‘ಗಾರ್ಗಿ’ ಚಿತ್ರಕ್ಕೆ ಐದಕ್ಕೆ ಐದು ಸ್ಟಾರ್ ನೀಡಿದ ವಿಮರ್ಶಕರು; ಸಾಯಿ ಪಲ್ಲವಿ ಫುಲ್​ ಖುಷ್

| Updated By: ರಾಜೇಶ್ ದುಗ್ಗುಮನೆ

Updated on: Jul 14, 2022 | 2:39 PM

ಸಿನಿಮಾ ವಿಮರ್ಶಕ ರಾಜಶೇಖರ್ ಅವರು ‘ಗಾರ್ಗಿ’ ಚಿತ್ರಕ್ಕೆ ಭೇಷ್ ಎಂದಿದ್ದಾರೆ. ಈ ಚಿತ್ರದಲ್ಲಿನ ಸಾಯಿ ಪಲ್ಲವಿ ನಟನೆಗೆ ರಾಷ್ಟ್ರ ಪ್ರಶಸ್ತಿ ಸಿಗಬೇಕು ಎಂದು ಅಭಿಪ್ರಾಯ ಹೊರಹಾಕಿದ್ದಾರೆ.

‘ಗಾರ್ಗಿ’ ಚಿತ್ರಕ್ಕೆ ಐದಕ್ಕೆ ಐದು ಸ್ಟಾರ್ ನೀಡಿದ ವಿಮರ್ಶಕರು; ಸಾಯಿ ಪಲ್ಲವಿ ಫುಲ್​ ಖುಷ್
ಸಾಯಿ ಪಲ್ಲವಿ
Follow us on

ನಟಿ ಸಾಯಿ ಪಲ್ಲವಿ (Sai Pallavi) ಅವರ ನಟನೆಯ ‘ವಿರಾಟ ಪರ್ವಂ’ ಸಿನಿಮಾ (Virat Parvam Movie) ಹೀನಾಯ ಸೋಲು ಕಂಡಿತು. ಈ ಚಿತ್ರದ ಪ್ರಚಾರದ ವೇಳೆ ಅವರು ನೀಡಿದ ಹೇಳಿಕೆ ಈ ಸಿನಿಮಾ ಸೋಲಿಗೆ ಕಾರಣ ಎನ್ನುವ ಮಾತು ಕೇಳಿ ಬಂತು. ಈ ಬೆನ್ನಲ್ಲೇ ಅವರ ನಟನೆಯ ‘ಗಾರ್ಗಿ’ ಸಿನಿಮಾ ತೆರೆಗೆ ಬರಲು ರೆಡಿ ಆಗಿದೆ. ಈ ಚಿತ್ರ ಜುಲೈ 15ರಂದು ರಿಲೀಸ್ ಆಗುತ್ತಿದೆ. ‘ಗಾರ್ಗಿ’ ರಿಲೀಸ್​ಗೂ ಮೊದಲೇ ಸ್ಪೆಷಲ್​ ಶೋ ಆಯೋಜಿಸಲಾಗಿತ್ತು. ಈ ವೇಳೆ ಸಿನಿಮಾ ನೋಡಿದ ಅನೇಕರು ಭೇಷ್ ಎಂದಿದ್ದಾರೆ. ಸಾಯಿ ಪಲ್ಲವಿ ಅವರ ನಟನೆಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಇದರಿಂದ ಚಿತ್ರಕ್ಕೆ ದೊಡ್ಡ ಬಲ ಸಿಕ್ಕಂತೆ ಆಗಿದೆ.

ಇತ್ತೀಚೆಗೆ ‘ಗಾರ್ಗಿ’ ಸಿನಿಮಾದ ಟ್ರೇಲರ್ ರಿಲೀಸ್ ಆಯಿತು. ಈ ಟ್ರೇಲರ್​ನಲ್ಲಿ ಸಾಯಿ ಪಲ್ಲವಿ ಅವರು ಗಾರ್ಗಿ ಹೆಸರಿನ ಟೀಚರ್ ಪಾತ್ರ ಮಾಡುತ್ತಿರುವ ವಿಚಾರ ರಿವೀಲ್ ಆಗಿತ್ತು. ಗಾರ್ಗಿಯ ತಂದೆ ಸೆಕ್ಯುರಿಟಿ ಗಾರ್ಡ್​. ಗಾರ್ಗಿ ತಂದೆಯನ್ನು ಪೊಲೀಸರು ಅರೆಸ್ಟ್​ ಮಾಡುತ್ತಾರೆ. ಅದು ಏಕೆ? ತಂದೆಯನ್ನು ಗಾರ್ಗಿ ಮರಳಿ ಹೇಗೆ ಮನೆಗೆ ಕರೆತರುತ್ತಾಳೆ ಎಂಬುದು ಸಿನಿಮಾದ ಕಥೆ ಎಂಬುದು ಟ್ರೇಲರ್​ನಲ್ಲಿ ಗೊತ್ತಾಗಿದೆ. ಅನೇಕ ವಿಮರ್ಶಕರು ಚಿತ್ರಕ್ಕೆ ಐದಕ್ಕೆ ಐದು ಸ್ಟಾರ್ಸ್ ನೀಡಿದ್ದಾರೆ.

