AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ರವಿ ಬಗ್ಗೆ 2 ದಿನದ ಹಿಂದೆ ಮಾತಾಡಿದ್ದ ಸಾಯಿ ಧರಮ್​ ತೇಜ್​ಗೆ ಭೀಕರ ಅಪಘಾತ; ಏನಿದು ಕಾಕತಾಳೀಯ?

Sai Dharam Tej Bike Accident: ‘ಥ್ಯಾಂಕ್​ ಯೂ ಕಲೆಕ್ಟರ್​ ಡಿಕೆ ರವಿ’ ಎಂದು ಸಾಯಿ ಧರಮ್​ ತೇಜ್​ ಅವರು ಒಂದು ವಿಡಿಯೋವನ್ನು ಶೇರ್​ ಮಾಡಿಕೊಂಡಿದ್ದರು. ಟಾಲಿವುಡ್​ನ ಈ ಹೀರೋಗೂ ಕರುನಾಡಿನ ದಕ್ಷ ಅಧಿಕಾರಿಗೂ ಏನು ಸಂಬಂಧ?

ಡಿಕೆ ರವಿ ಬಗ್ಗೆ 2 ದಿನದ ಹಿಂದೆ ಮಾತಾಡಿದ್ದ ಸಾಯಿ ಧರಮ್​ ತೇಜ್​ಗೆ ಭೀಕರ ಅಪಘಾತ; ಏನಿದು ಕಾಕತಾಳೀಯ?
ಡಿಕೆ ರವಿ, ಸಾಯಿ ಧರಮ್​ ತೇಜ್​
TV9 Web
| Edited By: |

Updated on: Sep 11, 2021 | 12:44 PM

Share

ಟಾಲಿವುಡ್​ನ ಜನಪ್ರಿಯ ನಟ ಸಾಯಿ ಧರಮ್​ ತೇಜ್​ ಅವರು ಬೈಕ್​ ಅಪಘಾತದಿಂದ ಗಾಯಗೊಂಡಿರುವುದು ಬೇಸರದ ಸಂಗತಿ. ಸದ್ಯ ಅವರಿಗೆ ಹೈದರಾಬಾದ್​ನ ಅಪೋಲೋ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ. ಶುಕ್ರವಾರ (ಸೆ.10) ರಾತ್ರಿ 8 ಗಂಟೆಗೆ ಅತಿ ವೇಗದಿಂದ ಸ್ಪೋರ್ಟ್ಸ್​ ಬೈಕ್​ ಓಡಿಸಿದ್ದೇ ಈ ಅವಘಡಕ್ಕೆ ಕಾರಣ ಎನ್ನಲಾಗುತ್ತಿದೆ. ಅಪಘಾತಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಚ್ಚರಿ ಎಂದರೆ ಕೇವಲ ಎರಡು ದಿನಗಳ ಹಿಂದೆ ದಿವಂಗತ ಐಎಎಸ್​ ಅಧಿಕಾರಿ ಡಿಕೆ ರವಿ ಬಗ್ಗೆ ಸಾಯಿ ಧರಮ್​ ತೇಜ್​ ಮಾತನಾಡಿದ್ದರು. ಆದರೆ ಇಂದು ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಮಲಗಿದ್ದಾರೆ!

ಕರ್ನಾಟಕದಲ್ಲಿ ಸೇವೆ ಸಲ್ಲಿಸಿ ಜನಮನ ಗೆದ್ದಿದ್ದ ಐಎಎಸ್​ ಅಧಿಕಾರಿ ಡಿಕೆ ರವಿ ಅವರಿಗೂ ಟಾಲಿವುಡ್​ನ ಹೀರೋ ಸಾಯಿ ಧರಮ್​ ತೇಜ್​ಗೂ ಏನು ಸಂಬಂಧ? ‘ರಿಪಬ್ಲಿಕ್’ ಸಿನಿಮಾದಲ್ಲಿ ಸಾಯಿ ಧರಮ್​ ತೇಜ್​ ಐಎಎಸ್​ ಅಧಿಕಾರಿಯ ಪಾತ್ರ ಮಾಡಿದ್ದಾರೆ. ಸದ್ಯ ಆ ಚಿತ್ರದ ಕೆಲಸಗಳು ಬಿರುಸಿನಿಂದ ಸಾಗುತ್ತಿವೆ. ಆ ಪ್ರಯುಕ್ತ ನಿಜಜೀವನದಲ್ಲಿ ಸಾಧನೆ ಮಾಡಿದ ಐಎಎಸ್​ ಅಧಿಕಾರಿಗಳಿಗೆ ಚಿತ್ರತಂಡ ನಮನ ಸಲ್ಲಿಸುತ್ತಿದೆ. ಇದರ ಮೊದಲ ಭಾಗವಾಗಿ ಡಿಕೆ ರವಿ ಅವರ ಜೀವನ ಮತ್ತು ಸಾಧನೆಗಳನ್ನು ವಿವರಿಸುವ ವಿಡಿಯೋವನ್ನು ಕೇವಲ 2 ದಿನಗಳ ಹಿಂದೆ ಸಾಯಿ ಧರಮ್​ ತೇಜ್​ ಹಂಚಿಕೊಂಡಿದ್ದರು.

‘ಥ್ಯಾಂಕ್​ ಯೂ ಕಲೆಕ್ಟರ್​ ಡಿಕೆ ರವಿ’ ಎಂಬ ಕ್ಯಾಪ್ಷನ್​ ಜೊತೆ ಈ ವಿಡಿಯೋವನ್ನು ಸಾಯಿ ಧರಮ್​ ತೇಜ್​ ಶೇರ್​ ಮಾಡಿಕೊಂಡಿದ್ದರು. ಅದರಲ್ಲಿ ಡಿಕೆ ರವಿ ಅವರ ಅಪರೂಪದ ಮಾತುಗಳು ಇವೆ. ಅವರ ದಿಟ್ಟತನ ಮತ್ತು ಸಾಧನೆಗಳ ಬಗ್ಗೆ ಮಾಹಿತಿ ಇದೆ. ಡಿವಿ ರವಿ ಅವರನ್ನು ಧೀರ ಯೋಧ ಎಂದು ಸಾಯಿ ಧರಮ್​ ತೇಜ್ ಬಣ್ಣಿಸಿದ್ದರು. ಆ ಮೂಲಕ ಅವರು ಕರುನಾಡಿನ ದಕ್ಷ ಅಧಿಕಾರಿಗೆ ನಮನ ಸಲ್ಲಿಸಿದ್ದರು. ಅದಾಗಿ ಎರಡು ದಿನ ಕಳೆಯುವುದರೊಳಗೆ ಅವರು ಭೀಕರ ರಸ್ತೆ ಅಪಘಾತಕ್ಕೆ ಒಳಗಾಗಿರುವುದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

ಹೆಲ್ಮೆಟ್​ ಧರಿಸಿದ್ದರಿಂದ ಸಾಯಿ ಧರಮ್​ ತೇಜ್​ ಪ್ರಾಣಕ್ಕೆ ಅಪಾಯವಾಗಿಲ್ಲ ಎಂದು ಹೇಳಲಾಗುತ್ತಿದೆ. ಐಸಿಯುನಲ್ಲಿ ಅವರು ಚಿಕಿತ್ಸೆ ನೀಡಲಾಗುತ್ತಿದೆ. ಪವನ್​ ಕಲ್ಯಾಣ್​, ಮೆಗಾ ಸ್ಟಾರ್​ ಚಿರಂಜೀವಿ, ಅಲ್ಲು ಅರವಿಂದ್​ ಮುಂತಾದವರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ಇದನ್ನೂ ಓದಿ:

ಚಿರಂಜೀವಿ ಅಳಿಯ ಸಾಯಿ ಧರಮ್​ ತೇಜ್​ ಆಕ್ಸಿಡೆಂಟ್​ನ ಸಿಸಿಟಿವಿ ದೃಶ್ಯ; ಹೆಲ್ಮೆಟ್​ನಿಂದ ಬಚಾವ್​

Sai Dharam Tej: ಪ್ರಜ್ಞಾಹೀನ ಸ್ಥಿತಿಯಲ್ಲಿ ನಟ ಸಾಯಿ ಧರಮ್​ ತೇಜ್​; ಆದರೆ ಆಪ್ತರು ಹೇಳೋದೇ ಬೇರೆ

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