AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗಾರ್ಗಿ’ ಚಿತ್ರಕ್ಕೆ ಐದಕ್ಕೆ ಐದು ಸ್ಟಾರ್ ನೀಡಿದ ವಿಮರ್ಶಕರು; ಸಾಯಿ ಪಲ್ಲವಿ ಫುಲ್​ ಖುಷ್

ಸಿನಿಮಾ ವಿಮರ್ಶಕ ರಾಜಶೇಖರ್ ಅವರು ‘ಗಾರ್ಗಿ’ ಚಿತ್ರಕ್ಕೆ ಭೇಷ್ ಎಂದಿದ್ದಾರೆ. ಈ ಚಿತ್ರದಲ್ಲಿನ ಸಾಯಿ ಪಲ್ಲವಿ ನಟನೆಗೆ ರಾಷ್ಟ್ರ ಪ್ರಶಸ್ತಿ ಸಿಗಬೇಕು ಎಂದು ಅಭಿಪ್ರಾಯ ಹೊರಹಾಕಿದ್ದಾರೆ.

‘ಗಾರ್ಗಿ’ ಚಿತ್ರಕ್ಕೆ ಐದಕ್ಕೆ ಐದು ಸ್ಟಾರ್ ನೀಡಿದ ವಿಮರ್ಶಕರು; ಸಾಯಿ ಪಲ್ಲವಿ ಫುಲ್​ ಖುಷ್
ಸಾಯಿ ಪಲ್ಲವಿ
TV9 Web
| Edited By: |

Updated on:Jul 14, 2022 | 2:39 PM

Share

ನಟಿ ಸಾಯಿ ಪಲ್ಲವಿ (Sai Pallavi) ಅವರ ನಟನೆಯ ‘ವಿರಾಟ ಪರ್ವಂ’ ಸಿನಿಮಾ (Virat Parvam Movie) ಹೀನಾಯ ಸೋಲು ಕಂಡಿತು. ಈ ಚಿತ್ರದ ಪ್ರಚಾರದ ವೇಳೆ ಅವರು ನೀಡಿದ ಹೇಳಿಕೆ ಈ ಸಿನಿಮಾ ಸೋಲಿಗೆ ಕಾರಣ ಎನ್ನುವ ಮಾತು ಕೇಳಿ ಬಂತು. ಈ ಬೆನ್ನಲ್ಲೇ ಅವರ ನಟನೆಯ ‘ಗಾರ್ಗಿ’ ಸಿನಿಮಾ ತೆರೆಗೆ ಬರಲು ರೆಡಿ ಆಗಿದೆ. ಈ ಚಿತ್ರ ಜುಲೈ 15ರಂದು ರಿಲೀಸ್ ಆಗುತ್ತಿದೆ. ‘ಗಾರ್ಗಿ’ ರಿಲೀಸ್​ಗೂ ಮೊದಲೇ ಸ್ಪೆಷಲ್​ ಶೋ ಆಯೋಜಿಸಲಾಗಿತ್ತು. ಈ ವೇಳೆ ಸಿನಿಮಾ ನೋಡಿದ ಅನೇಕರು ಭೇಷ್ ಎಂದಿದ್ದಾರೆ. ಸಾಯಿ ಪಲ್ಲವಿ ಅವರ ನಟನೆಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಇದರಿಂದ ಚಿತ್ರಕ್ಕೆ ದೊಡ್ಡ ಬಲ ಸಿಕ್ಕಂತೆ ಆಗಿದೆ.

ಇತ್ತೀಚೆಗೆ ‘ಗಾರ್ಗಿ’ ಸಿನಿಮಾದ ಟ್ರೇಲರ್ ರಿಲೀಸ್ ಆಯಿತು. ಈ ಟ್ರೇಲರ್​ನಲ್ಲಿ ಸಾಯಿ ಪಲ್ಲವಿ ಅವರು ಗಾರ್ಗಿ ಹೆಸರಿನ ಟೀಚರ್ ಪಾತ್ರ ಮಾಡುತ್ತಿರುವ ವಿಚಾರ ರಿವೀಲ್ ಆಗಿತ್ತು. ಗಾರ್ಗಿಯ ತಂದೆ ಸೆಕ್ಯುರಿಟಿ ಗಾರ್ಡ್​. ಗಾರ್ಗಿ ತಂದೆಯನ್ನು ಪೊಲೀಸರು ಅರೆಸ್ಟ್​ ಮಾಡುತ್ತಾರೆ. ಅದು ಏಕೆ? ತಂದೆಯನ್ನು ಗಾರ್ಗಿ ಮರಳಿ ಹೇಗೆ ಮನೆಗೆ ಕರೆತರುತ್ತಾಳೆ ಎಂಬುದು ಸಿನಿಮಾದ ಕಥೆ ಎಂಬುದು ಟ್ರೇಲರ್​ನಲ್ಲಿ ಗೊತ್ತಾಗಿದೆ. ಅನೇಕ ವಿಮರ್ಶಕರು ಚಿತ್ರಕ್ಕೆ ಐದಕ್ಕೆ ಐದು ಸ್ಟಾರ್ಸ್ ನೀಡಿದ್ದಾರೆ.

