AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಮಲ್ ಹಾಸನ್ ನಿರ್ಮಾಣದ ಹೊಸ ಸಿನಿಮಾದಲ್ಲಿ ಸಾಯಿ ಪಲ್ಲವಿ, ಚಿತ್ರೀಕರಣ ಪ್ರಾರಂಭ

Sai Pallavi: ಕಮಲ್ ಹಾಸನ್ ನಿರ್ಮಾಣ ಮಾಡುತ್ತಿರುವ ಹೊಸ ತಮಿಳು ಸಿನಿಮಾದಲ್ಲಿ ಸಾಯಿ ಪಲ್ಲವಿ, ಶಿವಕಾರ್ತಿಕೇಯನ್ ಒಟ್ಟಿಗೆ ನಟಿಸುತ್ತಿದ್ದಾರೆ. ಸಿನಿಮಾದ ಚಿತ್ರೀಕರಣ ಆರಂಭವಾಗಿದೆ.

ಕಮಲ್ ಹಾಸನ್ ನಿರ್ಮಾಣದ ಹೊಸ ಸಿನಿಮಾದಲ್ಲಿ ಸಾಯಿ ಪಲ್ಲವಿ, ಚಿತ್ರೀಕರಣ ಪ್ರಾರಂಭ
ಕಮಲ್ ಹಾಸನ್ ಸಿನಿಮಾ
ಮಂಜುನಾಥ ಸಿ.
|

Updated on: May 05, 2023 | 9:10 PM

Share

ನಟಿ ಸಾಯಿಪಲ್ಲವಿ (Sai Pallavi), ದಕ್ಷಿಣದ ಪ್ರತಿಭಾವಂತ ನಟಿಯರಲ್ಲಿ ಒಬ್ಬರು. ತಮ್ಮ ವಾರಗೆಯ ಇತರೆ ನಟಿಯರಿಗಿಂತಲೂ ಬಹಳ ಭಿನ್ನ. ಸಿಕ್ಕ ಪಾತ್ರಗಳನ್ನೆಲ್ಲ ಒಪ್ಪಿಕೊಳ್ಳದೆ. ನಟನೆಗೆ ಅವಕಾಶವಿರುವ, ಸಂದೇಶವಿರುವ ಸಿನಿಮಾಗಳನ್ನು ಮಾತ್ರವೇ ಒಪ್ಪಿ, ನಟಿಸುತ್ತಾ ಬರುತ್ತಿದ್ದಾರೆ. ಆಯ್ಕೆಯ ವಿಷಯದಲ್ಲಿ ಬಹಳ ಚ್ಯೂಸಿ ಆಗಿರುವ ಸಾಯಿ ಪಲ್ಲವಿ, ಸ್ಟಾರ್ ನಟರ ಸಿನಿಮಾ ಅವಕಾಶಗಳನ್ನೂ ಪಕ್ಕಕ್ಕೆ ತಳ್ಳಿದ್ದಾರೆ. ಅಂಥಹವರು ಇದೀಗ ತಮ್ಮ ಮೆಚ್ಚಿನ ನಟ ಕಮಲ್ ಹಾಸನ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಆದರೆ ಸಾಯಿ ಪಲ್ಲವಿ ನಟಿಸುತ್ತಿರುವ ಈ ಸಿನಿಮಾದಲ್ಲಿ ಕಮಲ್ ಹಾಸನ್ ನಾಯಕರಲ್ಲ ಬದಲಿಗೆ ನಿರ್ಮಾಪಕರು.

ಸೂಪರ್ ಸ್ಟಾರ್ ಕಮಲ್ ಹಾಸನ್ (Kamal Haasan) ಸಾರಥ್ಯದ ರಾಜ್ ಕಮಲ್ ಫಿಲ್ಮ್ಸ್ಇಂಟರ್ನ್ಯಾಷನಲ್ (RKFI) ನಡಿ ಮೂಡಿಬಂದಿದ್ದ ‘ವಿಕ್ರಮ್’ ಸಿನಿಮಾ ಬ್ಲಾಕ್ ಬಸ್ಟರ್ ಅನಿಸಿಕೊಂಡಿದೆ. ವಿಕ್ರಂ, ರಾಜ್ ಕಮಲ್ ಫಿಲ್ಮ್ಸ್ ಇಂಟರ್ ನ್ಯಾಷನಲ್ ನ 50 ಚಿತ್ರ. ಲೋಕೇಶ್ ಕನಗರಾಜ್ ನಿರ್ದೇಶನದ ಆ ಸಿನಿಮಾ ಅದ್ಧೂರಿ ಸಕ್ಸಸ್ ಕಂಡಿದೆ. ಇದೀಗ ಕಮಲ್​ರ ರಾಜ್ ಕಮಲ್ ನಿರ್ಮಾಣ ಸಂಸ್ಥೆಯ 51 ಚಿತ್ರ ಸೆಟ್ಟೇರಿದೆ. ಮೇಜರ್ ಚಿತ್ರ ನಿರ್ಮಿಸಿದ್ದ ರಾಜ್ ಕಮಲ್ ಫಿಲ್ಮ್ಸ್ ಹಾಗೂ ಸೋನಿ ಪಿಕ್ಚರ್ಸ್ ಇಂಟರ್ನ್ಯಾಷನಲ್ ಪ್ರೊಡಕ್ಷನ್ಸ್ (SPIP) ಮತ್ತೊಮ್ಮೆ ಜೊತೆಗೂಡಿ ಹೊಸ ಸಿನಿಮಾಕ್ಕೆ ಕೈ ಹಾಕಿದ್ದಾರೆ.

