ಭೀಕರ ಬೈಕ್​ ಅಪಘಾತ; ನಟನ 4 ತಪ್ಪುಗಳು ಬಟಾಬಯಲು: ಸಾಯಿ ಧರಮ್​ ತೇಜ್​ ಹೀಗೆ ಮಾಡಬಾರದಿತ್ತು

ಅಜಾಗರೂಕತೆಯಿಂದ ಸ್ಪೋರ್ಟ್ಸ್​ ಬೈಕ್​ ಓಡಿಸಿದ್ದಕ್ಕಾಗಿ ಪೊಲೀಸರು ಸಾಯಿ ಧರಮ್​ ತೇಜ್​ ವಿರುದ್ಧ ಕೇಸ್​ ದಾಖಲಿಸಿಕೊಂಡಿದ್ದಾರೆ. ಅದಕ್ಕೆ ಪೂರಕವಾದ ಸಾಕ್ಷಿಗಳನ್ನೂ ಕಲೆ ಹಾಕಿದ್ದಾರೆ.

ಭೀಕರ ಬೈಕ್​ ಅಪಘಾತ; ನಟನ 4 ತಪ್ಪುಗಳು ಬಟಾಬಯಲು: ಸಾಯಿ ಧರಮ್​ ತೇಜ್​ ಹೀಗೆ ಮಾಡಬಾರದಿತ್ತು
ಭೀಕರ ಬೈಕ್​ ಅಪಘಾತ; ನಟನ 4 ತಪ್ಪುಗಳು ಬಟಾಬಯಲು: ಸಾಯಿ ಧರಮ್​ ತೇಜ್​ ಹೀಗೆ ಮಾಡಬಾರದಿತ್ತು
Follow us
| Updated By: ಮದನ್​ ಕುಮಾರ್​

Updated on: Sep 12, 2021 | 9:41 AM

ಮೆಗಾಸ್ಟಾರ್​ ಚಿರಂಜೀವಿ ಅವರ ಅಳಿಯ, ನಟ ಸಾಯಿ ಧರಮ್​ ತೇಜ್​ಗೆ ಶುಕ್ರವಾರ (ಸೆ.10) ರಾತ್ರಿ ಅಪಘಾತ ಸಂಭವಿಸಿತು. ಸದ್ಯ ಅವರಿಗೆ ಹೈದರಾಬಾದ್​ನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬೈಕ್​ ಸ್ಕಿಡ್​ ಆದ ಪರಿಣಾಮ ಈ ಅವಘಡ ಸಂಭವಿಸಿತು ಎಂದು ಹೇಳಲಾಗುತ್ತಿದೆ. ಸಾಯಿ ಧರಮ್​ ತೇಜ್​ ಅವರ ಆಕ್ಸಿಡೆಂಟ್​ನ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಟನಿಗೆ ಗಂಭೀರ ಗಾಯಗಳು ಆಗಿವೆಯಾದರೂ ಹೆಲ್ಮೆಟ್​ ಧರಿಸಿದ್ದರಿಂದ ಪ್ರಾಣಕ್ಕೆ ಅಪಾಯ ಆಗಿಲ್ಲ. ಒಟ್ಟಾರೆ ಪ್ರಕರಣದ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ತನಿಖೆ ವೇಳೆ ನಟನ 4 ತಪ್ಪುಗಳು ಬಟಾಬಯಲಾಗಿವೆ.

ಅಜಾಗರೂಕತೆಯಿಂದ ಸ್ಪೋರ್ಟ್ಸ್​ ಬೈಕ್​ ಓಡಿಸಿದ್ದಕ್ಕಾಗಿ ಪೊಲೀಸರು ಸಾಯಿ ಧರಮ್​ ತೇಜ್​ ವಿರುದ್ಧ ಕೇಸ್​ ದಾಖಲಿಸಿಕೊಂಡಿದ್ದಾರೆ. ಅದಕ್ಕೆ ಪೂರಕವಾದ ಸಾಕ್ಷಿಗಳನ್ನೂ ಕಲೆ ಹಾಕಿದ್ದಾರೆ. ಮೂಲಗಳ ಪ್ರಕಾರ ನಟನ ಕೆಲವು ತಪ್ಪುಗಳು ಬಹಿರಂಗ ಆಗಿವೆ. ಆ ತಪ್ಪುಗಳನ್ನು ಪಟ್ಟಿ ಮಾಡಲಾಗಿದೆ.

