AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಯಿ ಧರಮ್ ತೇಜ್​ಗೆ ಮತ್ತೆ ಸಂಕಷ್ಟ; ಹೈದರಾಬಾದ್​ ಪೊಲೀಸರಿಂದ ಬಂತು ನೋಟಿಸ್​

ಸ್ನೇಹಿತರಾದ ಸಂದೀಪ್​ ಕಿಷನ್​, ವೈವಾ ಹರ್ಷಾ ಎಂಬುವರೊಂದಿಗೆ​ ಸಾಯಿ ಧರಮ್​ ತೇಜ್ ಬೈಕ್​ ರೈಡಿಂಗ್​ಗೆ ತೆರಳಿದ್ದರು. ಸ್ಪೋರ್ಟ್ಸ್ ಬೈಕ್​ನಲ್ಲಿ ಬರುವಾಗ ಹೈದರಾಬಾದ್‌ನ ಮಾದಾಪುರ ಕೇಬಲ್ ಬ್ರಿಡ್ಜ್​​ ಬಳಿ ಅಪಘಾತ ಸಂಭವಿಸಿತ್ತು.

ಸಾಯಿ ಧರಮ್ ತೇಜ್​ಗೆ ಮತ್ತೆ ಸಂಕಷ್ಟ; ಹೈದರಾಬಾದ್​ ಪೊಲೀಸರಿಂದ ಬಂತು ನೋಟಿಸ್​
ಸಾಯಿ ಧರಮ್​ತೇಜ್​
TV9 Web
| Edited By: |

Updated on: Dec 29, 2021 | 6:00 AM

Share

ನಟ ಸಾಯಿ ಧರಮ್​ ತೇಜ್​​ ಬೈಕ್​ ಅಪಘಾತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಅತಿವೇಗ, ನಿರ್ಲಕ್ಷ್ಯ ಆರೋಪದಡಿ ಪೊಲೀಸರು ಪ್ರಕರಣವನ್ನು ದಾಖಲಿಸಿದ್ದರು. ಸೆಪ್ಟೆಂಬರ್​ 10ರಂದು ನಡೆದಿದ್ದ ಈ ಅಪಘಾತದಲ್ಲಿ ಸಾಯಿ ಧರಮ್​ ತೇಜ್​ ಅವರು ತೀವ್ರವಾಗಿ ಗಾಯಗೊಂಡಿದ್ದರು. ಒಂದು ತಿಂಗಳಿಗೂ ಅಧಿಕ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಅವರು ಮರಳಿದ್ದಾರೆ. ಈಗ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಪೊಲೀಸ್​ ಠಾಣೆಯಿಂದ ಅವರಿಗೆ ನೋಟಿಸ್ ಬಂದಿದೆ.

ನಟ ಸಾಯಿ ಧರಮ್​ ತೇಜ್ ಸಾಮಾನ್ಯವಾಗಿ ಬೈಕ್​ ರೈಡಿಂಗ್​ಗೆ ತೆರಳುತ್ತಿದ್ದರು. ಅದೇ ರೀತಿ ಸ್ನೇಹಿತರಾದ ಸಂದೀಪ್​ ಕಿಷನ್​, ವೈವಾ ಹರ್ಷಾ ಎಂಬುವರೊಂದಿಗೆ​ ಅವರು ಬೈಕ್​ ರೈಡಿಂಗ್​ಗೆ ತೆರಳಿದ್ದರು. ಸ್ಪೋರ್ಟ್ಸ್ ಬೈಕ್​ನಲ್ಲಿ ಬರುವಾಗ ಹೈದರಾಬಾದ್‌ನ ಮಾದಾಪುರ ಕೇಬಲ್ ಬ್ರಿಡ್ಜ್​​ ಬಳಿ ಅಪಘಾತ ಸಂಭವಿಸಿತ್ತು. ರಸ್ತೆ ಬದಿ ನಿರ್ಮಾಣ ಕಾರ್ಯ ನಡೆಯುತ್ತಿತ್ತು. ಹೀಗಾಗಿ, ಸ್ಥಳದಲ್ಲಿ ಬಿದ್ದಿದ್ದ ಮರಳಿನಿಂದ ಬೈಕ್​ ಸ್ಕಿಡ್​ ಆಗಿ ಅಪಘಾತ ಸಂಭವಿಸಿದೆ ಎನ್ನಲಾಗಿತ್ತು.

