು ಸಾಯಿ ಧರಮ್​ ತೇಜ್​ ಒಟ್ಟಾಗಿ ನಟಿಸಲಿದ್ದಾರೆ.

ಸಮುದ್ರ ಖಣಿ ಅವರು ‘ವಿನೋಧ್ಯ ಸೀತಂ​’ ಚಿತ್ರವನ್ನು ನಿರ್ದೇಶನ​ ಮಾಡುವುದರ ಜತೆಗೆ ನಟಿಸಿದ್ದರು. ತೆಲುಗು ವರ್ಷನ್​ಗೆ ಈಗ ಅವರೇ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ. ತ್ರಿವಿಕ್ರಮ್​ ಶ್ರೀನಿವಾಸ್​ ಅವರು ಈ ಚಿತ್ರಕ್ಕೆ ಸ್ಕ್ರೀನ್​ಪ್ಲೇ ಹಾಗೂ ಸಂಭಾಷಣೆ ಬರೆಯುತ್ತಿದ್ದಾರೆ. ಅವರೇ ಈ ಚಿತ್ರವನ್ನು ತೆಲುಗಿನಲ್ಲಿ ನಿರ್ಮಾಣ ಮಾಡಲಿದ್ದಾರೆ. ಈ ಬಗ್ಗೆ ಶೀಘ್ರವೇ ಘೋಷಣೆ ಮಾಡುವ ಸಾಧ್ಯತೆ ಇದೆ.

ಸಾಯಿ ಧರಮ್​ ತೇಜ್​ ಅವರು ಸದ್ಯ ತಮ್ಮ 15ನೇ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರಕ್ಕೆ ಇನ್ನೂ ಶೀರ್ಷಿಕೆ ಫೈನಲ್​ ಆಗಿಲ್ಲ. ಪವನ್​ ಕಲ್ಯಾಣ್​ ಅವರು ಬಹುನಿರೀಕ್ಷಿತ ‘ಭೀಮ್ಲಾ ನಾಯಕ್​’ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ. ಮಲಯಾಳಂನ ‘ಅಯ್ಯಪ್ಪನುಮ್​ ಕೋಶಿಯುಮ್​’ ಸಿನಿಮಾದ ರಿಮೇಕ್​ ‘ಭೀಮ್ಲಾ ನಾಯಕ್’. ಪೊಲೀಸ್​ ಹಾಗೂ ಮಾಜಿ ಸೈನಿಕನ ನಡುವೆ ನಡೆಯುವ ಅಹಂನ ಕಥೆ ಇದಾಗಿದೆ. ಈ ಸಿನಿಮಾ ಮಲಯಾಳಂನಲ್ಲಿ ಮೆಚ್ಚುಗೆ ಪಡೆದುಕೊಂಡಿತ್ತು. ಪೃಥ್ವಿರಾಜ್ ಸುಕುಮಾರ್​ ಹಾಗೂ ಬಿಜು ಮೆನನ್​ ಈ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಪೃಥ್ವಿರಾಜ್​ ಪಾತ್ರವನ್ನು ರಾಣಾ ದಗ್ಗುಬಾಟಿ ಹಾಗೂ ಬಿಜು ಮಾಡಿದ್ದ ಪಾತ್ರವನ್ನು ಪವನ್​ ಕಲ್ಯಾಣ್​ ನಿರ್ವಹಿಸುತ್ತಿದ್ದಾರೆ. ಈ ಸಿನಿಮಾ ಫೆಬ್ರವರಿ 25 ಅಥವಾ ಏಪ್ರಿಲ್​ 1ರಂದು ತೆರೆಗೆ ಬರಲಿದೆ.

ಇದನ್ನೂ ಓದಿ: ಪವನ್​ ಕಲ್ಯಾಣ್​ ಅಭಿಮಾನಿಗಳಿಗೆ ‘ಭೀಮ್ಲಾ ನಾಯಕ್​’ ನಿರ್ಮಾಪಕರ ಕ್ಷಮೆ; ಖುಷಿಪಟ್ಟಿದ್ದು ರಾಜಮೌಳಿ

ಬಿಡುಗಡೆ ಆಗ್ತಿದೆ ಸಾಲುಸಾಲು ಸ್ಟಾರ್ ಚಿತ್ರಗಳು; ಇಲ್ಲಿದೆ ಪ್ರಮುಖ 9 ಸಿನಿಮಾಗಳ ರಿಲೀಸ್ ದಿನಾಂಕ

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