1. ಸಾಯಿ ಧರಮ್​ ತೇಜ್​ ಬಳಿ ದ್ವಿಚಕ್ರ ವಾಹನದ ಲೈಸೆನ್ಸ್​ ಇರಲಿಲ್ಲ! ಅವರು ಕೇವಲ ಲೈಟ್​ ಮೋಟರ್​ ವೆಹಿಕಲ್​ ಡ್ರೈವಿಂಗ್​ ಲೈಸೆನ್ಸ್​ ಹೊಂದಿದ್ದರು.

2. 102 ಕಿಲೋ ಮೀಟರ್​ ವೇಗದಲ್ಲಿ ಸಾಯಿ ಧರಮ್​ ತೇಜ್​ ಬೈಕ್​ ಓಡಿಸುತ್ತಿದ್ದರು. ಆಪಘಾತ ಸಂಭವಿಸಿದ ಕ್ಷಣದಲ್ಲಿ 72 ಕಿಮೀ ವೇಗದಲ್ಲಿ ಅವರ ಬೈಕ್​ ಚಲಿಸುತ್ತಿತ್ತು.

3. ತಮ್ಮ ಮುಂದೆ ಚಲಿಸುತ್ತಿದ್ದ ಆಟೋ ರಿಕ್ಷಾವನ್ನು ಓವರ್​ಟೇಕ್​ ಮಾಡಲು ಸಾಯಿ ಧರಮ್​ ತೇಜ್​ ಪ್ರಯತ್ನಿಸಿದ್ದರು. ರಾಂಗ್​ ಸೈಡ್​ನಿಂದ ಓವರ್​ ಟೇಕ್​ ಮಾಡುವಾಗ ಈ ಅಪಘಾತ ನಡೆದಿದೆ.

4. ಸಾಯಿ ಧರಮ್​ ತೇಜ್​ ಓಡಿಸುತ್ತಿದ್ದದ್ದು ಸೆಕೆಂಡ್​ ಹ್ಯಾಂಡ್​ ಬೈಕ್ ಆಗಿತ್ತು. ಈ ಬೈಕ್​ನ ರಿಜಿಸ್ಟ್ರೇಶನ್​ ಪ್ರಕ್ರಿಯೆ ಕೂಡ ಪೂರ್ಣಗೊಂಡಿರಲಿಲ್ಲ! ಎಲ್​ಬಿ ನಗರ್​ ಮೂಲದ ಅನಿಲ್​ ಕುಮಾರ್​ ಎಂಬುವವರಿಂದ ಈ ಬೈಕ್​ ಖರೀದಿಸಲಾಗಿತ್ತು.

ಈ ಹಿಂದೆ ಕೂಡ ಅತಿವೇಗವಾಗಿ ಬೈಕ್​ ಓಡಿಸಿದ್ದಕ್ಕೆ ಸಾಯಿ ಧರಮ್​ ತೇಜ್​ಗೆ ಪೊಲೀಸರ ದಂಡ ವಿಧಿಸಿದ್ದರು. ಅದನ್ನು ಅವರು ಪಾವತಿ ಮಾಡಿರಲಿಲ್ಲ. ಈಗ ಅಪಘಾತ ನಡೆದ ಬಳಿಕ ಅವರ ಅಭಿಮಾನಿಯೊಬ್ಬರು ದಂಡ ಪಾವತಿ ಮಾಡಿದ್ದಾರೆ ಎಂದು ವರದಿ ಆಗಿದೆ. ಸಾಯಿ ಧರಮ್​ ತೇಜ್​ ಅವರಿಗೆ ಬಲಗಣ್ಣು, ಎದೆ, ಕುತ್ತಿಗೆ, ಮತ್ತು ಹೊಟ್ಟೆ ಭಾಗಕ್ಕೆ ತೀವ್ರ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಅವರು​ ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದಾರೆ. ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಅಭಿಮಾನಿಗಳು, ಸೆಲೆಬ್ರಿಟಿಗಳು ಮತ್ತು ಆಪ್ತರು ಪ್ರಾರ್ಥಿಸುತ್ತಿದ್ದಾರೆ.

ಇದನ್ನೂ ಓದಿ:

ಸಾಯಿ ಧರಮ್​ ತೇಜ್​ ಬೈಕ್​ ಅಪಘಾತ: ಅಪಶಕುನ ನುಡಿದ ಹಿರಿಯ ನಟನ ವಿರುದ್ಧ ಭಾರಿ ಆಕ್ರೋಶ

ಡಿಕೆ ರವಿ ಬಗ್ಗೆ 2 ದಿನದ ಹಿಂದೆ ಮಾತಾಡಿದ್ದ ಸಾಯಿ ಧರಮ್​ ತೇಜ್​ಗೆ ಭೀಕರ ಅಪಘಾತ; ಏನಿದು ಕಾಕತಾಳೀಯ?

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