AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಕರ ಬೈಕ್​ ಅಪಘಾತ; ನಟನ 4 ತಪ್ಪುಗಳು ಬಟಾಬಯಲು: ಸಾಯಿ ಧರಮ್​ ತೇಜ್​ ಹೀಗೆ ಮಾಡಬಾರದಿತ್ತು

ಅಜಾಗರೂಕತೆಯಿಂದ ಸ್ಪೋರ್ಟ್ಸ್​ ಬೈಕ್​ ಓಡಿಸಿದ್ದಕ್ಕಾಗಿ ಪೊಲೀಸರು ಸಾಯಿ ಧರಮ್​ ತೇಜ್​ ವಿರುದ್ಧ ಕೇಸ್​ ದಾಖಲಿಸಿಕೊಂಡಿದ್ದಾರೆ. ಅದಕ್ಕೆ ಪೂರಕವಾದ ಸಾಕ್ಷಿಗಳನ್ನೂ ಕಲೆ ಹಾಕಿದ್ದಾರೆ.

ಭೀಕರ ಬೈಕ್​ ಅಪಘಾತ; ನಟನ 4 ತಪ್ಪುಗಳು ಬಟಾಬಯಲು: ಸಾಯಿ ಧರಮ್​ ತೇಜ್​ ಹೀಗೆ ಮಾಡಬಾರದಿತ್ತು
ಭೀಕರ ಬೈಕ್​ ಅಪಘಾತ; ನಟನ 4 ತಪ್ಪುಗಳು ಬಟಾಬಯಲು: ಸಾಯಿ ಧರಮ್​ ತೇಜ್​ ಹೀಗೆ ಮಾಡಬಾರದಿತ್ತು
TV9 Web
| Edited By: |

Updated on: Sep 12, 2021 | 9:41 AM

Share

ಮೆಗಾಸ್ಟಾರ್​ ಚಿರಂಜೀವಿ ಅವರ ಅಳಿಯ, ನಟ ಸಾಯಿ ಧರಮ್​ ತೇಜ್​ಗೆ ಶುಕ್ರವಾರ (ಸೆ.10) ರಾತ್ರಿ ಅಪಘಾತ ಸಂಭವಿಸಿತು. ಸದ್ಯ ಅವರಿಗೆ ಹೈದರಾಬಾದ್​ನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬೈಕ್​ ಸ್ಕಿಡ್​ ಆದ ಪರಿಣಾಮ ಈ ಅವಘಡ ಸಂಭವಿಸಿತು ಎಂದು ಹೇಳಲಾಗುತ್ತಿದೆ. ಸಾಯಿ ಧರಮ್​ ತೇಜ್​ ಅವರ ಆಕ್ಸಿಡೆಂಟ್​ನ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಟನಿಗೆ ಗಂಭೀರ ಗಾಯಗಳು ಆಗಿವೆಯಾದರೂ ಹೆಲ್ಮೆಟ್​ ಧರಿಸಿದ್ದರಿಂದ ಪ್ರಾಣಕ್ಕೆ ಅಪಾಯ ಆಗಿಲ್ಲ. ಒಟ್ಟಾರೆ ಪ್ರಕರಣದ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ತನಿಖೆ ವೇಳೆ ನಟನ 4 ತಪ್ಪುಗಳು ಬಟಾಬಯಲಾಗಿವೆ.

ಅಜಾಗರೂಕತೆಯಿಂದ ಸ್ಪೋರ್ಟ್ಸ್​ ಬೈಕ್​ ಓಡಿಸಿದ್ದಕ್ಕಾಗಿ ಪೊಲೀಸರು ಸಾಯಿ ಧರಮ್​ ತೇಜ್​ ವಿರುದ್ಧ ಕೇಸ್​ ದಾಖಲಿಸಿಕೊಂಡಿದ್ದಾರೆ. ಅದಕ್ಕೆ ಪೂರಕವಾದ ಸಾಕ್ಷಿಗಳನ್ನೂ ಕಲೆ ಹಾಕಿದ್ದಾರೆ. ಮೂಲಗಳ ಪ್ರಕಾರ ನಟನ ಕೆಲವು ತಪ್ಪುಗಳು ಬಹಿರಂಗ ಆಗಿವೆ. ಆ ತಪ್ಪುಗಳನ್ನು ಪಟ್ಟಿ ಮಾಡಲಾಗಿದೆ.

