AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧನುಷ್ ಮುಂದಿನ ಚಿತ್ರದಲ್ಲಿ ಸಾಯಿ ಪಲ್ಲವಿ ಪೊಲೀಸ್ ಅಧಿಕಾರಿ? ವೈರಲ್ ಆಗ್ತಿದೆ ‘ಡಿ55’ ಅಪ್‌ಡೇಟ್

ಖ್ಯಾತ ನಟಿ ಸಾಯಿ ಪಲ್ಲವಿ ಅವರು ಸಖತ್ ಬ್ಯುಸಿ ಆಗಿದ್ದಾರೆ. ಧನುಷ್ ಜೊತೆ ಅವರು ನಟಿಸಲಿರುವ ಹೊಸ ಸಿನಿಮಾದ ಬಗ್ಗೆ ಅಪ್ಡೇಟ್ ಕೇಳಿಬಂದಿದೆ. ಇನ್ನೂ ಶೀರ್ಷಿಕೆ ಅಂತಿಮವಾಗದ ಈ ಚಿತ್ರವನ್ನು ತಾತ್ಕಾಲಿಕವಾಗಿ ‘ಡಿ55’ ಎಂದು ಕರೆಯಲಾಗುತ್ತಿದೆ. ಸಾಯಿ ಪಲ್ಲವಿ ಅವರ ಪಾತ್ರದ ಬಗ್ಗೆ ಒಂದು ಗಾಸಿಪ್ ಹಬ್ಬಿದೆ.

ಧನುಷ್ ಮುಂದಿನ ಚಿತ್ರದಲ್ಲಿ ಸಾಯಿ ಪಲ್ಲವಿ ಪೊಲೀಸ್ ಅಧಿಕಾರಿ? ವೈರಲ್ ಆಗ್ತಿದೆ ‘ಡಿ55’ ಅಪ್‌ಡೇಟ್
Sai Pallavi, DhanushImage Credit source: Wunderbar Films
ಮದನ್​ ಕುಮಾರ್​
|

Updated on: Jun 11, 2026 | 5:18 PM

Share

ಬಹುಭಾಷಾ ನಟಿ ಸಾಯಿ ಪಲ್ಲವಿ (Sai Pallavi) ಅವರು ಸದಾ ವಿಭಿನ್ನ ಪಾತ್ರಗಳ ಮೂಲಕ ಪ್ರೇಕ್ಷಕರನ್ನು ಸೆಳೆಯುತ್ತಾರೆ. ಇದೀಗ ಕಾಲಿವುಡ್ ಸ್ಟಾರ್ ಧನುಷ್ (Dhanush) ಹಾಗೂ ಮಾಲಿವುಡ್ ಸ್ಟಾರ್ ಹೀರೋ ಮಮ್ಮುಟ್ಟಿ ನಟಿಸುತ್ತಿರುವ ಬಹುನಿರೀಕ್ಷಿತ ‘D55’ ಸಿನಿಮಾದಲ್ಲಿ ಸಾಯಿ ಪಲ್ಲವಿ ಮಹತ್ವದ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಹರಿದಾಡುತ್ತಿರುವ ಲೇಟೆಸ್ಟ್ ವರದಿಗಳ ಪ್ರಕಾರ, ಈ ಚಿತ್ರದಲ್ಲಿ ಅವರು ಮೊದಲ ಬಾರಿಗೆ ಖಾಕಿ ಖದರ್ ತೋರಿಸಲಿದ್ದಾರೆ. ಅಂದರೆ, ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ನಟಿಸಲಿದ್ದಾರೆ ಎಂಬ ಗಾಸಿಪ್ ಜೋರಾಗಿ ಕೇಳಿಬರುತ್ತಿದೆ.

ರಾಜ್‌ಕುಮಾರ್ ಪೆರಿಯಸಾಮಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘D55’ ಒಂದು ಹೈ-ವೋಲ್ಟೇಜ್ ಸ್ಪೈ ಆ್ಯಕ್ಷನ್ ಡ್ರಾಮಾ ಆಗಿರಲಿದೆ. ಈ ಹಿಂದೆ ‘ಮಾರಿ 2’ ಚಿತ್ರದ ‘ರೌಡಿ ಬೇಬಿ’ ಹಾಡಿನ ಮೂಲಕ ಧನುಷ್ ಮತ್ತು ಸಾಯಿ ಪಲ್ಲವಿ ಜೋಡಿ ಧೂಳೆಬ್ಬಿಸಿತ್ತು. ಈಗ ಮತ್ತೊಮ್ಮೆ ಈ ಜೋಡಿ ಒಂದಾಗುತ್ತಿರುವುದು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ಆದರೆ, ಸಾಯಿ ಪಲ್ಲವಿ ಅವರ ಪೊಲೀಸ್ ಪಾತ್ರದ ಬಗ್ಗೆ ಚಿತ್ರತಂಡದಿಂದ ಇನ್ನೂ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಸದ್ಯ ಈ ಚಿತ್ರದ ಶೂಟಿಂಗ್ ಅತ್ಯಂತ ವೇಗವಾಗಿ ನಡೆಯುತ್ತಿದ್ದು, ಜುಲೈ 2026ರ ವೇಳೆಗೆ ಚಿತ್ರೀಕರಣ ಮುಕ್ತಾಯಗೊಳ್ಳುವ ನಿರೀಕ್ಷೆಯಿದೆ. ಈ ನಡುವೆ ಚಿತ್ರದ ಟೈಟಲ್ ಬಗ್ಗೆಯೂ ದೊಡ್ಡ ಸುದ್ದಿಯೊಂದು ಹೊರಬಿದ್ದಿದೆ. ಈ ಹಿಂದೆ ಧನುಷ್ ಅವರ ಹುಟ್ಟುಹಬ್ಬದ ದಿನದಂದು (ಜುಲೈ 28) ಶೀರ್ಷಿಕೆ ಅನಾವರಣ ಮಾಡಲಾಗುತ್ತದೆ ಎಂದು ಹೇಳಲಾಗಿತ್ತು. ಆದರೆ ಈಗಿನ ಮಾಹಿತಿ ಪ್ರಕಾರ, ಚಿತ್ರತಂಡ ಈ ವಾರವೇ ಶೀರ್ಷಿಕೆಯನ್ನು ಬಿಡುಗಡೆ ಮಾಡಲು ಪ್ಲಾನ್ ಮಾಡಿದೆ. ಚಿತ್ರದಲ್ಲಿ ಧನುಷ್ ಪಾತ್ರದ ಹೆಸರಾದ ‘ಚೆಳಿಯನ್’ ಎಂಬುದನ್ನೇ ಸಿನಿಮಾದ ಶೀರ್ಷಿಕೆಯನ್ನಾಗಿ ಇಡಲಾಗಿದೆ ಎಂಬ ಮಾತು ಕೇಳಿಬರುತ್ತಿದೆ.

ಈ ಚಿತ್ರದಲ್ಲಿ ಮಮ್ಮುಟ್ಟಿ ಹಾಗೂ ಧನುಷ್ ಪ್ರಮುಖ ಪಾತ್ರಗಳಲ್ಲಿದ್ದರೆ, ಸಾಯಿ ಪಲ್ಲವಿ ಜೊತೆಗೆ ಮತ್ತೊಬ್ಬ ಜನಪ್ರಿಯ ನಟಿ ಶ್ರೀಲೀಲಾ ಕೂಡ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಯುವ ಸಂಗೀತ ನಿರ್ದೇಶಕ ಸಾಯಿ ಅಭ್ಯಂಕರ್ ಈಗಾಗಲೇ ಈ ಚಿತ್ರಕ್ಕಾಗಿ ಎರಡು ಹಾಡುಗಳ ಸಂಯೋಜನೆಯನ್ನು ಪೂರ್ಣಗೊಳಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಸಾಯಿ ಪಲ್ಲವಿ ಕೈತಪ್ಪಿದ ಮಧುಬಾಲಾ ಬಯೋಪಿಕ್ ಅವಕಾಶ: ಕಾರಣ ಏನು?

ಈ ಚಿತ್ರದ ಕೆಲಸ ಮುಗಿದ ನಂತರ ಧನುಷ್ ಅವರು ನಿರ್ದೇಶಕ ತಮಿಳರಸನ್ ಪಚ್ಚಮುತ್ತು ಜೊತೆ ಮಧುರೈ ಹಿನ್ನೆಲೆಯ ಆ್ಯಕ್ಷನ್ ಸಿನಿಮಾವೊಂದನ್ನು ಮಾಡಲಿದ್ದಾರೆ. ಇತ್ತ ಸಾಯಿ ಪಲ್ಲವಿ ಅವರು ರಣಬೀರ್ ಕಪೂರ್ ಮತ್ತು ಯಶ್ ನಟನೆಯ ಬಹುನಿರೀಕ್ಷಿತ ‘ರಾಮಾಯಣ’ ಚಿತ್ರದಲ್ಲಿ ಸೀತೆಯಾಗಿ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ. ಈ ಸಿನಿಮಾ ಎರಡು ಭಾಗದಲ್ಲಿ ತಯಾರಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಯರ ಮಠದಲ್ಲಿ ಗುರುರಾಯರ ಮಧ್ಯಾರಾಧನೆ: ವಿಶೇಷ ಪೂಜಾ ಕೈಂಕರ್ಯಗಳು
ರಾಯರ ಮಠದಲ್ಲಿ ಗುರುರಾಯರ ಮಧ್ಯಾರಾಧನೆ: ವಿಶೇಷ ಪೂಜಾ ಕೈಂಕರ್ಯಗಳು
ಪಾರ್ಕ್​ಗಳ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಕೆ ಖಂಡಿಸಿ ಮೈಸೂರಲ್ಲೂ ಪ್ರತಿಭಟನೆ
ಪಾರ್ಕ್​ಗಳ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಕೆ ಖಂಡಿಸಿ ಮೈಸೂರಲ್ಲೂ ಪ್ರತಿಭಟನೆ
ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: ಸಿಎಂ ಡಿಕೆ ಶಿವಕುಮಾರ್​​ ಮಹತ್ವದ ಸಂದೇಶ
ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: ಸಿಎಂ ಡಿಕೆ ಶಿವಕುಮಾರ್​​ ಮಹತ್ವದ ಸಂದೇಶ
ಗೋಡೆಕೆರೆ ಗೇಟ್‌ ಬಳಿಯ ಅಪಘಾತದಲ್ಲಿ ಸಾವಿಗೀಡಾದವ್ರ ಒಂದೊಂದು ಕಥೆ
ಗೋಡೆಕೆರೆ ಗೇಟ್‌ ಬಳಿಯ ಅಪಘಾತದಲ್ಲಿ ಸಾವಿಗೀಡಾದವ್ರ ಒಂದೊಂದು ಕಥೆ
ಆಗಸ್ಟ್ 31 ರಿಂದ ಸೆಪ್ಟೆಂಬರ್​​ 6 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 31 ರಿಂದ ಸೆಪ್ಟೆಂಬರ್​​ 6 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ನೇಪಾಳ ಪ್ರವಾಹ: ಸಾವಿನ ದವಡೆಯಿಂದ ಪಾರಾಗಿ 54 ಕನ್ನಡಿಗರು ವಾಪಸ್​​
ನೇಪಾಳ ಪ್ರವಾಹ: ಸಾವಿನ ದವಡೆಯಿಂದ ಪಾರಾಗಿ 54 ಕನ್ನಡಿಗರು ವಾಪಸ್​​
ಇಂದು ಈ ರಾಶಿಯವರು ವ್ಯಾಪಾರ, ವ್ಯವಹಾರಗಳಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ವ್ಯಾಪಾರ, ವ್ಯವಹಾರಗಳಲ್ಲಿ ಜಾಗೃತರಾಗಿರಿ
'ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವವರು ಹಿಂದೂಗಳೇ ಅಲ್ಲ'; ಮೋಹನ್ ಭಾಗವತ್
'ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವವರು ಹಿಂದೂಗಳೇ ಅಲ್ಲ'; ಮೋಹನ್ ಭಾಗವತ್
ನೇಪಾಳದ ಪ್ರವಾಹ ಸಂತ್ರಸ್ತರಿಗಾಗಿ ಅಡುಗೆ ಮಾಡಿಕೊಟ್ಟ ಸೈನಿಕರು
ನೇಪಾಳದ ಪ್ರವಾಹ ಸಂತ್ರಸ್ತರಿಗಾಗಿ ಅಡುಗೆ ಮಾಡಿಕೊಟ್ಟ ಸೈನಿಕರು
ನಟ ಚಿಕ್ಕಣ್ಣ ಮದುವೆ ಆರತಕ್ಷತೆ ಸಂಭ್ರಮ: ವಿಡಿಯೋ ನೋಡಿ
ನಟ ಚಿಕ್ಕಣ್ಣ ಮದುವೆ ಆರತಕ್ಷತೆ ಸಂಭ್ರಮ: ವಿಡಿಯೋ ನೋಡಿ