AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಕರ ಬೈಕ್​ ಅಪಘಾತ; ನಟನ 4 ತಪ್ಪುಗಳು ಬಟಾಬಯಲು: ಸಾಯಿ ಧರಮ್​ ತೇಜ್​ ಹೀಗೆ ಮಾಡಬಾರದಿತ್ತು

ಅಜಾಗರೂಕತೆಯಿಂದ ಸ್ಪೋರ್ಟ್ಸ್​ ಬೈಕ್​ ಓಡಿಸಿದ್ದಕ್ಕಾಗಿ ಪೊಲೀಸರು ಸಾಯಿ ಧರಮ್​ ತೇಜ್​ ವಿರುದ್ಧ ಕೇಸ್​ ದಾಖಲಿಸಿಕೊಂಡಿದ್ದಾರೆ. ಅದಕ್ಕೆ ಪೂರಕವಾದ ಸಾಕ್ಷಿಗಳನ್ನೂ ಕಲೆ ಹಾಕಿದ್ದಾರೆ.

ಭೀಕರ ಬೈಕ್​ ಅಪಘಾತ; ನಟನ 4 ತಪ್ಪುಗಳು ಬಟಾಬಯಲು: ಸಾಯಿ ಧರಮ್​ ತೇಜ್​ ಹೀಗೆ ಮಾಡಬಾರದಿತ್ತು
ಭೀಕರ ಬೈಕ್​ ಅಪಘಾತ; ನಟನ 4 ತಪ್ಪುಗಳು ಬಟಾಬಯಲು: ಸಾಯಿ ಧರಮ್​ ತೇಜ್​ ಹೀಗೆ ಮಾಡಬಾರದಿತ್ತು
TV9 Web
| Edited By: |

Updated on: Sep 12, 2021 | 9:41 AM

Share

ಮೆಗಾಸ್ಟಾರ್​ ಚಿರಂಜೀವಿ ಅವರ ಅಳಿಯ, ನಟ ಸಾಯಿ ಧರಮ್​ ತೇಜ್​ಗೆ ಶುಕ್ರವಾರ (ಸೆ.10) ರಾತ್ರಿ ಅಪಘಾತ ಸಂಭವಿಸಿತು. ಸದ್ಯ ಅವರಿಗೆ ಹೈದರಾಬಾದ್​ನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬೈಕ್​ ಸ್ಕಿಡ್​ ಆದ ಪರಿಣಾಮ ಈ ಅವಘಡ ಸಂಭವಿಸಿತು ಎಂದು ಹೇಳಲಾಗುತ್ತಿದೆ. ಸಾಯಿ ಧರಮ್​ ತೇಜ್​ ಅವರ ಆಕ್ಸಿಡೆಂಟ್​ನ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಟನಿಗೆ ಗಂಭೀರ ಗಾಯಗಳು ಆಗಿವೆಯಾದರೂ ಹೆಲ್ಮೆಟ್​ ಧರಿಸಿದ್ದರಿಂದ ಪ್ರಾಣಕ್ಕೆ ಅಪಾಯ ಆಗಿಲ್ಲ. ಒಟ್ಟಾರೆ ಪ್ರಕರಣದ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ತನಿಖೆ ವೇಳೆ ನಟನ 4 ತಪ್ಪುಗಳು ಬಟಾಬಯಲಾಗಿವೆ.

ಅಜಾಗರೂಕತೆಯಿಂದ ಸ್ಪೋರ್ಟ್ಸ್​ ಬೈಕ್​ ಓಡಿಸಿದ್ದಕ್ಕಾಗಿ ಪೊಲೀಸರು ಸಾಯಿ ಧರಮ್​ ತೇಜ್​ ವಿರುದ್ಧ ಕೇಸ್​ ದಾಖಲಿಸಿಕೊಂಡಿದ್ದಾರೆ. ಅದಕ್ಕೆ ಪೂರಕವಾದ ಸಾಕ್ಷಿಗಳನ್ನೂ ಕಲೆ ಹಾಕಿದ್ದಾರೆ. ಮೂಲಗಳ ಪ್ರಕಾರ ನಟನ ಕೆಲವು ತಪ್ಪುಗಳು ಬಹಿರಂಗ ಆಗಿವೆ. ಆ ತಪ್ಪುಗಳನ್ನು ಪಟ್ಟಿ ಮಾಡಲಾಗಿದೆ.

