ಭೀಕರ ಬೈಕ್​ ಅಪಘಾತ; ನಟನ 4 ತಪ್ಪುಗಳು ಬಟಾಬಯಲು: ಸಾಯಿ ಧರಮ್​ ತೇಜ್​ ಹೀಗೆ ಮಾಡಬಾರದಿತ್ತು

ಅಜಾಗರೂಕತೆಯಿಂದ ಸ್ಪೋರ್ಟ್ಸ್​ ಬೈಕ್​ ಓಡಿಸಿದ್ದಕ್ಕಾಗಿ ಪೊಲೀಸರು ಸಾಯಿ ಧರಮ್​ ತೇಜ್​ ವಿರುದ್ಧ ಕೇಸ್​ ದಾಖಲಿಸಿಕೊಂಡಿದ್ದಾರೆ. ಅದಕ್ಕೆ ಪೂರಕವಾದ ಸಾಕ್ಷಿಗಳನ್ನೂ ಕಲೆ ಹಾಕಿದ್ದಾರೆ.

ಭೀಕರ ಬೈಕ್​ ಅಪಘಾತ; ನಟನ 4 ತಪ್ಪುಗಳು ಬಟಾಬಯಲು: ಸಾಯಿ ಧರಮ್​ ತೇಜ್​ ಹೀಗೆ ಮಾಡಬಾರದಿತ್ತು
ಭೀಕರ ಬೈಕ್​ ಅಪಘಾತ; ನಟನ 4 ತಪ್ಪುಗಳು ಬಟಾಬಯಲು: ಸಾಯಿ ಧರಮ್​ ತೇಜ್​ ಹೀಗೆ ಮಾಡಬಾರದಿತ್ತು
Follow us
| Edited By: ಮದನ್​ ಕುಮಾರ್​

Updated on: Sep 12, 2021 | 9:41 AM

ಮೆಗಾಸ್ಟಾರ್​ ಚಿರಂಜೀವಿ ಅವರ ಅಳಿಯ, ನಟ ಸಾಯಿ ಧರಮ್​ ತೇಜ್​ಗೆ ಶುಕ್ರವಾರ (ಸೆ.10) ರಾತ್ರಿ ಅಪಘಾತ ಸಂಭವಿಸಿತು. ಸದ್ಯ ಅವರಿಗೆ ಹೈದರಾಬಾದ್​ನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬೈಕ್​ ಸ್ಕಿಡ್​ ಆದ ಪರಿಣಾಮ ಈ ಅವಘಡ ಸಂಭವಿಸಿತು ಎಂದು ಹೇಳಲಾಗುತ್ತಿದೆ. ಸಾಯಿ ಧರಮ್​ ತೇಜ್​ ಅವರ ಆಕ್ಸಿಡೆಂಟ್​ನ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಟನಿಗೆ ಗಂಭೀರ ಗಾಯಗಳು ಆಗಿವೆಯಾದರೂ ಹೆಲ್ಮೆಟ್​ ಧರಿಸಿದ್ದರಿಂದ ಪ್ರಾಣಕ್ಕೆ ಅಪಾಯ ಆಗಿಲ್ಲ. ಒಟ್ಟಾರೆ ಪ್ರಕರಣದ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ತನಿಖೆ ವೇಳೆ ನಟನ 4 ತಪ್ಪುಗಳು ಬಟಾಬಯಲಾಗಿವೆ.

ಅಜಾಗರೂಕತೆಯಿಂದ ಸ್ಪೋರ್ಟ್ಸ್​ ಬೈಕ್​ ಓಡಿಸಿದ್ದಕ್ಕಾಗಿ ಪೊಲೀಸರು ಸಾಯಿ ಧರಮ್​ ತೇಜ್​ ವಿರುದ್ಧ ಕೇಸ್​ ದಾಖಲಿಸಿಕೊಂಡಿದ್ದಾರೆ. ಅದಕ್ಕೆ ಪೂರಕವಾದ ಸಾಕ್ಷಿಗಳನ್ನೂ ಕಲೆ ಹಾಕಿದ್ದಾರೆ. ಮೂಲಗಳ ಪ್ರಕಾರ ನಟನ ಕೆಲವು ತಪ್ಪುಗಳು ಬಹಿರಂಗ ಆಗಿವೆ. ಆ ತಪ್ಪುಗಳನ್ನು ಪಟ್ಟಿ ಮಾಡಲಾಗಿದೆ.

