AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೇದಿಕೆ ಮೇಲೆ ಗಳಗಳನೆ ಅತ್ತ ಸಾಯಿ ಪಲ್ಲವಿ; ಕಣ್ಣೀರು ಹಾಕಿದ್ದಕ್ಕೆ ಕಾರಣ ವಿವರಿಸಿದ ನಟಿ

Sai Pallavi Viral Video: ‘ಶ್ಯಾಮ್​ ಸಿಂಗ​ ರಾಯ್​’ ಚಿತ್ರದ ಪ್ರೀ-ರಿಲೀಸ್​ ಇವೆಂಟ್​ನಲ್ಲಿ ಸಾಯಿ ಪಲ್ಲವಿ ಅವರು ಕಣ್ಣೀರು ಹಾಕಿದ ವಿಡಿಯೋ ಎಲ್ಲ ಕಡೆ ವೈರಲ್​ ಆಗುತ್ತಿದೆ. ಅವರ ಮಾತುಗಳಿಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.

ವೇದಿಕೆ ಮೇಲೆ ಗಳಗಳನೆ ಅತ್ತ ಸಾಯಿ ಪಲ್ಲವಿ; ಕಣ್ಣೀರು ಹಾಕಿದ್ದಕ್ಕೆ ಕಾರಣ ವಿವರಿಸಿದ ನಟಿ
ಸಾಯಿ ಪಲ್ಲವಿ
TV9 Web
| Updated By: ಮದನ್​ ಕುಮಾರ್​|

Updated on: Dec 19, 2021 | 12:19 PM

Share

ದಕ್ಷಿಣ ಭಾರತದ ಬಹುಬೇಡಿಕೆಯ ನಟಿಯರಲ್ಲಿ ಸಾಯಿ ಪಲ್ಲವಿ (Sai Pallavi) ಹೆಸರು ಕೂಡ ಮುಂಚೂಣಿಯಲ್ಲಿದೆ. ಅವರ ಕೈಯಲ್ಲಿ ಅನೇಕ ಸಿನಿಮಾಗಳಿವೆ. ಈ ವರ್ಷ ತೆರೆಕಂಡ ‘ಲವ್​ ಸ್ಟೋರಿ’ ಚಿತ್ರದಿಂದ ಅವರಿಗೆ ಭರ್ಜರಿ ಯಶಸ್ಸು ಸಿಕ್ಕಿತು. ಈಗ ‘ಶ್ಯಾಮ್​ ಸಿಂಗ ರಾಯ್​’ (Shyam Singha Roy) ಚಿತ್ರದ ಬಿಡುಗಡೆಯಾಗಿ ಅವರು ಎದುರು ನೋಡುತ್ತಿದ್ದಾರೆ. ಅಚ್ಚರಿ ಎಂದರೆ ಈ ಚಿತ್ರದ ಪ್ರೀ ರಿಲೀಸ್​ ಇವೆಂಟ್​ನಲ್ಲಿ ಸಾಯಿ ಪಲ್ಲವಿ ಗಳಗಳನೆ ಕಣ್ಣೀರು ಹಾಕಿದ್ದಾರೆ. ಬಹಿರಂಗವಾಗಿಯೇ ಅವರು ಅತ್ತಿದ್ದಾರೆ. ಖುಷಿಯಿಂದ ಇರಬೇಕಾದ ಸಂದರ್ಭದಲ್ಲಿ ಅವರು ಕಣ್ಣೀರು ಸುರಿಸಿದ್ದು ಯಾಕೆ ಎಂದು ಒಂದು ಕ್ಷಣ ಎಲ್ಲರಿಗೂ ಅಚ್ಚರಿ ಆಯಿತು. ತಮ್ಮ ಅಳುವಿಗೆ ಕಾರಣ ಏನು ಅಂತ ಅದೇ ವೇದಿಕೆಯಲ್ಲಿ ಸಾಯಿ ಪಲ್ಲವಿ ವಿವರಿಸಿದ್ದಾರೆ. ಅಭಿಮಾನಿಗಳ ಪ್ರೀತಿಯನ್ನು ನೆನೆದು ಅವರು ಈ ಪರಿ ಭಾವುಕರಾಗಿದ್ದಾರೆ.

‘ಶ್ಯಾಮ್​ ಸಿಂಗ ರಾಯ್​’ ಚಿತ್ರಕ್ಕೆ ನಾನಿ ಹೀರೋ. ಅವರ ಜತೆ ಸಾಯಿ ಪಲ್ಲವಿ, ಕೃತಿ ಶೆಟ್ಟಿ, ಮಡೋನ್ನಾ ಸೆಬಾಸ್ಟಿಯನ್​ ಕೂಡ ನಟಿಸಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಪ್ರೀ-ರಿಲೀಸ್​ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮಾತನಾಡಲು ಮೈಕ್​ ಹಿಡಿದುಕೊಳ್ಳುತ್ತಿದ್ದಂತೆಯೇ ಸಾಯಿ ಪಲ್ಲವಿ ಭಾವುಕರಾದರು.