ಇದನ್ನೂ ಓದಿ
Image
Virata Parvam OTT Release: ಥಿಯೇಟರ್​ನಲ್ಲಿ ಸೋತ ಸಾಯಿ ಪಲ್ಲವಿಯ ‘ವಿರಾಟ ಪರ್ವಂ’ ಚಿತ್ರಕ್ಕೀಗ ಒಟಿಟಿಯೇ ಗತಿ; ಪ್ರಸಾರ​ ಯಾವಾಗ?
Image
Sai Pallavi: ಥಿಯೇಟರ್​ಗೆ ಜನರನ್ನು ಕರೆಸುವಲ್ಲಿ ಸೋತ ಸಾಯಿ ಪಲ್ಲವಿ; ‘ಲೇಡಿ ಪವರ್​ ಸ್ಟಾರ್​’ ಬಿರುದು ಈಗೇನಾಯ್ತು?
Image
Sai Pallavi: ಸಾಯಿ ಪಲ್ಲವಿ ಬೆಂಬಲಕ್ಕೆ ನಿಂತ ಸಾವಿರಾರು ಮಂದಿ; ಸ್ಪಷ್ಟನೆ ವಿಡಿಯೋ ಕಂಡು ಜನರು ಹೇಳ್ತಿರೋದೇನು?
Image
Sai Pallavi: ಸಾಯಿ ಪಲ್ಲವಿ ವಿವಾದದ ಬಳಿಕ ‘ವಿರಾಟ ಪರ್ವಂ’ ಚಿತ್ರಕ್ಕೆ ಜನರು ನೀಡಿದ ರೇಟಿಂಗ್​ ಎಷ್ಟು?

ಸಿನಿಮಾ ವಿಮರ್ಶಕ ರಾಜಶೇಖರ್ ಅವರು ‘ಗಾರ್ಗಿ’ ಚಿತ್ರಕ್ಕೆ ಭೇಷ್ ಎಂದಿದ್ದಾರೆ. ಈ ಚಿತ್ರದಲ್ಲಿನ ಸಾಯಿ ಪಲ್ಲವಿ ನಟನೆಗೆ ರಾಷ್ಟ್ರ ಪ್ರಶಸ್ತಿ ಸಿಗಬೇಕು ಎಂದು ಅಭಿಪ್ರಾಯ ಹೊರಹಾಕಿದ್ದಾರೆ. ಇನ್ನು, ಟ್ರೇಡ್​ ವಿಶ್ಲೇಷಕ ರಮೇಶ್​ ಬಾಲಾ ಅವರು ಕೂಡ ಈ ಚಿತ್ರಕ್ಕೆ ಐದಕ್ಕೆ ಐದು ಸ್ಟಾರ್​ ನೀಡಿ ಸಾಯಿ ಪಲ್ಲವಿ ನಟನೆಯನ್ನು ಹೊಗಳಿದ್ದಾರೆ.

ಇದನ್ನೂ ಓದಿ: ಸಾಯಿ ಪಲ್ಲವಿಗೆ ಹಿನ್ನಡೆ: ಪೊಲೀಸ್ ವಿಚಾರಣೆಗೆ ಹಾಜರಾಗಲೇ ಬೇಕು ಎಂದ ಕೋರ್ಟ್

‘ದಿ ಕಾಶ್ಮೀರ್ ಫೈಲ್ಸ್​’ ಸಿನಿಮಾದಲ್ಲಿ ತೋರಿಸಿದ  ಕಾಶ್ಮೀರಿ ಪಂಡಿತರ ಹತ್ಯೆಯನ್ನು ಸಾಯಿ ಪಲ್ಲವಿ ಅವರು ಇತ್ತೀಚೆಗೆ ನಡೆದ ಮುಸ್ಲಿಂ ಡ್ರೈವರ್ ಮೇಲಿನ ಹಲ್ಲೆಗೆ ಹೋಲಿಕೆ ಮಾಡಿದ್ದರು. ಈ ಹೇಳಿಕೆಯಿಂದ ಅವರ ವಿರುದ್ಧ ಸಾಕಷ್ಟು ಟೀಕೆಗಳು ವ್ಯಕ್ತವಾದವು. ಈ ಬಗ್ಗೆ ಅವರು ಸ್ಪಷ್ಟನೆ ನೀಡುವ ವಿಡಿಯೋ ಮಾಡಿ, ‘ಎಲ್ಲರ ಜೀವವೂ ಮುಖ್ಯ ಎಂದು ಹೇಳಿದ್ದರು’. ಅವರ ಈ ಹೇಳಿಕೆಯಿಂದಲೇ ‘ವಿರಾಟ ಪರ್ವಂ’ ಸಿನಿಮಾ ಸೋತಿದೆ ಎಂಬ ಮಾತುಗಳು ಕೂಡ ಕೇಳಿ ಬಂದಿವೆ. ಈಗ ಅವರು ‘ಗಾರ್ಗಿ’ ಚಿತ್ರದ ಮೂಲಕ ಗೆಲುವು ಕಾಣುವ ಸೂಚನೆ ನೀಡಿದ್ದಾರೆ.

Published On - 2:38 pm, Thu, 14 July 22

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು