AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ರವಿ ಬಗ್ಗೆ 2 ದಿನದ ಹಿಂದೆ ಮಾತಾಡಿದ್ದ ಸಾಯಿ ಧರಮ್​ ತೇಜ್​ಗೆ ಭೀಕರ ಅಪಘಾತ; ಏನಿದು ಕಾಕತಾಳೀಯ?

Sai Dharam Tej Bike Accident: ‘ಥ್ಯಾಂಕ್​ ಯೂ ಕಲೆಕ್ಟರ್​ ಡಿಕೆ ರವಿ’ ಎಂದು ಸಾಯಿ ಧರಮ್​ ತೇಜ್​ ಅವರು ಒಂದು ವಿಡಿಯೋವನ್ನು ಶೇರ್​ ಮಾಡಿಕೊಂಡಿದ್ದರು. ಟಾಲಿವುಡ್​ನ ಈ ಹೀರೋಗೂ ಕರುನಾಡಿನ ದಕ್ಷ ಅಧಿಕಾರಿಗೂ ಏನು ಸಂಬಂಧ?

ಡಿಕೆ ರವಿ ಬಗ್ಗೆ 2 ದಿನದ ಹಿಂದೆ ಮಾತಾಡಿದ್ದ ಸಾಯಿ ಧರಮ್​ ತೇಜ್​ಗೆ ಭೀಕರ ಅಪಘಾತ; ಏನಿದು ಕಾಕತಾಳೀಯ?
ಡಿಕೆ ರವಿ, ಸಾಯಿ ಧರಮ್​ ತೇಜ್​
TV9 Web
| Edited By: |

Updated on: Sep 11, 2021 | 12:44 PM

Share

ಟಾಲಿವುಡ್​ನ ಜನಪ್ರಿಯ ನಟ ಸಾಯಿ ಧರಮ್​ ತೇಜ್​ ಅವರು ಬೈಕ್​ ಅಪಘಾತದಿಂದ ಗಾಯಗೊಂಡಿರುವುದು ಬೇಸರದ ಸಂಗತಿ. ಸದ್ಯ ಅವರಿಗೆ ಹೈದರಾಬಾದ್​ನ ಅಪೋಲೋ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ. ಶುಕ್ರವಾರ (ಸೆ.10) ರಾತ್ರಿ 8 ಗಂಟೆಗೆ ಅತಿ ವೇಗದಿಂದ ಸ್ಪೋರ್ಟ್ಸ್​ ಬೈಕ್​ ಓಡಿಸಿದ್ದೇ ಈ ಅವಘಡಕ್ಕೆ ಕಾರಣ ಎನ್ನಲಾಗುತ್ತಿದೆ. ಅಪಘಾತಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಚ್ಚರಿ ಎಂದರೆ ಕೇವಲ ಎರಡು ದಿನಗಳ ಹಿಂದೆ ದಿವಂಗತ ಐಎಎಸ್​ ಅಧಿಕಾರಿ ಡಿಕೆ ರವಿ ಬಗ್ಗೆ ಸಾಯಿ ಧರಮ್​ ತೇಜ್​ ಮಾತನಾಡಿದ್ದರು. ಆದರೆ ಇಂದು ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಮಲಗಿದ್ದಾರೆ!