‘ನಿಮ್ಮೆಲ್ಲರ ಮುಂದೆ ನಿಂತುಕೊಳ್ಳಲು ನಾನು ಏನು ಮಾಡಿದ್ದೇನೋ ತಿಳಿದಿಲ್ಲ. ನನ್ನ ತಂದೆ-ತಾಯಿ, ನಿರ್ದೇಶಕರು, ನಿರ್ಮಾಪಕರು, ಸಹ-ಕಲಾವಿದರು, ಕ್ಯಾಮೆರಾ ಹಿಂದಿರುವ ತಂತ್ರಜ್ಞರಿಂದ ಇದೆಲ್ಲ ಸಾಧ್ಯವಾಗಿದೆ. ನೀವೆಲ್ಲ ನನ್ನ ಹೆಸರು ಕೂಗುತ್ತಿರುವಾಗ ನಾನು ಎಮೋಷನಲ್​ ಆದೆ’ ಎಂದು ಸಾಯಿ ಪಲ್ಲವಿ ಹೇಳಿದ್ದಾರೆ. ‘ಸಿನಿಮಾ ಕ್ಷೇತ್ರದಲ್ಲಿ ಯಶಸ್ವಿ ಆಗಬೇಕು ಅಂತ ಎಷ್ಟೋ ಜನರು ಕಷ್ಟಪಡುತ್ತಾರೆ. ಅದರೆ ಎಲ್ಲರಿಗೂ ಗೆಲುವು ಸಿಗುವುದಿಲ್ಲ. ಅವಕಾಶ ಸಿಗುವುದು ಕೂಡ ಕೆಲವೇ ಮಂದಿಗೆ ಮಾತ್ರ. ನನಗೆ ಮೊದಲ ಸಿನಿಮಾದಿಂದಲೇ ನಿಮ್ಮೆಲ್ಲರ ಪ್ರೀತಿ ಸಿಕ್ಕಿದೆ. ನನ್ನ ಪಾಲಿಗೆ ಇದಕ್ಕಿಂತ ದೊಡ್ಡ ಪ್ರಶಸ್ತಿ ಬೇರೊಂದಿಲ್ಲ’ ಎಂದು ಸಾಯಿ ಪಲ್ಲವಿ ಹೇಳಿದ್ದಾರೆ.

‘ಶ್ಯಾಮ್​ ಸಿಂಗ​ ರಾಯ್​’ ಚಿತ್ರದ ಪ್ರೀ-ರಿಲೀಸ್​ ಇವೆಂಟ್​ನಲ್ಲಿ ಸಾಯಿ ಪಲ್ಲವಿ ಅವರು ಕಣ್ಣೀರು ಹಾಕಿದ ವಿಡಿಯೋ ಎಲ್ಲ ಕಡೆ ವೈರಲ್​ ಆಗುತ್ತಿದೆ. ಅವರ ಮಾತುಗಳಿಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. ‘ಶ್ಯಾಮ್​ ಸಿಂಗ​ ರಾಯ್​’ ಸಿನಿಮಾ ಡಿ.24ರಂದು ಬಿಡುಗಡೆ ಆಗಲಿದೆ. ಪುನರ್ಜನ್ಮದ ಕಥೆಯನ್ನು ಈ ಚಿತ್ರ ಹೊಂದಿದೆ. ರೆಟ್ರೋ ಶೈಲಿಯಲ್ಲಿ ಚಿತ್ರ ಮೂಡಿಬಂದಿದೆ. ಎರಡು ಶೇಡ್​ ಇರುವ ಪಾತ್ರದಲ್ಲಿ ಸಾಯಿ ಪಲ್ಲವಿ ಮತ್ತು ನಾನಿ ನಟಿಸಿದ್ದಾರೆ.

ಇದನ್ನೂ ಓದಿ:

ಚಿತ್ರರಂಗಕ್ಕೆ ಕಾಲಿಟ್ಟ ಸಾಯಿ ಪಲ್ಲವಿ ತಂಗಿ ಪೂಜಾ; ಅಕ್ಕನಂತೆ ಮಿಂಚಲು ಸಾಧ್ಯವೇ?

ನಾಗ ಚೈತನ್ಯ ಜತೆ ಸಾಯಿ ಪಲ್ಲವಿ ಲಿಪ್​ ಲಾಕ್​ ಮಾಡಿದ್ದು ನಿಜವೇ? ‘ಲವ್​ ಸ್ಟೋರಿ’ ಹಿಂದಿನ ಸತ್ಯ ಬಾಯ್ಬಿಟ್ಟ ನಟಿ

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು