AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಂಬರಾಲ ಏಟಿಗಟ್ಟು’ ಗ್ಲಿಂಪ್ಸ್ ಮೂಲಕ ಕನ್ನಡದಲ್ಲೂ ಅಬ್ಬರಿಸಿದ ಸಾಯಿ ದುರ್ಗಾ ತೇಜ್‌

ಅದ್ದೂರಿ ಬಜೆಟ್​​ನಲ್ಲಿ ‘ಸಂಬರಾಲ ಏಟಿಗಟ್ಟು’ ಪ್ಯಾನ್ ಇಂಡಿಯಾ ಸಿನಿಮಾ ನಿರ್ಮಾಣ ಆಗಿದೆ. ತೆಲುಗಿನ ಖ್ಯಾತ ನಟ ಸಾಯಿ ದುರ್ಗಾ ತೇಜ್ ಅವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ರೋಹಿತ್‌ ಕೆ.ಪಿ. ಅವರು ನಿರ್ದೇಶನ ಮಾಡಿದ್ದು, ಐಶ್ವರ್ಯಾ ಲಕ್ಷ್ಮೀ ನಾಯಕಿಯಾಗಿ ನಟಿಸಿದ್ದಾರೆ.

‘ಸಂಬರಾಲ ಏಟಿಗಟ್ಟು’ ಗ್ಲಿಂಪ್ಸ್ ಮೂಲಕ ಕನ್ನಡದಲ್ಲೂ ಅಬ್ಬರಿಸಿದ ಸಾಯಿ ದುರ್ಗಾ ತೇಜ್‌
Sai Durgha Tej
ಮದನ್​ ಕುಮಾರ್​
|

Updated on: Oct 15, 2025 | 4:06 PM

Share

ಟಾಲಿವುಡ್​​ನ ಖ್ಯಾತ ನಟ ಸಾಯಿ ಧರಮ್ ತೇಜ್ ಅವರು ಈಗ ಸಾಯಿ ದುರ್ಗಾ ತೇಜ್ (Sai Durgha Tej) ಎಂಬ ಹೆಸರಿನಿಂದ ಗುರುತಿಸಿಕೊಳ್ಳುತ್ತಿದ್ದಾರೆ. 2023ರಲ್ಲಿ ಅವರು ‘ವಿರೂಪಾಕ್ಷ’ ಸಿನಿಮಾದಿಂದ ಸೂಪರ್ ಸಕ್ಸಸ್ ಕಂಡಿದ್ದರು. ಈಗ ಅವರು ಮತ್ತೊಂದು ಅದ್ದೂರಿ ಸಿನಿಮಾದ ಮೂಲಕ ಜನರ ಎದುರು ಬರಲು ಸಜ್ಜಾಗಿದ್ದಾರೆ. ಈ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗಲಿದೆ. ಹೌದು, ಸಾಯಿ ದುರ್ಗಾ ತೇಜ್ ನಟನೆಯ ‘ಸಂಬರಾಲ ಏಟಿಗಟ್ಟು’ (Sambarala Yeti Gattu) ಸಿನಿಮಾದ ಗ್ಲಿಂಪ್ಸ್ ಬಿಡುಗಡೆ ಆಗಿದೆ. ತೆಲುಗು, ಕನ್ನಡ, ತಮಿಳು, ಹಿಂದಿ, ಮಲಯಾಳಂ ಭಾಷೆಯಲ್ಲಿ ಗ್ಲಿಂಪ್ಸ್ ರಿಲೀಸ್ ಮಾಡಲಾಗಿದೆ.

‘ಪ್ರೈಮ್ ಶೋ ಎಂಟರ್ಟೈನ್ಮೆಂಟ್’ ಯೂಟ್ಯೂಬ್ ಚಾನೆಲ್ ಮೂಲಕ ‘ಸಂಬರಾಲ ಏಟಿಗಟ್ಟು’ ಸಿನಿಮಾದ ಗ್ಲಿಂಪ್ಸ್ ಬಿಡುಗಡೆ ಮಾಡಲಾಗಿದೆ. ಇದಕ್ಕೆ ಸಿನಿಪ್ರಿಯರಿಂದ ಭರ್ಜರಿ ರೆಸ್ಪಾನ್ಸ್ ಸಿಗುತ್ತಿದೆ. ಈ ಟೀಸರ್​​ನಲ್ಲಿ ಸಾಯಿ ದುರ್ಗ ತೇಜ್ ಅವರ ಭರ್ಜರಿ ಆ್ಯಕ್ಷನ್ ಕಾಣಿಸಿದೆ. ಇದು ಒಂದು ರಕ್ತಸಿಕ್ತ ಕಥೆ ಇರುವ ಸಿನಿಮಾ ಎಂಬುದಕ್ಕೆ ಟೀಸರ್​​ನಲ್ಲಿ ಝಲಕ್ ಕಾಣಿಸಿದೆ. ಮಾಸ್ ಅವತಾರದಲ್ಲಿ ಸಾಯಿ ದುರ್ಗ ತೇಜ್ ಅವರು ಪ್ರೇಕ್ಷಕರನ್ನು ರಂಜಿಸಲಿದ್ದಾರೆ.

‘ಸಂಬರಾಲ ಏಟಿಗಟ್ಟು’ ಸಿನಿಮಾದ ಗ್ಲಿಂಪ್ಸ್​​ನಲ್ಲಿ ಸಾಯಿ ದುರ್ಗಾ ತೇಜ್‌ ಅವರ ಲುಕ್‌ ತುಂಬಾ ರಗಡ್ ಆಗಿದೆ. ಅಸಾಮಾನ್ಯ ಫೈಟರ್‌ ರೀತಿ ಅವರು ಎಂಟ್ರಿ ನೀಡಿದ್ದಾರೆ. ಈ ರೀತಿ ರಗಡ್ ಲುಕ್‌ ಸಲುವಾಗಿ ಅವರು ಸಾಕಷ್ಟು ಪರಿಶ್ರಮ ಹಾಕಿದ್ದಾರೆ. ಕಬ್ಬಿಣದಂತೆ ದೇಹವನ್ನ ಹುರಿಗೊಳಿಸಿಕೊಂಡಿದ್ದಾರೆ. ಅವರ ಪರಿಶ್ರಮದ ಫಲ ಈ ಗ್ಲಿಂಪ್ಸ್ ವಿಡಿಯೋದಲ್ಲಿ ಕಾಣಿಸಿದೆ.

‘ಸಂಬರಾಲ ಏಟಿಗಟ್ಟು’ ಸಿನಿಮಾದ ಗ್ಲಿಂಪ್ಸ್:

‘ಹನುಮಾನ್’ ಸಿನಿಮಾ ಮೂಲಕ ಬ್ಲಾಕ್ ಬಸ್ಟರ್ ಹಿಟ್ ನೀಡಿದ ಕೆ. ನಿರಂಜನ್ ರೆಡ್ಡಿ ಮತ್ತು ಚೈತನ್ಯ ರೆಡ್ಡಿ ಅವರು ‘ಪ್ರೈಮ್ ಶೋ ಎಂಟರ್‌ಟೇನ್‌ಮೆಂಟ್‌’ ಮೂಲಕ ಈಗ ‘ಸಂಬರಾಲ ಏಟಿಗಟ್ಟು’ ಸಿನಿಮಾವನ್ನು ನಿರ್ಮಿಸಿದ್ದಾರೆ. ತೆಲುಗು, ಕನ್ನಡ, ಮಲಯಾಳಂ, ತಮಿಳು ಮತ್ತು ಹಿಂದಿ ಭಾಷೆಯಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ. ಕನ್ನಡದಲ್ಲಿ ಗ್ಲಿಂಪ್ಸ್ ನೋಡಿದ ಪ್ರೇಕ್ಷಕರು ಪಾಸಿಟಿವ್ ಆಗಿ ಕಮೆಂಟ್ ಮಾಡುತ್ತಿದ್ದಾರೆ.

ಇದನ್ನೂ ಓದಿ: ಸೋದರ ಮಾವನ ‘ಓಜಿ’ ಸಿನಿಮಾ ನೋಡಿ ಶಿಳ್ಳೆ ಹೊಡೆದ ಸಾಯಿ ಧರಮ್ ತೇಜ

ಈ ಸಿನಿಮಾದಲ್ಲಿ ಸಾಯಿ ದುರ್ಗಾ ತೇಜ್ ಅವರಿಗೆ ಜೋಡಿಯಾಗಿ ಐಶ್ವರ್ಯ ಲಕ್ಷ್ಮೀ ಅವರು ಅಭಿನಯಿಸಿದ್ದಾರೆ. ಜಗಪತಿ ಬಾಬು, ಶ್ರೀಕಾಂತ್, ಸಾಯಿ ಕುಮಾರ್, ಅನನ್ಯ ನಾಗಲ್ಲ ಮುಂತಾದವರು ಕೂಡ ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ. ‘ಸಂಬರಾಲ ಏಟಿಗಟ್ಟು’ ಸಿನಿಮಾಗೆ ಯುವ ನಿರ್ದೇಶಕ ರೋಹಿತ್‌ ಕೆ.ಪಿ. ಅವರು ಆ್ಯಕ್ಷನ್-ಕಟ್ ಹೇಳಿದ್ದಾರೆ. ವೆಟ್ರಿವೇಲ್ ಪಳನಿಸ್ವಾಮಿ ಅವರ ಛಾಯಾಗ್ರಹಣ, ಬಿ. ಅಜನೀಶ್ ಲೋಕನಾಥ್ ಅವರ ಸಂಗೀತ ನಿರ್ದೇಶನ, ನವೀನ್ ವಿಜಯಕೃಷ್ಣ ಅವರ ಸಂಕಲನ ಈ ಸಿನಿಮಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?
ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?
ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ
ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ
ತಾಯ್ನಾಡಿನಲ್ಲಿ ಮೊದಲ ಟೆಸ್ಟ್ ವಿಕೆಟ್ ಪಡೆದ ಪ್ರಸಿದ್ಧ್ ಕೃಷ್ಣ
ತಾಯ್ನಾಡಿನಲ್ಲಿ ಮೊದಲ ಟೆಸ್ಟ್ ವಿಕೆಟ್ ಪಡೆದ ಪ್ರಸಿದ್ಧ್ ಕೃಷ್ಣ