AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಂಜಾ, ಡ್ರಗ್ಸ್​ ವಿಚಾರ: ಸಾಯಿ ಧರಂ ತೇಜ್​ ಸಿನಿಮಾ ತಂಡಕ್ಕೆ ಅಧಿಕಾರಿಗಳ ಎಚ್ಚರಿಕೆ

ನಟ ಸಾಯಿ ಧರಂ ತೇಜ್​, ನಿರ್ದೇಶಕ ಸಂಪತ್ ನಂದಿ, ನಿರ್ಮಾಪಕ ನಾಗ ವಂಶಿ ಅವರಿಗೆ ಕಾನೂನಿನ ಸಂಕಷ್ಟ ಎದುರಾಗಿದೆ. ‘ರಾಜ್ಯ ಮಾದಕ ದ್ರವ್ಯ ನಿಗ್ರಹ ದಳ’ದ ಅಧಿಕಾರಿಗಳು ಖಡಕ್​ ಎಚ್ಚರಿಕೆ ನೀಡಿದ್ದಾರೆ. ‘ಗಾಂಜಾ ಶಂಕರ್​’ ಸಿನಿಮಾದ ಟೀಸರ್​ ಮತ್ತು ಟೈಟಲ್​ ಬಗ್ಗೆ ಅಧಿಕಾರಿಗಳು ತಕರಾರು ತೆಗೆದಿದ್ದಾರೆ. ಇದರಿಂದ ಸಿನಿಮಾದಲ್ಲಿ ಸಾಕಷ್ಟು ಬದಲಾವಣೆ ಆಗುವ ಸಾಧ್ಯತೆ ಇದೆ.

ಗಾಂಜಾ, ಡ್ರಗ್ಸ್​ ವಿಚಾರ: ಸಾಯಿ ಧರಂ ತೇಜ್​ ಸಿನಿಮಾ ತಂಡಕ್ಕೆ ಅಧಿಕಾರಿಗಳ ಎಚ್ಚರಿಕೆ
ಸಾಯಿ ಧರಂ ತೇಜ್​
ಮದನ್​ ಕುಮಾರ್​
|

Updated on:Feb 19, 2024 | 3:39 PM

Share

ಚಿತ್ರರಂಗದಲ್ಲಿ ಆಗಾಗ ಡ್ರಗ್ಸ್​ (Drugs) ವಾಸನೆ ಹರಡುತ್ತದೆ. ಟಾಲಿವುಡ್​ ಮಂದಿ ಮೇಲೆ ಈಗಾಗಲೇ ಒಂದಷ್ಟು ಆರೋಪಗಳಿವೆ. ಮಾದಕ ದ್ರವ್ಯದ ಕೇಸ್​ನಲ್ಲಿ ಈ ಹಿಂದೆ ಅನೇಕರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಈಗ ಚಿತ್ರತಂಡವೊಂದಕ್ಕೆ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು ನೋಟಿಸ್​ ಕಳಿಸಿದ್ದಾರೆ. ಹೌದು, ಸಾಯಿ ಧರಂ ತೇಜ್​ (Sai Dharam Tej) ನಟನೆಯ ‘ಗಾಂಜಾ ಶಂಕರ್​’ ಸಿನಿಮಾ ತಂಡದವರಿಗೆ ನೋಟಿಸ್​ ನೀಡಲಾಗಿದೆ. ಹಾಗಂತ ಈ ಚಿತ್ರತಂಡದವರು ಡ್ರಗ್ಸ್​ ಸೇವನೆ ಮಾಡಿಲ್ಲ. ಬದಲಿಗೆ, ಮಾದಕ ದ್ರವ್ಯದ ಮಾರಾಟ, ಸೇವನೆ ಮುಂತಾದ ದೃಶ್ಯಗಳನ್ನು ‘ಗಾಂಜಾ ಶಂಕರ್​’ (Gaanja Shankar) ಸಿನಿಮಾದಲ್ಲಿ ವೈಭವೀಕರಿಸುವ ಸಾಧ್ಯತೆ ಇದೆ ಎಂಬ ಕಾರಣಕ್ಕೆ ಮುಂಚಿತವಾಗಿಯೇ ಈ ಚಿತ್ರತಂಡಕ್ಕೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಟೈಟಲ್​ ಬದಲಿಸುವಂತೆಯೂ ಸೂಚಿಸಲಾಗಿದೆ.

‘ತೆಲಂಗಾಣ ರಾಜ್ಯ ಮಾದಕ ದ್ರವ್ಯ ನಿಗ್ರಹ ದಳ’ದ ನಿರ್ದೇಶಕ ಸಂದೀಪ್​ ಶಾಂಡಿಲ್ಯ ಅವರು ‘ಗಾಂಜಾ ಶಂಕರ್​’ ಚಿತ್ರತಂಡಕ್ಕೆ ನೋಟಿಸ್​ ನೀಡಿದ್ದಾರೆ. ಕೆಲವೇ ತಿಂಗಳ ಹಿಂದೆ ‘ಗಾಂಜಾ ಶಂಕರ್​’ ಸಿನಿಮಾದ ಟೀಸರ್​ ಬಿಡುಗಡೆ ಆಗಿತ್ತು. ಅದರಲ್ಲಿ ತೋರಿಸಿದ ದೃಶ್ಯಗಳನ್ನು ಗಮನಿಸಿ ಅಧಿಕಾರಿಗಳು ಚಿತ್ರತಂಡಕ್ಕೆ ನೋಟಿಸ್​ ಕಳಿಸಿದ್ದಾರೆ. ‘ಕಥಾನಾಯಕನನ್ನು ಗಾಂಜಾ ವ್ಯಾಪಾರ ಮಾಡುವವನ ರೀತಿ ವೈಭವೀಕರಿಸಿದರೆ ಅದರಿಂದ ಯುವ ಜನತೆ ಮೇಲೆ ಕೆಟ್ಟ ಪರಿಣಾಮ ಬೀರಲಿದೆ’ ಎಂದು ನೋಟಿಸ್​ನಲ್ಲಿ ತಿಳಿಸಲಾಗಿದೆ.

