‘ಗಾರ್ಗಿ’ ಚಿತ್ರಕ್ಕೆ ಐದಕ್ಕೆ ಐದು ಸ್ಟಾರ್ ನೀಡಿದ ವಿಮರ್ಶಕರು; ಸಾಯಿ ಪಲ್ಲವಿ ಫುಲ್​ ಖುಷ್

ಸಿನಿಮಾ ವಿಮರ್ಶಕ ರಾಜಶೇಖರ್ ಅವರು ‘ಗಾರ್ಗಿ’ ಚಿತ್ರಕ್ಕೆ ಭೇಷ್ ಎಂದಿದ್ದಾರೆ. ಈ ಚಿತ್ರದಲ್ಲಿನ ಸಾಯಿ ಪಲ್ಲವಿ ನಟನೆಗೆ ರಾಷ್ಟ್ರ ಪ್ರಶಸ್ತಿ ಸಿಗಬೇಕು ಎಂದು ಅಭಿಪ್ರಾಯ ಹೊರಹಾಕಿದ್ದಾರೆ.

‘ಗಾರ್ಗಿ’ ಚಿತ್ರಕ್ಕೆ ಐದಕ್ಕೆ ಐದು ಸ್ಟಾರ್ ನೀಡಿದ ವಿಮರ್ಶಕರು; ಸಾಯಿ ಪಲ್ಲವಿ ಫುಲ್​ ಖುಷ್
ಸಾಯಿ ಪಲ್ಲವಿ
Follow us
| Updated By: ರಾಜೇಶ್ ದುಗ್ಗುಮನೆ

Updated on:Jul 14, 2022 | 2:39 PM

ನಟಿ ಸಾಯಿ ಪಲ್ಲವಿ (Sai Pallavi) ಅವರ ನಟನೆಯ ‘ವಿರಾಟ ಪರ್ವಂ’ ಸಿನಿಮಾ (Virat Parvam Movie) ಹೀನಾಯ ಸೋಲು ಕಂಡಿತು. ಈ ಚಿತ್ರದ ಪ್ರಚಾರದ ವೇಳೆ ಅವರು ನೀಡಿದ ಹೇಳಿಕೆ ಈ ಸಿನಿಮಾ ಸೋಲಿಗೆ ಕಾರಣ ಎನ್ನುವ ಮಾತು ಕೇಳಿ ಬಂತು. ಈ ಬೆನ್ನಲ್ಲೇ ಅವರ ನಟನೆಯ ‘ಗಾರ್ಗಿ’ ಸಿನಿಮಾ ತೆರೆಗೆ ಬರಲು ರೆಡಿ ಆಗಿದೆ. ಈ ಚಿತ್ರ ಜುಲೈ 15ರಂದು ರಿಲೀಸ್ ಆಗುತ್ತಿದೆ. ‘ಗಾರ್ಗಿ’ ರಿಲೀಸ್​ಗೂ ಮೊದಲೇ ಸ್ಪೆಷಲ್​ ಶೋ ಆಯೋಜಿಸಲಾಗಿತ್ತು. ಈ ವೇಳೆ ಸಿನಿಮಾ ನೋಡಿದ ಅನೇಕರು ಭೇಷ್ ಎಂದಿದ್ದಾರೆ. ಸಾಯಿ ಪಲ್ಲವಿ ಅವರ ನಟನೆಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಇದರಿಂದ ಚಿತ್ರಕ್ಕೆ ದೊಡ್ಡ ಬಲ ಸಿಕ್ಕಂತೆ ಆಗಿದೆ.

ಇತ್ತೀಚೆಗೆ ‘ಗಾರ್ಗಿ’ ಸಿನಿಮಾದ ಟ್ರೇಲರ್ ರಿಲೀಸ್ ಆಯಿತು. ಈ ಟ್ರೇಲರ್​ನಲ್ಲಿ ಸಾಯಿ ಪಲ್ಲವಿ ಅವರು ಗಾರ್ಗಿ ಹೆಸರಿನ ಟೀಚರ್ ಪಾತ್ರ ಮಾಡುತ್ತಿರುವ ವಿಚಾರ ರಿವೀಲ್ ಆಗಿತ್ತು. ಗಾರ್ಗಿಯ ತಂದೆ ಸೆಕ್ಯುರಿಟಿ ಗಾರ್ಡ್​. ಗಾರ್ಗಿ ತಂದೆಯನ್ನು ಪೊಲೀಸರು ಅರೆಸ್ಟ್​ ಮಾಡುತ್ತಾರೆ. ಅದು ಏಕೆ? ತಂದೆಯನ್ನು ಗಾರ್ಗಿ ಮರಳಿ ಹೇಗೆ ಮನೆಗೆ ಕರೆತರುತ್ತಾಳೆ ಎಂಬುದು ಸಿನಿಮಾದ ಕಥೆ ಎಂಬುದು ಟ್ರೇಲರ್​ನಲ್ಲಿ ಗೊತ್ತಾಗಿದೆ. ಅನೇಕ ವಿಮರ್ಶಕರು ಚಿತ್ರಕ್ಕೆ ಐದಕ್ಕೆ ಐದು ಸ್ಟಾರ್ಸ್ ನೀಡಿದ್ದಾರೆ.