ಇದನ್ನೂ ಓದಿ
Virata Parvam OTT Release: ಥಿಯೇಟರ್​ನಲ್ಲಿ ಸೋತ ಸಾಯಿ ಪಲ್ಲವಿಯ ‘ವಿರಾಟ ಪರ್ವಂ’ ಚಿತ್ರಕ್ಕೀಗ ಒಟಿಟಿಯೇ ಗತಿ; ಪ್ರಸಾರ​ ಯಾವಾಗ?
Sai Pallavi: ಥಿಯೇಟರ್​ಗೆ ಜನರನ್ನು ಕರೆಸುವಲ್ಲಿ ಸೋತ ಸಾಯಿ ಪಲ್ಲವಿ; ‘ಲೇಡಿ ಪವರ್​ ಸ್ಟಾರ್​’ ಬಿರುದು ಈಗೇನಾಯ್ತು?
Sai Pallavi: ಸಾಯಿ ಪಲ್ಲವಿ ಬೆಂಬಲಕ್ಕೆ ನಿಂತ ಸಾವಿರಾರು ಮಂದಿ; ಸ್ಪಷ್ಟನೆ ವಿಡಿಯೋ ಕಂಡು ಜನರು ಹೇಳ್ತಿರೋದೇನು?
Sai Pallavi: ಸಾಯಿ ಪಲ್ಲವಿ ವಿವಾದದ ಬಳಿಕ ‘ವಿರಾಟ ಪರ್ವಂ’ ಚಿತ್ರಕ್ಕೆ ಜನರು ನೀಡಿದ ರೇಟಿಂಗ್​ ಎಷ್ಟು?

ಸಿನಿಮಾ ವಿಮರ್ಶಕ ರಾಜಶೇಖರ್ ಅವರು ‘ಗಾರ್ಗಿ’ ಚಿತ್ರಕ್ಕೆ ಭೇಷ್ ಎಂದಿದ್ದಾರೆ. ಈ ಚಿತ್ರದಲ್ಲಿನ ಸಾಯಿ ಪಲ್ಲವಿ ನಟನೆಗೆ ರಾಷ್ಟ್ರ ಪ್ರಶಸ್ತಿ ಸಿಗಬೇಕು ಎಂದು ಅಭಿಪ್ರಾಯ ಹೊರಹಾಕಿದ್ದಾರೆ. ಇನ್ನು, ಟ್ರೇಡ್​ ವಿಶ್ಲೇಷಕ ರಮೇಶ್​ ಬಾಲಾ ಅವರು ಕೂಡ ಈ ಚಿತ್ರಕ್ಕೆ ಐದಕ್ಕೆ ಐದು ಸ್ಟಾರ್​ ನೀಡಿ ಸಾಯಿ ಪಲ್ಲವಿ ನಟನೆಯನ್ನು ಹೊಗಳಿದ್ದಾರೆ.

ಇದನ್ನೂ ಓದಿ: ಸಾಯಿ ಪಲ್ಲವಿಗೆ ಹಿನ್ನಡೆ: ಪೊಲೀಸ್ ವಿಚಾರಣೆಗೆ ಹಾಜರಾಗಲೇ ಬೇಕು ಎಂದ ಕೋರ್ಟ್

‘ದಿ ಕಾಶ್ಮೀರ್ ಫೈಲ್ಸ್​’ ಸಿನಿಮಾದಲ್ಲಿ ತೋರಿಸಿದ  ಕಾಶ್ಮೀರಿ ಪಂಡಿತರ ಹತ್ಯೆಯನ್ನು ಸಾಯಿ ಪಲ್ಲವಿ ಅವರು ಇತ್ತೀಚೆಗೆ ನಡೆದ ಮುಸ್ಲಿಂ ಡ್ರೈವರ್ ಮೇಲಿನ ಹಲ್ಲೆಗೆ ಹೋಲಿಕೆ ಮಾಡಿದ್ದರು. ಈ ಹೇಳಿಕೆಯಿಂದ ಅವರ ವಿರುದ್ಧ ಸಾಕಷ್ಟು ಟೀಕೆಗಳು ವ್ಯಕ್ತವಾದವು. ಈ ಬಗ್ಗೆ ಅವರು ಸ್ಪಷ್ಟನೆ ನೀಡುವ ವಿಡಿಯೋ ಮಾಡಿ, ‘ಎಲ್ಲರ ಜೀವವೂ ಮುಖ್ಯ ಎಂದು ಹೇಳಿದ್ದರು’. ಅವರ ಈ ಹೇಳಿಕೆಯಿಂದಲೇ ‘ವಿರಾಟ ಪರ್ವಂ’ ಸಿನಿಮಾ ಸೋತಿದೆ ಎಂಬ ಮಾತುಗಳು ಕೂಡ ಕೇಳಿ ಬಂದಿವೆ. ಈಗ ಅವರು ‘ಗಾರ್ಗಿ’ ಚಿತ್ರದ ಮೂಲಕ ಗೆಲುವು ಕಾಣುವ ಸೂಚನೆ ನೀಡಿದ್ದಾರೆ.

Published On - 2:38 pm, Thu, 14 July 22