1. ಸಾಯಿ ಧರಮ್​ ತೇಜ್​ ಬಳಿ ದ್ವಿಚಕ್ರ ವಾಹನದ ಲೈಸೆನ್ಸ್​ ಇರಲಿಲ್ಲ! ಅವರು ಕೇವಲ ಲೈಟ್​ ಮೋಟರ್​ ವೆಹಿಕಲ್​ ಡ್ರೈವಿಂಗ್​ ಲೈಸೆನ್ಸ್​ ಹೊಂದಿದ್ದರು.

2. 102 ಕಿಲೋ ಮೀಟರ್​ ವೇಗದಲ್ಲಿ ಸಾಯಿ ಧರಮ್​ ತೇಜ್​ ಬೈಕ್​ ಓಡಿಸುತ್ತಿದ್ದರು. ಆಪಘಾತ ಸಂಭವಿಸಿದ ಕ್ಷಣದಲ್ಲಿ 72 ಕಿಮೀ ವೇಗದಲ್ಲಿ ಅವರ ಬೈಕ್​ ಚಲಿಸುತ್ತಿತ್ತು.

3. ತಮ್ಮ ಮುಂದೆ ಚಲಿಸುತ್ತಿದ್ದ ಆಟೋ ರಿಕ್ಷಾವನ್ನು ಓವರ್​ಟೇಕ್​ ಮಾಡಲು ಸಾಯಿ ಧರಮ್​ ತೇಜ್​ ಪ್ರಯತ್ನಿಸಿದ್ದರು. ರಾಂಗ್​ ಸೈಡ್​ನಿಂದ ಓವರ್​ ಟೇಕ್​ ಮಾಡುವಾಗ ಈ ಅಪಘಾತ ನಡೆದಿದೆ.

4. ಸಾಯಿ ಧರಮ್​ ತೇಜ್​ ಓಡಿಸುತ್ತಿದ್ದದ್ದು ಸೆಕೆಂಡ್​ ಹ್ಯಾಂಡ್​ ಬೈಕ್ ಆಗಿತ್ತು. ಈ ಬೈಕ್​ನ ರಿಜಿಸ್ಟ್ರೇಶನ್​ ಪ್ರಕ್ರಿಯೆ ಕೂಡ ಪೂರ್ಣಗೊಂಡಿರಲಿಲ್ಲ! ಎಲ್​ಬಿ ನಗರ್​ ಮೂಲದ ಅನಿಲ್​ ಕುಮಾರ್​ ಎಂಬುವವರಿಂದ ಈ ಬೈಕ್​ ಖರೀದಿಸಲಾಗಿತ್ತು.

ಈ ಹಿಂದೆ ಕೂಡ ಅತಿವೇಗವಾಗಿ ಬೈಕ್​ ಓಡಿಸಿದ್ದಕ್ಕೆ ಸಾಯಿ ಧರಮ್​ ತೇಜ್​ಗೆ ಪೊಲೀಸರ ದಂಡ ವಿಧಿಸಿದ್ದರು. ಅದನ್ನು ಅವರು ಪಾವತಿ ಮಾಡಿರಲಿಲ್ಲ. ಈಗ ಅಪಘಾತ ನಡೆದ ಬಳಿಕ ಅವರ ಅಭಿಮಾನಿಯೊಬ್ಬರು ದಂಡ ಪಾವತಿ ಮಾಡಿದ್ದಾರೆ ಎಂದು ವರದಿ ಆಗಿದೆ. ಸಾಯಿ ಧರಮ್​ ತೇಜ್​ ಅವರಿಗೆ ಬಲಗಣ್ಣು, ಎದೆ, ಕುತ್ತಿಗೆ, ಮತ್ತು ಹೊಟ್ಟೆ ಭಾಗಕ್ಕೆ ತೀವ್ರ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಅವರು​ ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದಾರೆ. ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಅಭಿಮಾನಿಗಳು, ಸೆಲೆಬ್ರಿಟಿಗಳು ಮತ್ತು ಆಪ್ತರು ಪ್ರಾರ್ಥಿಸುತ್ತಿದ್ದಾರೆ.

ಇದನ್ನೂ ಓದಿ:

ಸಾಯಿ ಧರಮ್​ ತೇಜ್​ ಬೈಕ್​ ಅಪಘಾತ: ಅಪಶಕುನ ನುಡಿದ ಹಿರಿಯ ನಟನ ವಿರುದ್ಧ ಭಾರಿ ಆಕ್ರೋಶ

ಡಿಕೆ ರವಿ ಬಗ್ಗೆ 2 ದಿನದ ಹಿಂದೆ ಮಾತಾಡಿದ್ದ ಸಾಯಿ ಧರಮ್​ ತೇಜ್​ಗೆ ಭೀಕರ ಅಪಘಾತ; ಏನಿದು ಕಾಕತಾಳೀಯ?

