AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಯಿ ಧರಮ್ ತೇಜ್​ಗೆ ಮತ್ತೆ ಸಂಕಷ್ಟ; ಹೈದರಾಬಾದ್​ ಪೊಲೀಸರಿಂದ ಬಂತು ನೋಟಿಸ್​

ಸ್ನೇಹಿತರಾದ ಸಂದೀಪ್​ ಕಿಷನ್​, ವೈವಾ ಹರ್ಷಾ ಎಂಬುವರೊಂದಿಗೆ​ ಸಾಯಿ ಧರಮ್​ ತೇಜ್ ಬೈಕ್​ ರೈಡಿಂಗ್​ಗೆ ತೆರಳಿದ್ದರು. ಸ್ಪೋರ್ಟ್ಸ್ ಬೈಕ್​ನಲ್ಲಿ ಬರುವಾಗ ಹೈದರಾಬಾದ್‌ನ ಮಾದಾಪುರ ಕೇಬಲ್ ಬ್ರಿಡ್ಜ್​​ ಬಳಿ ಅಪಘಾತ ಸಂಭವಿಸಿತ್ತು.

ಸಾಯಿ ಧರಮ್ ತೇಜ್​ಗೆ ಮತ್ತೆ ಸಂಕಷ್ಟ; ಹೈದರಾಬಾದ್​ ಪೊಲೀಸರಿಂದ ಬಂತು ನೋಟಿಸ್​
ಸಾಯಿ ಧರಮ್​ತೇಜ್​
TV9 Web
| Edited By: |

Updated on: Dec 29, 2021 | 6:00 AM

Share

ನಟ ಸಾಯಿ ಧರಮ್​ ತೇಜ್​​ ಬೈಕ್​ ಅಪಘಾತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಅತಿವೇಗ, ನಿರ್ಲಕ್ಷ್ಯ ಆರೋಪದಡಿ ಪೊಲೀಸರು ಪ್ರಕರಣವನ್ನು ದಾಖಲಿಸಿದ್ದರು. ಸೆಪ್ಟೆಂಬರ್​ 10ರಂದು ನಡೆದಿದ್ದ ಈ ಅಪಘಾತದಲ್ಲಿ ಸಾಯಿ ಧರಮ್​ ತೇಜ್​ ಅವರು ತೀವ್ರವಾಗಿ ಗಾಯಗೊಂಡಿದ್ದರು. ಒಂದು ತಿಂಗಳಿಗೂ ಅಧಿಕ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಅವರು ಮರಳಿದ್ದಾರೆ. ಈಗ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಪೊಲೀಸ್​ ಠಾಣೆಯಿಂದ ಅವರಿಗೆ ನೋಟಿಸ್ ಬಂದಿದೆ.

ನಟ ಸಾಯಿ ಧರಮ್​ ತೇಜ್ ಸಾಮಾನ್ಯವಾಗಿ ಬೈಕ್​ ರೈಡಿಂಗ್​ಗೆ ತೆರಳುತ್ತಿದ್ದರು. ಅದೇ ರೀತಿ ಸ್ನೇಹಿತರಾದ ಸಂದೀಪ್​ ಕಿಷನ್​, ವೈವಾ ಹರ್ಷಾ ಎಂಬುವರೊಂದಿಗೆ​ ಅವರು ಬೈಕ್​ ರೈಡಿಂಗ್​ಗೆ ತೆರಳಿದ್ದರು. ಸ್ಪೋರ್ಟ್ಸ್ ಬೈಕ್​ನಲ್ಲಿ ಬರುವಾಗ ಹೈದರಾಬಾದ್‌ನ ಮಾದಾಪುರ ಕೇಬಲ್ ಬ್ರಿಡ್ಜ್​​ ಬಳಿ ಅಪಘಾತ ಸಂಭವಿಸಿತ್ತು. ರಸ್ತೆ ಬದಿ ನಿರ್ಮಾಣ ಕಾರ್ಯ ನಡೆಯುತ್ತಿತ್ತು. ಹೀಗಾಗಿ, ಸ್ಥಳದಲ್ಲಿ ಬಿದ್ದಿದ್ದ ಮರಳಿನಿಂದ ಬೈಕ್​ ಸ್ಕಿಡ್​ ಆಗಿ ಅಪಘಾತ ಸಂಭವಿಸಿದೆ ಎನ್ನಲಾಗಿತ್ತು.

