AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sai Pallavi: ಖ್ಯಾತ ನಟಿ ಸಾಯಿ ಪಲ್ಲವಿ ಒಟ್ಟೂ ಆಸ್ತಿ ಮೌಲ್ಯ ಎಷ್ಟು? ಇಲ್ಲಿದೆ ಮಾಹಿತಿ

Sai Pallavi Net Worth: ಪ್ರೇಮಂ​ ಸಿನಿಮಾ ಮೂಲಕ ಮಲಯಾಳಂ ಚಿತ್ರರಂಗಕ್ಕೆ ಕಾಲಿಟ್ಟವರು ನಟಿ ಸಾಯಿ ಪಲ್ಲವಿ. 2015ರಲ್ಲಿ ತೆರೆಕಂಡ ಈ ಚಿತ್ರದಲ್ಲಿ ಮಲರ್​ ಹೆಸರಿನ ಪಾತ್ರವನ್ನು ಅವರು ನಿರ್ವಹಿಸಿದ್ದರು.

Sai Pallavi: ಖ್ಯಾತ ನಟಿ ಸಾಯಿ ಪಲ್ಲವಿ ಒಟ್ಟೂ ಆಸ್ತಿ ಮೌಲ್ಯ ಎಷ್ಟು? ಇಲ್ಲಿದೆ ಮಾಹಿತಿ
ಸಾಯಿ ಪಲ್ಲವಿ
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​|

Updated on: May 21, 2021 | 3:54 PM

Share

ನಟಿ ಸಾಯಿ ಪಲ್ಲವಿ ದಕ್ಷಿಣ ಭಾರತದ ಬಹುಬೇಡಿಕೆಯ ನಟಿ. ಮಾಡಿದ್ದು ಕೆಲವೇ ಸಿನಿಮಾಗಳಾದರೂ ಅವರಿಗೆ ಬೇಡಿಕೆ ಹೆಚ್ಚಿದೆ. ಹೀಗಾಗಿ, ಅವರ ಸಂಭಾವನೆ ಕೂಡ ಹೆಚ್ಚಿದೆ. ಹಾಗಾದರೆ, ನಟಿ ಸಾಯಿ ಪಲ್ಲವಿ ಅವರ ಒಟ್ಟೂ ಆಸ್ತಿ ಮೌಲ್ಯ ಎಷ್ಟು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ಪ್ರೇಮಂ​ ಸಿನಿಮಾ ಮೂಲಕ ಮಲಯಾಳಂ ಚಿತ್ರರಂಗಕ್ಕೆ ಕಾಲಿಟ್ಟವರು ನಟಿ ಸಾಯಿ ಪಲ್ಲವಿ. 2015ರಲ್ಲಿ ತೆರೆಕಂಡ ಈ ಚಿತ್ರದಲ್ಲಿ ಮಲರ್​ ಹೆಸರಿನ ಪಾತ್ರವನ್ನು ಅವರು ನಿರ್ವಹಿಸಿದ್ದರು. ಶಿಕ್ಷಕಿಯಾಗಿ ಕಾಣಿಸಿಕೊಂಡಿದ್ದ ಸಾಯಿ ಪಲ್ಲವಿ ಎಲ್ಲರ ಗಮನ ಸೆಳೆದಿದ್ದರು. ನಂತರ ಅವರಿಗೆ ಸಾಲು ಸಾಲು ಪ್ರಾಜೆಕ್ಟ್​ಗಳು ಬರೋಕೆ ಆರಂಭವಾದವು.

ಫಿದಾ ಸಿನಿಮಾ ಮೂಲಕ ಸಾಯಿ ಪಲ್ಲವಿ ಟಾಲಿವುಡ್​ಗೆ ಕಾಲಿಟ್ಟರು. ಮುಟ್ಟಿದ್ದೆಲ್ಲವೂ ಚಿನ್ನ ಎಂಬಂತೆ, ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್​ ಆಯಿತು. ಈ ಸಿನಿಮಾದಲ್ಲಿ ವರುಣ್​ ತೇಜ್​ಗೆ ಜತೆಯಾಗಿ ನಟಿಸಿದ್ದ ಸಾಯಿ ಪಲ್ಲವಿ ಟಾಲಿವುಡ್​ನಲ್ಲೂ ನೆಲೆ ಕಂಡುಕೊಂಡರು. 13 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾಗಿದ್ದ ಈ ಸಿನಿಮಾ 90 ಕೋಟಿ ರೂಪಾಯಿ ಗಳಿಸಿತ್ತು.

‘ಮಾರಿ 2’ ಮೊದಲಾದ ಸಿನಿಮಾಗಳಲ್ಲಿ ಸಾಯಿ ಪಲ್ಲವಿ ನಟಿಸಿದ್ದಾರೆ. ಸದ್ಯ, ಅವರ ಕೈಯಲ್ಲಿ ಮೂರು ಚಿತ್ರಗಳಿವೆ. ಲವ್​ ಸ್ಟೋರಿ, ವಿರಾಟ ಪರ್ವಮ್​, ಶ್ಯಾಮ್​ ಸಿಂಗ ರಾಯ್​ ಹೆಸರಿನ ತೆಲಗು ಚಿತ್ರಗಳಲ್ಲಿ ಸಾಯಿ ಪಲ್ಲವಿ ನಟಿಸುತ್ತಿದ್ದಾರೆ. ಲವ್​ ಸ್ಟೋರಿ, ವಿರಾಟ ಪರ್ವಮ್ ಸಿನಿಮಾ ಶೂಟಿಂಗ್​ ಪೂರ್ಣಗೊಂಡಿದ್ದು, ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳು ಆರಂಭಗೊಂಡಿದೆ. ಶ್ಯಾಮ್​ ಸಿಂಗ್​ ರಾಯ್​ ಚಿತ್ರದ ಶೂಟಿಂಗ್​ ಕೊವಿಡ್​ ಕಾರಣದಿಂದ ಅರ್ಧಕ್ಕೆ ನಿಂತಿದೆ.

ಸಾಯಿ ಪಲ್ಲವಿ ಡಾಕ್ಟರ್​ ಆಗಬೇಕು ಎಂದು ಕನಸು ಕಂಡವರು. ಇವರು ಎಂಬಿಬಿಎಸ್​ ಪದವಿಯನ್ನು ಪೂರ್ಣಗೊಳಿಸಿದ್ದಾರೆ. ನಂತರ ಅವರು ನಟನೆಯತ್ತ ಹೊರಳಿದರು. ಈ ಮೂಲಕ ಅವರು ಯಶಸ್ಸು ಕಂಡರು. ಮೂಲಗಳ ಪ್ರಕಾರ ಸಾಯಿ ಪಲ್ಲವಿ ಅವರ ಒಟ್ಟೂ ಆಸ್ತಿ ಮೌಲ್ಯ 29 ಕೋಟಿ ರೂಪಾಯಿ ಎನ್ನಲಾಗಿದೆ. ಸಿನಿಮಾಗಳು ಹಿಟ್ ಆಗುತ್ತಿರುವುದರಿಂದ ಇವರ ಸಂಭಾವನೆ ಕೂಡ ಹೆಚ್ಚಿದೆ.

ಇದನ್ನೂ ಓದಿ: ಲಾಕ್​ಡೌನ್​ನಲ್ಲಿ ‘ಜೊತೆ ಜೊತೆಯಲಿ’ ಮೇಘಾ ಶೆಟ್ಟಿ ದಿನಚರಿ ಏನು? ಮನೆಯಲ್ಲಿದ್ದುಕೊಂಡು ಏನ್​ ಮಾಡ್ತಿದ್ದಾರೆ ಕರಾವಳಿ ಬೆಡಗಿ?

‘ಇದು ಕದಂಬರ ಬಗೆಗಿನ ಕಥೆ ಅಲ್ಲ’; ಸ್ಟೋರಿ ಬಗ್ಗೆ ರಿಷಬ್ ಸ್ಪಷ್ಟನೆ
‘ಇದು ಕದಂಬರ ಬಗೆಗಿನ ಕಥೆ ಅಲ್ಲ’; ಸ್ಟೋರಿ ಬಗ್ಗೆ ರಿಷಬ್ ಸ್ಪಷ್ಟನೆ
ರಾಜಸ್ಥಾನದಲ್ಲಿ ಸಿಬ್ಬಂದಿಯನ್ನು ಒತ್ತೆಯಾಳಾಗಿರಿಸಿ ಪೆಟ್ರೋಲ್ ಬಂಕ್ ಲೂಟಿ
ರಾಜಸ್ಥಾನದಲ್ಲಿ ಸಿಬ್ಬಂದಿಯನ್ನು ಒತ್ತೆಯಾಳಾಗಿರಿಸಿ ಪೆಟ್ರೋಲ್ ಬಂಕ್ ಲೂಟಿ
ಮೋದಿ ಮನೆ ಮುಂದೆ ರಸ್ತೇಲಿ ಎಷ್ಟು ಗುಂಡಿಗಳಿವೆ ನೋಡಿ: ಡಿಕೆ ಶಿವಕುಮಾರ್
ಮೋದಿ ಮನೆ ಮುಂದೆ ರಸ್ತೇಲಿ ಎಷ್ಟು ಗುಂಡಿಗಳಿವೆ ನೋಡಿ: ಡಿಕೆ ಶಿವಕುಮಾರ್
ವಿದ್ಯುತ್ ಕಂಬ ಏರಿ ತಂತಿ ಹಿಡಿದು ನೇತಾಡಿದ ಮಕ್ಕಳು
ವಿದ್ಯುತ್ ಕಂಬ ಏರಿ ತಂತಿ ಹಿಡಿದು ನೇತಾಡಿದ ಮಕ್ಕಳು
ದಸರಾ ದೀಪಾಲಂಕಾರ: ಲೈಟಿಂಗ್ಸ್​ನಿಂದ ಝಗಮಗಿಸುತ್ತಿರುವ ಮೈಸೂರು ರಸ್ತೆಗಳ ನೋಡಿ
ದಸರಾ ದೀಪಾಲಂಕಾರ: ಲೈಟಿಂಗ್ಸ್​ನಿಂದ ಝಗಮಗಿಸುತ್ತಿರುವ ಮೈಸೂರು ರಸ್ತೆಗಳ ನೋಡಿ
ಇಂದೋರ್​​ನಲ್ಲಿ ಭಾರಿ ಮಳೆಗೆ ಕಟ್ಟಡ ಕುಸಿತ, ಇಬ್ಬರು ಸಾವು
ಇಂದೋರ್​​ನಲ್ಲಿ ಭಾರಿ ಮಳೆಗೆ ಕಟ್ಟಡ ಕುಸಿತ, ಇಬ್ಬರು ಸಾವು
ನವರಾತ್ರಿ 2ನೇ ದಿನ: ಬ್ರಹ್ಮಚಾರಿಣಿ ಪೂಜೆಯ ಮಹತ್ವ, ಫಲಗಳೇನು? ಇಲ್ಲಿದೆ ನೋಡಿ
ನವರಾತ್ರಿ 2ನೇ ದಿನ: ಬ್ರಹ್ಮಚಾರಿಣಿ ಪೂಜೆಯ ಮಹತ್ವ, ಫಲಗಳೇನು? ಇಲ್ಲಿದೆ ನೋಡಿ
ನವರಾತ್ರಿ ಎರಡನೇ ದಿನದ ದ್ವಾದಶ ರಾಶಿ ಭವಿಷ್ಯ ಹೇಗಿದೆ? ಇಲ್ಲಿದೆ ನೋಡಿ
ನವರಾತ್ರಿ ಎರಡನೇ ದಿನದ ದ್ವಾದಶ ರಾಶಿ ಭವಿಷ್ಯ ಹೇಗಿದೆ? ಇಲ್ಲಿದೆ ನೋಡಿ
ಪಂಜಾಬ್‌ಗೆ ಕೂಡಲೆ ಪ್ರವಾಹ ಪರಿಹಾರ ಪ್ಯಾಕೇಜ್ ಘೋಷಿಸಿ;ರಾಹುಲ್ ಗಾಂಧಿ ಒತ್ತಾಯ
ಪಂಜಾಬ್‌ಗೆ ಕೂಡಲೆ ಪ್ರವಾಹ ಪರಿಹಾರ ಪ್ಯಾಕೇಜ್ ಘೋಷಿಸಿ;ರಾಹುಲ್ ಗಾಂಧಿ ಒತ್ತಾಯ
‘ಕಾಂತಾರ: ಚಾಪ್ಟರ್ 1’ ಸುದ್ದಿಗೋಷ್ಠಿಯಲ್ಲಿ ಕ್ಷಮೆ ಕೇಳಿದ ಪ್ರಗತಿ ಶೆಟ್ಟಿ
‘ಕಾಂತಾರ: ಚಾಪ್ಟರ್ 1’ ಸುದ್ದಿಗೋಷ್ಠಿಯಲ್ಲಿ ಕ್ಷಮೆ ಕೇಳಿದ ಪ್ರಗತಿ ಶೆಟ್ಟಿ