1. ಸಾಯಿ ಧರಮ್​ ತೇಜ್​ ಬಳಿ ದ್ವಿಚಕ್ರ ವಾಹನದ ಲೈಸೆನ್ಸ್​ ಇರಲಿಲ್ಲ! ಅವರು ಕೇವಲ ಲೈಟ್​ ಮೋಟರ್​ ವೆಹಿಕಲ್​ ಡ್ರೈವಿಂಗ್​ ಲೈಸೆನ್ಸ್​ ಹೊಂದಿದ್ದರು.

2. 102 ಕಿಲೋ ಮೀಟರ್​ ವೇಗದಲ್ಲಿ ಸಾಯಿ ಧರಮ್​ ತೇಜ್​ ಬೈಕ್​ ಓಡಿಸುತ್ತಿದ್ದರು. ಆಪಘಾತ ಸಂಭವಿಸಿದ ಕ್ಷಣದಲ್ಲಿ 72 ಕಿಮೀ ವೇಗದಲ್ಲಿ ಅವರ ಬೈಕ್​ ಚಲಿಸುತ್ತಿತ್ತು.

3. ತಮ್ಮ ಮುಂದೆ ಚಲಿಸುತ್ತಿದ್ದ ಆಟೋ ರಿಕ್ಷಾವನ್ನು ಓವರ್​ಟೇಕ್​ ಮಾಡಲು ಸಾಯಿ ಧರಮ್​ ತೇಜ್​ ಪ್ರಯತ್ನಿಸಿದ್ದರು. ರಾಂಗ್​ ಸೈಡ್​ನಿಂದ ಓವರ್​ ಟೇಕ್​ ಮಾಡುವಾಗ ಈ ಅಪಘಾತ ನಡೆದಿದೆ.

4. ಸಾಯಿ ಧರಮ್​ ತೇಜ್​ ಓಡಿಸುತ್ತಿದ್ದದ್ದು ಸೆಕೆಂಡ್​ ಹ್ಯಾಂಡ್​ ಬೈಕ್ ಆಗಿತ್ತು. ಈ ಬೈಕ್​ನ ರಿಜಿಸ್ಟ್ರೇಶನ್​ ಪ್ರಕ್ರಿಯೆ ಕೂಡ ಪೂರ್ಣಗೊಂಡಿರಲಿಲ್ಲ! ಎಲ್​ಬಿ ನಗರ್​ ಮೂಲದ ಅನಿಲ್​ ಕುಮಾರ್​ ಎಂಬುವವರಿಂದ ಈ ಬೈಕ್​ ಖರೀದಿಸಲಾಗಿತ್ತು.

ಈ ಹಿಂದೆ ಕೂಡ ಅತಿವೇಗವಾಗಿ ಬೈಕ್​ ಓಡಿಸಿದ್ದಕ್ಕೆ ಸಾಯಿ ಧರಮ್​ ತೇಜ್​ಗೆ ಪೊಲೀಸರ ದಂಡ ವಿಧಿಸಿದ್ದರು. ಅದನ್ನು ಅವರು ಪಾವತಿ ಮಾಡಿರಲಿಲ್ಲ. ಈಗ ಅಪಘಾತ ನಡೆದ ಬಳಿಕ ಅವರ ಅಭಿಮಾನಿಯೊಬ್ಬರು ದಂಡ ಪಾವತಿ ಮಾಡಿದ್ದಾರೆ ಎಂದು ವರದಿ ಆಗಿದೆ. ಸಾಯಿ ಧರಮ್​ ತೇಜ್​ ಅವರಿಗೆ ಬಲಗಣ್ಣು, ಎದೆ, ಕುತ್ತಿಗೆ, ಮತ್ತು ಹೊಟ್ಟೆ ಭಾಗಕ್ಕೆ ತೀವ್ರ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಅವರು​ ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದಾರೆ. ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಅಭಿಮಾನಿಗಳು, ಸೆಲೆಬ್ರಿಟಿಗಳು ಮತ್ತು ಆಪ್ತರು ಪ್ರಾರ್ಥಿಸುತ್ತಿದ್ದಾರೆ.

ಇದನ್ನೂ ಓದಿ:

ಸಾಯಿ ಧರಮ್​ ತೇಜ್​ ಬೈಕ್​ ಅಪಘಾತ: ಅಪಶಕುನ ನುಡಿದ ಹಿರಿಯ ನಟನ ವಿರುದ್ಧ ಭಾರಿ ಆಕ್ರೋಶ

ಡಿಕೆ ರವಿ ಬಗ್ಗೆ 2 ದಿನದ ಹಿಂದೆ ಮಾತಾಡಿದ್ದ ಸಾಯಿ ಧರಮ್​ ತೇಜ್​ಗೆ ಭೀಕರ ಅಪಘಾತ; ಏನಿದು ಕಾಕತಾಳೀಯ?

Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು