AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತಂಡೇಲ್’ ಸಿನಿಮಾಗೆ 5 ಕೋಟಿ ರೂಪಾಯಿ ಸಂಭಾವನೆ ಪಡೆದ ಸಾಯಿ ಪಲ್ಲವಿ

ಬಹುಬೇಡಿಕೆಯ ನಟಿಯಾಗಿ ಸಾಯಿ ಪಲ್ಲವಿ ಗುರುತಿಸಿಕೊಂಡಿದ್ದಾರೆ. ಪ್ರತಿ ಸಿನಿಮಾಗೆ ಅವರು ಕೋಟ್ಯಂತರ ರೂಪಾಯಿ ಸಂಭಾವನೆ ಪಡೆಯುತ್ತಾರೆ. ವರದಿಗಳ ಪ್ರಕಾರ, ‘ತಂಡೇಲ್’ ಸಿನಿಮಾಗಾಗಿ ಅವರು 5 ಕೋಟಿ ರೂಪಾಯಿ ಸಂಬಳ ಪಡೆದಿದ್ದಾರೆ. ಫೆ.7ರಂದು ಈ ಸಿನಿಮಾ ರಿಲೀಸ್​ ಆಗುತ್ತಿದೆ. ಚಿತ್ರದ ಟ್ರೇಲರ್​ ಗಮನ ಸೆಳೆದಿದೆ.

‘ತಂಡೇಲ್’ ಸಿನಿಮಾಗೆ 5 ಕೋಟಿ ರೂಪಾಯಿ ಸಂಭಾವನೆ ಪಡೆದ ಸಾಯಿ ಪಲ್ಲವಿ
Sai Pallavi
ಮದನ್​ ಕುಮಾರ್​
|

Updated on: Feb 04, 2025 | 6:18 PM

Share

ಸಾಯಿ ಪಲ್ಲವಿ ಮತ್ತು ನಾಗ ಚೈತನ್ಯ ಅವರು ಎರಡನೇ ಬಾರಿಗೆ ಜೋಡಿಯಾಗಿ ನಟಿಸಿರುವ ‘ತಂಡೇಲ್’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಫೆಬ್ರವರಿ 7ರಂದು ಈ ಸಿನಿಮಾ ತೆರೆಕಾಣಲಿದೆ. ಈಗಾಗಲೇ ಟ್ರೇಲರ್​ ಮೂಲಕ ಸಿನಿಮಾ ಕೌತುಕ ಸೃಷ್ಟಿಸಿದೆ. ಮೀನುಗಾರನ ಪಾತ್ರದಲ್ಲಿ ನಾಗ ಚೈತನ್ಯ ಅವರು ನಟಿಸಿದ್ದಾರೆ. ಹಳ್ಳಿ ಹುಡುಗಿಯಾಗಿ ಸಾಯಿ ಪಲ್ಲವಿ ಅವರು ಕಾಣಿಸಿಕೊಂಡಿದ್ದಾರೆ. ಈ ಸಿನಿಮಾಗಾಗಿ ನಾಗ ಚೈತನ್ಯ ಮತ್ತು ಸಾಯಿ ಪಲ್ಲವಿ ಅವರು ಎಷ್ಟು ಸಂಭಾವನೆ ಪಡೆದಿದ್ದಾರೆ ಎಂಬುದು ಈಗ ಬಹಿರಂಗ ಆಗಿದೆ. ಸಾಯಿ ಪಲ್ಲವಿ ಅವರಿಗಿಂತಲೂ 3 ಪಟ್ಟು ಹೆಚ್ಚು ಸಂಭಾವನೆಯನ್ನು ನಾಗ ಚೈತನ್ಯ ಅವರಿಗೆ ನೀಡಲಾಗಿದೆ. ಆ ಬಗ್ಗೆ ಇಲ್ಲಿದೆ ವಿವರ.

ನಾಗ ಚೈತನ್ಯ ಅವರು ವೃತ್ತಿಜೀವನದಲ್ಲಿ ಏಳು-ಬೀಳುಗಳು ಇವೆ. ಸಿನಿಮಾ ಮಾತ್ರವಲ್ಲದೇ ವೆಬ್ ಸಿರೀಸ್ ಮೂಲಕವೂ ಅವರು ಯಶಸ್ಸು ಕಂಡಿದ್ದಾರೆ. ‘ತಂಡೇಲ್’ ಸಿನಿಮಾಗಾಗಿ ಅವರು ಸಾಕಷ್ಟು ಕಷ್ಟಪಟ್ಟಿದ್ದಾರೆ. ವರದಿಗಳ ಪ್ರಕಾರ ಈ ಚಿತ್ರಕ್ಕಾಗಿ ಅವರು ಬರೋಬ್ಬರಿ 15 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ. ಈವರೆಗಿನ ವೃತ್ತಿಜೀವನದಲ್ಲಿ ಅವರು ಪಡೆದ ಅತಿ ದೊಡ್ಡ ಸಂಭಾವನೆ ಇದಾಗಿದೆ.

ಇನ್ನು, ಸಾಯಿ ಪಲ್ಲವಿ ಕೂಡ ಬಹುಬೇಡಿಕೆಯ ನಟಿ. ಬಹುಭಾಷೆಯಲ್ಲಿ ಅವರು ಮಿಂಚುತ್ತಾರೆ. ಗ್ಲಾಮರ್​ ಮೇಲೆ ಅವಲಂಬಿತವಾಗದೇ ನಟನೆಯ ಮೂಲಕವೇ ಅವರು ಎಲ್ಲರ ಹೃದಯ ಗೆದ್ದಿದ್ದಾರೆ. ‘ತಂಡೇಲ್’ ಸಿನಿಮಾದಲ್ಲಿ ನಟಿಸಿದ್ದಕ್ಕೆ ಅವರಿಗೆ 5 ಕೋಟಿ ರೂಪಾಯಿ ಸಂಭಾವನೆ ನೀಡಲಾಗಿದೆ. ಟ್ರೇಲರ್​ನಲ್ಲಿ ಅವರ ಪಾತ್ರ ಹೈಲೈಟ್ ಆಗಿದೆ. ಈ ಸಿನಿಮಾ ನೋಡಲು ಅಭಿಮಾನಿಗಳು ಕಾದಿದ್ದಾರೆ.

ಇದನ್ನೂ ಓದಿ: ‘ಅರ್ಜುನ್ ರೆಡ್ಡಿ’ ಚಿತ್ರದಲ್ಲಿ ನಟಿಸಬೇಕಿತ್ತು ಸಾಯಿ ಪಲ್ಲವಿ; ರಿಜೆಕ್ಟ್ ಆಗಲು ಕಾರಣ ಆಯ್ತು ಸ್ಲೀವ್​ಲೆಸ್ ಡ್ರೆಸ್ ವಿಚಾರ

ಬಿಡುಗಡೆಗೂ ಮುನ್ನವೇ ‘ತಂಡೇಲ್’ ಸಿನಿಮಾ ಬಗ್ಗೆ ಪಾಸಿಟಿವ್ ಟಾಕ್ ಶುರುವಾಗಿದೆ. ಸಿನಿಮಾ ರಿಲೀಸ್ ಆದ ಬಳಿಕ ಉತ್ತಮ ವಿಮರ್ಶೆ ಸಿಕ್ಕರೆ ಖಂಡಿತಾ ಸಿನಿಮಾ ಗೆಲ್ಲಲಿದೆ. ಈ ಗೆಲುವಿಗಾಗಿ ನಾಗ ಚೈತನ್ಯ ಅವರು ಕಾಯುತ್ತಿದ್ದಾರೆ. ದೇವಿ ಶ್ರೀ ಪ್ರಸಾದ್ ಅವರು ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಬನ್ನಿ ವಾಸು ಅವರು ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ಚಂದು ಮೊಂಡೇಟಿ ಅವರ ನಿರ್ದೇಶನದಲ್ಲಿ ‘ತಂಡೇಲ್’ ಸಿನಿಮಾ ಮೂಡಿಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!