AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಂಜಾ, ಡ್ರಗ್ಸ್​ ವಿಚಾರ: ಸಾಯಿ ಧರಂ ತೇಜ್​ ಸಿನಿಮಾ ತಂಡಕ್ಕೆ ಅಧಿಕಾರಿಗಳ ಎಚ್ಚರಿಕೆ

ನಟ ಸಾಯಿ ಧರಂ ತೇಜ್​, ನಿರ್ದೇಶಕ ಸಂಪತ್ ನಂದಿ, ನಿರ್ಮಾಪಕ ನಾಗ ವಂಶಿ ಅವರಿಗೆ ಕಾನೂನಿನ ಸಂಕಷ್ಟ ಎದುರಾಗಿದೆ. ‘ರಾಜ್ಯ ಮಾದಕ ದ್ರವ್ಯ ನಿಗ್ರಹ ದಳ’ದ ಅಧಿಕಾರಿಗಳು ಖಡಕ್​ ಎಚ್ಚರಿಕೆ ನೀಡಿದ್ದಾರೆ. ‘ಗಾಂಜಾ ಶಂಕರ್​’ ಸಿನಿಮಾದ ಟೀಸರ್​ ಮತ್ತು ಟೈಟಲ್​ ಬಗ್ಗೆ ಅಧಿಕಾರಿಗಳು ತಕರಾರು ತೆಗೆದಿದ್ದಾರೆ. ಇದರಿಂದ ಸಿನಿಮಾದಲ್ಲಿ ಸಾಕಷ್ಟು ಬದಲಾವಣೆ ಆಗುವ ಸಾಧ್ಯತೆ ಇದೆ.

ಗಾಂಜಾ, ಡ್ರಗ್ಸ್​ ವಿಚಾರ: ಸಾಯಿ ಧರಂ ತೇಜ್​ ಸಿನಿಮಾ ತಂಡಕ್ಕೆ ಅಧಿಕಾರಿಗಳ ಎಚ್ಚರಿಕೆ
ಸಾಯಿ ಧರಂ ತೇಜ್​
ಮದನ್​ ಕುಮಾರ್​
|

Updated on:Feb 19, 2024 | 3:39 PM

Share

ಚಿತ್ರರಂಗದಲ್ಲಿ ಆಗಾಗ ಡ್ರಗ್ಸ್​ (Drugs) ವಾಸನೆ ಹರಡುತ್ತದೆ. ಟಾಲಿವುಡ್​ ಮಂದಿ ಮೇಲೆ ಈಗಾಗಲೇ ಒಂದಷ್ಟು ಆರೋಪಗಳಿವೆ. ಮಾದಕ ದ್ರವ್ಯದ ಕೇಸ್​ನಲ್ಲಿ ಈ ಹಿಂದೆ ಅನೇಕರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಈಗ ಚಿತ್ರತಂಡವೊಂದಕ್ಕೆ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು ನೋಟಿಸ್​ ಕಳಿಸಿದ್ದಾರೆ. ಹೌದು, ಸಾಯಿ ಧರಂ ತೇಜ್​ (Sai Dharam Tej) ನಟನೆಯ ‘ಗಾಂಜಾ ಶಂಕರ್​’ ಸಿನಿಮಾ ತಂಡದವರಿಗೆ ನೋಟಿಸ್​ ನೀಡಲಾಗಿದೆ. ಹಾಗಂತ ಈ ಚಿತ್ರತಂಡದವರು ಡ್ರಗ್ಸ್​ ಸೇವನೆ ಮಾಡಿಲ್ಲ. ಬದಲಿಗೆ, ಮಾದಕ ದ್ರವ್ಯದ ಮಾರಾಟ, ಸೇವನೆ ಮುಂತಾದ ದೃಶ್ಯಗಳನ್ನು ‘ಗಾಂಜಾ ಶಂಕರ್​’ (Gaanja Shankar) ಸಿನಿಮಾದಲ್ಲಿ ವೈಭವೀಕರಿಸುವ ಸಾಧ್ಯತೆ ಇದೆ ಎಂಬ ಕಾರಣಕ್ಕೆ ಮುಂಚಿತವಾಗಿಯೇ ಈ ಚಿತ್ರತಂಡಕ್ಕೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಟೈಟಲ್​ ಬದಲಿಸುವಂತೆಯೂ ಸೂಚಿಸಲಾಗಿದೆ.

‘ತೆಲಂಗಾಣ ರಾಜ್ಯ ಮಾದಕ ದ್ರವ್ಯ ನಿಗ್ರಹ ದಳ’ದ ನಿರ್ದೇಶಕ ಸಂದೀಪ್​ ಶಾಂಡಿಲ್ಯ ಅವರು ‘ಗಾಂಜಾ ಶಂಕರ್​’ ಚಿತ್ರತಂಡಕ್ಕೆ ನೋಟಿಸ್​ ನೀಡಿದ್ದಾರೆ. ಕೆಲವೇ ತಿಂಗಳ ಹಿಂದೆ ‘ಗಾಂಜಾ ಶಂಕರ್​’ ಸಿನಿಮಾದ ಟೀಸರ್​ ಬಿಡುಗಡೆ ಆಗಿತ್ತು. ಅದರಲ್ಲಿ ತೋರಿಸಿದ ದೃಶ್ಯಗಳನ್ನು ಗಮನಿಸಿ ಅಧಿಕಾರಿಗಳು ಚಿತ್ರತಂಡಕ್ಕೆ ನೋಟಿಸ್​ ಕಳಿಸಿದ್ದಾರೆ. ‘ಕಥಾನಾಯಕನನ್ನು ಗಾಂಜಾ ವ್ಯಾಪಾರ ಮಾಡುವವನ ರೀತಿ ವೈಭವೀಕರಿಸಿದರೆ ಅದರಿಂದ ಯುವ ಜನತೆ ಮೇಲೆ ಕೆಟ್ಟ ಪರಿಣಾಮ ಬೀರಲಿದೆ’ ಎಂದು ನೋಟಿಸ್​ನಲ್ಲಿ ತಿಳಿಸಲಾಗಿದೆ.

