AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sai Dharam Tej: ನಟ ಸಾಯಿ ಧರಮ್ ತೇಜ್​ಗೆ ಶಸ್ತ್ರಚಿಕಿತ್ಸೆ ಯಶಸ್ವಿ; ಆರೋಗ್ಯದ ಕುರಿತು ಆಸ್ಪತ್ರೆಯಿಂದ ಮಾಹಿತಿ ಬಿಡುಗಡೆ

ಟಾಲಿವುಡ್​ನ ಭರವಸೆಯ ನಟ ಸಾಯಿ ಧರಮ್ ತೇಜ್ ಅವರಿಗೆ ಶಸ್ತ್ರಚಿಕಿತ್ಸೆ ನಡೆದಿದೆ. ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

Sai Dharam Tej: ನಟ ಸಾಯಿ ಧರಮ್ ತೇಜ್​ಗೆ ಶಸ್ತ್ರಚಿಕಿತ್ಸೆ ಯಶಸ್ವಿ; ಆರೋಗ್ಯದ ಕುರಿತು ಆಸ್ಪತ್ರೆಯಿಂದ ಮಾಹಿತಿ ಬಿಡುಗಡೆ
ಸಾಯಿ ಧರಮ್​ತೇಜ
TV9 Web
| Edited By: |

Updated on:Sep 12, 2021 | 5:47 PM

Share

ಮೆಗಾಸ್ಟಾರ್ ಚಿರಂಜೀವಿ ಸೋದರಳಿಯ, ಟಾಲಿವುಡ್​ನ ಭರವಸೆಯ ನಟ ಸಾಯಿ ಧರಮ್ ತೇಜ್ ಅವರಿಗೆ ಶುಕ್ರವಾರ ಸಂಜೆ ಅಪಘಾತವಾಗಿತ್ತು. ಪರಿಣಾಮವಾಗಿ ಅವರರು ಕೋಮಾಕ್ಕೆ ಹೋಗಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸುತ್ತಿದ್ದ ಅವರು ಚೇತರಿಕೆ ಕಾಣುತ್ತಿದ್ದರು. ಇತ್ತೀಚೆಗೆ ಆಸ್ಪತ್ರೆಯಿಂದ ಬಂದಿರುವ ಮಾಹಿತಿಯ ಪ್ರಕಾರ, ಅವರಿಗೆ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ. ಅವರಿಗೆ ವಿವಿಧ ಮಾದರಿಯ ಸ್ಕ್ಯಾನಿಂಗ್ ಪರೀಕ್ಷೆಗಳು ನಡೆದಿದ್ದವು. ಅದರಲ್ಲಿ ತಲೆ, ಬೆನ್ನುಮೂಳೆ ಅಥವಾ ಆಂತರಿಕವಾಗಿ ತೀವ್ರ ಪ್ರಮಾಣದ ಗಾಯವಾಗಿಲ್ಲ ಎಂಬ ವರದಿ ಲಭ್ಯವಾಗಿತ್ತು. ಇದರಿಂದಾಗಿ ಕುಟುಂಬಕ್ಕೆ ಹಾಗೂ ಅಭಿಮಾನಿಗಳಿಗೆ ಸಮಾಧಾನವಾಗಿತ್ತು.

ಆದರೆ ಸಾಯಿಯವರ  ಕಾಲರ್ ಮೂಳೆ ಮುರಿದಿದೆ. ಇದಕ್ಕೆ ಅಪೋಲೋ ಆಸ್ಪತ್ರೆ ವೈದ್ಯಕೀಯ ತಂಡದ ಡಾ.ಅಲೋಕ್ ರಂಜನ್ ಐಸಿಯುವಿನಲ್ಲಿ ತೇಜ್​ಗೆ ಚಿಕಿತ್ಸೆ ನೀಡುತ್ತಿದ್ದಾರೆ. ಇಂದು ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿದ್ದು, ಅದು ಯಶಸ್ವಿಯಾಗಿದೆ ಎಂದು ಅಧಿಕೃತವಾಗಿ ತಿಳಿಸಲಾಗಿದೆ. ತೇಜ್ ಆರೋಗ್ಯ ಸ್ಥಿತಿಯ ಬಗ್ಗೆ ವೈದ್ಯರು ಇತ್ತೀಚೆಗೆ ಆರೋಗ್ಯ ಬುಲೆಟಿನ್ ಬಿಡುಗಡೆ ಮಾಡಿದ್ದು, ಅದರಲ್ಲಿ ತೇಜ್ ಆರೋಗ್ಯ ಸ್ಥಿರವಾಗಿದೆ ಮತ್ತು ಅವರು ವೈದ್ಯರ ಮೇಲ್ವಿಚಾರಣೆಯಲ್ಲಿದ್ದಾರೆ. ತೇಜ್​ಗೆ ಮಾಡಿದ ಕಾಲರ್ ಬೋನ್ ಸರ್ಜರಿ ಯಶಸ್ವಿಯಾಗಿ ಪೂರ್ಣಗೊಂಡಿದೆ ಎಂದು ತಿಳಿಸಲಾಗಿದೆ. ಶೀಘ್ರದಲ್ಲೇ ನಟನ ಆರೋಗ್ಯಕ್ಕೆ ಸಂಬಂಧಿಸಿದ ಎಲ್ಲಾ ವಿವರಗಳನ್ನು ಪ್ರಕಟಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Sai Dharam Tej

ಸಾಯಿ ಧರಮ್ ತೇಜ್ ಆರೋಗ್ಯದ ಕುರಿತು ಬಿಡುಗಡೆ ಮಾಡಲಾಗಿರುವ ಮಾಹಿತಿ

ಮೆಗಾಸ್ಟಾರ್​ ಚಿರಂಜೀವಿ ಅವರ ಅಳಿಯ, ನಟ ಸಾಯಿ ಧರಮ್​ ತೇಜ್​ಗೆ ಶುಕ್ರವಾರ ಅಪಘಾತ ಸಂಭವಿಸಿತ್ತು. ಅತಿ ವೇಗವಾಗಿ ಮತ್ತು ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕೆಲವು ಮೂಲಗಳ ಪ್ರಕಾರ, ರಸ್ತೆಯಲ್ಲಿ ಬಿದ್ದಿದ್ದ ಮರಳಿನಿಂದ ಬೈಕ್ ಸ್ಕಿಡ್ ಆಗಿ ಅಪಘಾತವಾಗಿದೆ ಎನ್ನಲಾಗಿದೆ. ಪ್ರಕರಣದ ಸಿಸಿಟಿವಿ ಫೂಟೇಜ್ ಕೂಡ ಲಭ್ಯವಾಗಿದೆ. ಹೈದರಾಬಾದ್‌ನ ಮಾದಾಪುರ ಕೇಬಲ್ ಬ್ರಿಡ್ಜ್​​ ಬಳಿ ಅಪಘಾತ ಸಂಭವಿಸಿತ್ತು. ಈ ವೇಳೆ ನಟ ಹೆಲ್ಮೆಟ್​ ಧರಿಸಿದ್ದರಿಂದ ಪ್ರಾಣಕ್ಕೆ ಯಾವುದೇ ಅಪಾಯವಾಗಿಲ್ಲ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ:

ಭೀಕರ ಬೈಕ್​ ಅಪಘಾತ; ನಟನ 4 ತಪ್ಪುಗಳು ಬಟಾಬಯಲು: ಸಾಯಿ ಧರಮ್​ ತೇಜ್​ ಹೀಗೆ ಮಾಡಬಾರದಿತ್ತು

ಸಾಯಿ ಧರಮ್​ ತೇಜ್​ ಬೈಕ್​ ಅಪಘಾತ: ಅಪಶಕುನ ನುಡಿದ ಹಿರಿಯ ನಟನ ವಿರುದ್ಧ ಭಾರಿ ಆಕ್ರೋಶ

(Sai Dharam Tej’s collar bone surgery is successful says hospital officials)

Published On - 5:40 pm, Sun, 12 September 21

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