1. ಸಾಯಿ ಧರಮ್​ ತೇಜ್​ ಬಳಿ ದ್ವಿಚಕ್ರ ವಾಹನದ ಲೈಸೆನ್ಸ್​ ಇರಲಿಲ್ಲ! ಅವರು ಕೇವಲ ಲೈಟ್​ ಮೋಟರ್​ ವೆಹಿಕಲ್​ ಡ್ರೈವಿಂಗ್​ ಲೈಸೆನ್ಸ್​ ಹೊಂದಿದ್ದರು.

2. 102 ಕಿಲೋ ಮೀಟರ್​ ವೇಗದಲ್ಲಿ ಸಾಯಿ ಧರಮ್​ ತೇಜ್​ ಬೈಕ್​ ಓಡಿಸುತ್ತಿದ್ದರು. ಆಪಘಾತ ಸಂಭವಿಸಿದ ಕ್ಷಣದಲ್ಲಿ 72 ಕಿಮೀ ವೇಗದಲ್ಲಿ ಅವರ ಬೈಕ್​ ಚಲಿಸುತ್ತಿತ್ತು.

3. ತಮ್ಮ ಮುಂದೆ ಚಲಿಸುತ್ತಿದ್ದ ಆಟೋ ರಿಕ್ಷಾವನ್ನು ಓವರ್​ಟೇಕ್​ ಮಾಡಲು ಸಾಯಿ ಧರಮ್​ ತೇಜ್​ ಪ್ರಯತ್ನಿಸಿದ್ದರು. ರಾಂಗ್​ ಸೈಡ್​ನಿಂದ ಓವರ್​ ಟೇಕ್​ ಮಾಡುವಾಗ ಈ ಅಪಘಾತ ನಡೆದಿದೆ.

4. ಸಾಯಿ ಧರಮ್​ ತೇಜ್​ ಓಡಿಸುತ್ತಿದ್ದದ್ದು ಸೆಕೆಂಡ್​ ಹ್ಯಾಂಡ್​ ಬೈಕ್ ಆಗಿತ್ತು. ಈ ಬೈಕ್​ನ ರಿಜಿಸ್ಟ್ರೇಶನ್​ ಪ್ರಕ್ರಿಯೆ ಕೂಡ ಪೂರ್ಣಗೊಂಡಿರಲಿಲ್ಲ! ಎಲ್​ಬಿ ನಗರ್​ ಮೂಲದ ಅನಿಲ್​ ಕುಮಾರ್​ ಎಂಬುವವರಿಂದ ಈ ಬೈಕ್​ ಖರೀದಿಸಲಾಗಿತ್ತು.

ಈ ಹಿಂದೆ ಕೂಡ ಅತಿವೇಗವಾಗಿ ಬೈಕ್​ ಓಡಿಸಿದ್ದಕ್ಕೆ ಸಾಯಿ ಧರಮ್​ ತೇಜ್​ಗೆ ಪೊಲೀಸರ ದಂಡ ವಿಧಿಸಿದ್ದರು. ಅದನ್ನು ಅವರು ಪಾವತಿ ಮಾಡಿರಲಿಲ್ಲ. ಈಗ ಅಪಘಾತ ನಡೆದ ಬಳಿಕ ಅವರ ಅಭಿಮಾನಿಯೊಬ್ಬರು ದಂಡ ಪಾವತಿ ಮಾಡಿದ್ದಾರೆ ಎಂದು ವರದಿ ಆಗಿದೆ. ಸಾಯಿ ಧರಮ್​ ತೇಜ್​ ಅವರಿಗೆ ಬಲಗಣ್ಣು, ಎದೆ, ಕುತ್ತಿಗೆ, ಮತ್ತು ಹೊಟ್ಟೆ ಭಾಗಕ್ಕೆ ತೀವ್ರ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಅವರು​ ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದಾರೆ. ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಅಭಿಮಾನಿಗಳು, ಸೆಲೆಬ್ರಿಟಿಗಳು ಮತ್ತು ಆಪ್ತರು ಪ್ರಾರ್ಥಿಸುತ್ತಿದ್ದಾರೆ.

ಇದನ್ನೂ ಓದಿ:

ಸಾಯಿ ಧರಮ್​ ತೇಜ್​ ಬೈಕ್​ ಅಪಘಾತ: ಅಪಶಕುನ ನುಡಿದ ಹಿರಿಯ ನಟನ ವಿರುದ್ಧ ಭಾರಿ ಆಕ್ರೋಶ

ಡಿಕೆ ರವಿ ಬಗ್ಗೆ 2 ದಿನದ ಹಿಂದೆ ಮಾತಾಡಿದ್ದ ಸಾಯಿ ಧರಮ್​ ತೇಜ್​ಗೆ ಭೀಕರ ಅಪಘಾತ; ಏನಿದು ಕಾಕತಾಳೀಯ?

Follow Us
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!