‘ಈ ರೀತಿ ಸಿನಿಮಾ ಮಾಡಿದರೆ ಗಾಂಜಾ ಬಳಕೆಯನ್ನು ಉತ್ತೇಜಿಸಿದಂತೆ ಆಗಲಿದೆ. ನಿಮ್ಮ ಸಿನಿಮಾದಲ್ಲಿ ಮಾದಕ ವಸ್ತು ಬಳಕೆಯನ್ನು ತೋರಿಸಬಾರದು. ಗಾಂಜಾ ಶಂಕರ್​ ಎಂಬ ಶೀರ್ಷಿಕೆಯನ್ನು ಬದಲಾಯಿಸಬೇಕು. ಟೈಟಲ್​ನಲ್ಲಿ ಗಾಂಜಾ ಎಂಬ ಪದವನ್ನು ತೆಗೆದುಹಾಕಬೇಕು. ಒಂದು ವೇಳೆ ನಿಮ್ಮ ಸಿನಿಮಾದಲ್ಲಿ ಆಕ್ಷೇಪಾರ್ಹ ದೃಶ್ಯಗಳು ಇದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ನೋಟಿಸ್​ ಮೂಲಕ ಖಡಕ್​ ಎಚ್ಚರಿಕೆ ನೀಡಲಾಗಿದೆ. ಇದಕ್ಕೆ ಚಿತ್ರತಂಡದವರು ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಇದನ್ನೂ ಓದಿ: ಸಾಯಿ ಧರಂ ತೇಜ್​ ಸಿನಿಮಾದಿಂದ ಪೂಜಾ ಹೆಗ್ಡೆ ಔಟ್​; ಕಾರಣ ಕೇಳಿ ಚಿತ್ರತಂಡಕ್ಕೆ ಶಾಕ್​

‘ಗಾಂಜಾ ಶಂಕರ್​’ ಚಿತ್ರದಲ್ಲಿ ಸಾಯಿ ಧರಂ ತೇಜ್​ ಅವರು ಹೀರೋ ಆಗಿ ನಟಿಸುತ್ತಿದ್ದಾರೆ. ಸಂಪತ್​ ನಂದಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ನಾಗ ವಂಶಿ ಅವರು ಬಂಡವಾಳ ಹೂಡುತ್ತಿದ್ದಾರೆ. ನೋಟಿಸ್​ ಪ್ರತಿಯನ್ನು ಈ ಮೂವರಿಗೂ ಕಳಿಸಲಾಗಿದೆ. ಅಲ್ಲದೇ, ತೆಲುಗು ಸಿನಿಮಾ ಕಲಾವಿದರ ಸಂಘ, ನಿರ್ಮಾಪಕರ ಸಂಘ ಹಾಗೂ ನಿರ್ದೇಶಕರ ಸಂಘಕ್ಕೂ ನೋಟಿಸ್​ ಪ್ರತಿ ರವಾನಿಸಲಾಗಿದೆ. ಈಗ ಸಿನಿಮಾ ತಂಡದವರು ಹೊಸ ಟೈಟಲ್​ ಇಡುವುದು ಅನಿವಾರ್ಯ ಆಗಿದೆ.

‘ಗಾಂಜಾ ಶಂಕರ್​’ ಸಿನಿಮಾ ತಂಡಕ್ಕೆ ಕಳಿಸಲಾದ ನೋಟಿಸ್​:

ಸಾಯಿ ಧರಂ ತೇಜ್​ ಅವರಿಗೆ 2021ರಲ್ಲಿ ಅಪಘಾತ ಆಗಿತ್ತು. ಬೈಕ್​ನಿಂದ ಬಿದ್ದು ಅವರು ಗಂಭೀರವಾಗಿ ಗಾಯಗೊಂಡಿದ್ದರು. ಹಲವು ತಿಂಗಳ ಕಾಲ ಅವರು ಚಿಕಿತ್ಸೆ ಪಡೆದರು. ನಂತರ ಅವರು ನಟಿಸಿದ ‘ವಿರೂಪಾಕ್ಷ’ ಸಿನಿಮಾ ಸೂಪರ್​ ಹಿಟ್​ ಆಯಿತು. ಈಗ ‘ಗಾಂಜಾ ಶಂಕರ್​’ ಸಿನಿಮಾದ ಕೆಲಸಗಳಲ್ಲಿ ತೊಡಗಿಕೊಂಡಿರುವ ಅವರಿಗೆ ಈ ನೋಟಿಸ್​​ನಿಂದ ಕಾನೂನಿನ ಸಮಸ್ಯೆ ಎದುರಾದಂತೆ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 3:39 pm, Mon, 19 February 24

Follow Us
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
Live: ಬಿಜೆಪಿ ಪಾದಯಾತ್ರೆಗೆ ಚಾಲನೆ ನೇರಪ್ರಸಾರ
Live: ಬಿಜೆಪಿ ಪಾದಯಾತ್ರೆಗೆ ಚಾಲನೆ ನೇರಪ್ರಸಾರ