ಕಮಲ್ ಹಾಸನ್ ನಿರ್ಮಾಣ ಮಾಡುತ್ತಿರುವ ಹೊಸ ಸಿನಿಮಾದಲ್ಲಿ ತಮಿಳು ಚಿತ್ರರಂಗದ ಖ್ಯಾತ ನಟ ಶಿವಕಾರ್ತಿಯೇನ್ ನಟಿಸುತ್ತಿದ್ದು, ನಾಯಕಿಯಾಗಿ ಸಾಯಿ ಪಲ್ಲವಿ ನಟಿಸುತ್ತಿದ್ದಾರೆ. ಚಿತ್ರದ ಮುಹೂರ್ತ ಸಮಾರಂಭ ಚೆನ್ನೈನಲ್ಲಿ ಅದ್ಧೂರಿಯಾಗಿ ನೆರವೇರಿದೆ. ಕಮಲ್ ಹಾಸನ್ ಈ ಸಿನಿಮಾಗೆ ಕ್ಲಾಪ್ ಮಾಡಿ ಶುಭ ಹಾರೈಸಿದ್ದಾರೆ. ಆರ್ ಮಹೇಂದ್ರನ್, ಶಿವಕಾರ್ತಿಕೇಯನ್, ಸಾಯಿ ಪಲ್ಲವಿ, ರಾಜ್ ಕುಮಾರ್ ಪೆರಿಯಸಾಮಿ, ಜಿವಿ ಪ್ರಕಾಶ್, ಸಹ ನಿರ್ಮಾಪಕ ವಕೀಲ್ ಖಾನ್, ಲಾಡಾ ಗುರುಡೆನ್ ಸಿಂಗ್, ಜನರಲ್ ಮ್ಯಾನೇಜರ್ ಮತ್ತು ಹೆಡ್, ಸೋನಿ ಪಿಕ್ಚರ್ಸ್ ಇಂಟರ್ನ್ಯಾಷನಲ್ ಪ್ರೊಡಕ್ಷನ್ಸ್, ಇಂಡಿಯಾ ಮತ್ತು ಶ್ರೀ ನಾರಾಯಣನ್, CEO, RKFI ಮುಂತಾದವರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಈ ಸಿನಿಮಾಕ್ಕೆ ರಾಜ್ ಕುಮಾರ್ ಪೆರಿಯಸಾಮಿ ಕಥೆ ಬರೆದು ನಿರ್ದೇಶನ ಮಾಡುತ್ತಿದ್ದು, ಶಿವಕಾರ್ತಿಕೇಯನ್ ಅವರನ್ನು ಹಿಂದೆಂದೂ ನೋಡಿರದ ರೀತಿಯಲ್ಲಿ ದೊಡ್ಡ ಪರದೆಯ ಮೇಲೆ ತರುವ ಪ್ರಯತ್ನದಲ್ಲಿದ್ದಾರೆ. ಸಿನಿಮಾಕ್ಕೆ ಇನ್ನೂ ಹೆಸರಿಟ್ಟಿಲ್ಲವಾದರೂ ಶಿವಕಾರ್ತಿಕೇಯನ್​ರ 21ನೇ ಸಿನಿಮಾ ಇದಾಗಿರುವ ಕಾರಣ #SK21 ಎಂದು ಕರೆಯಲಾಗುತ್ತಿದೆ. ಶಿವಕಾರ್ತಿಕೇಯನ್ ಹಾಗೂ ಸಾಯಿ ಪಲ್ಲವಿ ಅವರೊಟ್ಟಿಗೆ ಕಾಶ್ಮೀರದಲ್ಲಿ ಎರಡು ತಿಂಗಳುಗಳ ಕಾಲ ಶೂಟಿಂಗ್ ನಡೆಸಲು ಚಿತ್ರತಂಡ ಪ್ಲಾನ್ ಹಾಕಿಕೊಂಡಿದೆ.

ಜಿ ವಿ ಪ್ರಕಾಶ್ ಸಂಗೀತ ನಿರ್ದೇಶನ, , ಸಿಎಚ್ ಸಾಯಿ ಛಾಯಾಗ್ರಹಣ, ಆರ್. ಕಲೈವನನ್ ಸಂಕಲನಕಾರ ಮತ್ತು ಸ್ಟೀಫನ್ ರಿಕ್ಟರ್ ಸಾಹಸ ನಿರ್ದೇಶಕ ಚಿತ್ರಕ್ಕಿದೆ. ಗಾಡ್ ಬ್ಲೆಸ್ ಎಂಟರ್‌ಟೈನ್‌ಮೆಂಟ್‌ನ ಸಹ-ನಿರ್ಮಾಣದಲ್ಲಿದೆ ಕೈ ಜೋಡಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?