AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಾಯಿ ಧರಮ್​ ತೇಜ್​ಗೆ ಪುನರ್​ಜನ್ಮ’: ಅಪಘಾತದಲ್ಲಿ ಬದುಕಿಬಂದ ಅಳಿಯನ ಬಗ್ಗೆ ಚಿರಂಜೀವಿ ಮಾತು

ವಿಶೇಷವೆಂದರೆ ಇಂದು (ಅ.15) ಸಾಯಿ ಧರಮ್​ ತೇಜ್​ ಜನ್ಮದಿನ. ಹಾಗಾಗಿ ಎಲ್ಲರೂ ಅವರಿಗೆ ಶುಭಾಶಯ ಕೋರುತ್ತಿದ್ದಾರೆ. ಚಿರಂಜೀವಿ ಕೂಡ ಬರ್ತ್​ಡೇ ವಿಶ್​ ಮಾಡಿದ್ದಾರೆ.

‘ಸಾಯಿ ಧರಮ್​ ತೇಜ್​ಗೆ ಪುನರ್​ಜನ್ಮ’: ಅಪಘಾತದಲ್ಲಿ ಬದುಕಿಬಂದ ಅಳಿಯನ ಬಗ್ಗೆ ಚಿರಂಜೀವಿ ಮಾತು
ಚಿರಂಜೀವಿ, ಸಾಯಿ ಧರಮ್​ ತೇಜ್​
TV9 Web
| Edited By: |

Updated on: Oct 15, 2021 | 3:58 PM

Share

ನಟ ಸಾಯಿ ಧರಮ್​ ತೇಜ್​ ಅಭಿಮಾನಿಗಳು ಈಗ ನಿಟ್ಟುಸಿರು ಬಿಟ್ಟಿದ್ದಾರೆ. ಸೆ.10ರಂದು ಭೀಕರ ಬೈಕ್​ ಅಪಘಾತಕ್ಕೆ ಒಳಗಾಗಿದ್ದ ಸಾಯಿ ಧರಮ್​ ತೇಜ್​ ಅವರು ಮಾರಣಾಂತಿಕವಾಗಿ ಗಾಯಗೊಂಡಿದ್ದರು. ಆದರೆ ಈಗ ಅವರು ಆಸ್ಪತ್ರೆಯಿಂದ ಡಿಸ್​ಜಾರ್ಜ್​ ಆಗಿದ್ದಾರೆ. ವಿಜಯ ದಶಮಿ ಹಬ್ಬದ ಪ್ರಯುಕ್ತ ಅವರು ಸಂಪೂರ್ಣ ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಈ ಬಗ್ಗೆ ಅವರ ಮಾವ, ‘ಮೆಗಾ ಸ್ಟಾರ್​’ ಚಿರಂಜೀವಿ ಅವರು ಟ್ವೀಟ್​ ಮೂಲಕ ಸಿಹಿ ಸುದ್ದಿ ನೀಡಿದ್ದಾರೆ.

‘ಈ ಬಾರಿ ವಿಜಯ ದಶಮಿಯ ವಿಶೇಷ ಏನೆಂದರೆ, ಸಾಯಿ ಧರಮ್​ ತೇಜ್​ ಸಂಪೂರ್ಣ ಗುಣಮುಖರಾಗಿ ಮನೆಗೆ ಬರುತ್ತಿದ್ದಾರೆ. ಭೀಕರ ಬೈಕ್​ ಅಪಘಾತದಲ್ಲಿ ಅವರು ಬದುಕಿ ಬಂದಿದ್ದಾರೆ. ಇದು ನಮ್ಮೆಲ್ಲರಿಗೂ ಖುಷಿ ನೀಡಿದೆ. ಅವರಿಗೆ ಇದು ಪುನರ್ಜನ್ಮ’ ಎಂದು ಚಿರಂಜೀವಿ ಟ್ವೀಟ್​ ಮಾಡಿದ್ದಾರೆ.