ತಾಜಾ ಸುದ್ದಿ
ಜೆಸಿಬಿಯಲ್ಲಿ ಕಲ್ಯಾಣ ಮಂಟಪಕ್ಕೆ ಬಂದು, ಅಂಕದ ಕೋಳಿ ಪೈಟ್ ಆಡಿದ ನವಜೋಡಿಗಳು
ಜೆಸಿಬಿಯಲ್ಲಿ ಕಲ್ಯಾಣ ಮಂಟಪಕ್ಕೆ ಬಂದು, ಅಂಕದ ಕೋಳಿ ಪೈಟ್ ಆಡಿದ ನವಜೋಡಿಗಳು
ರಿಜಿಸ್ಟ್ರೇಷನ್ ಸರ್ಟಿಫಿಕೇಟ್ ನೀಡದಿದ್ದಕ್ಕೆ KNC ಬಳಿ ವಿದ್ಯಾರ್ಥಿಗಳ ಗಲಾಟೆ
ರಿಜಿಸ್ಟ್ರೇಷನ್ ಸರ್ಟಿಫಿಕೇಟ್ ನೀಡದಿದ್ದಕ್ಕೆ KNC ಬಳಿ ವಿದ್ಯಾರ್ಥಿಗಳ ಗಲಾಟೆ
ವಂಟಮೂರಿ ಘಟನೆ ಅವಮಾನದಿಂದ ತಲೆ ತಗ್ಗಿಸುವಂತೆ ಮಾಡಿದೆ:ಲಕ್ಷ್ಮಿ ಹೆಬ್ಬಾಳ್ಕರ್
ವಂಟಮೂರಿ ಘಟನೆ ಅವಮಾನದಿಂದ ತಲೆ ತಗ್ಗಿಸುವಂತೆ ಮಾಡಿದೆ:ಲಕ್ಷ್ಮಿ ಹೆಬ್ಬಾಳ್ಕರ್
ಬರದ ಬಗ್ಗೆ ಚರ್ಚಿಸದೆ ಪ್ರತಿಭಟಿಸುವ ಶಾಸಕರಿಗೆ ನಾಚಿಕೆಯಾಗಬೇಕು: ಸಿಎಂ
ಬರದ ಬಗ್ಗೆ ಚರ್ಚಿಸದೆ ಪ್ರತಿಭಟಿಸುವ ಶಾಸಕರಿಗೆ ನಾಚಿಕೆಯಾಗಬೇಕು: ಸಿಎಂ
ಬರ ಮತ್ತು ಉತ್ತರ ಕರ್ನಾಟಕ ಚರ್ಚೆಗೆ ಅಧಿವೇಶನ ವಾರ ವಿಸ್ತರಿಸಲಿ: ಯತ್ನಾಳ್
ಬರ ಮತ್ತು ಉತ್ತರ ಕರ್ನಾಟಕ ಚರ್ಚೆಗೆ ಅಧಿವೇಶನ ವಾರ ವಿಸ್ತರಿಸಲಿ: ಯತ್ನಾಳ್
ಸ್ಪೀಕರ್ ಗೆ ಎಲ್ಲ ನಮಸ್ಕಾರ್ ಸಾರ್ ಅನ್ನಬೇಕು ಅಂದರೆ ತಪ್ಪೇನು?ಜಮೀರ್ ಅಹ್ಮದ್
ಸ್ಪೀಕರ್ ಗೆ ಎಲ್ಲ ನಮಸ್ಕಾರ್ ಸಾರ್ ಅನ್ನಬೇಕು ಅಂದರೆ ತಪ್ಪೇನು?ಜಮೀರ್ ಅಹ್ಮದ್
ಸ್ಪೀಕರ್ ಖಾದರ್ ಹೇಳುವ ಮಾತು ಸದನದಲ್ಲಿರುವವರೆಲ್ಲರ ಮನಸ್ಸಿಗೆ ನಾಟುತ್ತದೆ
ಸ್ಪೀಕರ್ ಖಾದರ್ ಹೇಳುವ ಮಾತು ಸದನದಲ್ಲಿರುವವರೆಲ್ಲರ ಮನಸ್ಸಿಗೆ ನಾಟುತ್ತದೆ
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