ಇದನ್ನೂ ಓದಿ
Image
Virata Parvam OTT Release: ಥಿಯೇಟರ್​ನಲ್ಲಿ ಸೋತ ಸಾಯಿ ಪಲ್ಲವಿಯ ‘ವಿರಾಟ ಪರ್ವಂ’ ಚಿತ್ರಕ್ಕೀಗ ಒಟಿಟಿಯೇ ಗತಿ; ಪ್ರಸಾರ​ ಯಾವಾಗ?
Image
Sai Pallavi: ಥಿಯೇಟರ್​ಗೆ ಜನರನ್ನು ಕರೆಸುವಲ್ಲಿ ಸೋತ ಸಾಯಿ ಪಲ್ಲವಿ; ‘ಲೇಡಿ ಪವರ್​ ಸ್ಟಾರ್​’ ಬಿರುದು ಈಗೇನಾಯ್ತು?
Image
Sai Pallavi: ಸಾಯಿ ಪಲ್ಲವಿ ಬೆಂಬಲಕ್ಕೆ ನಿಂತ ಸಾವಿರಾರು ಮಂದಿ; ಸ್ಪಷ್ಟನೆ ವಿಡಿಯೋ ಕಂಡು ಜನರು ಹೇಳ್ತಿರೋದೇನು?
Image
Sai Pallavi: ಸಾಯಿ ಪಲ್ಲವಿ ವಿವಾದದ ಬಳಿಕ ‘ವಿರಾಟ ಪರ್ವಂ’ ಚಿತ್ರಕ್ಕೆ ಜನರು ನೀಡಿದ ರೇಟಿಂಗ್​ ಎಷ್ಟು?

ಸಿನಿಮಾ ವಿಮರ್ಶಕ ರಾಜಶೇಖರ್ ಅವರು ‘ಗಾರ್ಗಿ’ ಚಿತ್ರಕ್ಕೆ ಭೇಷ್ ಎಂದಿದ್ದಾರೆ. ಈ ಚಿತ್ರದಲ್ಲಿನ ಸಾಯಿ ಪಲ್ಲವಿ ನಟನೆಗೆ ರಾಷ್ಟ್ರ ಪ್ರಶಸ್ತಿ ಸಿಗಬೇಕು ಎಂದು ಅಭಿಪ್ರಾಯ ಹೊರಹಾಕಿದ್ದಾರೆ. ಇನ್ನು, ಟ್ರೇಡ್​ ವಿಶ್ಲೇಷಕ ರಮೇಶ್​ ಬಾಲಾ ಅವರು ಕೂಡ ಈ ಚಿತ್ರಕ್ಕೆ ಐದಕ್ಕೆ ಐದು ಸ್ಟಾರ್​ ನೀಡಿ ಸಾಯಿ ಪಲ್ಲವಿ ನಟನೆಯನ್ನು ಹೊಗಳಿದ್ದಾರೆ.

ಇದನ್ನೂ ಓದಿ: ಸಾಯಿ ಪಲ್ಲವಿಗೆ ಹಿನ್ನಡೆ: ಪೊಲೀಸ್ ವಿಚಾರಣೆಗೆ ಹಾಜರಾಗಲೇ ಬೇಕು ಎಂದ ಕೋರ್ಟ್

‘ದಿ ಕಾಶ್ಮೀರ್ ಫೈಲ್ಸ್​’ ಸಿನಿಮಾದಲ್ಲಿ ತೋರಿಸಿದ  ಕಾಶ್ಮೀರಿ ಪಂಡಿತರ ಹತ್ಯೆಯನ್ನು ಸಾಯಿ ಪಲ್ಲವಿ ಅವರು ಇತ್ತೀಚೆಗೆ ನಡೆದ ಮುಸ್ಲಿಂ ಡ್ರೈವರ್ ಮೇಲಿನ ಹಲ್ಲೆಗೆ ಹೋಲಿಕೆ ಮಾಡಿದ್ದರು. ಈ ಹೇಳಿಕೆಯಿಂದ ಅವರ ವಿರುದ್ಧ ಸಾಕಷ್ಟು ಟೀಕೆಗಳು ವ್ಯಕ್ತವಾದವು. ಈ ಬಗ್ಗೆ ಅವರು ಸ್ಪಷ್ಟನೆ ನೀಡುವ ವಿಡಿಯೋ ಮಾಡಿ, ‘ಎಲ್ಲರ ಜೀವವೂ ಮುಖ್ಯ ಎಂದು ಹೇಳಿದ್ದರು’. ಅವರ ಈ ಹೇಳಿಕೆಯಿಂದಲೇ ‘ವಿರಾಟ ಪರ್ವಂ’ ಸಿನಿಮಾ ಸೋತಿದೆ ಎಂಬ ಮಾತುಗಳು ಕೂಡ ಕೇಳಿ ಬಂದಿವೆ. ಈಗ ಅವರು ‘ಗಾರ್ಗಿ’ ಚಿತ್ರದ ಮೂಲಕ ಗೆಲುವು ಕಾಣುವ ಸೂಚನೆ ನೀಡಿದ್ದಾರೆ.

Published On - 2:38 pm, Thu, 14 July 22

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಬರೋಬ್ಬರಿ 124 ಮೀಟರ್ ಸಿಕ್ಸ್ ಸಿಡಿಸಿದ ಶಕ್ಕೆರೆ ಪ್ಯಾರಿಸ್
ಬರೋಬ್ಬರಿ 124 ಮೀಟರ್ ಸಿಕ್ಸ್ ಸಿಡಿಸಿದ ಶಕ್ಕೆರೆ ಪ್ಯಾರಿಸ್