ವಿಶೇಷವೆಂದರೆ ಇಂದು (ಅ.15) ಸಾಯಿ ಧರಮ್​ ತೇಜ್​ ಜನ್ಮದಿನ. ಹಾಗಾಗಿ ಎಲ್ಲರೂ ಅವರಿಗೆ ಶುಭಾಶಯ ಕೋರುತ್ತಿದ್ದಾರೆ. ಚಿರಂಜೀವಿ ಕೂಡ ಬರ್ತ್​ಡೇ ವಿಶ್​ ಮಾಡಿದ್ದಾರೆ. ಬೈಕ್​ ಅಪಘಾತದ ಬಳಿಕ ಒಂದು ತಿಂಗಳಿಗೂ ಹೆಚ್ಚು ದಿನಗಳ ಕಾಲ ಸಾಯಿ ಧರಮ್​ ತೇಜ್​ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ಹಲವು ದಿನಗಳ ಕಾಲ ಅವರು ಕೋಮಾದಲ್ಲಿದ್ದರು.

ಸಾಯಿ ಧರಮ್​ ತೇಜ್​ ನಟಿಸಿದ್ದ ‘ರಿಪಬ್ಲಿಕ್​’ ಚಿತ್ರ ಅ.1ರಂದು ಚಿತ್ರಮಂದಿರಗಳಲ್ಲಿ ತೆರೆಕಂಡಿತ್ತು. ಆಗಲೂ ಅವರು ಕೋಮಾದಲ್ಲೇ ಇದ್ದರು. ಅವರ ಅನುಪಸ್ಥಿತಿಯಲ್ಲೇ ಸಿನಿಮಾ ಬಿಡುಗಡೆ ಆಗಿತ್ತು. ಆ ಚಿತ್ರದ ಪ್ರೀ-ರಿಲೀಸ್​ ಇವೆಂಟ್​ಗೆ ಬಂದಿದ್ದ ಪವನ್​ ಕಲ್ಯಾಣ್​ ಅವರು ಅಳಿಯನ ಹೆಲ್ತ್​ ಬಗ್ಗೆ ಅಪ್​ಡೇಟ್​ ನೀಡಿದ್ದರು. ಸಾಯಿ ಧರಮ್​ ತೇಜ್​ ಇನ್ನೂ ಕಣ್ಣು ಬಿಟ್ಟಿಲ್ಲ ಎಂದು ಅವರು ಹೇಳಿದ್ದರಿಂದ ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿತ್ತು. ಆದರೆ ಈಗ ಆ ಆತಂಕ ನಿವಾರಣೆ ಆಗಿದೆ.

ಅತಿಯಾದ ಸ್ಪೀಡ್​ನಲ್ಲಿ ಸ್ಪೋರ್ಟ್ಸ್​ ಬೈಕ್​ ಓಡಿಸಿದ್ದೇ ಈ ಅಪಘಾತಕ್ಕೆ ಕಾರಣ ಎಂದು ವರದಿ ಆಗಿತ್ತು. ಆದರೆ ಸಾಯಿ ಧರಮ್​ ತೇಜ್​ ಕುಟುಂಬದವರು ಈ ಮಾತನ್ನು ಒಪ್ಪುತ್ತಿಲ್ಲ.

ಇದನ್ನೂ ಓದಿ:

ಭೀಕರ ಬೈಕ್​ ಅಪಘಾತ; ನಟನ 4 ತಪ್ಪುಗಳು ಬಟಾಬಯಲು: ಸಾಯಿ ಧರಮ್​ ತೇಜ್​ ಹೀಗೆ ಮಾಡಬಾರದಿತ್ತು

ಸಾಯಿ ಧರಮ್​ ತೇಜ್​ ಬೈಕ್​ ಅಪಘಾತ: ಅಪಶಕುನ ನುಡಿದ ಹಿರಿಯ ನಟನ ವಿರುದ್ಧ ಭಾರಿ ಆಕ್ರೋಶ

Follow Us
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​