AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತಂಡೇಲ್’ ಸಿನಿಮಾಗೆ 5 ಕೋಟಿ ರೂಪಾಯಿ ಸಂಭಾವನೆ ಪಡೆದ ಸಾಯಿ ಪಲ್ಲವಿ

ಬಹುಬೇಡಿಕೆಯ ನಟಿಯಾಗಿ ಸಾಯಿ ಪಲ್ಲವಿ ಗುರುತಿಸಿಕೊಂಡಿದ್ದಾರೆ. ಪ್ರತಿ ಸಿನಿಮಾಗೆ ಅವರು ಕೋಟ್ಯಂತರ ರೂಪಾಯಿ ಸಂಭಾವನೆ ಪಡೆಯುತ್ತಾರೆ. ವರದಿಗಳ ಪ್ರಕಾರ, ‘ತಂಡೇಲ್’ ಸಿನಿಮಾಗಾಗಿ ಅವರು 5 ಕೋಟಿ ರೂಪಾಯಿ ಸಂಬಳ ಪಡೆದಿದ್ದಾರೆ. ಫೆ.7ರಂದು ಈ ಸಿನಿಮಾ ರಿಲೀಸ್​ ಆಗುತ್ತಿದೆ. ಚಿತ್ರದ ಟ್ರೇಲರ್​ ಗಮನ ಸೆಳೆದಿದೆ.

‘ತಂಡೇಲ್’ ಸಿನಿಮಾಗೆ 5 ಕೋಟಿ ರೂಪಾಯಿ ಸಂಭಾವನೆ ಪಡೆದ ಸಾಯಿ ಪಲ್ಲವಿ
Sai Pallavi
ಮದನ್​ ಕುಮಾರ್​
|

Updated on: Feb 04, 2025 | 6:18 PM

Share

ಸಾಯಿ ಪಲ್ಲವಿ ಮತ್ತು ನಾಗ ಚೈತನ್ಯ ಅವರು ಎರಡನೇ ಬಾರಿಗೆ ಜೋಡಿಯಾಗಿ ನಟಿಸಿರುವ ‘ತಂಡೇಲ್’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಫೆಬ್ರವರಿ 7ರಂದು ಈ ಸಿನಿಮಾ ತೆರೆಕಾಣಲಿದೆ. ಈಗಾಗಲೇ ಟ್ರೇಲರ್​ ಮೂಲಕ ಸಿನಿಮಾ ಕೌತುಕ ಸೃಷ್ಟಿಸಿದೆ. ಮೀನುಗಾರನ ಪಾತ್ರದಲ್ಲಿ ನಾಗ ಚೈತನ್ಯ ಅವರು ನಟಿಸಿದ್ದಾರೆ. ಹಳ್ಳಿ ಹುಡುಗಿಯಾಗಿ ಸಾಯಿ ಪಲ್ಲವಿ ಅವರು ಕಾಣಿಸಿಕೊಂಡಿದ್ದಾರೆ. ಈ ಸಿನಿಮಾಗಾಗಿ ನಾಗ ಚೈತನ್ಯ ಮತ್ತು ಸಾಯಿ ಪಲ್ಲವಿ ಅವರು ಎಷ್ಟು ಸಂಭಾವನೆ ಪಡೆದಿದ್ದಾರೆ ಎಂಬುದು ಈಗ ಬಹಿರಂಗ ಆಗಿದೆ. ಸಾಯಿ ಪಲ್ಲವಿ ಅವರಿಗಿಂತಲೂ 3 ಪಟ್ಟು ಹೆಚ್ಚು ಸಂಭಾವನೆಯನ್ನು ನಾಗ ಚೈತನ್ಯ ಅವರಿಗೆ ನೀಡಲಾಗಿದೆ. ಆ ಬಗ್ಗೆ ಇಲ್ಲಿದೆ ವಿವರ.

ನಾಗ ಚೈತನ್ಯ ಅವರು ವೃತ್ತಿಜೀವನದಲ್ಲಿ ಏಳು-ಬೀಳುಗಳು ಇವೆ. ಸಿನಿಮಾ ಮಾತ್ರವಲ್ಲದೇ ವೆಬ್ ಸಿರೀಸ್ ಮೂಲಕವೂ ಅವರು ಯಶಸ್ಸು ಕಂಡಿದ್ದಾರೆ. ‘ತಂಡೇಲ್’ ಸಿನಿಮಾಗಾಗಿ ಅವರು ಸಾಕಷ್ಟು ಕಷ್ಟಪಟ್ಟಿದ್ದಾರೆ. ವರದಿಗಳ ಪ್ರಕಾರ ಈ ಚಿತ್ರಕ್ಕಾಗಿ ಅವರು ಬರೋಬ್ಬರಿ 15 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ. ಈವರೆಗಿನ ವೃತ್ತಿಜೀವನದಲ್ಲಿ ಅವರು ಪಡೆದ ಅತಿ ದೊಡ್ಡ ಸಂಭಾವನೆ ಇದಾಗಿದೆ.

ಇನ್ನು, ಸಾಯಿ ಪಲ್ಲವಿ ಕೂಡ ಬಹುಬೇಡಿಕೆಯ ನಟಿ. ಬಹುಭಾಷೆಯಲ್ಲಿ ಅವರು ಮಿಂಚುತ್ತಾರೆ. ಗ್ಲಾಮರ್​ ಮೇಲೆ ಅವಲಂಬಿತವಾಗದೇ ನಟನೆಯ ಮೂಲಕವೇ ಅವರು ಎಲ್ಲರ ಹೃದಯ ಗೆದ್ದಿದ್ದಾರೆ. ‘ತಂಡೇಲ್’ ಸಿನಿಮಾದಲ್ಲಿ ನಟಿಸಿದ್ದಕ್ಕೆ ಅವರಿಗೆ 5 ಕೋಟಿ ರೂಪಾಯಿ ಸಂಭಾವನೆ ನೀಡಲಾಗಿದೆ. ಟ್ರೇಲರ್​ನಲ್ಲಿ ಅವರ ಪಾತ್ರ ಹೈಲೈಟ್ ಆಗಿದೆ. ಈ ಸಿನಿಮಾ ನೋಡಲು ಅಭಿಮಾನಿಗಳು ಕಾದಿದ್ದಾರೆ.

ಇದನ್ನೂ ಓದಿ: ‘ಅರ್ಜುನ್ ರೆಡ್ಡಿ’ ಚಿತ್ರದಲ್ಲಿ ನಟಿಸಬೇಕಿತ್ತು ಸಾಯಿ ಪಲ್ಲವಿ; ರಿಜೆಕ್ಟ್ ಆಗಲು ಕಾರಣ ಆಯ್ತು ಸ್ಲೀವ್​ಲೆಸ್ ಡ್ರೆಸ್ ವಿಚಾರ

ಬಿಡುಗಡೆಗೂ ಮುನ್ನವೇ ‘ತಂಡೇಲ್’ ಸಿನಿಮಾ ಬಗ್ಗೆ ಪಾಸಿಟಿವ್ ಟಾಕ್ ಶುರುವಾಗಿದೆ. ಸಿನಿಮಾ ರಿಲೀಸ್ ಆದ ಬಳಿಕ ಉತ್ತಮ ವಿಮರ್ಶೆ ಸಿಕ್ಕರೆ ಖಂಡಿತಾ ಸಿನಿಮಾ ಗೆಲ್ಲಲಿದೆ. ಈ ಗೆಲುವಿಗಾಗಿ ನಾಗ ಚೈತನ್ಯ ಅವರು ಕಾಯುತ್ತಿದ್ದಾರೆ. ದೇವಿ ಶ್ರೀ ಪ್ರಸಾದ್ ಅವರು ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಬನ್ನಿ ವಾಸು ಅವರು ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ಚಂದು ಮೊಂಡೇಟಿ ಅವರ ನಿರ್ದೇಶನದಲ್ಲಿ ‘ತಂಡೇಲ್’ ಸಿನಿಮಾ ಮೂಡಿಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಕುಟುಂಬ ಸಮೇತ ಆತ್ಮಹತ್ಯೆ:ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ
ಕುಟುಂಬ ಸಮೇತ ಆತ್ಮಹತ್ಯೆ:ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ
ದರ್ಶನ್ ಕಥೆ ಅಲ್ಲ: ‘ಬಾಸ್’ ಸಿನಿಮಾಗೆ ಸೆನ್ಸಾರ್ ಪ್ರಕ್ರಿಯೆ ಬಳಿಕ ಸ್ಪಷ್ಟನೆ
ದರ್ಶನ್ ಕಥೆ ಅಲ್ಲ: ‘ಬಾಸ್’ ಸಿನಿಮಾಗೆ ಸೆನ್ಸಾರ್ ಪ್ರಕ್ರಿಯೆ ಬಳಿಕ ಸ್ಪಷ್ಟನೆ