ಕರ್ನಾಟಕದಲ್ಲಿ ಸೇವೆ ಸಲ್ಲಿಸಿ ಜನಮನ ಗೆದ್ದಿದ್ದ ಐಎಎಸ್​ ಅಧಿಕಾರಿ ಡಿಕೆ ರವಿ ಅವರಿಗೂ ಟಾಲಿವುಡ್​ನ ಹೀರೋ ಸಾಯಿ ಧರಮ್​ ತೇಜ್​ಗೂ ಏನು ಸಂಬಂಧ? ‘ರಿಪಬ್ಲಿಕ್’ ಸಿನಿಮಾದಲ್ಲಿ ಸಾಯಿ ಧರಮ್​ ತೇಜ್​ ಐಎಎಸ್​ ಅಧಿಕಾರಿಯ ಪಾತ್ರ ಮಾಡಿದ್ದಾರೆ. ಸದ್ಯ ಆ ಚಿತ್ರದ ಕೆಲಸಗಳು ಬಿರುಸಿನಿಂದ ಸಾಗುತ್ತಿವೆ. ಆ ಪ್ರಯುಕ್ತ ನಿಜಜೀವನದಲ್ಲಿ ಸಾಧನೆ ಮಾಡಿದ ಐಎಎಸ್​ ಅಧಿಕಾರಿಗಳಿಗೆ ಚಿತ್ರತಂಡ ನಮನ ಸಲ್ಲಿಸುತ್ತಿದೆ. ಇದರ ಮೊದಲ ಭಾಗವಾಗಿ ಡಿಕೆ ರವಿ ಅವರ ಜೀವನ ಮತ್ತು ಸಾಧನೆಗಳನ್ನು ವಿವರಿಸುವ ವಿಡಿಯೋವನ್ನು ಕೇವಲ 2 ದಿನಗಳ ಹಿಂದೆ ಸಾಯಿ ಧರಮ್​ ತೇಜ್​ ಹಂಚಿಕೊಂಡಿದ್ದರು.

‘ಥ್ಯಾಂಕ್​ ಯೂ ಕಲೆಕ್ಟರ್​ ಡಿಕೆ ರವಿ’ ಎಂಬ ಕ್ಯಾಪ್ಷನ್​ ಜೊತೆ ಈ ವಿಡಿಯೋವನ್ನು ಸಾಯಿ ಧರಮ್​ ತೇಜ್​ ಶೇರ್​ ಮಾಡಿಕೊಂಡಿದ್ದರು. ಅದರಲ್ಲಿ ಡಿಕೆ ರವಿ ಅವರ ಅಪರೂಪದ ಮಾತುಗಳು ಇವೆ. ಅವರ ದಿಟ್ಟತನ ಮತ್ತು ಸಾಧನೆಗಳ ಬಗ್ಗೆ ಮಾಹಿತಿ ಇದೆ. ಡಿವಿ ರವಿ ಅವರನ್ನು ಧೀರ ಯೋಧ ಎಂದು ಸಾಯಿ ಧರಮ್​ ತೇಜ್ ಬಣ್ಣಿಸಿದ್ದರು. ಆ ಮೂಲಕ ಅವರು ಕರುನಾಡಿನ ದಕ್ಷ ಅಧಿಕಾರಿಗೆ ನಮನ ಸಲ್ಲಿಸಿದ್ದರು. ಅದಾಗಿ ಎರಡು ದಿನ ಕಳೆಯುವುದರೊಳಗೆ ಅವರು ಭೀಕರ ರಸ್ತೆ ಅಪಘಾತಕ್ಕೆ ಒಳಗಾಗಿರುವುದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

ಹೆಲ್ಮೆಟ್​ ಧರಿಸಿದ್ದರಿಂದ ಸಾಯಿ ಧರಮ್​ ತೇಜ್​ ಪ್ರಾಣಕ್ಕೆ ಅಪಾಯವಾಗಿಲ್ಲ ಎಂದು ಹೇಳಲಾಗುತ್ತಿದೆ. ಐಸಿಯುನಲ್ಲಿ ಅವರು ಚಿಕಿತ್ಸೆ ನೀಡಲಾಗುತ್ತಿದೆ. ಪವನ್​ ಕಲ್ಯಾಣ್​, ಮೆಗಾ ಸ್ಟಾರ್​ ಚಿರಂಜೀವಿ, ಅಲ್ಲು ಅರವಿಂದ್​ ಮುಂತಾದವರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ಇದನ್ನೂ ಓದಿ:

ಚಿರಂಜೀವಿ ಅಳಿಯ ಸಾಯಿ ಧರಮ್​ ತೇಜ್​ ಆಕ್ಸಿಡೆಂಟ್​ನ ಸಿಸಿಟಿವಿ ದೃಶ್ಯ; ಹೆಲ್ಮೆಟ್​ನಿಂದ ಬಚಾವ್​

Sai Dharam Tej: ಪ್ರಜ್ಞಾಹೀನ ಸ್ಥಿತಿಯಲ್ಲಿ ನಟ ಸಾಯಿ ಧರಮ್​ ತೇಜ್​; ಆದರೆ ಆಪ್ತರು ಹೇಳೋದೇ ಬೇರೆ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