ಸಾಯಿ ಧರಮ್​ ತೇಜ್​ ಹೆಲ್ಮೆಟ್ ಧರಿಸಿದ್ದರು ಮತ್ತು ಆಲ್ಕೊಹಾಲ್ ಸೇವನೆ ಮಾಡಿರಲಿಲ್ಲ. ಆದರೆ, ಅವರ ವಿರುದ್ಧ ನಿರ್ಲಕ್ಷ್ಯದ ಆರೋಪ ಕೇಳಿ ಬಂದಿತ್ತು. ನಟ ಸಾಯಿ ಧರಮ್​ತೇಜ್​​ ಬೈಕ್​ ಅಪಘಾತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೈದರಾಬಾದ್​ನಲ್ಲಿ ಕೇಸ್ ದಾಖಲಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿ ಸಾಯಿ ಧರಮ್​ ತೇಜ್​ ಅವರು ಡ್ರೈವಿಂಗ್​ ಲೈಸೆನ್ಸ್​, ಆರ್​ಸಿ, ಇನ್ಸೂರೆನ್ಸ್​ ಮತ್ತು ಪೊಲ್ಯೂಷನ್​ ಕಾಗದಪತ್ರಗಳನ್ನು ನೀಡಬೇಕಿತ್ತು. ಆದರೆ, ಇದನ್ನು ಅವರು ನೀಡಿಲ್ಲ. ಈ ಬಗ್ಗೆ ಅವರು ಯಾವುದೇ ಮಾಹಿತಿ ಕೂಡ ನೀಡಿಲ್ಲ. ಹೀಗಾಗಿ, ಅವರ ಮೇಲೆ ಕೇಸ್​ ದಾಖಲಾಗಿದೆ. ‘ಇಲ್ಲಿಯವರೆಗೆ ನಾವು ನಟನಿಂದ ಯಾವುದೇ ಪ್ರತಿಕ್ರಿಯೆಯನ್ನು ಸ್ವೀಕರಿಸಿಲ್ಲ. ಈ ಬಗ್ಗೆ ಪ್ರತಿಕ್ರಿಯೆ ಬರದಿದ್ದರೆ ಚಾರ್ಜ್ ಶೀಟ್ ಸಲ್ಲಿಸಲಾಗುವುದು’ ಎಂದು ಕಮಿಷನರ್ ಸ್ಟೀಫನ್ ರವಿಂದ ಹೇಳಿದ್ದಾರೆ.

ಸಾಯಿ ಧರಮ್​ ತೇಜ್​ ಸ್ಥಿತಿ ಗಂಭೀರವಾಗಿತ್ತು. ಅವರು ಗುಣಮುಖರಾದ ನಂತರ ಟ್ವೀಟ್​ ಮಾಡಿದ್ದ ಚಿರಂಜೀವಿ, ‘ಈ ಬಾರಿ ವಿಜಯ ದಶಮಿಯ ವಿಶೇಷ ಏನೆಂದರೆ, ಸಾಯಿ ಧರಮ್​ ತೇಜ್​ ಸಂಪೂರ್ಣ ಗುಣಮುಖರಾಗಿ ಮನೆಗೆ ಬರುತ್ತಿದ್ದಾರೆ. ಭೀಕರ ಬೈಕ್​ ಅಪಘಾತದಲ್ಲಿ ಅವರು ಬದುಕಿ ಬಂದಿದ್ದಾರೆ. ಇದು ನಮ್ಮೆಲ್ಲರಿಗೂ ಖುಷಿ ನೀಡಿದೆ. ಅವರಿಗೆ ಇದು ಪುನರ್ಜನ್ಮ’ ಎಂದು ಹೇಳಿದ್ದರು.

ಇದನ್ನೂ ಓದಿ: ಆ್ಯಕ್ಸಿಡೆಂಟ್​ ಬಳಿಕ ಥಿಯೇಟರ್​ನಲ್ಲಿ ಸೋತು ಓಟಿಟಿಯಲ್ಲಿ ದಾಖಲೆ ಮಾಡಿದ ಸಾಯಿ ಧರಮ್​ ತೇಜ್​ ಚಿತ್ರ ‘ರಿಪಬ್ಲಿಕ್​’

ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