AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sai Pallavi: ಖ್ಯಾತ ನಟಿ ಸಾಯಿ ಪಲ್ಲವಿ ಒಟ್ಟೂ ಆಸ್ತಿ ಮೌಲ್ಯ ಎಷ್ಟು? ಇಲ್ಲಿದೆ ಮಾಹಿತಿ

Sai Pallavi Net Worth: ಪ್ರೇಮಂ​ ಸಿನಿಮಾ ಮೂಲಕ ಮಲಯಾಳಂ ಚಿತ್ರರಂಗಕ್ಕೆ ಕಾಲಿಟ್ಟವರು ನಟಿ ಸಾಯಿ ಪಲ್ಲವಿ. 2015ರಲ್ಲಿ ತೆರೆಕಂಡ ಈ ಚಿತ್ರದಲ್ಲಿ ಮಲರ್​ ಹೆಸರಿನ ಪಾತ್ರವನ್ನು ಅವರು ನಿರ್ವಹಿಸಿದ್ದರು.

Sai Pallavi: ಖ್ಯಾತ ನಟಿ ಸಾಯಿ ಪಲ್ಲವಿ ಒಟ್ಟೂ ಆಸ್ತಿ ಮೌಲ್ಯ ಎಷ್ಟು? ಇಲ್ಲಿದೆ ಮಾಹಿತಿ
ಸಾಯಿ ಪಲ್ಲವಿ
ರಾಜೇಶ್ ದುಗ್ಗುಮನೆ
| Edited By: |

Updated on: May 21, 2021 | 3:54 PM

Share

ನಟಿ ಸಾಯಿ ಪಲ್ಲವಿ ದಕ್ಷಿಣ ಭಾರತದ ಬಹುಬೇಡಿಕೆಯ ನಟಿ. ಮಾಡಿದ್ದು ಕೆಲವೇ ಸಿನಿಮಾಗಳಾದರೂ ಅವರಿಗೆ ಬೇಡಿಕೆ ಹೆಚ್ಚಿದೆ. ಹೀಗಾಗಿ, ಅವರ ಸಂಭಾವನೆ ಕೂಡ ಹೆಚ್ಚಿದೆ. ಹಾಗಾದರೆ, ನಟಿ ಸಾಯಿ ಪಲ್ಲವಿ ಅವರ ಒಟ್ಟೂ ಆಸ್ತಿ ಮೌಲ್ಯ ಎಷ್ಟು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ಪ್ರೇಮಂ​ ಸಿನಿಮಾ ಮೂಲಕ ಮಲಯಾಳಂ ಚಿತ್ರರಂಗಕ್ಕೆ ಕಾಲಿಟ್ಟವರು ನಟಿ ಸಾಯಿ ಪಲ್ಲವಿ. 2015ರಲ್ಲಿ ತೆರೆಕಂಡ ಈ ಚಿತ್ರದಲ್ಲಿ ಮಲರ್​ ಹೆಸರಿನ ಪಾತ್ರವನ್ನು ಅವರು ನಿರ್ವಹಿಸಿದ್ದರು. ಶಿಕ್ಷಕಿಯಾಗಿ ಕಾಣಿಸಿಕೊಂಡಿದ್ದ ಸಾಯಿ ಪಲ್ಲವಿ ಎಲ್ಲರ ಗಮನ ಸೆಳೆದಿದ್ದರು. ನಂತರ ಅವರಿಗೆ ಸಾಲು ಸಾಲು ಪ್ರಾಜೆಕ್ಟ್​ಗಳು ಬರೋಕೆ ಆರಂಭವಾದವು.

ಫಿದಾ ಸಿನಿಮಾ ಮೂಲಕ ಸಾಯಿ ಪಲ್ಲವಿ ಟಾಲಿವುಡ್​ಗೆ ಕಾಲಿಟ್ಟರು. ಮುಟ್ಟಿದ್ದೆಲ್ಲವೂ ಚಿನ್ನ ಎಂಬಂತೆ, ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್​ ಆಯಿತು. ಈ ಸಿನಿಮಾದಲ್ಲಿ ವರುಣ್​ ತೇಜ್​ಗೆ ಜತೆಯಾಗಿ ನಟಿಸಿದ್ದ ಸಾಯಿ ಪಲ್ಲವಿ ಟಾಲಿವುಡ್​ನಲ್ಲೂ ನೆಲೆ ಕಂಡುಕೊಂಡರು. 13 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾಗಿದ್ದ ಈ ಸಿನಿಮಾ 90 ಕೋಟಿ ರೂಪಾಯಿ ಗಳಿಸಿತ್ತು.

‘ಮಾರಿ 2’ ಮೊದಲಾದ ಸಿನಿಮಾಗಳಲ್ಲಿ ಸಾಯಿ ಪಲ್ಲವಿ ನಟಿಸಿದ್ದಾರೆ. ಸದ್ಯ, ಅವರ ಕೈಯಲ್ಲಿ ಮೂರು ಚಿತ್ರಗಳಿವೆ. ಲವ್​ ಸ್ಟೋರಿ, ವಿರಾಟ ಪರ್ವಮ್​, ಶ್ಯಾಮ್​ ಸಿಂಗ ರಾಯ್​ ಹೆಸರಿನ ತೆಲಗು ಚಿತ್ರಗಳಲ್ಲಿ ಸಾಯಿ ಪಲ್ಲವಿ ನಟಿಸುತ್ತಿದ್ದಾರೆ. ಲವ್​ ಸ್ಟೋರಿ, ವಿರಾಟ ಪರ್ವಮ್ ಸಿನಿಮಾ ಶೂಟಿಂಗ್​ ಪೂರ್ಣಗೊಂಡಿದ್ದು, ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳು ಆರಂಭಗೊಂಡಿದೆ. ಶ್ಯಾಮ್​ ಸಿಂಗ್​ ರಾಯ್​ ಚಿತ್ರದ ಶೂಟಿಂಗ್​ ಕೊವಿಡ್​ ಕಾರಣದಿಂದ ಅರ್ಧಕ್ಕೆ ನಿಂತಿದೆ.

ಸಾಯಿ ಪಲ್ಲವಿ ಡಾಕ್ಟರ್​ ಆಗಬೇಕು ಎಂದು ಕನಸು ಕಂಡವರು. ಇವರು ಎಂಬಿಬಿಎಸ್​ ಪದವಿಯನ್ನು ಪೂರ್ಣಗೊಳಿಸಿದ್ದಾರೆ. ನಂತರ ಅವರು ನಟನೆಯತ್ತ ಹೊರಳಿದರು. ಈ ಮೂಲಕ ಅವರು ಯಶಸ್ಸು ಕಂಡರು. ಮೂಲಗಳ ಪ್ರಕಾರ ಸಾಯಿ ಪಲ್ಲವಿ ಅವರ ಒಟ್ಟೂ ಆಸ್ತಿ ಮೌಲ್ಯ 29 ಕೋಟಿ ರೂಪಾಯಿ ಎನ್ನಲಾಗಿದೆ. ಸಿನಿಮಾಗಳು ಹಿಟ್ ಆಗುತ್ತಿರುವುದರಿಂದ ಇವರ ಸಂಭಾವನೆ ಕೂಡ ಹೆಚ್ಚಿದೆ.

ಇದನ್ನೂ ಓದಿ: ಲಾಕ್​ಡೌನ್​ನಲ್ಲಿ ‘ಜೊತೆ ಜೊತೆಯಲಿ’ ಮೇಘಾ ಶೆಟ್ಟಿ ದಿನಚರಿ ಏನು? ಮನೆಯಲ್ಲಿದ್ದುಕೊಂಡು ಏನ್​ ಮಾಡ್ತಿದ್ದಾರೆ ಕರಾವಳಿ ಬೆಡಗಿ?

Follow Us
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!