‘ಈ ರೀತಿ ಸಿನಿಮಾ ಮಾಡಿದರೆ ಗಾಂಜಾ ಬಳಕೆಯನ್ನು ಉತ್ತೇಜಿಸಿದಂತೆ ಆಗಲಿದೆ. ನಿಮ್ಮ ಸಿನಿಮಾದಲ್ಲಿ ಮಾದಕ ವಸ್ತು ಬಳಕೆಯನ್ನು ತೋರಿಸಬಾರದು. ಗಾಂಜಾ ಶಂಕರ್​ ಎಂಬ ಶೀರ್ಷಿಕೆಯನ್ನು ಬದಲಾಯಿಸಬೇಕು. ಟೈಟಲ್​ನಲ್ಲಿ ಗಾಂಜಾ ಎಂಬ ಪದವನ್ನು ತೆಗೆದುಹಾಕಬೇಕು. ಒಂದು ವೇಳೆ ನಿಮ್ಮ ಸಿನಿಮಾದಲ್ಲಿ ಆಕ್ಷೇಪಾರ್ಹ ದೃಶ್ಯಗಳು ಇದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ನೋಟಿಸ್​ ಮೂಲಕ ಖಡಕ್​ ಎಚ್ಚರಿಕೆ ನೀಡಲಾಗಿದೆ. ಇದಕ್ಕೆ ಚಿತ್ರತಂಡದವರು ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಇದನ್ನೂ ಓದಿ: ಸಾಯಿ ಧರಂ ತೇಜ್​ ಸಿನಿಮಾದಿಂದ ಪೂಜಾ ಹೆಗ್ಡೆ ಔಟ್​; ಕಾರಣ ಕೇಳಿ ಚಿತ್ರತಂಡಕ್ಕೆ ಶಾಕ್​

‘ಗಾಂಜಾ ಶಂಕರ್​’ ಚಿತ್ರದಲ್ಲಿ ಸಾಯಿ ಧರಂ ತೇಜ್​ ಅವರು ಹೀರೋ ಆಗಿ ನಟಿಸುತ್ತಿದ್ದಾರೆ. ಸಂಪತ್​ ನಂದಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ನಾಗ ವಂಶಿ ಅವರು ಬಂಡವಾಳ ಹೂಡುತ್ತಿದ್ದಾರೆ. ನೋಟಿಸ್​ ಪ್ರತಿಯನ್ನು ಈ ಮೂವರಿಗೂ ಕಳಿಸಲಾಗಿದೆ. ಅಲ್ಲದೇ, ತೆಲುಗು ಸಿನಿಮಾ ಕಲಾವಿದರ ಸಂಘ, ನಿರ್ಮಾಪಕರ ಸಂಘ ಹಾಗೂ ನಿರ್ದೇಶಕರ ಸಂಘಕ್ಕೂ ನೋಟಿಸ್​ ಪ್ರತಿ ರವಾನಿಸಲಾಗಿದೆ. ಈಗ ಸಿನಿಮಾ ತಂಡದವರು ಹೊಸ ಟೈಟಲ್​ ಇಡುವುದು ಅನಿವಾರ್ಯ ಆಗಿದೆ.

‘ಗಾಂಜಾ ಶಂಕರ್​’ ಸಿನಿಮಾ ತಂಡಕ್ಕೆ ಕಳಿಸಲಾದ ನೋಟಿಸ್​:

ಸಾಯಿ ಧರಂ ತೇಜ್​ ಅವರಿಗೆ 2021ರಲ್ಲಿ ಅಪಘಾತ ಆಗಿತ್ತು. ಬೈಕ್​ನಿಂದ ಬಿದ್ದು ಅವರು ಗಂಭೀರವಾಗಿ ಗಾಯಗೊಂಡಿದ್ದರು. ಹಲವು ತಿಂಗಳ ಕಾಲ ಅವರು ಚಿಕಿತ್ಸೆ ಪಡೆದರು. ನಂತರ ಅವರು ನಟಿಸಿದ ‘ವಿರೂಪಾಕ್ಷ’ ಸಿನಿಮಾ ಸೂಪರ್​ ಹಿಟ್​ ಆಯಿತು. ಈಗ ‘ಗಾಂಜಾ ಶಂಕರ್​’ ಸಿನಿಮಾದ ಕೆಲಸಗಳಲ್ಲಿ ತೊಡಗಿಕೊಂಡಿರುವ ಅವರಿಗೆ ಈ ನೋಟಿಸ್​​ನಿಂದ ಕಾನೂನಿನ ಸಮಸ್ಯೆ ಎದುರಾದಂತೆ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 3:39 pm, Mon, 19 February 24

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