ಸಾಯಿ ಧರಮ್​ ತೇಜ್​ ಹೆಲ್ಮೆಟ್ ಧರಿಸಿದ್ದರು ಮತ್ತು ಆಲ್ಕೊಹಾಲ್ ಸೇವನೆ ಮಾಡಿರಲಿಲ್ಲ. ಆದರೆ, ಅವರ ವಿರುದ್ಧ ನಿರ್ಲಕ್ಷ್ಯದ ಆರೋಪ ಕೇಳಿ ಬಂದಿತ್ತು. ನಟ ಸಾಯಿ ಧರಮ್​ತೇಜ್​​ ಬೈಕ್​ ಅಪಘಾತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೈದರಾಬಾದ್​ನಲ್ಲಿ ಕೇಸ್ ದಾಖಲಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿ ಸಾಯಿ ಧರಮ್​ ತೇಜ್​ ಅವರು ಡ್ರೈವಿಂಗ್​ ಲೈಸೆನ್ಸ್​, ಆರ್​ಸಿ, ಇನ್ಸೂರೆನ್ಸ್​ ಮತ್ತು ಪೊಲ್ಯೂಷನ್​ ಕಾಗದಪತ್ರಗಳನ್ನು ನೀಡಬೇಕಿತ್ತು. ಆದರೆ, ಇದನ್ನು ಅವರು ನೀಡಿಲ್ಲ. ಈ ಬಗ್ಗೆ ಅವರು ಯಾವುದೇ ಮಾಹಿತಿ ಕೂಡ ನೀಡಿಲ್ಲ. ಹೀಗಾಗಿ, ಅವರ ಮೇಲೆ ಕೇಸ್​ ದಾಖಲಾಗಿದೆ. ‘ಇಲ್ಲಿಯವರೆಗೆ ನಾವು ನಟನಿಂದ ಯಾವುದೇ ಪ್ರತಿಕ್ರಿಯೆಯನ್ನು ಸ್ವೀಕರಿಸಿಲ್ಲ. ಈ ಬಗ್ಗೆ ಪ್ರತಿಕ್ರಿಯೆ ಬರದಿದ್ದರೆ ಚಾರ್ಜ್ ಶೀಟ್ ಸಲ್ಲಿಸಲಾಗುವುದು’ ಎಂದು ಕಮಿಷನರ್ ಸ್ಟೀಫನ್ ರವಿಂದ ಹೇಳಿದ್ದಾರೆ.

ಸಾಯಿ ಧರಮ್​ ತೇಜ್​ ಸ್ಥಿತಿ ಗಂಭೀರವಾಗಿತ್ತು. ಅವರು ಗುಣಮುಖರಾದ ನಂತರ ಟ್ವೀಟ್​ ಮಾಡಿದ್ದ ಚಿರಂಜೀವಿ, ‘ಈ ಬಾರಿ ವಿಜಯ ದಶಮಿಯ ವಿಶೇಷ ಏನೆಂದರೆ, ಸಾಯಿ ಧರಮ್​ ತೇಜ್​ ಸಂಪೂರ್ಣ ಗುಣಮುಖರಾಗಿ ಮನೆಗೆ ಬರುತ್ತಿದ್ದಾರೆ. ಭೀಕರ ಬೈಕ್​ ಅಪಘಾತದಲ್ಲಿ ಅವರು ಬದುಕಿ ಬಂದಿದ್ದಾರೆ. ಇದು ನಮ್ಮೆಲ್ಲರಿಗೂ ಖುಷಿ ನೀಡಿದೆ. ಅವರಿಗೆ ಇದು ಪುನರ್ಜನ್ಮ’ ಎಂದು ಹೇಳಿದ್ದರು.

ಇದನ್ನೂ ಓದಿ: ಆ್ಯಕ್ಸಿಡೆಂಟ್​ ಬಳಿಕ ಥಿಯೇಟರ್​ನಲ್ಲಿ ಸೋತು ಓಟಿಟಿಯಲ್ಲಿ ದಾಖಲೆ ಮಾಡಿದ ಸಾಯಿ ಧರಮ್​ ತೇಜ್​ ಚಿತ್ರ ‘ರಿಪಬ್ಲಿಕ್​’

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