AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sai Dharam Tej: ಶಸ್ತ್ರಚಿಕಿತ್ಸೆಗಾಗಿ ನಟನೆಗೆ ಬ್ರೇಕ್ ಕೊಟ್ಟ ನಟ ಸಾಯಿ ಧರಮ್ ತೇಜ್

ಸಾಯಿ ಧರಮ್ ತೇಜ್ ಅಭಿಮಾನಿಗಳಿಗೆ ಈ ನಿರ್ಧಾರ ಬೇಸರ ಮೂಡಿಸಿದೆ. ಇನ್ನೂ ಕೆಲವರು ಅವರ ನಿರ್ಧಾರವನ್ನು ಬೆಂಬಲಿಸಿದ್ದಾರೆ.

Sai Dharam Tej: ಶಸ್ತ್ರಚಿಕಿತ್ಸೆಗಾಗಿ ನಟನೆಗೆ ಬ್ರೇಕ್ ಕೊಟ್ಟ ನಟ ಸಾಯಿ ಧರಮ್ ತೇಜ್
ಸಆಯಿ ಧರಮ್ ತೇಜ್
TV9 Web
| Edited By: |

Updated on: Jul 19, 2023 | 9:06 AM

Share

ನಟ ಸಾಯಿ ಧರಮ್ ತೇಜ್ (Sai Dharam Tej) ಅಭಿಮಾನಿಗಳಿಗೆ ಬೇಸರದ ಸುದ್ದಿ ಕೊಟ್ಟಿದ್ದಾರೆ. ಸುಮಾರು ಆರು ತಿಂಗಳ ಕಾಲ ಸಿನಿಮಾದಿಂದ ದೂರ ಇರುವುದಾಗಿ ಘೋಷಿಸಿದ್ದಾರೆ. ತಮ್ಮ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಅವರು ಈ ಕಠಿಣ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಅಭಿಮಾನಿಗಳು ಇದನ್ನು ಅರ್ಥಮಾಡಿಕೊಳ್ಳಲ್ಲಿದ್ದಾರೆ ಎಂಬ ಭಾವನೆ ಅವರದ್ದು. ಇದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಇನ್ನೂ ಕೆಲವರು ಸಾಯಿ ಧರಮ್ ತೇಜ್ ಅವರ ನಿರ್ಧಾರವನ್ನು ಬೆಂಬಲಿಸಿದ್ದಾರೆ. ಅವರಿಗೆ ವಿಶ್ರಾಂತಿ ಅಗತ್ಯ ಎಂದು ಭಾವಿಸಿದ್ದಾರೆ.

ಬೈಕ್ ಅಪಘಾತದಲ್ಲಿ ಸಾಯಿ ಧರಮ್ ತೇಜ್ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಈ ಅಪಘಾತದಲ್ಲಿ ಅವರು ಬದುಕುಳಿದಿದ್ದು ಒಂದು ಪವಾಡ. ಆ ಸಂದರ್ಭದಲ್ಲಿ ಅವರು ಚಿತ್ರರಂಗದಿಂದ ದೂರ ಇದ್ದರು. ಬಳಿಕ ಅವರು ಕಂಬ್ಯಾಕ್ ಮಾಡಿದ್ದರು. ‘ವಿರೂಪಾಕ್ಷ’ ಸಿನಿಮಾದಲ್ಲಿ ನಟಿಸಿ ಅವರು ಗೆಲುವು ಕಂಡಿದ್ದಾರೆ. ಈ ಸಿನಿಮಾ ನೂರು ಕೋಟಿ ರೂಪಾಯಿ ಕ್ಲಬ್ ಸೇರಿತು. ಈಗ ಅವರು ಮಾವ ಪವನ್ ಕಲ್ಯಾಣ್ ಜೊತೆ ‘ಬ್ರೋ’ ಚಿತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಜುಲೈ 28 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಈ ಚಿತ್ರದ ಪ್ರಚಾರದಲ್ಲಿ ಪಾಲ್ಗೊಂಡಿದ್ದ ಸಾಯಿ ಧರಮ್ ತೇಜ್ ಸಿನಿಮಾದಿಂದ ಬ್ರೇಕ್ ತೆಗೆದುಕೊಳ್ಳುತ್ತಿರುವುದಾಗಿ ಹೇಳಿದ್ದಾರೆ.

‘ನಾನು ನನ್ನ ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸಲು ಬಯಸುತ್ತೇನೆ. ಇದಕ್ಕಾಗಿ ಆರು ತಿಂಗಳ ಕಾಲ ಚಿತ್ರರಂಗದಿಂದ ಬಿಡುವು ತೆಗೆದುಕೊಳ್ಳುತ್ತೇನೆ. ನನ್ನ ಮುಂದಿನ ಚಿತ್ರಗಳಿಗೆ ನಾನು ನೂರು ಪ್ರತಿಶತ ಶ್ರಮ ಹಾಕಲು ಈ ಕಠಿಣ ನಿರ್ಧಾರ ತೆಗೆದುಕೊಳ್ಳುತ್ತಿದ್ದೇನೆ. ಅಭಿಮಾನಿಗಳು ಅರ್ಥಮಾಡಿಕೊಳ್ಳುತ್ತಾರೆ ಎಂಬುದು ನನ್ನ ಭಾವನೆ. ನಾನು ಸಣ್ಣ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಾಗಿದೆ. ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಸುಮಾರು ಆರು ತಿಂಗಳು ಬೇಕಾಗಬಹುದು’ ಎಂದು ಸಾಯಿ ಧರಮ್ ತೇಜ್ ಹೇಳಿದ್ದಾರೆ.

ಇದನ್ನೂ ಓದಿ: ಆಕ್ಸಿಡೆಂಟ್​ ಆದರೂ ಕನಿಕರ ತೋರದ ಪ್ರೇಕ್ಷಕರು; ನಟ ಸಾಯಿ ಧರಮ್​ ತೇಜ್​ಗೆ ನ.26ಕ್ಕೆ ಇನ್ನೊಂದು ಚಾನ್ಸ್​

2021ರ ಸೆಪ್ಟೆಂಬರ್​ 10ರಂದು ನಡೆದ ಬೈಕ್​ ಅಪಘಾತದಲ್ಲಿ ಸಾಯಿ ಧರಮ್​ ತೇಜ್ ತೀವ್ರವಾಗಿ ಗಾಯಗೊಂಡಿದ್ದರು. ಕೆಲ ಸಮಯ ಅವರು ಕೋಮಾದಲ್ಲಿದ್ದರು. ಒಂದು ತಿಂಗಳಿಗೂ ಅಧಿಕ ಕಾಲ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರು. ಈ ಘಟನೆಯಿಂದ ಅವರು ಸಂಪೂರ್ಣವಾಗಿ ಚೇತರಿಕೆ ಕಂಡಿಲ್ಲ ಎನ್ನಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